Homeಅಂಕಣಗಳುಬಹುಜನ ಭಾರತ; ಅವಸಾನಗೊಂಡ ಆತ್ಮಸಾಕ್ಷಿಗಳು ಮತ್ತು ’ಜೈಭೀಮ್' ಸಿನೆಮಾ

ಬಹುಜನ ಭಾರತ; ಅವಸಾನಗೊಂಡ ಆತ್ಮಸಾಕ್ಷಿಗಳು ಮತ್ತು ’ಜೈಭೀಮ್’ ಸಿನೆಮಾ

- Advertisement -
- Advertisement -

ತನ್ನನ್ನು ನಾಗರಿಕ ಎಂದು ಕರೆದುಕೊಳ್ಳುವ ಸಮಾಜ ಪೂರ್ವಗ್ರಹಗಳಿದ್ದಲ್ಲಿ ಅವುಗಳನ್ನು ಮೂರು ತಾಸು ಬದಿಗೆ ಸರಿಸಿ ಮನತೆರೆದು ’ಜೈ ಭೀಮ್’ ಚಲನಚಿತ್ರವನ್ನು ಅದರ ಎಲ್ಲ ಮಿತಿಗಳೊಂದಿಗೆ ಒಮ್ಮೆ ನೋಡುವುದು ಒಳಿತು. ಬತ್ತಿ ಹೋಗಿರಬಹುದಾದ ಅಂತಃಕರಣದ ಸೆಲೆಗಳು ಮತ್ತೆ ಜಿನುಗಿಯಾವು!

ಕ್ರೂರ ಜಾತಿವ್ಯವಸ್ಥೆಯ ಧೂರ್ತ ಹುನ್ನಾರಗಳಿಗೆ ಕೊನೆಮೊದಲಿಲ್ಲ. ಮೇಲುಕೀಳಿನ ಹಾಲಾಹಲವನ್ನು ತುಂಬಿತುಳುಕಿಸುವ ಜಾತಿಪದ್ಧತಿ ಹಿಂದೂ ಸಮಾಜದ ವೈಶಿಷ್ಟ್ಯ. ಮನುಷ್ಯನೇ ಮನುಷ್ಯನನ್ನು ಹಿಂಸಿಸಿ ಅವಮಾನಿಸಿ ಮೃಗದಂತೆ ಬೇಟೆಯಾಡಿ ಕೊಲ್ಲುವ ಕ್ರೌರ್ಯದ ಅಮಾನುಷ ನಿರ್ಮಿತಿ.

’ಜೈ ಭೀಮ್’ ಚಲನಚಿತ್ರದ ಮೊದಲ ದೃಶ್ಯವೇ ’ನಾಗರಿಕ’ ಸಮಾಜದ ಕರಾಳ ಮುಖದ ಕುರೂಪವನ್ನು ತೆರೆದು ತೋರುತ್ತದೆ. ಬಿಡುಗಡೆಯಾದ ಕೈದಿಗಳನ್ನು ಜೈಲಿನ ಆವರಣದಲ್ಲಿ ಪೊಲೀಸರು ಅವರವರ ಜಾತಿಯ ಆಧಾರದ ಮೇಲೆ ಪ್ರತ್ಯೇಕಗೊಳಿಸಿ ನಿಲ್ಲಿಸುತ್ತಾರೆ. ಬಲಿಷ್ಠ ಜಾತಿಯವರನ್ನು ಬಿಡುಗಡೆ ಮಾಡಲಾಗುತ್ತದೆ. ಆದರೆ ದಲಿತರು-ಆದಿವಾಸಿಗಳನ್ನು ಉಳಿಸಿಕೊಂಡು ಅವರು ಮಾಡಿಯೇ ಇಲ್ಲದ ಹೊಸ ಆಪಾದನೆಗಳನ್ನು ಹೇರಲಾಗುತ್ತದೆ. ನಿಜವಾದ ಅಪರಾಧಿಗಳು ಪತ್ತೆಯಾಗದೆ ಬಾಕಿ ಉಳಿದಿರುವ ಕೇಸುಗಳಲ್ಲಿ ಇವರನ್ನು ಸಿಲುಕಿಸಿ ಪುನಃ ಜೈಲಿಗೆ ಅಟ್ಟಲಾಗುತ್ತದೆ. ಬಗೆಹರಿಸಲಾಗದೆ ಬಾಕಿ ಉಳಿಸಿರುವ ಕೇಸುಗಳಲ್ಲಿ ಈ ಅತಿ ದೀನರನ್ನು ಇರುಕಿಸಲಾಗುತ್ತದೆ. ಹೀಗೆ ಬಲಿಪಶುಗಳನ್ನು ಪೂರೈಕೆ ಮಾಡುವ ಜೈಲರನ ಜೇಬುಗಳನ್ನು ಪೊಲೀಸರೇ ಭರ್ತಿ ಮಾಡುತ್ತಾರೆ.

ತಮಿಳುನಾಡಿನಲ್ಲಿ ಇರುಳರೆಂದೂ, ಕರ್ನಾಟಕದಲ್ಲಿ ಇರುಳಿಗರೆಂದೂ ಕರೆಯಲಾಗುವ ಈ ಸಮುದಾಯ ಅತ್ಯಂತ ಹಿಂದುಳಿದ ಬುಡಕಟ್ಟಿಗೆ ಸೇರಿದವರು. ಹಾವು ಹಿಡಿದು ಕಾಡಿಗೆ ಬಿಡುವ ಮತ್ತು ಹಾವಿನ ವಿಷಕ್ಕೆ ಔಷಧಿ ಕೊಡುವ ಈ ಜನರು ಹೊಲಗದ್ದೆಗಳಲ್ಲಿ ಫಸಲು ಮುಕ್ಕುವ ಇಲಿಗಳ ಹಿಡಿಯುವವರು. ಬ್ರಿಟಿಷ್ ಸರ್ಕಾರದಿಂದ ಕ್ರಿಮಿನಲ್ ಟ್ರೈಬ್ ಎಂಬ ಹಣೆಪಟ್ಟಿ ಹಚ್ಚಿಸಿಕೊಂಡಿದ್ದ ಹಲವಾರು ಜಾತಿಗಳು ಮತ್ತು ಬುಡಕಟ್ಟುಗಳ ಪೈಕಿ ಇರುಳರೂ ಸೇರಿದ್ದಾರೆ. ಎರಡು ಹೊತ್ತಿನ ಅನ್ನಕ್ಕೆ ಮತ್ತು ಗೇಣು ಬಟ್ಟೆಗೆ ಗಳಿಸುವಲ್ಲೇ ಮುಗಿದುಹೋಗುವ ದೀನ ಬದುಕುಗಳು ಇವರವು. ಇರುಳಿಗರನ್ನು ಮತ್ತು ಇವರಂತಹ ಅಸಂಖ್ಯ ತಬ್ಬಲಿ ಜಾತಿಗಳನ್ನು ಸವರ್ಣೀಯ ಸಮಾಜ ಮತ್ತು ನಮ್ಮ ಅಪರಾಧ ನ್ಯಾಯಾಂಗ ವ್ಯವಸ್ಥೆ (Criminal Justice System) ನಡೆಸಿಕೊಳ್ಳುವ ಪರಿ ಅಮಾನುಷ. ದಿಕ್ಕಿಲ್ಲದ ನಾಯಿ ನರಿಗಳು ಹುಳು ಹುಪ್ಪಟೆಗಳಿಗಿಂತಲೂ ಕೀಳಾಗಿ ಹುಟ್ಟಿ ಸಾಯುವ ಇವರನ್ನು ಮನುಷ್ಯರೆಂದು ಬಗೆದೇ ಇಲ್ಲ. ಹಾಗೆಂದೇ ಮಾನವಹಕ್ಕುಗಳು ಎಂಬ ಪರಿಕಲ್ಪನೆ ಇವರನ್ನು ದೂರದಿಂದಲೂ ಮುಟ್ಟುವುದಿಲ್ಲ. ಇವರ ಭಾರತವೇ ಬೇರೆ. ಅದು ಕತ್ತಲ ಭಾರತ. ಅದೃಶ್ಯ ಭಾರತ. ನಾಗರಿಕ ಎಂದು ಹೇಳಲಾಗುವ ಅನಾಗರಿಕ ಸಮಾಜದ ಕುರುಡುಗಣ್ಣಿಗೆ, ಕಿವುಡುಗಿವಿಗೆ, ಸತ್ತ ನಾಲಗೆಗೆ, ಅವಸಾನಗೊಂಡ ಆತ್ಮಸಾಕ್ಷಿಯನ್ನು ಆರ್ತತೆ, ಅಸಹಾಯಕತೆಯಿಂದ ನೋಡುವ ಆದಿವಾಸಿ-ದಲಿತ ಭಾರತ.

ಜೈ ಭೀಮ್ ಚಲನಚಿತ್ರದ ಕ್ರೌರ್ಯವನ್ನು ಛತ್ತೀಸಗಢ-ಝಾರ್ಖಂಡದಂತಹ ಆದಿವಾಸಿ ಬಹುಳ ಸೀಮೆಯಂತೂ ಅನವರತ ಎದುರಿಸುತ್ತ ಬಂದಿದೆ. ಉತ್ತರಪ್ರದೇಶ-ಬಿಹಾರದಲ್ಲಿ ನೆಲೆಸಿರುವ ಹೊಲಗದ್ದೆಗಳಲ್ಲಿ ಇಲಿ ಹಿಡಿದು ತಿನ್ನುವ ಮೂಸಾಹರ ಎಂಬ ಅತಿ ದಲಿತ ಜಾತಿಯೊಂದಿದೆ. ಅದರಲ್ಲಿ ಅಕ್ಷರಸ್ಥರ ಪ್ರಮಾಣ ಶೇ.ಮೂರು. ಇದೇ ಗತಿ ಮುಂದುವರೆದರೆ ಈ ಜಾತಿ ಸಂಪೂರ್ಣ ಸಾಕ್ಷರವಾಗಲು ನಾಲ್ಕು ಸಾವಿರ ವರ್ಷಗಳಿಗೂ ಹೆಚ್ಚು ಕಾಲ ಬೇಕಾದೀತಂತೆ! ಮೂಸಾಹರರೊಂದಿಗೆ ಇರುಳರೂ ಸೇರಿದಂತೆ ಇನ್ನೂ ನೂರಾರು ಜಾತಿಗಳು- ಬುಡಕಟ್ಟುಗಳು ಈ ಪಟ್ಟಿಗೆ ಸೇರುವುದು ನಿಶ್ಚಿತ.

ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರು Annihilation of Casteನ ಎಂಟನೆಯ ಅಧ್ಯಾಯದಲ್ಲಿ ಆದಿವಾಸಿಗಳ ದುಸ್ಥಿತಿಯ ಕುರಿತು ಎತ್ತಿರುವ ಪ್ರಶ್ನೆಯೊಂದು ಹೀಗಿದೆ: “ಆದಿವಾಸಿಗಳನ್ನು ಇವ ನಮ್ಮವನೆಂದು ತಬ್ಬಿಕೊಂಡು ಪ್ರೀತಿಸಲು ಹಿಂದೂ ಸಮಾಜ ಮುಂದಾಗಲೇ ಇಲ್ಲ. ಬದುಕಿಡೀ ಜಾತಿವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದೇ ಹಿಂದುವಿನ ಪರಮ ಉದ್ದೇಶವಾಗಿದ್ದಾಗ ಈ ಕೆಲಸ ಮಾಡಲು ಹಿಂದುವಿಗೆ ಹೇಗೆ ಸಾಧ್ಯವಾದೀತು”?

1871ರಲ್ಲಿ ಬ್ರಿಟಿಷರು ಜಾರಿಗೆ ತಂದಿದ್ದ ಕ್ರಿಮಿನಲ್ ಟ್ರೈಬ್ಸ್ ಕಾಯಿದೆಯನ್ನು 1951ರಲ್ಲಿ ರದ್ದು ಮಾಡಲಾಗುತ್ತದೆ. ಆದರೆ ಕಾಗದದ ಮೇಲೆ ಮಾತ್ರವೇ ರದ್ದಾಗಿರುವ ಈ ಕಾಯಿದೆಯನ್ನು ಪೊಲೀಸ್ ವ್ಯವಸ್ಥೆ ಜೀವಂತವಾಗಿ ಇರಿಸಿಕೊಂಡಿದೆ. ಕ್ರಿಮಿನಲ್ ಟ್ರೈಬ್ಸ್ ಹಣೆಪಟ್ಟಿ ಹಚ್ಚಲಾಗಿದ್ದ ನೂರಾರು ಬುಡಕಟ್ಟುಗಳ ಅಮಾಯಕ ಜನರನ್ನು ಅಮಾನುಷವಾಗಿ ನಡೆಸಿಕೊಳ್ಳುತ್ತಿದೆ. ಅವರು ಮಾಡದೆ ಇರುವ ಅಪರಾಧಗಳಲ್ಲಿ ಬಂಧಿಸಿ ಜೈಲುಗಳಲ್ಲಿ ಚಿತ್ರಹಿಂಸೆ ಮಾಡಿ ಅವರಿಂದ ಬಲವಂತದ ಹುಸಿ ತಪ್ಪೊಪ್ಪಿಗೆ ಪಡೆದು, ಅದನ್ನು ನ್ಯಾಯಾಲಯಗಳಲ್ಲಿ ಮಂಡಿಸಿ, ಶಿಕ್ಷೆ ಕೊಡಿಸಿ ಜೈಲುಗಳ ನರಕಕ್ಕೆ ನೂಕಲಾಗುತ್ತಿದೆ. ಚಿತ್ರವಧೆಯ ಹಂತದಲ್ಲೇ ಪ್ರಾಣ ಬಿಡುವ ದಿಕ್ಕಿಲ್ದವರ ಲೆಕ್ಕವಿಲ್ಲ.

ಅಮಾಯಕ ಅನಕ್ಷರಸ್ಥ ತಬ್ಬಲಿ ಜನಾಂಗಗಳ ಈ ಚಿತ್ರವಧೆಯ ರಕ್ತ ನಾಗರಿಕ ಸಮಾಜದ ಕೈಗಳನ್ನು ಮೆತ್ತಿ ತೊಟ್ಟಿಕ್ಕುತ್ತಿದೆ. ಕಣ್ಣುಮುಚ್ಚಿ ಲೋಲುಪತೆಯಲ್ಲಿ ಮೈಮರೆತಿರುವ ಈ ಜಾತಿವ್ಯಾಧಿಪೀಡಿತ ಸಮಾಜದ ಆತ್ಮಸಾಕ್ಷಿ ಸಾವಿರಾರು ವರ್ಷಗಳ ಅಂಧ ಅಮಾನುಷ ಪರಂಪರೆಯಡಿ ಹೂತು ಹೋಗಿದೆ.

ರಾಷ್ಟ್ರೀಯ ಚಿತ್ರಹಿಂಸೆ ವಿರೋಧೀ ಆಂದೋಲನದ (National Campaign Against Torture) ಅಧ್ಯಯನದ ಪ್ರಕಾರ ದಿನಂಪ್ರತಿ ಸರಾಸರಿ ಐವರು ಬಂಧಿತರು ಪೊಲೀಸ್ ವಶದಲ್ಲಿ ಚಿತ್ರಹಿಂಸೆಯಿಂದ ಸಾಯುತ್ತಿದ್ದಾರೆ. 2019ರಲ್ಲಿ ಹೀಗೆ ಕಾನೂನುಪಾಲಕರಿಂದ ’ಕೊಲೆ’ ಯಾದವರ ಸಂಖ್ಯೆ 1,723.

2020ರಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ದಾಖಲಿಸಿರುವ ನ್ಯಾಯಾಂಗ ವಶದ ಸಾವುಗಳ ಸಂಖ್ಯೆ 1,569. ಕಾಗದದ ಮೇಲೆ ಕಡತಗಳಲ್ಲಿ ಅಂಕಿಅಂಶಗಳಾಗಿ ಮಾತ್ರವೇ ದಾಖಲಾಗುವ ಈ ಸಾವುಗಳ ಹಿಂದೆ ಎಂತೆಂತಹ ಕ್ರೌರ್ಯ- ಕಣ್ಣೀರಿನ ಕತೆಗಳಿದ್ದಾವು!

ಠಾಣೆಗಳಲ್ಲಿ ಜರುಗುವ ಈ ’ಕೊಲೆ’ಗಳ ಬಲಿಪಶುಗಳು ಬಹುತೇಕ ತಳವರ್ಗಗಳಿಗೆ ಸೇರಿದವರು. ದಲಿತರು, ಬುಡಕಟ್ಟು ಜನಾಂಗಗಳವರು ಹಾಗೂ ಮುಸಲ್ಮಾನರು. ಭಾರತ ಸರ್ಕಾರ ಅಪರಾಧಗಳ ಕುರಿತು (ನ್ಯಾಶನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವರ್ಷವರ್ಷವೂ ಅಂಕಿಅಂಶಗಳನ್ನು ಪ್ರಕಟಿಸುತ್ತದೆ. ನಮ್ಮ ಕ್ರಿಮಿನಲ್ ನ್ಯಾಯವ್ಯವಸ್ಥೆಯು ಬಡವರು ಮತ್ತು ದಮನಿತರ ವಿರುದ್ಧ ಕತ್ತಿ ಮಸೆಯುತ್ತಲೇ ಬಂದಿರುವ ದುಷ್ಟತನದ ಒಂದು ಸಣ್ಣ ಉದಾಹರಣೆ ಈ ಅಂಕಿಅಂಶಗಳು. ಹಣ ತೆತ್ತು ಉತ್ತಮ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಣವಂತರು-ಬಲಿಷ್ಠರು-ಪ್ರಭಾವಿಗಳನ್ನು ಬಂಧಿಸಿಡುವ ಶಕ್ತಿ ಯಾವ ಜೈಲಿನ ಸಲಾಕೆಗಳಿಗೂ ಇಲ್ಲ.

ಸರ್ಕಾರಿ ಸಂಸ್ಥೆಯೇ ಆಗಿರುವ ನ್ಯಾಶನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ಪ್ರಕಾರ ಶಿಕ್ಷೆಯಾಗಿ ಸೆರೆವಾಸ ಅನುಭವಿಸಿರುವ ವಿಚಾರಣಾಧೀನ ಕೈದಿಗಳ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಹಾಗೂ ಮುಸಲ್ಮಾನರ ಪ್ರಮಾಣ ಶೇ.50.8. ದೇಶದ ಜನಸಂಖ್ಯೆಯಲ್ಲಿ ಇವರ ಒಟ್ಟು ಪ್ರಮಾಣ ಶೇ.39.4. ಈ ಮೂರೂ ಸಮುದಾಯಗಳು ಆರ್ಥಿಕ-ಸಾಮಾಜಿಕ-ಶೈಕ್ಷಣಿಕವಾಗಿ ಹಿಂದುಳಿದವುಗಳು. ದಾರಿದ್ರ್ಯದ ತಿರುಗಣಿಗೆ ಸಿಕ್ಕ ಈ ಸಮುದಾಯಗಳು ನಿರುದ್ಯೋಗದ ಉರಿಯನ್ನೂ ಎದುರಿಸುತ್ತ ಬಂದಿವೆ. ಭೂ ಒಡೆತನದ ಬಲವೂ ಇವುಗಳಿಗೆ ಇಲ್ಲ. ಬಲಿಷ್ಠ ಜಾತಿಗಳ ದಮನ ದೌರ್ಜನ್ಯ ಹಿಂಸೆಗಳಲ್ಲಿ ಬೇಯುತ್ತ ಬಂದಿವೆ. ಅಮೆರಿಕೆಯಲ್ಲಿ ಕೂಡ ದಮನಿತ ಜನಾಂಗವಾದ ಕಪ್ಪು ವರ್ಣೀಯರ ಜನಸಂಖ್ಯಾ ಪ್ರಮಾಣ ಶೇ.13. ಆದರೆ ಜೈಲುಗಳಲ್ಲಿ ಕೊಳೆಯುತ್ತಿರುವ ಕಪ್ಪು ಜನರ ಪ್ರಮಾಣ ಶೇ.40.

ತಾರತಮ್ಯ ತುಂಬಿ ತುಳುಕಿರುವ ವ್ಯಾಧಿಗ್ರಸ್ತ ಅಸಮಾನ ಸಮಾಜದ ಪ್ರತಿಬಿಂಬವಿದು. ಸ್ವಾತಂತ್ರ್ಯ, ಸಮಾನತೆ, ಸೋದರತೆ ಹೊಂದಿದ ಸಮಾಜ ಮಾತ್ರವೇ ಆರೋಗ್ಯಕರವೂ ಬಲಿಷ್ಠವೂ ಮತ್ತು ಸಮೃದ್ಧವೂ ಆಗಬಲ್ಲದು.


ಇದನ್ನೂ ಓದಿ:  ದಾಸ್ತಯೆವ್‌ಸ್ಕಿ 200; ಇಡೀ ಮನುಕುಲಕ್ಕೆ ಸಲ್ಲುವ ಕಥೆಗಳನ್ನು ರಚಿಸಿದ ಫ್ಯೊದೋರ್ ಮಿಖಾಯ್ಲೊವಿಚ್ ದಾಸ್ತಯೆವ್‌ಸ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...