Homeಮುಖಪುಟನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ - ‘ಕೋಡಂಗಿ’ ಎಂದ ತಮಿಳರು

ನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರು

- Advertisement -
- Advertisement -

ತಮಿಳುನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾದ ಅವಘಡಗಳಿಂದ 4 ಜನರು ಮೃತಪಟ್ಟಿದ್ದಾರೆ. ಚೆನ್ನೈ, ಚೆಂಗಲ್‌ಪೇಟ್‌, ಕಾಂಚೀಪುರಂ, ತಿರುವಳ್ಳೂರು ಮತ್ತು ವೆಲ್ಲೂರು ಜಿಲ್ಲೆಯಲ್ಲಿ ಸೋಮವಾರದಂದೂ ಮಳೆಯಾಗಿದ್ದವು. ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ ನೀಡಿ ಪರಿಶೀಲಿಸಿದ್ದರು. ಈ ನಡುವೆ ಪರಿಹಾರ ಕಾರ್ಯಕೂಡಾ ಭರದಿಂದ ಸಾಗಿತ್ತು. ಜೊತೆಗೆ ಹವಾಮಾನ ಇಲಾಖೆಯು ಬುಧವಾರ ಮತ್ತು ಗುರುವಾರ ಕೂಡಾ ಭಾರಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಸರ್ಕಾರದ ಜೊತೆಗೆ ಕೈಜೋಡಿಸಿರುವ ಹಲವಾರು ಸಂಘ ಸಂಸ್ಥೆಗಳು ಪರಿಹಾರ ಕಾರ್ಯದಲ್ಲಿ ನೆರವಾಗುತ್ತಿದೆ. ಈ ಮಧ್ಯೆ ಪರಿಹಾರ ಕಾರ್ಯದಲ್ಲಿ ನಾಟಕೀಯ ದೃಶ್ಯ ಸೃಷ್ಟಿಸಲು ಹೋಗಿ ಮಾಜಿ ಐಪಿಎಸ್‌ ಅಧಿಕಾರಿ, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ನಗೆಪಾಟಲಿಗೀಡಾಗಿದ್ದಾರೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣಾ ದೋಣಿಯನ್ನು ನಿಲ್ಲಿಸಿ ಫೋಟೊಗೆ ಪೋಸ್‌ ನೀಡಿದ್ದಾರೆ. ಆದರೆ ಈ ವಿಡಿಯೊ ವೈರಲ್‌ ಆಗಿದ್ದು, ತಮಿಳುನಾಡಿನ ಜನತೆ ಈ ವಿಡಿಯೊವನ್ನು ಇಟ್ಟು, ಕೋಡಂಗಿ ಅಣ್ಣಾಮಲೈ(ಕೋಮಾಲಿ ಅಣ್ಣಾಮಲೈ) ಎಂದು ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಹಲವು ರೀತಿಯ ವಿಡಿಯೊ ವೈರಲ್ ಆಗಿದ್ದು, ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣೆಗೆ ಬಳಸುವ ದೋಣಿಯಲ್ಲಿ ಕೂತು ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಮೊಣಕಾಲಿನಷ್ಟು ಕೂಡಾ ನೀರಿಲ್ಲದ ಜಾಗದಲ್ಲಿ ದೋಣಿಯೊಳಗಡೆ ಕೂತಿರುವ ಅಣ್ಣಾಮಲೈ ಫೋಟೋ ಶೂಟ್‌ಗೆ ತಯಾರಾಗುತ್ತಿರುವುದು ಕಾಣುತ್ತದೆ. ನಂತರ ಯಾರೋ ಹಿನ್ನಲೆಯಲ್ಲಿ ಶುರುಮಾಡಿ ಎಂದು ಹೇಳುತ್ತಾರೆ. ಆಗ, ಅಣ್ಣಾಮಲೈ ಅವರು ಮುಂದಕ್ಕೆ ಕೈ ಮುಗಿದು ಯಾರೊಂದಿಗೋ ಮಾತನಾಡುವ ಶೈಲಿಯಲ್ಲಿ ‘ಇಲ್ಲೆ ಇರುವವರಾ ಬ್ರದರ್‌ ನೀವು’ ಎಂದು ಕೇಳುತ್ತಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮತ್ತೊಂದು ವಿಡಿಯೊದಲ್ಲಿ, ಅಣ್ಣಾಮಲೈ ಸೇರಿದಂತೆ ಕೆಲವರನ್ನು ದೋಣಿಯಲ್ಲಿ ಕೂರಿಸಿ ಎಳೆದುಕೊಂಡು ಹೋಗುತ್ತಿದ್ದಾರೆ. ಅವರ ಹಿಂದೆ ಬಿಜೆಪಿಯ ಧ್ವಜ ಹಿಡಿದು ಹಲವು ಕಾರ್ಯಕರ್ತರು ಕೂಡಾ ಇರುತ್ತಾರೆ. ಈ ವೇಳೆ ಕೂಡಾ ಅಣ್ಣಾಮಲೈ ಸುಖಾಸುಮ್ಮನೆ ಮುಂದೆ ಯಾರೋ ಇದ್ದಾರೆ ಎಂಬ ರೀತಿಯಲ್ಲಿ ನಮಸ್ಕರಿಸಿದ್ದಾರೆ. ಇದೇ ರೀತಿಯ ದೃಶ್ಯವನ್ನು ಉತ್ತರ ಕರ್ನಾಟಕದಲ್ಲಿ ಮಳೆ ಬಂದಾಗ ಬಿಜೆಪಿಯ ಶಾಸಕ ರೇಣುಕಾಚಾರ್ಯ ಅವರು ಕೂಡಾ ಮಾಡಿದ್ದರು. ಈ ಸಂದಂರ್ಭದಲ್ಲೂ ಜನ ಅವರನ್ನು ಟ್ರೋಲ್ ಮಾಡಿದ್ದರು.

ಇನ್ನೊಂದು ವಿಡಿಯೊದಲ್ಲಿ ಮೊಣಕಾಲುದ್ದ ನೀರಿರುವ ಜಾಗದಲ್ಲಿ ಇರುವ ದೋಣಿಯಲ್ಲಿ ಅಣ್ಣಾಮಲೈ ಕೂತಿದ್ದಾರೆ. ಈ ವೇಳೆ ಕ್ಯಾಮೆರಾ ಮ್ಯಾನ್, ‘ಎಲ್ಲರೂ ಈ ಕಡೆ ಬನ್ನಿ, ಒಂದು ಖಾಲಿಯಾಗಿರುವ ಫೋಟೋ ಕ್ಲಿಕ್ ಮಾಡುತ್ತೇನೆ’ ಎಂದು ಹೇಳುತ್ತಾರೆ. ಆಗ ಅಣ್ಣಾ ಮಲೈ ಕೂಡಾ ಅವರನ್ನು ಕಳುಹಿಸುತ್ತಾರೆ. ಜೊತೆಗೆ ಅಲ್ಲೇ ಇದ್ದ ಮಹಿಳೆಯೊಂದಿಗೆ ಕೂಡಾ ಅಣ್ಣಾ ಮಲೈ ಮಾತನಾಡುತ್ತಾರೆ. ಆಗ, ಆ ಅಕ್ಕ ಜೊತೆ ಮಾತಾಡ್ತಾ ಇರೋ ಥರ ಒಂದು ಶಾಟ್ ತಗೋ ಎಂಬ ಧ್ವನಿಯು ಕೇಳುತ್ತದೆ. ಈ ನಡುವೆ ಅಣ್ಣಾಮಲೈ ಮತ್ತೆ ಯಾರಿಗೋ ನಮಸ್ಕಾರ ಮಾಡುವ ರೀತಿಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ: ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಮಗದೊಂದು ವಿಡಿಯೊದಲ್ಲಿ, ನೀರಿನಿಂದ ರಕ್ಷಣೆಗಾಗಿ ಬದಿಯಲ್ಲಿ ನಿಂತಿದ್ದ ವೃದ್ದೆಯನ್ನು ಮಾತನಾಡಿಸಲು ಅಣ್ಣಾ ಮಲೈ ತೆರಳುತ್ತಾರೆ. ಅವರನ್ನು ಮಾತನಾಡಿಸಿದ ಅವರು, “ಪ್ರತಿಬಾರಿಯ ಮಳೆಗೂ ಹೀಗಾದರೆ ಹೇಗಮ್ಮ? 2015 ರಲ್ಲೂ ಹೀಗೆ, 2021 ರಲ್ಲೂ ಹೀಗೆ” ಎಂದು ಕೇಳುತ್ತಾರೆ. ಈ ವೇಳೆ ಮಹಿಳೆ, “ನೀವು ಬಂದು ಏನು ಮಾಡುತ್ತೀರಿ” ಎಂದು ಪ್ರಶ್ನಿಸುತ್ತಾರೆ.

ಮಾನವೀಯ ನೆರವು ನೀಡಬೇಕಾದ ಸಮಯದಲ್ಲೂ ನಾಟಕ ಮಾಡಲು ಪ್ರಯತ್ನಿಸಿದ ಅಣ್ಣಾ ಮಲೈ ಅವರನ್ನು ತಮಿಳುನಾಡಿನ ಜನರು ಟ್ವಿಟರ್‌ನಲ್ಲಿ ಮೀಮ್ಸ್‌ ಮಾಡಿ ವ್ಯಂಗ್ಯವಾಡುತ್ತಿದ್ದಾರೆ. ‘ಗೋಟ್‌‌ ಆನ್‌ ದಿ ಬೋಟ್’,(ದೋಣಿಯಲ್ಲಿ ಆಡು) ಕೋಮಾಲಿ ಅಣ್ಣಾಮಲೈ (ಕೋಡಂಗಿ ಅಣ್ಣಾಮಲೈ) ಎಂದು ಹ್ಯಾಶ್ ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ಡಿಎಂಕೆ ರಾಜ್ಯ ಐಟಿ ವಿಂಗ್ ನಾಯಕರಾದ ಇಸೈ ಅವರು, ಲೈಫ್ ಆಫ್ ಪೈ ಎಂಬ ಕಾದಂಬರಿಯ ಕವರ್‌ ಫೋಟೋದಲ್ಲಿ ಇರುವ ಮನುಷ್ಯನ ತಲೆಗೆ ಅಣ್ಣಾಮಲೈ ಅವರ ಚಿತ್ರ ಎಡಿಟ್ ಮಾಡಿ ‘ಲೈಫ್‌ ಆಫ್ ಪೊಯಿ’(ಸುಳ್ಳಿನ ಜೀವನ) ಎಂದು ವ್ಯಂಗ್ಯವಾಗಿದ್ದಾರೆ.

ಇಷ್ಟೇ ಅಲ್ಲದೆ ಹಲವಾರು ಮೀಮ್ಸ್‌ಗಳನ್ನು ಜನ ಶೇರ್‌ ಮಾಡುತ್ತಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಣ್ಣಾ ಮಲೈ ಅವರ ಕೆಲಸದ ಬಗ್ಗೆ ಸರಿಯಾಗಿ ಅರಿಯದೆ ,ಮಾತಾಡೋ ಸೋಕಾಲ್ಡ್ ಎಡಬಿಡಂಗಿ ಕೆಲ ಪತ್ರಿಕೆಗಳ ಬಗ್ಗೆ ಜನ ತಲೆ ಕೆಡಿಸಿ ಕೊಳ್ಳಲ್ಲಾ ಬಿಡಿ , ಅದೂ ಚೈನಿ ಪಾಲನೆಯಲ್ಲಿ ನಡೆಯುವ ಕೆಲ ಮಾಧ್ಯಮಗಳು ಯಾವಾಗಲು ಹೀಗೆ ಮಾತಾಡೋದು ಅಂತ ಜನರಿಗೆ ತಿಳಿದಿದೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...