Homeಕರ್ನಾಟಕಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಜಿಲ್ಲೆಯ ಶಿಕ್ಷಕರನ್ನು ರಾಜಕೀಯ ಸಂಘಟನೆಯೊಂದರ ಸಭೆಗೆ ಕಳುಹಿಸುವ ಬಗ್ಗೆ ಜಿಲ್ಲಾ ಸಿಇಒ ಸುತ್ತೋಲೆ ಹೊರಡಿಸಿದ್ದರು

- Advertisement -
- Advertisement -

ಬಿಜೆಪಿ ಪರ ಸಂಘಟನೆಯಾದ ‘ಯುವಾ ಬ್ರಿಗೇಡ್’ ಗುರುವಾರ (ಇಂದು) ಯಾದಗಿರಿ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರೇರಣಾ ಪ್ರವಾಹ ಕಾರ್ಯಕ್ರಮಕ್ಕೆ, ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರನ್ನು ಕಳುಹಿಸುವ ಬಗ್ಗೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಬುಧವಾರ ರದ್ದು ಪಡಿಸಲಾಗಿದೆ. ಈ ಬಗ್ಗೆ ನಾನುಗೌರಿ.ಕಾಂ ಮಂಗಳವಾರದಂದು ರಾಜಕೀಯ ಸಂಘಟನೆಯೊಂದರ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿಯ ನೆಪದಲ್ಲಿ ಕಳುಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿ ವರದಿ ಮಾಡಿತ್ತು.

ನವೆಂಬರ್‌ 6 ರ ಶನಿವಾರದಂದು ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಶಿಲ್ಪಾ ಶರ್ಮಾ ಈ ಸುತ್ತೋಲೆಯನ್ನು ಹೊರಡಿಸಿದ್ದರು. ಸುತ್ತೋಲೆಯಲ್ಲಿ, “ಯುವಾ ಬ್ರಿಗೇಡ್  ನಡೆಸುವ ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳಿಂದ ಒಬ್ಬ ಅಥವಾ ಇಬ್ಬರು ಶಿಕ್ಷಕರನ್ನು ಕಳುಹಿಸಬೇಕು. ಜೊತೆಗೆ ಭಾಗವಹಿಸುವ ಶಿಕ್ಷಕರಿಗೆ ನಿಯಮಾನುಸಾರ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು” ಎಂದು ಹೇಳಲಾಗಿತ್ತು.

ಇದನ್ನೂ ಓದಿ: BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ – ಆಕ್ರೋಶ

ಆದರೆ, ಸಿಇಒ ಅವರು ಹೊರಡಿಸಿದ ಈ ಸುತ್ತೋಲೆಯನ್ನು ವಿರೋಧಿಸಿ ಶಿಕ್ಷಣ ತಜ್ಞರು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ಬುಧವಾರದಂದು ಮತ್ತೆ ಸಿಇಒ ಶಿಲ್ಪಾ ಶರ್ಮಾ ಅವರು ಮೌಖಿಕವಾಗಿ ಸಂದೇಶ ನೀಡಿ ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಿರುವುದರಿಂದ, ಕಾರ್ಯಕ್ರಮಕ್ಕೆ ತೆರಳುವಂತೆ ನಿಯೋಜಿಸಲ್ಪಟ್ಟ ಶಿಕ್ಷಕರ ನಿಯೋಜನೆ ರದ್ದಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ಇದರ ಉಪನಿರ್ದೇಶಕರು ಅತೀ ತುರ್ತು ಜ್ಞಾಪನ ಪತ್ರ ಹೊರಡಿಸಿದ್ದಾರೆ.

ಪತ್ರದಲ್ಲಿ, ವಿಧಾನ ಪರಿಷತ್‌ ಸದಸ್ಯರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹೀಗಾಗಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಿಇಒ ಶಿಲ್ಪಾ ಶರ್ಮಾ ಅವರ ಆಪ್ತ ಸಹಾಯಕ ಕಿಶನ್ ರಾಥೋಡ್, “ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸುತ್ತೋಲೆ ರದ್ದಾಗಿದೆ. ಯಾವುದೆ ಎನ್‌ಜಿಒಗಳು ಮುಂದೆ ಬಂದರೆ ಅವರಿಗೆ ಅವಕಾಶ ಕೊಡಬಾರದು ಎಂದು ನಿಯಮವೇನು ಇಲ್ಲ. ಅದು ಎನ್‌ಜಿಒ ಆಗಿದ್ದು, ಅದರಲ್ಲಿ ಶಿಕ್ಷಕರಿಗೆ ಓರಿಯಂಟೇಷನ್‌ ತರಬೇತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ಸುತ್ತೋಲೆ ಹೊರಡಿಸಲಾಗಿತ್ತು” ಎಂದು ಹೇಳಿದರು.

ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರಿ ಸಂಸ್ಥೆಗಳು ಇವೆ. ರಾಜಕೀಯ ಸಂಘಟನೆಯೊಂದರ ಅಡಿಯಲ್ಲಿ ತರಬೇತಿ ಯಾಕೆ ನೀಡಬೇಕು? ಎಂದು ಶಿಕ್ಷಣ ತಜ್ಞರು ಪ್ರಶ್ನಿಸಿದ್ದರು. ಅಲ್ಲದೆ ಯುವಾ ಬ್ರಿಗೇಡ್‌ ಎಂಬುವುದು ರಾಜಕೀಯ ಅಜೆಂಡಾ ರೂಪಿಸುವಂತಹಾ ರಾಜಕೀಯ ಸಂಘಟನೆಯಾಗಿದೆ. ಆ ಸಂಘಟನೆ ಈ ಹಿಂದೆ ನಮೋ ಬ್ರಿಗೇಡ್ ಎಂಬ ಹೆಸರಿನಿಂದ ಕಾರ್ಯಾಚರಣೆ ಮಾಡುತ್ತಿತ್ತು. ಅದರ ನಂತರ ಯುವಾ ಬ್ರಿಗೇಡ್‌ ಎಂದು ಹೆಸರು ಬದಲಾಯಿಸಿಕೊಂಡಿದೆ. ಅದು ಬಿಜೆಪಿ ಪಕ್ಷದ ಪ್ರಚಾರಕ್ಕೆಂದೇ ಹುಟ್ಟಿಕೊಂಡಿರುವ ಸಂಘಟನೆಯಾಗಿದ್ದು, ಪ್ರಸ್ತುತ ಕಾರ್ಯಕ್ರಮದಲ್ಲಿ ‘ಹೊಸ ಶಿಕ್ಷಣ ನೀತಿ’ ಎಂಬ ರಾಜಕೀಯ ವಿಷಯದ ಬಗ್ಗೆ ಸಂಘಟನೆಯ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡುವುದಿತ್ತು.

ಒಟ್ಟಿನಲ್ಲಿ ರಾಜಕೀಯ ಕಾರ್ಯಕ್ರಮವೊಂದಕ್ಕೆ ಸರ್ಕಾರಿ ಶಿಕ್ಷಕರು ಭಾಗವಹಿಸುವಂತೆ ಎಂದು ಸಿಇಒ ಸುತ್ತೋಲೆ ಹೊರಡಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿಶನ್‌‌ ರಾಥೋಡ್, “ಆಯಿತು ಬಿಡಿ, ಈಗದು ರದ್ದಾಗಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಗಮನ ಹರಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಈ ಎಲ್ಲಾ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ನಾಯಕ ಭಾಸ್ಕರ್‌ ಪ್ರಸಾದ್‌, “ಸುತ್ತೋಲೆ ನಮ್ಮ ಗಮನಕ್ಕೆ ಬಂದ ಕೂಡಲೆ ನಾವು ಯಾದಗಿರಿ ಜಿಲ್ಲೆಯ ನಮ್ಮ ನಾಯಕರನ್ನು ಗಮನಕ್ಕೆ ತಂದೆವು. ಸೂಲಿಬೆಲೆ ಅವರ ಸಂಘಟನೆಯ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿ ಕಳುಹಿಸಿದರಲ್ಲಿ ಏನರ್ಥವಿದೆ? ನಾಳೆ ದಿನ ನಾವು ಕೂಡಾ ನಮ್ಮ ಸಭೆಗೂ ಶಿಕ್ಷಕರನ್ನು ಕಳುಹಿಸಿಕೊಡಿ ಎಂದು ಕೇಳಿದರೆ ಕೊಡುತ್ತೀರಾ ಎಂದು ನಾವು ಯಾದಗಿರಿ ಜಿಲ್ಲಾಧಿಕಾರಿ, ಸಿಇಒ ಮತ್ತು ಶಿಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಪ್ರಶ್ನೆಗಳನ್ನು ಎತ್ತಿ, ನಮ್ಮ ಆಕ್ರೋಶಗಳನ್ನು ತಿಳಿಸಿದ್ದೆವು. ಇದರ ನಂತರ ಅವರು ಶಿಕ್ಷಕರ ನಿಯೋಜನೆಯನ್ನು ರದ್ದು ಮಾಡಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ” ಎಂದು ಹೇಳಿದರು.

“ಶಿಕ್ಷಕರ ಕೌಶಲ್ಯಾಭಿವೃದ್ದಿ ಹೆಚ್ಚಿಸಲು ಬೇಕಾಗಿ ಕೋಟ್ಯಾಂತರ ರೂ ಖರ್ಚು ಮಾಡಲಾಗುತ್ತದೆ. ಸರ್ಕಾರದ ಈ ದುಡ್ಡನ್ನು ದೂಚಲು ಬೇಕಾಗಿ ಯುವಾ ಬ್ರಿಗೇಡ್‌ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದೆ” ಎಂದು ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರನ್ನು ರಾಜಕೀಯ ಸಭೆಗೆ ನಿಯೋಜಿಸಿದ ಯಾದಗಿರಿ ಜಿಲ್ಲಾ ಪಂಚಾಯತ್‌ ಸಿಇಒ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಪ್‌ ಇಂಡಿಯಾ (ಕಮ್ಯುನಿಷ್ಟ್‌) ಪಕ್ಷದ ಅಂಗ ಸಂಘಟನೆಯಾದ ‘ಎಐಡಿವೈಒ’ ಯಾದಗಿರಿ ಜಿಲ್ಲಾ ಸಂಚಾಲಕ ಜಮಾಲ್ ಸಾಬ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಇಒ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನೂ ಮೀರಿ ಆಡಳಿತ ಪಕ್ಷದೊಂದಿಗೆ ಸ್ಪಷ್ಟವಾಗಿ ಗುರುತಿಸಿ ಕೊಂಡಿದ್ದಾರೆ ಎಂದು ಅವರು ಹೇಳಿದ್ದು, “ಚುನಾವಣಾ ವೇಳೆಯಲ್ಲಿ ಬಿಜೆಪಿಗಾಗಿ ಪ್ರಚಾರ ಮಾಡುವ ಒಂದು ಸಂಘಟನೆಯ ಚಟುವಟಿಕೆಗೆ ಸರ್ಕಾರಿ ಉದ್ಯೋಗಿಗಳನ್ನು ತೊಡಗಿಸುವುದು ಕರ್ನಾಟಕ ಆಡಳಿತ ಸೇವಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತ್ ಸಿಇಓ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...