Homeಕರ್ನಾಟಕಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಯಾದಗಿರಿ: ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸುವ ಸುತ್ತೋಲೆ ರದ್ದು

ಜಿಲ್ಲೆಯ ಶಿಕ್ಷಕರನ್ನು ರಾಜಕೀಯ ಸಂಘಟನೆಯೊಂದರ ಸಭೆಗೆ ಕಳುಹಿಸುವ ಬಗ್ಗೆ ಜಿಲ್ಲಾ ಸಿಇಒ ಸುತ್ತೋಲೆ ಹೊರಡಿಸಿದ್ದರು

- Advertisement -
- Advertisement -

ಬಿಜೆಪಿ ಪರ ಸಂಘಟನೆಯಾದ ‘ಯುವಾ ಬ್ರಿಗೇಡ್’ ಗುರುವಾರ (ಇಂದು) ಯಾದಗಿರಿ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರೇರಣಾ ಪ್ರವಾಹ ಕಾರ್ಯಕ್ರಮಕ್ಕೆ, ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರನ್ನು ಕಳುಹಿಸುವ ಬಗ್ಗೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಬುಧವಾರ ರದ್ದು ಪಡಿಸಲಾಗಿದೆ. ಈ ಬಗ್ಗೆ ನಾನುಗೌರಿ.ಕಾಂ ಮಂಗಳವಾರದಂದು ರಾಜಕೀಯ ಸಂಘಟನೆಯೊಂದರ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿಯ ನೆಪದಲ್ಲಿ ಕಳುಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿ ವರದಿ ಮಾಡಿತ್ತು.

ನವೆಂಬರ್‌ 6 ರ ಶನಿವಾರದಂದು ಯಾದಗಿರಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಶಿಲ್ಪಾ ಶರ್ಮಾ ಈ ಸುತ್ತೋಲೆಯನ್ನು ಹೊರಡಿಸಿದ್ದರು. ಸುತ್ತೋಲೆಯಲ್ಲಿ, “ಯುವಾ ಬ್ರಿಗೇಡ್  ನಡೆಸುವ ಕಾರ್ಯಕ್ರಮಕ್ಕೆ ಜಿಲ್ಲೆಯ ಶಾಲೆಗಳಿಂದ ಒಬ್ಬ ಅಥವಾ ಇಬ್ಬರು ಶಿಕ್ಷಕರನ್ನು ಕಳುಹಿಸಬೇಕು. ಜೊತೆಗೆ ಭಾಗವಹಿಸುವ ಶಿಕ್ಷಕರಿಗೆ ನಿಯಮಾನುಸಾರ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು” ಎಂದು ಹೇಳಲಾಗಿತ್ತು.

ಇದನ್ನೂ ಓದಿ: BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ – ಆಕ್ರೋಶ

ಆದರೆ, ಸಿಇಒ ಅವರು ಹೊರಡಿಸಿದ ಈ ಸುತ್ತೋಲೆಯನ್ನು ವಿರೋಧಿಸಿ ಶಿಕ್ಷಣ ತಜ್ಞರು ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ಬುಧವಾರದಂದು ಮತ್ತೆ ಸಿಇಒ ಶಿಲ್ಪಾ ಶರ್ಮಾ ಅವರು ಮೌಖಿಕವಾಗಿ ಸಂದೇಶ ನೀಡಿ ಯುವಾ ಬ್ರಿಗೇಡ್ ಕಾರ್ಯಕ್ರಮಕ್ಕೆ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಿರುವುದರಿಂದ, ಕಾರ್ಯಕ್ರಮಕ್ಕೆ ತೆರಳುವಂತೆ ನಿಯೋಜಿಸಲ್ಪಟ್ಟ ಶಿಕ್ಷಕರ ನಿಯೋಜನೆ ರದ್ದಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ಇದರ ಉಪನಿರ್ದೇಶಕರು ಅತೀ ತುರ್ತು ಜ್ಞಾಪನ ಪತ್ರ ಹೊರಡಿಸಿದ್ದಾರೆ.

ಪತ್ರದಲ್ಲಿ, ವಿಧಾನ ಪರಿಷತ್‌ ಸದಸ್ಯರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹೀಗಾಗಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಶಿಕ್ಷಕರನ್ನು ಕಳುಹಿಸದಿರಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಿಇಒ ಶಿಲ್ಪಾ ಶರ್ಮಾ ಅವರ ಆಪ್ತ ಸಹಾಯಕ ಕಿಶನ್ ರಾಥೋಡ್, “ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸುತ್ತೋಲೆ ರದ್ದಾಗಿದೆ. ಯಾವುದೆ ಎನ್‌ಜಿಒಗಳು ಮುಂದೆ ಬಂದರೆ ಅವರಿಗೆ ಅವಕಾಶ ಕೊಡಬಾರದು ಎಂದು ನಿಯಮವೇನು ಇಲ್ಲ. ಅದು ಎನ್‌ಜಿಒ ಆಗಿದ್ದು, ಅದರಲ್ಲಿ ಶಿಕ್ಷಕರಿಗೆ ಓರಿಯಂಟೇಷನ್‌ ತರಬೇತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ಸುತ್ತೋಲೆ ಹೊರಡಿಸಲಾಗಿತ್ತು” ಎಂದು ಹೇಳಿದರು.

ಶಿಕ್ಷಕರಿಗೆ ತರಬೇತಿ ನೀಡಲು ಸರ್ಕಾರಿ ಸಂಸ್ಥೆಗಳು ಇವೆ. ರಾಜಕೀಯ ಸಂಘಟನೆಯೊಂದರ ಅಡಿಯಲ್ಲಿ ತರಬೇತಿ ಯಾಕೆ ನೀಡಬೇಕು? ಎಂದು ಶಿಕ್ಷಣ ತಜ್ಞರು ಪ್ರಶ್ನಿಸಿದ್ದರು. ಅಲ್ಲದೆ ಯುವಾ ಬ್ರಿಗೇಡ್‌ ಎಂಬುವುದು ರಾಜಕೀಯ ಅಜೆಂಡಾ ರೂಪಿಸುವಂತಹಾ ರಾಜಕೀಯ ಸಂಘಟನೆಯಾಗಿದೆ. ಆ ಸಂಘಟನೆ ಈ ಹಿಂದೆ ನಮೋ ಬ್ರಿಗೇಡ್ ಎಂಬ ಹೆಸರಿನಿಂದ ಕಾರ್ಯಾಚರಣೆ ಮಾಡುತ್ತಿತ್ತು. ಅದರ ನಂತರ ಯುವಾ ಬ್ರಿಗೇಡ್‌ ಎಂದು ಹೆಸರು ಬದಲಾಯಿಸಿಕೊಂಡಿದೆ. ಅದು ಬಿಜೆಪಿ ಪಕ್ಷದ ಪ್ರಚಾರಕ್ಕೆಂದೇ ಹುಟ್ಟಿಕೊಂಡಿರುವ ಸಂಘಟನೆಯಾಗಿದ್ದು, ಪ್ರಸ್ತುತ ಕಾರ್ಯಕ್ರಮದಲ್ಲಿ ‘ಹೊಸ ಶಿಕ್ಷಣ ನೀತಿ’ ಎಂಬ ರಾಜಕೀಯ ವಿಷಯದ ಬಗ್ಗೆ ಸಂಘಟನೆಯ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡುವುದಿತ್ತು.

ಒಟ್ಟಿನಲ್ಲಿ ರಾಜಕೀಯ ಕಾರ್ಯಕ್ರಮವೊಂದಕ್ಕೆ ಸರ್ಕಾರಿ ಶಿಕ್ಷಕರು ಭಾಗವಹಿಸುವಂತೆ ಎಂದು ಸಿಇಒ ಸುತ್ತೋಲೆ ಹೊರಡಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿಶನ್‌‌ ರಾಥೋಡ್, “ಆಯಿತು ಬಿಡಿ, ಈಗದು ರದ್ದಾಗಿದೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಗಮನ ಹರಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ಈ ಎಲ್ಲಾ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಡಿಪಿಐ ನಾಯಕ ಭಾಸ್ಕರ್‌ ಪ್ರಸಾದ್‌, “ಸುತ್ತೋಲೆ ನಮ್ಮ ಗಮನಕ್ಕೆ ಬಂದ ಕೂಡಲೆ ನಾವು ಯಾದಗಿರಿ ಜಿಲ್ಲೆಯ ನಮ್ಮ ನಾಯಕರನ್ನು ಗಮನಕ್ಕೆ ತಂದೆವು. ಸೂಲಿಬೆಲೆ ಅವರ ಸಂಘಟನೆಯ ಸಭೆಗೆ ಸರ್ಕಾರಿ ಶಿಕ್ಷಕರನ್ನು ತರಬೇತಿ ಕಳುಹಿಸಿದರಲ್ಲಿ ಏನರ್ಥವಿದೆ? ನಾಳೆ ದಿನ ನಾವು ಕೂಡಾ ನಮ್ಮ ಸಭೆಗೂ ಶಿಕ್ಷಕರನ್ನು ಕಳುಹಿಸಿಕೊಡಿ ಎಂದು ಕೇಳಿದರೆ ಕೊಡುತ್ತೀರಾ ಎಂದು ನಾವು ಯಾದಗಿರಿ ಜಿಲ್ಲಾಧಿಕಾರಿ, ಸಿಇಒ ಮತ್ತು ಶಿಕ್ಷಣಾಧಿಕಾರಿಯನ್ನು ಭೇಟಿ ಮಾಡಿ ಪ್ರಶ್ನೆಗಳನ್ನು ಎತ್ತಿ, ನಮ್ಮ ಆಕ್ರೋಶಗಳನ್ನು ತಿಳಿಸಿದ್ದೆವು. ಇದರ ನಂತರ ಅವರು ಶಿಕ್ಷಕರ ನಿಯೋಜನೆಯನ್ನು ರದ್ದು ಮಾಡಿದ್ದೇವೆ ಎಂದು ನಮಗೆ ತಿಳಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ” ಎಂದು ಹೇಳಿದರು.

“ಶಿಕ್ಷಕರ ಕೌಶಲ್ಯಾಭಿವೃದ್ದಿ ಹೆಚ್ಚಿಸಲು ಬೇಕಾಗಿ ಕೋಟ್ಯಾಂತರ ರೂ ಖರ್ಚು ಮಾಡಲಾಗುತ್ತದೆ. ಸರ್ಕಾರದ ಈ ದುಡ್ಡನ್ನು ದೂಚಲು ಬೇಕಾಗಿ ಯುವಾ ಬ್ರಿಗೇಡ್‌ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದೆ” ಎಂದು ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಸರ್ಕಾರಿ ಶಾಲಾ ಶಿಕ್ಷಕರನ್ನು ರಾಜಕೀಯ ಸಭೆಗೆ ನಿಯೋಜಿಸಿದ ಯಾದಗಿರಿ ಜಿಲ್ಲಾ ಪಂಚಾಯತ್‌ ಸಿಇಒ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಪ್‌ ಇಂಡಿಯಾ (ಕಮ್ಯುನಿಷ್ಟ್‌) ಪಕ್ಷದ ಅಂಗ ಸಂಘಟನೆಯಾದ ‘ಎಐಡಿವೈಒ’ ಯಾದಗಿರಿ ಜಿಲ್ಲಾ ಸಂಚಾಲಕ ಜಮಾಲ್ ಸಾಬ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಇಒ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನೂ ಮೀರಿ ಆಡಳಿತ ಪಕ್ಷದೊಂದಿಗೆ ಸ್ಪಷ್ಟವಾಗಿ ಗುರುತಿಸಿ ಕೊಂಡಿದ್ದಾರೆ ಎಂದು ಅವರು ಹೇಳಿದ್ದು, “ಚುನಾವಣಾ ವೇಳೆಯಲ್ಲಿ ಬಿಜೆಪಿಗಾಗಿ ಪ್ರಚಾರ ಮಾಡುವ ಒಂದು ಸಂಘಟನೆಯ ಚಟುವಟಿಕೆಗೆ ಸರ್ಕಾರಿ ಉದ್ಯೋಗಿಗಳನ್ನು ತೊಡಗಿಸುವುದು ಕರ್ನಾಟಕ ಆಡಳಿತ ಸೇವಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯತ್ ಸಿಇಓ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...