Homeಕರ್ನಾಟಕಟಿಪ್ಪು ಜಯಂತಿ: ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ-ಸಿದ್ದರಾಮಯ್ಯ

ಟಿಪ್ಪು ಜಯಂತಿ: ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ-ಸಿದ್ದರಾಮಯ್ಯ

- Advertisement -
- Advertisement -

ಇಂದು (ನ.10) ’ಮೈಸೂರಿನ ಹುಲಿ’ ಎಂದೇ ಪ್ರಖ್ಯಾತರಾಗಿದ್ದ ದೊರೆ ಟಿಪ್ಪು ಸುಲ್ತಾನ್ ಜಯಂತಿ. ಈ ಹಿನ್ನೆಲೆಯಲ್ಲಿ ನಾಡಿನ ಗಣ್ಯರು, ರಾಜಕಾರಣಿಗಳು, ವಿದ್ಯಾರ್ಥಿಗಳು ಟಿಪ್ಪು ಜಯಂತಿಯ ಶುಭಾಶಯ ಕೋರಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅಪ್ರತಿಮ ಸ್ವಾತಂತ್ರ್ಯ ಸೇನಾನಿ, ದಕ್ಷ ಆಡಳಿತಗಾರ ಮತ್ತು
ಜಾತ್ಯತೀತನಾಗಿ ಸರ್ವರನ್ನೂ ಪೊರೆದ ಟಿಪ್ಪು ಸುಲ್ತಾನ್ ನಾಡಿನ ಹೆಮ್ಮೆ” ಎಂದು ಟ್ವೀಟ್ ಮಾಡಿದ್ದಾರೆ.

“ರಾಜಕೀಯ ಪ್ರೇರಿತ ಅಪಪ್ರಚಾರಕ್ಕೆ ಕಿವಿಗೊಡದೆ ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ. ನಾಡ ಬಂಧುಗಳಿಗೆ ಟಿಪ್ಪು ಜಯಂತಿಯ ಶುಭಾಶಯಗಳು” ಎಂದಿದ್ದಾರೆ.

ಇದನ್ನೂ ಓದಿ: ಟಿಪ್ಪು ಸುಲ್ತಾನರ ಖಡ್ಗದಲ್ಲಿ ಬರೆದಿರುವುದೇನು…?

ಶಾಸಕ ಜಮೀರ್ ಅಹ್ಮದ್ ಖಾನ್ ಟಿಪ್ಪು ಜಯಂತಿಯ ಶುಭ ಕೋರಿದ್ದಾರೆ. “ಬ್ರಿಟೀಷರ ಸರ್ವಾಧಿಕಾರಿ ಆಡಳಿತದ ವಿರುದ್ಧ ಸೆಟೆದು ನಿಂತು, ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ಮಹಾನ್ ದೇಶಪ್ರೇಮಿ ಹಜ್ರತ್ ಟಿಪ್ಪು ಸುಲ್ತಾನ್ ಅವರ ಜನ್ಮದಿನದ ಸಂದರ್ಭದಲ್ಲಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸುತ್ತಾ, ನನ್ನ ಗೌರವ ನಮನಗಳನ್ನು ಅರ್ಪಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ , “ಮೈಸೂರಿನ ಹುಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯ ಶುಭಾಶಯಗಳು” ಎಂದಿದ್ದಾರೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆ (KVS) ಟಿಪ್ಪು ಜಯಂತಿಯ ಶುಭ ಕೋರಿದ್ದು, “ಕೃಷಿ ದೇಶದ ಜೀವಾಳ” ಎಂದಿದ್ದ ಟಿಪ್ಪು ಸುಲ್ತಾನ್, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟಿದ್ದರು. ಕೃಷಿಯ ಅಭಿವೃದ್ದಿಗಾಗಿ ಪ್ರಥಮ ಬಾರಿಗೆ ರೇಷ್ಮೆ ಪರಿಚಯಿಸಿದ್ದ ಟಿಪ್ಪು, ರೈತರ ಕೃಷಿಗಾಗಿ ನೂರಾರು ಕೆರೆಗಳನ್ನು ನಿರ್ಮಿಸಿದ್ದರು. ರೈತರಿಗೆ ಬಡ್ಡಿ ರಹಿತ ಸಾಲ, ಕೃಷಿ ಮಾರುಕಟ್ಟೆ ವ್ಯವಸ್ಥೆಯನ್ನು ಜಾರಿಗೊಳಿಸಿದ್ದರು. ಅಲ್ಲದೆ, ಕೃಷಿ ಭೂಮಿಯನ್ನು ಎಲ್ಲರಿಗೂ ಸಮಾನವಾಗಿ ಹಂಚಿಕೆ ಮಾಡಲು ಶ್ರಮಿಸಿದ್ದರು. ಆದರೆ, ಇಂದಿನ ರೈತ ವಿರೋಧಿ ಸರ್ಕಾರಗಳು ರೈತರನ್ನು ಬೀದಿಪಾಲು ಮಾಡಲು ಮುಂದಾಗಿವೆ.. ಟಿಪ್ಪುವಿಗೆ ರೈತರ ಬಗೆಗಿದ್ದ ಕಾಳಜಿಯನ್ನು ಅರಿತುಕೊಳ್ಳೋಣ, ರೈತ ಹೋರಾಟದಲ್ಲಿ ಭಾಗಿಯಾಗೋಣ” ಎಂದಿದೆ.

ಈ ಮೂಲಕ ಟಿಪ್ಪು ಸುಲ್ತಾನ್ ಕೃಷಿಗೆ ನೀಡಿದ್ದ ಪ್ರಾಮುಖ್ಯತೆಯನ್ನು ತಿಳಿಸಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...