Homeಮುಖಪುಟನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ - ‘ಕೋಡಂಗಿ’ ಎಂದ ತಮಿಳರು

ನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರು

- Advertisement -
- Advertisement -

ತಮಿಳುನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾದ ಅವಘಡಗಳಿಂದ 4 ಜನರು ಮೃತಪಟ್ಟಿದ್ದಾರೆ. ಚೆನ್ನೈ, ಚೆಂಗಲ್‌ಪೇಟ್‌, ಕಾಂಚೀಪುರಂ, ತಿರುವಳ್ಳೂರು ಮತ್ತು ವೆಲ್ಲೂರು ಜಿಲ್ಲೆಯಲ್ಲಿ ಸೋಮವಾರದಂದೂ ಮಳೆಯಾಗಿದ್ದವು. ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ ನೀಡಿ ಪರಿಶೀಲಿಸಿದ್ದರು. ಈ ನಡುವೆ ಪರಿಹಾರ ಕಾರ್ಯಕೂಡಾ ಭರದಿಂದ ಸಾಗಿತ್ತು. ಜೊತೆಗೆ ಹವಾಮಾನ ಇಲಾಖೆಯು ಬುಧವಾರ ಮತ್ತು ಗುರುವಾರ ಕೂಡಾ ಭಾರಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಸರ್ಕಾರದ ಜೊತೆಗೆ ಕೈಜೋಡಿಸಿರುವ ಹಲವಾರು ಸಂಘ ಸಂಸ್ಥೆಗಳು ಪರಿಹಾರ ಕಾರ್ಯದಲ್ಲಿ ನೆರವಾಗುತ್ತಿದೆ. ಈ ಮಧ್ಯೆ ಪರಿಹಾರ ಕಾರ್ಯದಲ್ಲಿ ನಾಟಕೀಯ ದೃಶ್ಯ ಸೃಷ್ಟಿಸಲು ಹೋಗಿ ಮಾಜಿ ಐಪಿಎಸ್‌ ಅಧಿಕಾರಿ, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ನಗೆಪಾಟಲಿಗೀಡಾಗಿದ್ದಾರೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣಾ ದೋಣಿಯನ್ನು ನಿಲ್ಲಿಸಿ ಫೋಟೊಗೆ ಪೋಸ್‌ ನೀಡಿದ್ದಾರೆ. ಆದರೆ ಈ ವಿಡಿಯೊ ವೈರಲ್‌ ಆಗಿದ್ದು, ತಮಿಳುನಾಡಿನ ಜನತೆ ಈ ವಿಡಿಯೊವನ್ನು ಇಟ್ಟು, ಕೋಡಂಗಿ ಅಣ್ಣಾಮಲೈ(ಕೋಮಾಲಿ ಅಣ್ಣಾಮಲೈ) ಎಂದು ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಹಲವು ರೀತಿಯ ವಿಡಿಯೊ ವೈರಲ್ ಆಗಿದ್ದು, ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣೆಗೆ ಬಳಸುವ ದೋಣಿಯಲ್ಲಿ ಕೂತು ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಮೊಣಕಾಲಿನಷ್ಟು ಕೂಡಾ ನೀರಿಲ್ಲದ ಜಾಗದಲ್ಲಿ ದೋಣಿಯೊಳಗಡೆ ಕೂತಿರುವ ಅಣ್ಣಾಮಲೈ ಫೋಟೋ ಶೂಟ್‌ಗೆ ತಯಾರಾಗುತ್ತಿರುವುದು ಕಾಣುತ್ತದೆ. ನಂತರ ಯಾರೋ ಹಿನ್ನಲೆಯಲ್ಲಿ ಶುರುಮಾಡಿ ಎಂದು ಹೇಳುತ್ತಾರೆ. ಆಗ, ಅಣ್ಣಾಮಲೈ ಅವರು ಮುಂದಕ್ಕೆ ಕೈ ಮುಗಿದು ಯಾರೊಂದಿಗೋ ಮಾತನಾಡುವ ಶೈಲಿಯಲ್ಲಿ ‘ಇಲ್ಲೆ ಇರುವವರಾ ಬ್ರದರ್‌ ನೀವು’ ಎಂದು ಕೇಳುತ್ತಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮತ್ತೊಂದು ವಿಡಿಯೊದಲ್ಲಿ, ಅಣ್ಣಾಮಲೈ ಸೇರಿದಂತೆ ಕೆಲವರನ್ನು ದೋಣಿಯಲ್ಲಿ ಕೂರಿಸಿ ಎಳೆದುಕೊಂಡು ಹೋಗುತ್ತಿದ್ದಾರೆ. ಅವರ ಹಿಂದೆ ಬಿಜೆಪಿಯ ಧ್ವಜ ಹಿಡಿದು ಹಲವು ಕಾರ್ಯಕರ್ತರು ಕೂಡಾ ಇರುತ್ತಾರೆ. ಈ ವೇಳೆ ಕೂಡಾ ಅಣ್ಣಾಮಲೈ ಸುಖಾಸುಮ್ಮನೆ ಮುಂದೆ ಯಾರೋ ಇದ್ದಾರೆ ಎಂಬ ರೀತಿಯಲ್ಲಿ ನಮಸ್ಕರಿಸಿದ್ದಾರೆ. ಇದೇ ರೀತಿಯ ದೃಶ್ಯವನ್ನು ಉತ್ತರ ಕರ್ನಾಟಕದಲ್ಲಿ ಮಳೆ ಬಂದಾಗ ಬಿಜೆಪಿಯ ಶಾಸಕ ರೇಣುಕಾಚಾರ್ಯ ಅವರು ಕೂಡಾ ಮಾಡಿದ್ದರು. ಈ ಸಂದಂರ್ಭದಲ್ಲೂ ಜನ ಅವರನ್ನು ಟ್ರೋಲ್ ಮಾಡಿದ್ದರು.

ಇನ್ನೊಂದು ವಿಡಿಯೊದಲ್ಲಿ ಮೊಣಕಾಲುದ್ದ ನೀರಿರುವ ಜಾಗದಲ್ಲಿ ಇರುವ ದೋಣಿಯಲ್ಲಿ ಅಣ್ಣಾಮಲೈ ಕೂತಿದ್ದಾರೆ. ಈ ವೇಳೆ ಕ್ಯಾಮೆರಾ ಮ್ಯಾನ್, ‘ಎಲ್ಲರೂ ಈ ಕಡೆ ಬನ್ನಿ, ಒಂದು ಖಾಲಿಯಾಗಿರುವ ಫೋಟೋ ಕ್ಲಿಕ್ ಮಾಡುತ್ತೇನೆ’ ಎಂದು ಹೇಳುತ್ತಾರೆ. ಆಗ ಅಣ್ಣಾ ಮಲೈ ಕೂಡಾ ಅವರನ್ನು ಕಳುಹಿಸುತ್ತಾರೆ. ಜೊತೆಗೆ ಅಲ್ಲೇ ಇದ್ದ ಮಹಿಳೆಯೊಂದಿಗೆ ಕೂಡಾ ಅಣ್ಣಾ ಮಲೈ ಮಾತನಾಡುತ್ತಾರೆ. ಆಗ, ಆ ಅಕ್ಕ ಜೊತೆ ಮಾತಾಡ್ತಾ ಇರೋ ಥರ ಒಂದು ಶಾಟ್ ತಗೋ ಎಂಬ ಧ್ವನಿಯು ಕೇಳುತ್ತದೆ. ಈ ನಡುವೆ ಅಣ್ಣಾಮಲೈ ಮತ್ತೆ ಯಾರಿಗೋ ನಮಸ್ಕಾರ ಮಾಡುವ ರೀತಿಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ: ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಮಗದೊಂದು ವಿಡಿಯೊದಲ್ಲಿ, ನೀರಿನಿಂದ ರಕ್ಷಣೆಗಾಗಿ ಬದಿಯಲ್ಲಿ ನಿಂತಿದ್ದ ವೃದ್ದೆಯನ್ನು ಮಾತನಾಡಿಸಲು ಅಣ್ಣಾ ಮಲೈ ತೆರಳುತ್ತಾರೆ. ಅವರನ್ನು ಮಾತನಾಡಿಸಿದ ಅವರು, “ಪ್ರತಿಬಾರಿಯ ಮಳೆಗೂ ಹೀಗಾದರೆ ಹೇಗಮ್ಮ? 2015 ರಲ್ಲೂ ಹೀಗೆ, 2021 ರಲ್ಲೂ ಹೀಗೆ” ಎಂದು ಕೇಳುತ್ತಾರೆ. ಈ ವೇಳೆ ಮಹಿಳೆ, “ನೀವು ಬಂದು ಏನು ಮಾಡುತ್ತೀರಿ” ಎಂದು ಪ್ರಶ್ನಿಸುತ್ತಾರೆ.

ಮಾನವೀಯ ನೆರವು ನೀಡಬೇಕಾದ ಸಮಯದಲ್ಲೂ ನಾಟಕ ಮಾಡಲು ಪ್ರಯತ್ನಿಸಿದ ಅಣ್ಣಾ ಮಲೈ ಅವರನ್ನು ತಮಿಳುನಾಡಿನ ಜನರು ಟ್ವಿಟರ್‌ನಲ್ಲಿ ಮೀಮ್ಸ್‌ ಮಾಡಿ ವ್ಯಂಗ್ಯವಾಡುತ್ತಿದ್ದಾರೆ. ‘ಗೋಟ್‌‌ ಆನ್‌ ದಿ ಬೋಟ್’,(ದೋಣಿಯಲ್ಲಿ ಆಡು) ಕೋಮಾಲಿ ಅಣ್ಣಾಮಲೈ (ಕೋಡಂಗಿ ಅಣ್ಣಾಮಲೈ) ಎಂದು ಹ್ಯಾಶ್ ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ಡಿಎಂಕೆ ರಾಜ್ಯ ಐಟಿ ವಿಂಗ್ ನಾಯಕರಾದ ಇಸೈ ಅವರು, ಲೈಫ್ ಆಫ್ ಪೈ ಎಂಬ ಕಾದಂಬರಿಯ ಕವರ್‌ ಫೋಟೋದಲ್ಲಿ ಇರುವ ಮನುಷ್ಯನ ತಲೆಗೆ ಅಣ್ಣಾಮಲೈ ಅವರ ಚಿತ್ರ ಎಡಿಟ್ ಮಾಡಿ ‘ಲೈಫ್‌ ಆಫ್ ಪೊಯಿ’(ಸುಳ್ಳಿನ ಜೀವನ) ಎಂದು ವ್ಯಂಗ್ಯವಾಗಿದ್ದಾರೆ.

ಇಷ್ಟೇ ಅಲ್ಲದೆ ಹಲವಾರು ಮೀಮ್ಸ್‌ಗಳನ್ನು ಜನ ಶೇರ್‌ ಮಾಡುತ್ತಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಣ್ಣಾ ಮಲೈ ಅವರ ಕೆಲಸದ ಬಗ್ಗೆ ಸರಿಯಾಗಿ ಅರಿಯದೆ ,ಮಾತಾಡೋ ಸೋಕಾಲ್ಡ್ ಎಡಬಿಡಂಗಿ ಕೆಲ ಪತ್ರಿಕೆಗಳ ಬಗ್ಗೆ ಜನ ತಲೆ ಕೆಡಿಸಿ ಕೊಳ್ಳಲ್ಲಾ ಬಿಡಿ , ಅದೂ ಚೈನಿ ಪಾಲನೆಯಲ್ಲಿ ನಡೆಯುವ ಕೆಲ ಮಾಧ್ಯಮಗಳು ಯಾವಾಗಲು ಹೀಗೆ ಮಾತಾಡೋದು ಅಂತ ಜನರಿಗೆ ತಿಳಿದಿದೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...