Homeಕರ್ನಾಟಕಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಬೆಳೆ ಹಾನಿ ಸಮೀಕ್ಷೆ ಮಾಡಿಸಿ ತಕ್ಷಣ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ರಾಜ್ಯದ ಹಲವೆಡೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅಡಿಕೆ, ಭತ್ತ, ಜೋಳ, ಕಾಫಿ, ಕರಿಮೆಣಸು ಬೆಳೆದ ರೈತರು ಬೆಳೆನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಈ ಕೂಡಲೆ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ. ಇದರಿಂದಾಗಿ ಕೊಯಿಲಿಗೆ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ. ರಾಜ್ಯದಲ್ಲಿ ವಾಡಿಕೆಯಂತೆ 69.79 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಕಳೆದ ಬಾರಿಗಿಂತ ಈ ಬಾರಿ 1.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಂಗಾರು ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ. ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ. ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ, ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆಯನ್ನು ಎದುರಿಸುತ್ತಿದೆ. ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ವ್ಯಾಪಕ ಮಳೆಯಿಂದಾಗಿ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಆದರೆ ಕೃಷಿ ಇಲಾಖೆಯ ಮಾಹಿತಿಗಳಲ್ಲಿ ಹಾನಿಯಾಗಿರುವ ಜಿಲ್ಲೆಗಳ ಮಾಹಿತಿಯೆ ಇಲ್ಲ. ಮಲೆನಾಡು, ಕರಾವಳಿ ಜಿಲ್ಲೆಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿ ಇಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಜಯಂತಿ: ನೈಜ ಇತಿಹಾಸದ ಪುಟಗಳಿಂದ ಟಿಪ್ಪುವನ್ನು ಅರಿಯೋಣ-ಸಿದ್ದರಾಮಯ್ಯ

’ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂ. ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನ ಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆಯೆ ನಡೆಸಿಲ್ಲ.
ಇನ್ನು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳ ಬೆಳೆಗಳಲ್ಲಿ ಜುಲೈ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರು ವ್ಯಾಪಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಷ್ಟೆಲ್ಲ ಆದರೂ ಸಹ ಸರ್ಕಾರ ಕೈ ಕಟ್ಟಿ ಕುಳಿತಿದೆ. ನಷ್ಟವಾಗಿರುವ ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದನ್ನಾಗಲಿ ಮಾಡುತ್ತಿಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2019-20, 2020-21 ರ ವರ್ಷಗಳಲ್ಲಿ ಸುಮಾರು 1.5 ರಿಂದ 2 ಲಕ್ಷ ಕೋಟಿ ರೂಗಳವರೆಗೆ ನಷ್ಟವಾಗಿತ್ತು. ಆದರೆ ಕೇಂದ್ರ ಸರ್ಕಾರ 2019-20 ರಲ್ಲಿ 1652.85, 2020-21 ರಲ್ಲಿ 1328.30 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡಿದೆ. ಅಂದರೆ ಒಟ್ಟು ಬಿಡುಗಡೆ ಮಾಡಿದ ಹಣ ಕೇವಲ 2981.15 ಕೋಟಿ ರೂಗಳು ಮಾತ್ರ. 2021-22ರ ನಷ್ಟಕ್ಕೆ ಒಂದು ರೂಪಾಯಿಯನ್ನೂ ನೀಡಿಲ್ಲ. ಕೇಂದ್ರ ಮತ್ತು ರಾಜ್ಯಗಳೆರಡೂ ಈ ಮಟ್ಟದ ನಿರ್ಲಕ್ಷ್ಯ ತೋರಿಸುವುದು ಅತ್ಯಂತ ಅಮಾನವೀಯ ನಡವಳಿಕೆಯಾಗುತ್ತದೆ ಕಿಡಿ ಕಾಡಿದ್ದಾರೆ.

’ಕೊರೊನಾದಿಂದ ಸಂಕಟದಲ್ಲಿರುವ ರೈತಾಪಿ ಸಮುದಾಯದಲ್ಲಿ ಆತ್ಮಹತ್ಯೆಗಳ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೊಳಗಾಗಿರುವ ರೈತರ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...