Homeಕರ್ನಾಟಕಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ರಾಜ್ಯದ ಹಲವೆಡೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅಡಿಕೆ, ಭತ್ತ, ಜೋಳ, ಕಾಫಿ, ಕರಿಮೆಣಸು ಬೆಳೆದ ರೈತರು ಬೆಳೆನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಈ ಕೂಡಲೆ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ. ಇದರಿಂದಾಗಿ ಕೊಯಿಲಿಗೆ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ. ರಾಜ್ಯದಲ್ಲಿ ವಾಡಿಕೆಯಂತೆ 69.79 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಕಳೆದ ಬಾರಿಗಿಂತ ಈ ಬಾರಿ 1.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಂಗಾರು ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ. ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ. ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ, ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆಯನ್ನು ಎದುರಿಸುತ್ತಿದೆ. ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ವ್ಯಾಪಕ ಮಳೆಯಿಂದಾಗಿ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಆದರೆ ಕೃಷಿ ಇಲಾಖೆಯ ಮಾಹಿತಿಗಳಲ್ಲಿ ಹಾನಿಯಾಗಿರುವ ಜಿಲ್ಲೆಗಳ ಮಾಹಿತಿಯೆ ಇಲ್ಲ. ಮಲೆನಾಡು, ಕರಾವಳಿ ಜಿಲ್ಲೆಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿ ಇಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಜಯಂತಿ: ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ-ಸಿದ್ದರಾಮಯ್ಯ

’ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂ. ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನ ಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆಯೆ ನಡೆಸಿಲ್ಲ.
ಇನ್ನು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳ ಬೆಳೆಗಳಲ್ಲಿ ಜುಲೈ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರು ವ್ಯಾಪಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಆದರೂ ಸಹ ಸರ್ಕಾರ ಕೈ ಕಟ್ಟಿ ಕುಳಿತಿದೆ. ನಷ್ಟವಾಗಿರುವ ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದನ್ನಾಗಲಿ ಮಾಡುತ್ತಿಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2019-20, 2020-21 ರ ವರ್ಷಗಳಲ್ಲಿ ಸುಮಾರು 1.5 ರಿಂದ 2 ಲಕ್ಷ ಕೋಟಿ ರೂಗಳವರೆಗೆ ನಷ್ಟವಾಗಿತ್ತು. ಆದರೆ ಕೇಂದ್ರ ಸರ್ಕಾರ 2019-20 ರಲ್ಲಿ 1652.85, 2020-21 ರಲ್ಲಿ 1328.30 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡಿದೆ. ಅಂದರೆ ಒಟ್ಟು ಬಿಡುಗಡೆ ಮಾಡಿದ ಹಣ ಕೇವಲ 2981.15 ಕೋಟಿ ರೂಗಳು ಮಾತ್ರ. 2021-22ರ ನಷ್ಟಕ್ಕೆ ಒಂದು ರೂಪಾಯಿಯನ್ನೂ ನೀಡಿಲ್ಲ. ಕೇಂದ್ರ ಮತ್ತು ರಾಜ್ಯಗಳೆರಡೂ ಈ ಮಟ್ಟದ ನಿರ್ಲಕ್ಷ್ಯ ತೋರಿಸುವುದು ಅತ್ಯಂತ ಅಮಾನವೀಯ ನಡವಳಿಕೆಯಾಗುತ್ತದೆ ಕಿಡಿ ಕಾಡಿದ್ದಾರೆ.

’ಕೊರೊನಾದಿಂದ ಸಂಕಟದಲ್ಲಿರುವ ರೈತಾಪಿ ಸಮುದಾಯದಲ್ಲಿ ಆತ್ಮಹತ್ಯೆಗಳ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೊಳಗಾಗಿರುವ ರೈತರ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...