Homeಮುಖಪುಟನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ - ‘ಕೋಡಂಗಿ’ ಎಂದ ತಮಿಳರು

ನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರು

- Advertisement -
- Advertisement -

ತಮಿಳುನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾದ ಅವಘಡಗಳಿಂದ 4 ಜನರು ಮೃತಪಟ್ಟಿದ್ದಾರೆ. ಚೆನ್ನೈ, ಚೆಂಗಲ್‌ಪೇಟ್‌, ಕಾಂಚೀಪುರಂ, ತಿರುವಳ್ಳೂರು ಮತ್ತು ವೆಲ್ಲೂರು ಜಿಲ್ಲೆಯಲ್ಲಿ ಸೋಮವಾರದಂದೂ ಮಳೆಯಾಗಿದ್ದವು. ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ ನೀಡಿ ಪರಿಶೀಲಿಸಿದ್ದರು. ಈ ನಡುವೆ ಪರಿಹಾರ ಕಾರ್ಯಕೂಡಾ ಭರದಿಂದ ಸಾಗಿತ್ತು. ಜೊತೆಗೆ ಹವಾಮಾನ ಇಲಾಖೆಯು ಬುಧವಾರ ಮತ್ತು ಗುರುವಾರ ಕೂಡಾ ಭಾರಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಸರ್ಕಾರದ ಜೊತೆಗೆ ಕೈಜೋಡಿಸಿರುವ ಹಲವಾರು ಸಂಘ ಸಂಸ್ಥೆಗಳು ಪರಿಹಾರ ಕಾರ್ಯದಲ್ಲಿ ನೆರವಾಗುತ್ತಿದೆ. ಈ ಮಧ್ಯೆ ಪರಿಹಾರ ಕಾರ್ಯದಲ್ಲಿ ನಾಟಕೀಯ ದೃಶ್ಯ ಸೃಷ್ಟಿಸಲು ಹೋಗಿ ಮಾಜಿ ಐಪಿಎಸ್‌ ಅಧಿಕಾರಿ, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ನಗೆಪಾಟಲಿಗೀಡಾಗಿದ್ದಾರೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣಾ ದೋಣಿಯನ್ನು ನಿಲ್ಲಿಸಿ ಫೋಟೊಗೆ ಪೋಸ್‌ ನೀಡಿದ್ದಾರೆ. ಆದರೆ ಈ ವಿಡಿಯೊ ವೈರಲ್‌ ಆಗಿದ್ದು, ತಮಿಳುನಾಡಿನ ಜನತೆ ಈ ವಿಡಿಯೊವನ್ನು ಇಟ್ಟು, ಕೋಡಂಗಿ ಅಣ್ಣಾಮಲೈ(ಕೋಮಾಲಿ ಅಣ್ಣಾಮಲೈ) ಎಂದು ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಹಲವು ರೀತಿಯ ವಿಡಿಯೊ ವೈರಲ್ ಆಗಿದ್ದು, ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣೆಗೆ ಬಳಸುವ ದೋಣಿಯಲ್ಲಿ ಕೂತು ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಮೊಣಕಾಲಿನಷ್ಟು ಕೂಡಾ ನೀರಿಲ್ಲದ ಜಾಗದಲ್ಲಿ ದೋಣಿಯೊಳಗಡೆ ಕೂತಿರುವ ಅಣ್ಣಾಮಲೈ ಫೋಟೋ ಶೂಟ್‌ಗೆ ತಯಾರಾಗುತ್ತಿರುವುದು ಕಾಣುತ್ತದೆ. ನಂತರ ಯಾರೋ ಹಿನ್ನಲೆಯಲ್ಲಿ ಶುರುಮಾಡಿ ಎಂದು ಹೇಳುತ್ತಾರೆ. ಆಗ, ಅಣ್ಣಾಮಲೈ ಅವರು ಮುಂದಕ್ಕೆ ಕೈ ಮುಗಿದು ಯಾರೊಂದಿಗೋ ಮಾತನಾಡುವ ಶೈಲಿಯಲ್ಲಿ ‘ಇಲ್ಲೆ ಇರುವವರಾ ಬ್ರದರ್‌ ನೀವು’ ಎಂದು ಕೇಳುತ್ತಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮತ್ತೊಂದು ವಿಡಿಯೊದಲ್ಲಿ, ಅಣ್ಣಾಮಲೈ ಸೇರಿದಂತೆ ಕೆಲವರನ್ನು ದೋಣಿಯಲ್ಲಿ ಕೂರಿಸಿ ಎಳೆದುಕೊಂಡು ಹೋಗುತ್ತಿದ್ದಾರೆ. ಅವರ ಹಿಂದೆ ಬಿಜೆಪಿಯ ಧ್ವಜ ಹಿಡಿದು ಹಲವು ಕಾರ್ಯಕರ್ತರು ಕೂಡಾ ಇರುತ್ತಾರೆ. ಈ ವೇಳೆ ಕೂಡಾ ಅಣ್ಣಾಮಲೈ ಸುಖಾಸುಮ್ಮನೆ ಮುಂದೆ ಯಾರೋ ಇದ್ದಾರೆ ಎಂಬ ರೀತಿಯಲ್ಲಿ ನಮಸ್ಕರಿಸಿದ್ದಾರೆ. ಇದೇ ರೀತಿಯ ದೃಶ್ಯವನ್ನು ಉತ್ತರ ಕರ್ನಾಟಕದಲ್ಲಿ ಮಳೆ ಬಂದಾಗ ಬಿಜೆಪಿಯ ಶಾಸಕ ರೇಣುಕಾಚಾರ್ಯ ಅವರು ಕೂಡಾ ಮಾಡಿದ್ದರು. ಈ ಸಂದಂರ್ಭದಲ್ಲೂ ಜನ ಅವರನ್ನು ಟ್ರೋಲ್ ಮಾಡಿದ್ದರು.

ಇನ್ನೊಂದು ವಿಡಿಯೊದಲ್ಲಿ ಮೊಣಕಾಲುದ್ದ ನೀರಿರುವ ಜಾಗದಲ್ಲಿ ಇರುವ ದೋಣಿಯಲ್ಲಿ ಅಣ್ಣಾಮಲೈ ಕೂತಿದ್ದಾರೆ. ಈ ವೇಳೆ ಕ್ಯಾಮೆರಾ ಮ್ಯಾನ್, ‘ಎಲ್ಲರೂ ಈ ಕಡೆ ಬನ್ನಿ, ಒಂದು ಖಾಲಿಯಾಗಿರುವ ಫೋಟೋ ಕ್ಲಿಕ್ ಮಾಡುತ್ತೇನೆ’ ಎಂದು ಹೇಳುತ್ತಾರೆ. ಆಗ ಅಣ್ಣಾ ಮಲೈ ಕೂಡಾ ಅವರನ್ನು ಕಳುಹಿಸುತ್ತಾರೆ. ಜೊತೆಗೆ ಅಲ್ಲೇ ಇದ್ದ ಮಹಿಳೆಯೊಂದಿಗೆ ಕೂಡಾ ಅಣ್ಣಾ ಮಲೈ ಮಾತನಾಡುತ್ತಾರೆ. ಆಗ, ಆ ಅಕ್ಕ ಜೊತೆ ಮಾತಾಡ್ತಾ ಇರೋ ಥರ ಒಂದು ಶಾಟ್ ತಗೋ ಎಂಬ ಧ್ವನಿಯು ಕೇಳುತ್ತದೆ. ಈ ನಡುವೆ ಅಣ್ಣಾಮಲೈ ಮತ್ತೆ ಯಾರಿಗೋ ನಮಸ್ಕಾರ ಮಾಡುವ ರೀತಿಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ: ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಮಗದೊಂದು ವಿಡಿಯೊದಲ್ಲಿ, ನೀರಿನಿಂದ ರಕ್ಷಣೆಗಾಗಿ ಬದಿಯಲ್ಲಿ ನಿಂತಿದ್ದ ವೃದ್ದೆಯನ್ನು ಮಾತನಾಡಿಸಲು ಅಣ್ಣಾ ಮಲೈ ತೆರಳುತ್ತಾರೆ. ಅವರನ್ನು ಮಾತನಾಡಿಸಿದ ಅವರು, “ಪ್ರತಿಬಾರಿಯ ಮಳೆಗೂ ಹೀಗಾದರೆ ಹೇಗಮ್ಮ? 2015 ರಲ್ಲೂ ಹೀಗೆ, 2021 ರಲ್ಲೂ ಹೀಗೆ” ಎಂದು ಕೇಳುತ್ತಾರೆ. ಈ ವೇಳೆ ಮಹಿಳೆ, “ನೀವು ಬಂದು ಏನು ಮಾಡುತ್ತೀರಿ” ಎಂದು ಪ್ರಶ್ನಿಸುತ್ತಾರೆ.

ಮಾನವೀಯ ನೆರವು ನೀಡಬೇಕಾದ ಸಮಯದಲ್ಲೂ ನಾಟಕ ಮಾಡಲು ಪ್ರಯತ್ನಿಸಿದ ಅಣ್ಣಾ ಮಲೈ ಅವರನ್ನು ತಮಿಳುನಾಡಿನ ಜನರು ಟ್ವಿಟರ್‌ನಲ್ಲಿ ಮೀಮ್ಸ್‌ ಮಾಡಿ ವ್ಯಂಗ್ಯವಾಡುತ್ತಿದ್ದಾರೆ. ‘ಗೋಟ್‌‌ ಆನ್‌ ದಿ ಬೋಟ್’,(ದೋಣಿಯಲ್ಲಿ ಆಡು) ಕೋಮಾಲಿ ಅಣ್ಣಾಮಲೈ (ಕೋಡಂಗಿ ಅಣ್ಣಾಮಲೈ) ಎಂದು ಹ್ಯಾಶ್ ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ಡಿಎಂಕೆ ರಾಜ್ಯ ಐಟಿ ವಿಂಗ್ ನಾಯಕರಾದ ಇಸೈ ಅವರು, ಲೈಫ್ ಆಫ್ ಪೈ ಎಂಬ ಕಾದಂಬರಿಯ ಕವರ್‌ ಫೋಟೋದಲ್ಲಿ ಇರುವ ಮನುಷ್ಯನ ತಲೆಗೆ ಅಣ್ಣಾಮಲೈ ಅವರ ಚಿತ್ರ ಎಡಿಟ್ ಮಾಡಿ ‘ಲೈಫ್‌ ಆಫ್ ಪೊಯಿ’(ಸುಳ್ಳಿನ ಜೀವನ) ಎಂದು ವ್ಯಂಗ್ಯವಾಗಿದ್ದಾರೆ.

ಇಷ್ಟೇ ಅಲ್ಲದೆ ಹಲವಾರು ಮೀಮ್ಸ್‌ಗಳನ್ನು ಜನ ಶೇರ್‌ ಮಾಡುತ್ತಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಣ್ಣಾ ಮಲೈ ಅವರ ಕೆಲಸದ ಬಗ್ಗೆ ಸರಿಯಾಗಿ ಅರಿಯದೆ ,ಮಾತಾಡೋ ಸೋಕಾಲ್ಡ್ ಎಡಬಿಡಂಗಿ ಕೆಲ ಪತ್ರಿಕೆಗಳ ಬಗ್ಗೆ ಜನ ತಲೆ ಕೆಡಿಸಿ ಕೊಳ್ಳಲ್ಲಾ ಬಿಡಿ , ಅದೂ ಚೈನಿ ಪಾಲನೆಯಲ್ಲಿ ನಡೆಯುವ ಕೆಲ ಮಾಧ್ಯಮಗಳು ಯಾವಾಗಲು ಹೀಗೆ ಮಾತಾಡೋದು ಅಂತ ಜನರಿಗೆ ತಿಳಿದಿದೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...