Homeಸಿನಿಮಾಕ್ರೀಡೆವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರ ಬೆದರಿಕೆಯೊಡ್ಡಿದ್ದ ಹೈದರಾಬಾದ್‌ ವ್ಯಕ್ತಿಯ ಬಂಧನ

- Advertisement -
- Advertisement -

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಸತತವಾಗಿ ಸೋತಿದ್ದಕ್ಕೆ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಒಂಬತ್ತು ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಒಡ್ಡಿದ ಹೈದರಾಬಾದ್‌ನ ಇಂಜಿನಿಯರ್‌ ಅನ್ನು ಬುಧವಾರ ಬಂಧಿಸಲಾಗಿದೆ.

ಆರೋಪಿಯನ್ನು 23 ವರ್ಷದ ರಾಮನಾಗೇಶ್ ಶ್ರೀನಿವಾಸ್ ಅಕುಬತಿನಿ ಎಂದು ಗುರುತಿಸಲಾಗಿದ್ದು, ಮುಂಬೈ ಪೊಲೀಸರ ವಿಶೇಷ ತಂಡ ಇಂದು ಮಧ್ಯಾಹ್ನ ಬಂಧಿಸಿದೆ. ಅತ್ಯಾಚಾರ ಬೆದರಿಕೆಯ ಟ್ವೀಟ್‌‌ ಅನ್ನು ಪೊಲೀಸರು ತನಿಖೆ ಮಾಡಲು ಪ್ರಾರಂಭಿಸಿದ ನಂತರ ಆರೋಪಿ ತನ್ನ ಟ್ವಿಟರ್ ಹ್ಯಾಂಡಲ್ ಅನ್ನು ಬದಲಾಯಿಸಿ, ತಾನು ಪಾಕಿಸ್ತಾನಿ ಟ್ವಿಟರ್‌ ಬಳಕೆದಾರರಂತೆ ನಟಿಸಿದ್ದನು ಎಂದು ಆರೋಪಿಸಲಾಗಿದೆ. ಬಂಧಿತನನ್ನು ಮುಂಬೈಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ವಿರಾಟ್ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ: ಕೊಹ್ಲಿ ಪರ ನಿಂತ ರಾಹುಲ್ ಗಾಂಧಿ

ಆರೋಪಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಸದ್ಯ ನಿರುದ್ಯೋಗಿಯಾಗಿದ್ದನು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಈ ಹಿಂದೆ ಆತ ಆಹಾರ ವಿತರಣಾ ಆಪ್‌ಗಾಗಿ ಕೆಲಸ ಮಾಡಿದ್ದನು ಎಂದು ವರದಿಯಾಗಿದೆ.

ಕಳೆದ ವಾರ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಅವರ ಒಂಬತ್ತು ತಿಂಗಳ ಮಗಳನ್ನು ಗುರಿಯಾಗಿಟ್ಟುಕೊಂಡು ಅತ್ಯಾಚಾರ ಬೆದರಿಕೆ ಒಡ್ಡಲಾಗಿತ್ತು. ಇದರ ವಿರುದ್ದ ರಾಷ್ಟ್ರ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮುಂಬೈ ನಿವಾಸಿಗಳಾಗಿರುವುದರಿಂದ ಮುಂಬೈ ಪೊಲೀಸರು ಹಲವಾರು ಹ್ಯಾಂಡಲ್‌ಗಳನ್ನು ತನಿಖೆ ನಡೆಸುತ್ತಿದ್ದರು. ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಕೂಡ ತನಿಖೆಗೆ ಕರೆ ನೀಡಿತ್ತು. ಈ ಸಂಬಂಧ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್

ಅಕ್ಟೋಬರ್ 24 ರಂದು ದುಬೈನಲ್ಲಿ ನಡೆದ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್‌ಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ಸೋಲಿನ ನಂತರ ತನ್ನ ಸಹ ಆಟಗಾರ ಮೊಹಮ್ಮದ್ ಶಮಿಯನ್ನು ಅವರ ಧರ್ಮದ ಕಾರಣಕ್ಕೆ ಟ್ರೋಲ್ ಮಾಡುತ್ತಿರುವುದನ್ನು ವಿರೋಧಿಸಿ ವಿರಾಟ್ ಕೊಹ್ಲಿ ಮಾತನಾಡಿದ್ದರು. ಇದಕ್ಕೆ ಕೂಡಾ ಅವರ ಮೇಲೆ ದಾಳಿ ಮಾಡಲಾಗಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ವಿರಾಟ್‌ ಕೊಹ್ಲಿ ಅವರ ಬೆಂಬಲಕ್ಕೆ ನಿಂತಿದ್ದರು. ಅವರು ತನ್ನ ಟ್ವೀಟ್‌ನಲ್ಲಿ, “ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ. ಯಾಕೆಂದರೆ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ, ತಂಡವನ್ನು ರಕ್ಷಿಸಿ” ಎಂದು ಹೇಳಿದ್ದರು.

ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please see this matter write something about this
    It is appears to be most important it is circulating in whatsappgroups. Bit is as follows.
    * ತೆರಿಗೆದಾರರ ಅಖಿಲ ಭಾರತ ಸಂಘಟನೆಯನ್ನು ಸ್ಥಾಪಿಸುವ ಸಮಯ ಬಂದಿದೆ. *

    ವಿಶ್ವದ ಅತಿ ದೊಡ್ಡ ಕಂಪನಿ ಯಾವುದು?

    ಈಗ ದೇಶದಲ್ಲಿ ತೆರಿಗೆದಾರರ ಸಂಘವನ್ನು ರಚಿಸಬೇಕು. ಈ ತೆರಿಗೆದಾರರ ಸಂಘದ ಅನುಮೋದನೆಯಿಲ್ಲದೆ ಯಾವುದೇ ಸರ್ಕಾರ, ಯಾವುದೇ ಸರ್ಕಾರ, ಉಚಿತ ವಿದ್ಯುತ್, ಉಚಿತ ನೀರು, ಉಚಿತ ವಿತರಣೆ ಅಥವಾ ಸಾಲ ಮನ್ನಾ ಘೋಷಿಸಲು ಸಾಧ್ಯವಿಲ್ಲ. ಈ ರೀತಿಯ ಯಾವುದನ್ನಾದರೂ ರನ್ ಮಾಡಿ.
    ನಮ್ಮ ತೆರಿಗೆ ಪಾವತಿಯಿಂದ ಹಣ ಬರುತ್ತದೆ, ಹಾಗಾಗಿ ಅದನ್ನು ಹೇಗೆ ಬಳಸಬೇಕು ಎಂದು ಹೇಳುವ ಹಕ್ಕು ನಮಗೂ ಇರಬೇಕು.

    * ಸಾಮಾನ್ಯ ಜನರು ಅಂತಹ ರಾಜಕೀಯ ಪಕ್ಷಗಳತ್ತ ಆಕರ್ಷಿತರಾಗುತ್ತಾರೆ ಮತ್ತು ಮತಗಳಿಗಾಗಿ ಉಚಿತಗಳನ್ನು ಘೋಷಿಸುತ್ತಾರೆ ಮತ್ತು ವಿತರಿಸುತ್ತಾರೆ, ಏಕೆಂದರೆ ಅದು ಅವರಿಗೆ ಪ್ರಯೋಜನವನ್ನು ನೀಡುತ್ತದೆ. ಜನರು ತಾವು ಗಳಿಸಿದ ಹಣದಿಂದ ಸೋಮಾರಿಗಳನ್ನು ಮಾಡುವುದರಿಂದ ದೇಶವು ಹದಗೆಡುತ್ತಿದೆ *
    ಸರ್ಕಾರಗಳು ಶಿಕ್ಷಣ ಮತ್ತು ಔಷಧವನ್ನು ಮಾತ್ರ ಉಚಿತವಾಗಿ ನೀಡಬೇಕು.

    * ನಾವು ದೇಶದ ಅಭಿವೃದ್ಧಿಗೆ ತೆರಿಗೆ ಪಾವತಿಸುತ್ತೇವೆ ಆದರೆ ದೇಶವನ್ನು ನಾಶ ಮಾಡಲು ಅಲ್ಲ. *

    ಯಾವುದೇ ಯೋಜನೆಯನ್ನು ಘೋಷಿಸಿದರೂ, ಅದರ ನೀಲನಕ್ಷೆಯನ್ನು ಮುಂಚಿತವಾಗಿ ನೀಡಿ, ಒಕ್ಕೂಟದಿಂದ ಒಪ್ಪಿಗೆ ಪಡೆಯಿರಿ ಮತ್ತು ಅದು ಸಂಸದರು ಮತ್ತು ಶಾಸಕರ ಸಂಬಳ ಮತ್ತು ಅವರು ಪಡೆಯುವ ಇತರ ಪ್ರಯೋಜನಗಳಿಗೆ ಅನ್ವಯಿಸಬೇಕು.

    * ಪ್ರಜಾಪ್ರಭುತ್ವ ಕೇವಲ ಮತದಾನಕ್ಕೆ ಸೀಮಿತವೇ? *
    ಅದರ ನಂತರ ನಮಗೆ ಯಾವ ಹಕ್ಕುಗಳಿವೆ?

    ಅಂತಹ ಯಾವುದೇ “ಉಚಿತ” ಗಳನ್ನು ಮರುಪಡೆಯುವ ಹಕ್ಕನ್ನು ಕೂಡ ಶೀಘ್ರದಲ್ಲಿ ಜಾರಿಗೊಳಿಸಬೇಕು.

    ನೀವು ಒಪ್ಪಿದರೆ, ದಯವಿಟ್ಟು ಸಾಧ್ಯವಾದಷ್ಟು ಜನರನ್ನು ಸಂಪರ್ಕಿಸಿ. ಇದನ್ನು ಮಾಡಲು, ಪೋಸ್ಟ್ ಅನ್ನು ಹಂಚಿಕೊಳ್ಳಿ. .
    ನಿಮ್ಮ ಕನಿಷ್ಠ 10 ಸ್ನೇಹಿತರಿಗೆ ಕಳುಹಿಸಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...