Homeಅಂತರಾಷ್ಟ್ರೀಯದಾಂಪತ್ಯ ಜೀವನಕ್ಕೆ ಕಾಲಿರಿಸಿದ ನೊಬೆಲ್ ಪುರಸ್ಕೃತೆ ಮಲಾಲಾ ಯೂಸುಫ್‌ ಝೈ : ಗಣ್ಯರಿಂದ ಶುಭ ಹಾರೈಕೆ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನೊಬೆಲ್ ಪುರಸ್ಕೃತೆ ಮಲಾಲಾ ಯೂಸುಫ್‌ ಝೈ : ಗಣ್ಯರಿಂದ ಶುಭ ಹಾರೈಕೆ

- Advertisement -
- Advertisement -

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್‌ ಝೈ  ಮಂಗಳವಾರ ಅಸರ್ ಮಲಿಕ್ ಎಂಬುವವರನ್ನು ವಿವಾಹವಾಗಿರುವುದಾಗಿ ಘೋಷಿಸಿದ್ದಾರೆ. ವಿವಾಹ ಸಮಾರಂಭದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

‘ಇದು ನನ್ನ ಜೀವನದಲ್ಲಿ ಅಮೂಲ್ಯವಾದ ದಿನ. ಅಸರ್ ಮತ್ತು ನಾನು ವಿವಾಹವಾಗಿದ್ದು, ಜೀವನ ಸಂಗಾತಿಗಳಾಗಿದ್ದೇವೆ. ಬರ್ಮಿಂಗ್‌ಹ್ಯಾಂನ ನಿವಾಸದಲ್ಲಿ ನಮ್ಮ ಕುಟುಂಬದವರ ಉಪಸ್ಥಿತಿಯಲ್ಲಿ ಪುಟ್ಟ ವಿವಾಹ ಕಾರ್ಯಕ್ರಮ ನೆರವೇರಿದೆ. ನಿಮ್ಮೆಲ್ಲರ ಹಾರೈಕೆಗಳಿರಲಿ. ಮುಂದಿನ ಪ್ರಯಾಣಕ್ಕಾಗಿ ನಾವು ಒಟ್ಟಿಗೆ ಹೆಜ್ಜೆಯಿಡಲು ಉತ್ಸುಕರಾಗಿದ್ದೇವೆ’ ಎಂದು ಮಲಾಲಾ ಟ್ವೀಟ್ ಮಾಡಿದ್ದಾರೆ.

ಮಲಾಲಾ ತಮ್ಮ ವಿವಾಹದ ಸುದ್ದಿಯನ್ನು ಹಂಚಿಕೊಂಡ ನಂತರ, ನಟಿ ಪ್ರಿಯಾಂಕಾ ಚೋಪ್ರಾ, ಕತ್ರಿನಾ ಕೈಫ್ ಸೇರದಂತೆ ಹಲವು ನಟ, ನಟಿಯರು, ಗಣ್ಯರು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನವ ದಂಪತಿಯ ಚಿತ್ರವನ್ನು ಪೋಸ್ಟ್ ಮಾಡಿರುವ ನಟಿ ಪ್ರಿಯಾಂಕಾ ಚೋಪ್ರಾ “ಅಭಿನಂದನೆಗಳು ಮಲಾಲಾ ನಿಮಗೆ ತುಂಬಾ ಖುಷಿ ಮತ್ತು ಸಂತೋಷ ಸಿಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.

ನಟಿಯರಾದ ಕತ್ರಿನಾ ಕೈಫ್, ರೀಸ್ ವಿದರ್‌ಸ್ಪೂನ್ (Reese Witherspoon) ಮತ್ತು ಯೂಟ್ಯೂಬರ್ ಲಿಲ್ಲಿ ಸಿಂಗ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಮಲಾಲಾಗೆ ಶುಭ ಹಾರೈಸಿದ್ದಾರೆ.

ಪತಿಯ ಬಗ್ಗೆ ಮಲಾಲಾ ವಿವರಗಳನ್ನು ನೀಡದಿದ್ದರೂ, ಅವರು ವಿವಾಹವಾಗಿರುವುದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜನರಲ್ ಮ್ಯಾನೇಜರ್ ‘ಅಸರ್ ಮಲಿಕ್’ ಅವರನ್ನು ಎಂದು ಮಾಧ್ಯಮಗಳು ವರದಿ ಮಾಡಿವೆ.

ವಿವಾದಿತ ಕೃಷಿ ಕಾನೂನುಗಳ ವಿರುದ್ಧ ದನಿ ಎತ್ತಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು, ಕಾರ್ಯಕರ್ತರ ಬಂಧನ ಹಾಗೂ ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್‌ನೆಟ್‌ ಸ್ಥಗಿತಗೊಳಿಸಿದ ಸರ್ಕಾರದ ನಿರ್ಧಾರವನ್ನು ಪಾಕಿಸ್ತಾನ ಮೂಲದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಈ ಹಿಂದೆ ಮಾರ್ಚ್‌ನಲ್ಲಿ ಪ್ರಶ್ನಿಸಿದ್ದರು. ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

 


ಇದನ್ನೂ ಓದಿ: ರೈತ ಹೋರಾಟ: ನೋಬೆಲ್ ಪುರಸ್ಕೃತೆ, ಹೋರಾಟಗಾರ್ತಿ ಮಲಾಲಾ ಯೂಸುಫ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...