Homeಕರ್ನಾಟಕ2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು, 500 ಮತ್ತು 1000 ರೂ. ಮುಖಬೆಲೆ ನೋಟ್‌ ಬ್ಯಾನ್ ಮಾಡಿ ಐದು ವರ್ಷ ತುಂಬಿದೆ. ಈ ವೇಳೆ ಬಿಡುಗಡೆಯಾದ 2000 ರೂ. ಮುಖಬೆಲೆ ನೋಟಿನಲ್ಲಿ ‘ಮೈಕ್ರೋ ನ್ಯಾನೋ’ ಚಿಪ್ ಇದ್ದು, ಅದನ್ನು ಎಲ್ಲಿ ಬಚ್ಚಿಟ್ಟರೂ ಉಪಗ್ರಹದ ಮೂಲಕ ಕಂಡು ಹಿಡಿಯಬಹುದು ಎಂಬ ಸುಳ್ಳು ಸುದ್ದಿಯನ್ನು ಕೆಲವು ರಾಷ್ಟ್ರೀಯ ವಾಹಿನಿ ಸಹಿತ ರಾಜ್ಯದ ‘ಪಬ್ಲಿಕ್ ಟಿವಿ’ ಕೂಡಾ ವರದಿ ಮಾಡಿತ್ತು.

2000 ರೂ. ನೋಟಿನಲ್ಲಿ ಚಿಪ್ ಇರುವ ವರದಿಯ ಬಗ್ಗೆ ಸ್ವತಃ ಆರ್‌ಬಿಐ ಸ್ಪಷ್ಟನೆ ನೀಡಿ ಈ ರೀತಿ ಯಾವುದೆ ಚಿಪ್‌ 2000 ರೂ ನೋಟಿನಲ್ಲಿ ಇಲ್ಲ ಎಂದು ಹೇಳಿತ್ತು. ಇದರ ನಂತರವು ಮಾಧ್ಯಮಗಳು ಚಿಪ್ ಇರುವುನ್ನೇ ವರದಿ ಮಾಡಿ ಜನರ ದಿಕ್ಕು ತಪ್ಪಿಸಿದ್ದವು.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಕನ್ನಡದ ಸುದ್ದಿ ವಾಹಿನಿಯಾದ ‘ಪಬ್ಲಿಕ್ ಟಿವಿ’ ಕೂಡಾ ಈ ಸುಳ್ಳು ಸುದ್ದಿಯನ್ನು ವರದಿ ಮಾಡಿತ್ತು. ಅದರಲ್ಲೂ ಈ ಸುದ್ದಿಯನ್ನು ವಾಹಿನಿಯ ಮುಖ್ಯಸ್ಥ ಎಚ್‌.ಆರ್‌. ರಂಗನಾಥ್‌ ಅವರೇ ಮಾಡಿದ್ದರು. ಈ ವರದಿಯ ನಂತರ ಪ್ರತಿ ವರ್ಷ ನವೆಂಬರ್‌ ಎರಡನೆ ವಾರ ಈ ವಿಡಿಯೊ ಸಾಮಾಜಿಕ ಜಾಲತಾಣದಗಳಲ್ಲಿ ಹರಿದಾಡಿ ಪಬ್ಲಿಕ್ ಟಿವಿ ಮತ್ತು ಅದರ ಮುಖ್ಯಸ್ಥ ರಂಗನಾಥ್‌ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಆದರೆ ಈ ಬಾರಿ ಪಬ್ಲಿಕ್ ಟಿವಿಯ ನಿರೂಪಕ ‘ಅರುಣ್ ಸಿ ಬಡಿಗೇರ್‌’ ಅವರ ಹೆಸರಿನ ಟ್ವಿಟರ್‌ ಖಾತೆಯೊಂದರ ಟ್ವೀಟ್‌ ಭಾರಿ ಸದ್ದು ಮಾಡಿದೆ. ಅದರಲ್ಲಿ, ಐದು ವರ್ಷಗಳ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ 2000 ರೂ ಮುಖಬೆಲೆ ನೋಟಿನಲ್ಲಿನ ‘ಚಿಪ್‌’ ವಿಚಾರಗಳನ್ನು ಬರೆಯಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನವೆಂಬರ್‌ 8 ರಂದು ಮಾಡಲಾಗಿರುವ ಟ್ವೀಟ್‌ನಲ್ಲಿ, “ಇಂದು ಡಿಮಾನಟೈಜ್ ದಿನ ನನ್ನ ಹಿರಿಯ ಸಹೋದ್ಯೋಗಿ ರಂಗಣ್ಣನವರ ಚಿಪ್ ವೀಡಿಯೋ ಬಗ್ಗೆ ವಿವರಣೆ ನೀಡಲು ಬಯಸುತ್ತೇನೆ. ವಾಸ್ತವವಾಗಿ ಚಿಪ್ ಹುಟ್ಟುಕೊಂಡಿದ್ದು ಒಂದು ರಾಜಕೀಯ ಪಕ್ಷದ ವಾಟ್ಸಪ್ ಗ್ರೂಪಲ್ಲಿ. ಅದರಲ್ಲಿ ಸಂಸದರು, ಹಿರಿಯ ಪತ್ರಕರ್ತ ಮಿತ್ರರು ಎಲ್ಲರೂ ಇದ್ದರು. ರಾಜೀವ್ ಚಂದ್ರಶೇಖರ್ ಮೊದಲು ಈ ವಿಷಯ ಪ್ರಸ್ತಾಪ ಮಾಡಿದರು ತದನಂತರ ವಿಶ್ವೇಶ್ವರಭಟ್‌ ಇದನ್ನು ಪುಷ್ಟಿಕರಿಸಿ ನ್ಯಾಷನಲ್ ಮೀಡಿಯಾ ಬಿತ್ತರಿಸಲಾಗಿದೆ ಎಂದರು.”

“ಮೊದಲು ಇದನ್ನು ಅಜಿತ್‌ ಹನುಮಕ್ಕನವರ್‌‌ ಹೇಳಲಿ ಎಂದು ಚರ್ಚೆ ಆಯಿತು. ಆದರೆ ಅವರ ಕಾರ್ಯಕ್ರಮ ಎಡಿಟಿಂಗ್ ಮುಗಿದಿತ್ತು. ಹಾಗಾಗಿ ರಂಗಣ್ಣನವರ ಹೆಗಲಿಗೆ ಈ ಜವಾಬ್ದಾರಿ ಕೊಡಲಾಯಿತು. ಆಡಳಿತ ಪಕ್ಷದ ನಂಬಲಾರ್ಹ ಮೂಲಗಳಿಂದ ಬಂದಿದ್ದರಿಂದ ರಂಗಣ್ಣ ಸುದ್ದಿ ಆಳಕ್ಕೆ ಹೋಗದೆ ಎಡವಟ್ಟು ಮಾಡಿಕೊಂಡರು!!” ಎಂದು ಟ್ವೀ‌ಟ್‌ ಮಾಡಲಾಗಿದೆ.

 

ಈ ಟ್ವೀಟ್‌ ಆಗುತ್ತಿದ್ದಂತೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದು, ವೈರಲ್‌ ಆಗಿದೆ. ಹಲವಾರು ಜನರು ಪಬ್ಲಿಕ್‌ ಟಿವಿ ಮತ್ತು ಅರುಣ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ಬ್ಯಾನ್‌ ಪರಿಣಾಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ಈ ಟ್ವೀಟ್‌ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಪಬ್ಲಿಕ್ ಟಿವಿ ನಿರೂಪಕ ಅರಣ್‌ ಸಿ ಬಡಿಗೇರ್‌, “ಪ್ರಸ್ತುತ ಟ್ವಿಟರ್‌ನಲ್ಲಿ ಹರಿದಾಡುತ್ತಿರುವ ಟ್ವೀಟ್‌ ನನ್ನದಲ್ಲ. ಅದರ ಬಗ್ಗೆ ದೂರು ನೀಡಿದ್ದೇನೆ. ಬೇರೆ ಯಾರೋ ನಕಲಿ ಖಾತೆಯಲ್ಲಿ ಇದನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

‘Arun C badiger’ ಎಂಬ ಹೆಸರಿನಲ್ಲಿ ಒಟ್ಟು ಮೂರು ಟ್ವಿಟರ್‌ ಖಾತೆಗಳಿವೆ. ಅವುಗಳಲ್ಲಿ ‘@BadigerArun’ ಎಂಬ ಹೆಸರಿನ ಪ್ರೋಫಲ್ ಇರುವ, ‘‘ಧಾರವಾಡ ಹುಡ್ಗ.. ಅನ್ಸಿದ್ದನ್ನ ನೇರವಾಗಿ ಹೇಳೋನು” ಎಂಬ ಬಯೋ ಇರುವ ಖಾತೆ ತನ್ನದು ಎಂದು ಅವರು ನಾನುಗೌರಿ.ಕಾಂಗೆ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಅವರ ಅಸಲಿ ಟ್ವಿಟರ್‌ ಖಾತೆಯಲ್ಲೂ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...