Homeಕರ್ನಾಟಕ2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು, 500 ಮತ್ತು 1000 ರೂ. ಮುಖಬೆಲೆ ನೋಟ್‌ ಬ್ಯಾನ್ ಮಾಡಿ ಐದು ವರ್ಷ ತುಂಬಿದೆ. ಈ ವೇಳೆ ಬಿಡುಗಡೆಯಾದ 2000 ರೂ. ಮುಖಬೆಲೆ ನೋಟಿನಲ್ಲಿ ‘ಮೈಕ್ರೋ ನ್ಯಾನೋ’ ಚಿಪ್ ಇದ್ದು, ಅದನ್ನು ಎಲ್ಲಿ ಬಚ್ಚಿಟ್ಟರೂ ಉಪಗ್ರಹದ ಮೂಲಕ ಕಂಡು ಹಿಡಿಯಬಹುದು ಎಂಬ ಸುಳ್ಳು ಸುದ್ದಿಯನ್ನು ಕೆಲವು ರಾಷ್ಟ್ರೀಯ ವಾಹಿನಿ ಸಹಿತ ರಾಜ್ಯದ ‘ಪಬ್ಲಿಕ್ ಟಿವಿ’ ಕೂಡಾ ವರದಿ ಮಾಡಿತ್ತು.

2000 ರೂ. ನೋಟಿನಲ್ಲಿ ಚಿಪ್ ಇರುವ ವರದಿಯ ಬಗ್ಗೆ ಸ್ವತಃ ಆರ್‌ಬಿಐ ಸ್ಪಷ್ಟನೆ ನೀಡಿ ಈ ರೀತಿ ಯಾವುದೆ ಚಿಪ್‌ 2000 ರೂ ನೋಟಿನಲ್ಲಿ ಇಲ್ಲ ಎಂದು ಹೇಳಿತ್ತು. ಇದರ ನಂತರವು ಮಾಧ್ಯಮಗಳು ಚಿಪ್ ಇರುವುನ್ನೇ ವರದಿ ಮಾಡಿ ಜನರ ದಿಕ್ಕು ತಪ್ಪಿಸಿದ್ದವು.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಕನ್ನಡದ ಸುದ್ದಿ ವಾಹಿನಿಯಾದ ‘ಪಬ್ಲಿಕ್ ಟಿವಿ’ ಕೂಡಾ ಈ ಸುಳ್ಳು ಸುದ್ದಿಯನ್ನು ವರದಿ ಮಾಡಿತ್ತು. ಅದರಲ್ಲೂ ಈ ಸುದ್ದಿಯನ್ನು ವಾಹಿನಿಯ ಮುಖ್ಯಸ್ಥ ಎಚ್‌.ಆರ್‌. ರಂಗನಾಥ್‌ ಅವರೇ ಮಾಡಿದ್ದರು. ಈ ವರದಿಯ ನಂತರ ಪ್ರತಿ ವರ್ಷ ನವೆಂಬರ್‌ ಎರಡನೆ ವಾರ ಈ ವಿಡಿಯೊ ಸಾಮಾಜಿಕ ಜಾಲತಾಣದಗಳಲ್ಲಿ ಹರಿದಾಡಿ ಪಬ್ಲಿಕ್ ಟಿವಿ ಮತ್ತು ಅದರ ಮುಖ್ಯಸ್ಥ ರಂಗನಾಥ್‌ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಆದರೆ ಈ ಬಾರಿ ಪಬ್ಲಿಕ್ ಟಿವಿಯ ನಿರೂಪಕ ‘ಅರುಣ್ ಸಿ ಬಡಿಗೇರ್‌’ ಅವರ ಹೆಸರಿನ ಟ್ವಿಟರ್‌ ಖಾತೆಯೊಂದರ ಟ್ವೀಟ್‌ ಭಾರಿ ಸದ್ದು ಮಾಡಿದೆ. ಅದರಲ್ಲಿ, ಐದು ವರ್ಷಗಳ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ 2000 ರೂ ಮುಖಬೆಲೆ ನೋಟಿನಲ್ಲಿನ ‘ಚಿಪ್‌’ ವಿಚಾರಗಳನ್ನು ಬರೆಯಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನವೆಂಬರ್‌ 8 ರಂದು ಮಾಡಲಾಗಿರುವ ಟ್ವೀಟ್‌ನಲ್ಲಿ, “ಇಂದು ಡಿಮಾನಟೈಜ್ ದಿನ ನನ್ನ ಹಿರಿಯ ಸಹೋದ್ಯೋಗಿ ರಂಗಣ್ಣನವರ ಚಿಪ್ ವೀಡಿಯೋ ಬಗ್ಗೆ ವಿವರಣೆ ನೀಡಲು ಬಯಸುತ್ತೇನೆ. ವಾಸ್ತವವಾಗಿ ಚಿಪ್ ಹುಟ್ಟುಕೊಂಡಿದ್ದು ಒಂದು ರಾಜಕೀಯ ಪಕ್ಷದ ವಾಟ್ಸಪ್ ಗ್ರೂಪಲ್ಲಿ. ಅದರಲ್ಲಿ ಸಂಸದರು, ಹಿರಿಯ ಪತ್ರಕರ್ತ ಮಿತ್ರರು ಎಲ್ಲರೂ ಇದ್ದರು. ರಾಜೀವ್ ಚಂದ್ರಶೇಖರ್ ಮೊದಲು ಈ ವಿಷಯ ಪ್ರಸ್ತಾಪ ಮಾಡಿದರು ತದನಂತರ ವಿಶ್ವೇಶ್ವರಭಟ್‌ ಇದನ್ನು ಪುಷ್ಟಿಕರಿಸಿ ನ್ಯಾಷನಲ್ ಮೀಡಿಯಾ ಬಿತ್ತರಿಸಲಾಗಿದೆ ಎಂದರು.”

“ಮೊದಲು ಇದನ್ನು ಅಜಿತ್‌ ಹನುಮಕ್ಕನವರ್‌‌ ಹೇಳಲಿ ಎಂದು ಚರ್ಚೆ ಆಯಿತು. ಆದರೆ ಅವರ ಕಾರ್ಯಕ್ರಮ ಎಡಿಟಿಂಗ್ ಮುಗಿದಿತ್ತು. ಹಾಗಾಗಿ ರಂಗಣ್ಣನವರ ಹೆಗಲಿಗೆ ಈ ಜವಾಬ್ದಾರಿ ಕೊಡಲಾಯಿತು. ಆಡಳಿತ ಪಕ್ಷದ ನಂಬಲಾರ್ಹ ಮೂಲಗಳಿಂದ ಬಂದಿದ್ದರಿಂದ ರಂಗಣ್ಣ ಸುದ್ದಿ ಆಳಕ್ಕೆ ಹೋಗದೆ ಎಡವಟ್ಟು ಮಾಡಿಕೊಂಡರು!!” ಎಂದು ಟ್ವೀ‌ಟ್‌ ಮಾಡಲಾಗಿದೆ.

 

ಈ ಟ್ವೀಟ್‌ ಆಗುತ್ತಿದ್ದಂತೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದು, ವೈರಲ್‌ ಆಗಿದೆ. ಹಲವಾರು ಜನರು ಪಬ್ಲಿಕ್‌ ಟಿವಿ ಮತ್ತು ಅರುಣ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ಬ್ಯಾನ್‌ ಪರಿಣಾಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ಈ ಟ್ವೀಟ್‌ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಪಬ್ಲಿಕ್ ಟಿವಿ ನಿರೂಪಕ ಅರಣ್‌ ಸಿ ಬಡಿಗೇರ್‌, “ಪ್ರಸ್ತುತ ಟ್ವಿಟರ್‌ನಲ್ಲಿ ಹರಿದಾಡುತ್ತಿರುವ ಟ್ವೀಟ್‌ ನನ್ನದಲ್ಲ. ಅದರ ಬಗ್ಗೆ ದೂರು ನೀಡಿದ್ದೇನೆ. ಬೇರೆ ಯಾರೋ ನಕಲಿ ಖಾತೆಯಲ್ಲಿ ಇದನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

‘Arun C badiger’ ಎಂಬ ಹೆಸರಿನಲ್ಲಿ ಒಟ್ಟು ಮೂರು ಟ್ವಿಟರ್‌ ಖಾತೆಗಳಿವೆ. ಅವುಗಳಲ್ಲಿ ‘@BadigerArun’ ಎಂಬ ಹೆಸರಿನ ಪ್ರೋಫಲ್ ಇರುವ, ‘‘ಧಾರವಾಡ ಹುಡ್ಗ.. ಅನ್ಸಿದ್ದನ್ನ ನೇರವಾಗಿ ಹೇಳೋನು” ಎಂಬ ಬಯೋ ಇರುವ ಖಾತೆ ತನ್ನದು ಎಂದು ಅವರು ನಾನುಗೌರಿ.ಕಾಂಗೆ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಅವರ ಅಸಲಿ ಟ್ವಿಟರ್‌ ಖಾತೆಯಲ್ಲೂ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...