Homeಕರ್ನಾಟಕಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಜಿಲ್ಲೆಯ ಶಿಕ್ಷಕರನ್ನು ರಾಜಕೀಯ ಸಂಘಟನೆಯೊಂದರ ಸಭೆಗೆ ಕಳುಹಿಸುವ ಬಗ್ಗೆ ಜಿಲ್ಲಾ ಸಿಇಒ ಸುತ್ತೋಲೆ ಹೊರಡಿಸಿದ್ದರು

- Advertisement -
- Advertisement -

ಬಿಜೆಪಿ ಪರ ಸಂಘಟನೆಯಾದ ‘ಯುವಾ ಬ್ರಿಗೇಡ್’ ಗುರುವಾರ (ಇಂದು) ಯಾದಗಿರಿ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರೇರಣಾ ಪ್ರವಾಹ ಕಾರ್ಯಕ್ರಮಕ್ಕೆ, ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರನ್ನು ಕಳುಹಿಸುವ ಬಗ್ಗೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಬುಧವಾರ ರದ್ದು ಪಡಿಸಲಾಗಿದೆ. ಈ ಬಗ್ಗೆ ನಾನುಗೌರಿ.ಕಾಂ ಮಂಗಳವಾರದಂದು ರಾಜಕೀಯ ಸಂಘಟನೆಯೊಂದರ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿಯ ನೆಪದಲ್ಲಿ ಕಳುಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿ ವರದಿ ಮಾಡಿತ್ತು.

ನವೆಂಬರ್‌ 6 ರ ಶನಿವಾರದಂದು ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಶಿಲ್ಪಾ ಶರ್ಮಾ ಈ ಸುತ್ತೋಲೆಯನ್ನು ಹೊರಡಿಸಿದ್ದರು. ಸುತ್ತೋಲೆಯಲ್ಲಿ, “ಯುವಾ ಬ್ರಿಗೇಡ್  ನಡೆಸುವ ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳಿಂದ ಒಬ್ಬ ಅಥವಾ ಇಬ್ಬರು ಶಿಕ್ಷಕರನ್ನು ಕಳುಹಿಸಬೇಕು. ಜೊತೆಗೆ ಭಾಗವಹಿಸುವ ಶಿಕ್ಷಕರಿಗೆ ನಿಯಮಾನುಸಾರ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು” ಎಂದು ಹೇಳಲಾಗಿತ್ತು.

ಇದನ್ನೂ ಓದಿ: BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ – ಆಕ್ರೋಶ

ಆದರೆ, ಸಿಇಒ ಅವರು ಹೊರಡಿಸಿದ ಈ ಸುತ್ತೋಲೆಯನ್ನು ವಿರೋಧಿಸಿ ಶಿಕ್ಷಣ ತಜ್ಞರು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ಬುಧವಾರದಂದು ಮತ್ತೆ ಸಿಇಒ ಶಿಲ್ಪಾ ಶರ್ಮಾ ಅವರು ಮೌಖಿಕವಾಗಿ ಸಂದೇಶ ನೀಡಿ ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಿರುವುದರಿಂದ, ಕಾರ್ಯಕ್ರಮಕ್ಕೆ ತೆರಳುವಂತೆ ನಿಯೋಜಿಸಲ್ಪಟ್ಟ ಶಿಕ್ಷಕರ ನಿಯೋಜನೆ ರದ್ದಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ಇದರ ಉಪನಿರ್ದೇಶಕರು ಅತೀ ತುರ್ತು ಜ್ಞಾಪನ ಪತ್ರ ಹೊರಡಿಸಿದ್ದಾರೆ.

ಪತ್ರದಲ್ಲಿ, ವಿಧಾನ ಪರಿಷತ್‌ ಸದಸ್ಯರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹೀಗಾಗಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಿಇಒ ಶಿಲ್ಪಾ ಶರ್ಮಾ ಅವರ ಆಪ್ತ ಸಹಾಯಕ ಕಿಶನ್ ರಾಥೋಡ್, “ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸುತ್ತೋಲೆ ರದ್ದಾಗಿದೆ. ಯಾವುದೆ ಎನ್‌ಜಿಒಗಳು ಮುಂದೆ ಬಂದರೆ ಅವರಿಗೆ ಅವಕಾಶ ಕೊಡಬಾರದು ಎಂದು ನಿಯಮವೇನು ಇಲ್ಲ. ಅದು ಎನ್‌ಜಿಒ ಆಗಿದ್ದು, ಅದರಲ್ಲಿ ಶಿಕ್ಷಕರಿಗೆ ಓರಿಯಂಟೇಷನ್‌ ತರಬೇತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ಸುತ್ತೋಲೆ ಹೊರಡಿಸಲಾಗಿತ್ತು” ಎಂದು ಹೇಳಿದರು.

ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರಿ ಸಂಸ್ಥೆಗಳು ಇವೆ. ರಾಜಕೀಯ ಸಂಘಟನೆಯೊಂದರ ಅಡಿಯಲ್ಲಿ ತರಬೇತಿ ಯಾಕೆ ನೀಡಬೇಕು? ಎಂದು ಶಿಕ್ಷಣ ತಜ್ಞರು ಪ್ರಶ್ನಿಸಿದ್ದರು. ಅಲ್ಲದೆ ಯುವಾ ಬ್ರಿಗೇಡ್‌ ಎಂಬುವುದು ರಾಜಕೀಯ ಅಜೆಂಡಾ ರೂಪಿಸುವಂತಹಾ ರಾಜಕೀಯ ಸಂಘಟನೆಯಾಗಿದೆ. ಆ ಸಂಘಟನೆ ಈ ಹಿಂದೆ ನಮೋ ಬ್ರಿಗೇಡ್ ಎಂಬ ಹೆಸರಿನಿಂದ ಕಾರ್ಯಾಚರಣೆ ಮಾಡುತ್ತಿತ್ತು. ಅದರ ನಂತರ ಯುವಾ ಬ್ರಿಗೇಡ್‌ ಎಂದು ಹೆಸರು ಬದಲಾಯಿಸಿಕೊಂಡಿದೆ. ಅದು ಬಿಜೆಪಿ ಪಕ್ಷದ ಪ್ರಚಾರಕ್ಕೆಂದೇ ಹುಟ್ಟಿಕೊಂಡಿರುವ ಸಂಘಟನೆಯಾಗಿದ್ದು, ಪ್ರಸ್ತುತ ಕಾರ್ಯಕ್ರಮದಲ್ಲಿ ‘ಹೊಸ ಶಿಕ್ಷಣ ನೀತಿ’ ಎಂಬ ರಾಜಕೀಯ ವಿಷಯದ ಬಗ್ಗೆ ಸಂಘಟನೆಯ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡುವುದಿತ್ತು.

ಒಟ್ಟಿನಲ್ಲಿ ರಾಜಕೀಯ ಕಾರ್ಯಕ್ರಮವೊಂದಕ್ಕೆ ಸರ್ಕಾರಿ ಶಿಕ್ಷಕರು ಭಾಗವಹಿಸುವಂತೆ ಎಂದು ಸಿಇಒ ಸುತ್ತೋಲೆ ಹೊರಡಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿಶನ್‌‌ ರಾಥೋಡ್, “ಆಯಿತು ಬಿಡಿ, ಈಗದು ರದ್ದಾಗಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಗಮನ ಹರಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಈ ಎಲ್ಲಾ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ನಾಯಕ ಭಾಸ್ಕರ್‌ ಪ್ರಸಾದ್‌, “ಸುತ್ತೋಲೆ ನಮ್ಮ ಗಮನಕ್ಕೆ ಬಂದ ಕೂಡಲೆ ನಾವು ಯಾದಗಿರಿ ಜಿಲ್ಲೆಯ ನಮ್ಮ ನಾಯಕರನ್ನು ಗಮನಕ್ಕೆ ತಂದೆವು. ಸೂಲಿಬೆಲೆ ಅವರ ಸಂಘಟನೆಯ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿ ಕಳುಹಿಸಿದರಲ್ಲಿ ಏನರ್ಥವಿದೆ? ನಾಳೆ ದಿನ ನಾವು ಕೂಡಾ ನಮ್ಮ ಸಭೆಗೂ ಶಿಕ್ಷಕರನ್ನು ಕಳುಹಿಸಿಕೊಡಿ ಎಂದು ಕೇಳಿದರೆ ಕೊಡುತ್ತೀರಾ ಎಂದು ನಾವು ಯಾದಗಿರಿ ಜಿಲ್ಲಾಧಿಕಾರಿ, ಸಿಇಒ ಮತ್ತು ಶಿಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಪ್ರಶ್ನೆಗಳನ್ನು ಎತ್ತಿ, ನಮ್ಮ ಆಕ್ರೋಶಗಳನ್ನು ತಿಳಿಸಿದ್ದೆವು. ಇದರ ನಂತರ ಅವರು ಶಿಕ್ಷಕರ ನಿಯೋಜನೆಯನ್ನು ರದ್ದು ಮಾಡಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ” ಎಂದು ಹೇಳಿದರು.

“ಶಿಕ್ಷಕರ ಕೌಶಲ್ಯಾಭಿವೃದ್ದಿ ಹೆಚ್ಚಿಸಲು ಬೇಕಾಗಿ ಕೋಟ್ಯಾಂತರ ರೂ ಖರ್ಚು ಮಾಡಲಾಗುತ್ತದೆ. ಸರ್ಕಾರದ ಈ ದುಡ್ಡನ್ನು ದೂಚಲು ಬೇಕಾಗಿ ಯುವಾ ಬ್ರಿಗೇಡ್‌ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದೆ” ಎಂದು ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರನ್ನು ರಾಜಕೀಯ ಸಭೆಗೆ ನಿಯೋಜಿಸಿದ ಯಾದಗಿರಿ ಜಿಲ್ಲಾ ಪಂಚಾಯತ್‌ ಸಿಇಒ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಪ್‌ ಇಂಡಿಯಾ (ಕಮ್ಯುನಿಷ್ಟ್‌) ಪಕ್ಷದ ಅಂಗ ಸಂಘಟನೆಯಾದ ‘ಎಐಡಿವೈಒ’ ಯಾದಗಿರಿ ಜಿಲ್ಲಾ ಸಂಚಾಲಕ ಜಮಾಲ್ ಸಾಬ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಇಒ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನೂ ಮೀರಿ ಆಡಳಿತ ಪಕ್ಷದೊಂದಿಗೆ ಸ್ಪಷ್ಟವಾಗಿ ಗುರುತಿಸಿ ಕೊಂಡಿದ್ದಾರೆ ಎಂದು ಅವರು ಹೇಳಿದ್ದು, “ಚುನಾವಣಾ ವೇಳೆಯಲ್ಲಿ ಬಿಜೆಪಿಗಾಗಿ ಪ್ರಚಾರ ಮಾಡುವ ಒಂದು ಸಂಘಟನೆಯ ಚಟುವಟಿಕೆಗೆ ಸರ್ಕಾರಿ ಉದ್ಯೋಗಿಗಳನ್ನು ತೊಡಗಿಸುವುದು ಕರ್ನಾಟಕ ಆಡಳಿತ ಸೇವಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತ್ ಸಿಇಓ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...