Homeಕರ್ನಾಟಕಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

ಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

- Advertisement -
- Advertisement -

ಇರುಳಿಗ ಬುಡಕಟ್ಟು ಸಮುದಾಯದ ನೈಜ ಘಟನೆ ಆಧಾರಿಸಿ ತೆರೆಕಂಡ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾದ ಬಳಿಕ ಬುಡಕಟ್ಟ ಸಮುದಾಯಗಳ ಕುರಿತು ಗಂಭೀರ ಚರ್ಚೆಗಳಾಗುತ್ತಿವೆ. ಅದರಲ್ಲೂ ಇರುಳಿಗರು ನಿತ್ಯವೂ ಅನುಭವಿಸುತ್ತಿರುವ ಕಷ್ಟಗಳು ಬೆಳಕಿಗೆ ಬರುತ್ತಿವೆ.

ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಇರುಳಿಗ ಕುಟುಂಬಗಳಿದ್ದು, ಕನಿಷ್ಠ ಮೂಲಸೌಕರ್ಯವೂ ಇಲ್ಲದೆ ಈ ಸಮುದಾಯ ಸಂಕಷ್ಟ ಎದುರಿಸುತ್ತಿರುವುದು ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿಯುತ್ತಿದೆ.

ರಾಮನಗರ ತಾಲ್ಲೂಕಿನ ಕೂಟಗಲ್ ಬಳಿ ಇರುವ ಇರುಳಿಗ ಬುಡಕಟ್ಟು ಸಮುದಾಯ ದಶಕಗಳಿಂದಲೂ ಮೂಲಸೌಕರ್ಯವಿಲ್ಲದೆ ಒದ್ದಾಡುತ್ತಿದೆ. ಮಳೆ ಬಂದರಂತೂ ಇಲ್ಲಿರುವ 23 ಗುಡಿಸಲುಗಳಿಗೂ ನೀರು ನುಗ್ಗುತ್ತದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ವಿಪರೀತ ನೀರು ಗುಡಿಸಲುಗಳಿಗೆ ನುಗ್ಗಿತ್ತು. ಅದರಿಂದ  ತಪ್ಪಿಸಿಕೊಳ್ಳಲು ಗುಡಿಸಲಿನಲ್ಲಿ ತೂಗುಯ್ಯಾಲೆಯ ರೀತಿ ನಿರ್ಮಿಸಿಕೊಂಡು (50) ಮಲಗಿದ್ದರು. ಆದರೆ ಮಧ್ಯರಾತ್ರಿ ಮೇಲಿನಿಂದ ಕುಸಿದು ಸಾವನ್ನಪ್ಪಿದ್ದಾರೆ.

ರತ್ನಗಿರಯ್ಯ

ಇದನ್ನೂ ಓದಿರಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ದಶಕಗಳಿಂದಲೂ ಇರುಳಿಗರು ಕನಿಷ್ಠ ಮೂಲಸೌಕರ್ಯಕ್ಕಾಗಿ ತಾಲ್ಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಮುಂದೆ ಬೇಡಿಕೆ ಇಡುತ್ತಲೇ ಬಂದಿದ್ದು, ಇರುಳಿಗರ ಕುರಿತು ಗಂಭೀರ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲಿ ರತ್ನಗಿರಯ್ಯ ಅವರ ದುರಂತ ಸಾವು ಸಂಭವಿಸಿದೆ. ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಸುಮಾರು 40 ವರ್ಷಗಳ ಹಿಂದೆ ಈ ಕುಟುಂಬಗಳನ್ನು ಒಕ್ಕಲೆಬ್ಬಿಸಲಾಯಿತು. ಕಾಡಿನಲ್ಲಿ ನೆಮ್ಮದಿಯಾಗಿ ಇದ್ದವರನ್ನು ಬೀದಿಗೆ ತಂದು ಬಿಡಲಾಯಿತು. ಈಗ ನಿತ್ಯ ನರಕ ಅನುಭವಿಸುತ್ತಿದ್ದಾರೆ. ಈ ಕುಟುಂಬಗಳಿಗೆ ರೇಷನ್‌ಕಾರ್ಡ್, ವೋಟರ್‌ ಐಡಿ ಇದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ಭರವಸೆಗಳ ಮಹಾಪೂರವನ್ನೇ ರಾಜಕಾರಣಿಗಳು ನೀಡುತ್ತಾರೆ. ಚುನಾವಣೆ ಮುಗಿದ ಮೇಲೆ ಮತ್ತದೇ ಗೋಳು ಮುಂದುವರಿಯುತ್ತಿದೆ.

ಸ್ಥಳೀಯ ಪತ್ರಕರ್ತ ಎಸ್.ರುದ್ರೇಶ್ವರ ರಾಮನಗರ ಅವರು ಸಾಮಾಜಿಕ ಮಾಧ್ಯಮದಲ್ಲಿ ಇರುಳಿಗರ ಪರಿಸ್ಥಿತಿಯ ಕುರಿತು ನಿರಂತರವಾಗಿ ವರದಿ ಮಾಡುತ್ತಿದ್ದಾರೆ. ಜೊತೆಗೆ ‘ಉದಯವಾಣಿ’ ಪತ್ರಿಕೆಯಲ್ಲಿ ಸರಣಿ ವರದಿಗಳನ್ನು ಮಾಡಿದ್ದಾರೆ. ಅವರು ಫೇಸ್‌ಬುಕ್‌ ಮೂಲಕ ನೀಡಿರುವ ಲೈವ್‌ಗಳು ಇರುಳಿಗರ ಸಂಕಷ್ಟವನ್ನು ಡಾಳಾಗಿ ತೋರಿಸುತ್ತಿವೆ. ಸುತ್ತ ಪೊದೆ, ಚಿಕ್ಕಚಿಕ್ಕ ಗುಡಿಸಲುಗಳು, ಮಳೆಯ ರುದ್ರಾವತಾರಕ್ಕೆ ನಲುಗಿರುವ ಇರುಳಿಗರ ನೋವಿಗೆ ಈ ವಿಡಿಯೊಗಳು ಬೆಳಕು ಚೆಲ್ಲಿವೆ.

ಇರುಳಿಗರಿಗೆ ನಿವೇಶನ ನೀಡಲು ಅಧಿಕಾರಿಗಳು ದಿನದೂಡುತ್ತಲೇ ಇದ್ದಾರೆ.  ಆದರೆ ಮಳೆಯ ಬಿರುಸಿಗೆ ಸಿಲುಕಿ ರತ್ನಗಿರಯ್ಯ ಸಾವನ್ನಪ್ಪಿದ ಬಳಿಕ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಕೂಟಗಲ್ ಸರ್ವೇ ನಂಬರ್‌‌ 94ರಲ್ಲಿ 2 ಎಕರೆ ಭೂಮಿಯನ್ನು ಸರ್ವೇ ಮಾಡಿದ್ದಾರೆ. ಶೀಘ್ರವಾಗಿ ಇರುಳಿಗರಿಗೆ ನಿವೇಶನ ಮಂಜೂರು ಮಾಡುವ ಭರವಸೆಯನ್ನೂ ನೀಡಿದ್ದಾರೆ.


 ಇದನ್ನೂ ಓದಿರಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ಸೇವಕರೆಂಬ ಅಧಿಕಾರಿಗಳು ಮತ್ತು ಆಡಳಿತಾರೂಢ ರಾಜಕಾರಣಿಗಳು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...