Homeಕರ್ನಾಟಕಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

ಉತ್ತರ ಕನ್ನಡ; ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ MLC ಟಿಕೆಟ್ ತಂತ್ರಗಾರಿಕೆ

- Advertisement -
- Advertisement -

ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗತ್ತಿದ್ದಂತೆಯೆ ಉತ್ತರ ಕನ್ನಡದ ರಾಜಕೀಯ ಪಡಸಾಲೆಯ ರಂಗೇರಹತ್ತಿದೆ. ಪ್ರಮುಖ ಎದುರಾಳಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಟಿಕೆಟ್ ತಳಮಳ ಶುರುವಾಗಿದೆ. ಗಾಡ್ ಫಾದರ್‌ಗಳ ಹಿಡಿದು ಟಿಕೆಟ್ ತರಲು ಎಮ್‌ಎಲ್‌ಸಿಗಿರಿ ಕನಸಿಗರು ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದೆಡೆ ಯಾರಿಗೆ ಯಾವ ಪಕ್ಷದಲ್ಲಿ ಟಿಕೆಟ್ ತರುವ ತಾಕತ್ತಿದೆ, ಟಿಕೆಟ್ ಹಂಚಿಕೆಯಲ್ಲಿ ಪ್ರಭಾವ ಬೀರಬಲ್ಲ ಸ್ಥಳಿಯ ನಾಯಕರ ಇಷ್ಟಾನಿಷ್ಟ ಏನಿರಬಹುದೆಂಬ ಕುತೂಹಲಕರ ಚರ್ಚೆ ನಡೆಯುತ್ತಿದೆ.

ಸ್ಥಳಿಯಾಡಳಿತ ಸಂಸ್ಥೆಗಳ ಕ್ಷೇತ್ರದ ಹಾಲಿ ಎಮ್‌ಎಲ್‌ಸಿ ಶ್ರೀಕಾಂತ ಘೋಟನೇಕರ್‌ಗೆ ಮೂರನೆ ಬಾರಿ ಕಾಂಗ್ರೇಸ್‌ನಿಂದ ಸ್ಪರ್ಧಿಸುವ ಧೈರ್ಯವಿಲ್ಲ. ಜಿಲ್ಲಾ ಕಾಂಗ್ರೆಸ್ ಹೈಕಮಾಂಡ್ ಆರ್.ವಿ. ದೇಶಪಾಂಡೆ ತನ್ನ ಹಳಿಯಾಳ ಕೇತ್ರದ ಬಹುದೊಡ್ಡ ಮರಾಠ ಸಮುದಾಯದ ಘೋಟನೇಕರ್‌ಅನ್ನು ಸತತ ಎರಡು ಬಾರಿ ಎಮ್ಮೆಲ್ಸಿಯಾಗಿಸಿದ್ದರು. ಈಗ ಈ ಗುರು-ಶಿಷ್ಯ ಸಂಬಂಧ ಹಳಸಿದೆ. ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಸದಸ್ಯರ ಬಲ ಹೆಚ್ಚಿರುವುದರಿಂದ ಘೋಟನೇಕರ್‌ಗೆ ಬಿಜೆಪಿ ಟಿಕೆಟ್ ಮೇಲೆಯೇ ಆಸೆ ಜಾಸ್ತಿಯೆನ್ನಲಾಗಿದೆ. ದೇಶಪಾಂಡೆ ಮೂರು ದಶಕದಿಂದ ಶಾಸಕನಾಗಿದ್ದು ಸಾಕು ಈ ಸಲ ನನಗೆ ಅಸೆಂಬ್ಲಿಗೆ ಸ್ಪರ್ಧಿಸಲು ಅವಕಾಶ ಬೇಕೆಂದು ಘೋಟನೇಕರ್ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ.

ಘೋಟನೇಕರ್ ನಡೆ-ನುಡಿ ಹಿಂದೆ ಬಿಜೆಪಿ ಟಿಕೆಟ್ ಗಿಟ್ಟಿಸುವ ಲೆಕ್ಕಾಚಾರವಿದೆಯೆಂದು ಜಿಲ್ಲೆಯ ರಾಜಕೀಯ ವಿಶ್ಲೇಷಕರು ವ್ಯಾಖ್ಯಾನಿಸುತ್ತಿದ್ದಾರೆ. ಈಗ ಬಿಜೆಪಿ ಮಂತ್ರಿಯಾಗಿರುವ ಶಿವರಾಮ ಹೆಬ್ಬಾರ್ ಕಾಂಗ್ರೆಸ್‌ನಲ್ಲಿದ್ದಾಗ ಅಂದಿನ ಕಾಂಗ್ರೆಸ್ ಶಾಸಕರಾದ ಮಂಕಾಳ್ ವೈದ್ಯ, ಸತೀಶ್ ಸೈಲ್ ಮತ್ತು ಘೋಟನೇಕರ್‌ರ ಜತೆಗಿಟ್ಟುಕೊಂಡು ಹಳೆ ಹುಲಿ ದೇಶಪಾಂಡೆ ವಿರುದ್ಧ ಕಾರ್ಯಾಚರಣೆಗಿಳಿದಿದ್ದರು. ಘೋಟನೇಕರ್ ಮತ್ತು ಹೆಬ್ಬಾರ್‌ರ ದೋಸ್ತಿ ಇಂದಿಗೂ ಅಷ್ಟೆ ಅಖಂಡವಾಗಿ ಮುಂದುವರಿದಿದೆ. ಬಿಜೆಪಿ ವಿಧಾನ ಪರಿಷತ್ ಅಥವಾ ವಿಧಾನ ಸಭೆ ಹಳಿಯಾಳ ಟಿಕೆಟ್‌ನಲ್ಲಿ ಯಾವುದು ಕೊಟ್ಟರೂ ಘೋಟನೇಕರ್ ಪಕ್ಷಾಂತರ ಮಾಡಲು ಮಾನಸಿಕವಾಗಿ ಸಿದ್ದವಾಗಿದ್ದಾರೆಂದು ಅವರ ಆಪ್ತರೆ ಹೇಳುತ್ತಿದ್ದಾರೆ. ಗೆಳೆಯನನ್ನು ಬಿಜೆಪಿಗೆ ತರಲು ಹೆಬ್ಬಾರ್ ಕೈಲಾದದ್ದೆಲ್ಲ ಮಾಡುತ್ತಿರುವುದು ರಹಸ್ಯವಾಗುಳಿದಿಲ್ಲ.

ಘೋಟನೇಕರ್‌ರಂತೆಯೆ ಗುರು ದೇಶಪಾಂಡೆಗೆ ಸೆಡ್ಡು ಹೊಡೆದು ಜೆಡಿಎಸ್-ಬಿಜೆಪಿಯೆಂದು ಸುತ್ತು ಹೊಡೆಯುತ್ತಿರುವ ಮಾಜಿ ಶಾಸಕ ಸುನಿಲ್ ಹೆಗಡೆಗೆ ಬಿಜೆಪಿಯಲ್ಲಿನ ರಾಜಕೀಯ ಒಳಸುಳಿ ಅದ್ಯಾಕೋ ತನ್ನ ಅಸಿತ್ವಕ್ಕೆ ಸಂಚಕಾರ ತರತ್ತಿದೆಯೆಂಬ ಚಡಪಡಿಕೆ ಮೂಡಿಸಿದೆ. ಅಸೆಂಬ್ಲಿ ಇಲೆಕ್ಷನ್‌ನಲ್ಲಿ ಬಿಜೆಪಿ ಕ್ಯಾಂಡಿಡೇಟ್ ಆಗಲು ಸಕಲ ಸಿದ್ದತೆ ಮಾಡಿಕೊಳ್ಳುತ್ತಿರುವ, ಕಳೆದ ಬಾರಿ ದೇಶಪಾಂಡೆ ಎದುರು ಕೇವಲ ಐದು ಸಾವಿರ ಮತದಂತರದಿಂದ ಸೋತಿರುವ ಸುನಿಲ್ ಹೆಗಡೆಗೆ ಸಹಜವಾಗೆ ಘೋಟನೇಕರ್ ಬಿಜೆಪಿಗೆ ಬರುವುದು ಬೇಡವಾಗಿದೆ. ಸುನಿಲ್‌ಗೆ ದೇಶಪಾಂಡೆಗಿಂತ ಘೋಟನೇಕರ್ ಮೇಲೆಯೆ ಹೆಚ್ಚು ಸಿಟ್ಟಿದೆ. ಸುನಿಲ್‌ಗೆ ಸ್ಥಳಿಯವಾಗಿ ಹೆಜ್ಜೆ-ಹೆಜ್ಜೆಗೆ ಸವಾಲಾಗಿರುವುದು ಘೋಟನೇಕರ್.

ಬಿಜೆಪಿ ಸೂತ್ರಧಾರರಿಗೆ ತೀರಾ ಕಡಿಮೆ ಜನಸಂಖ್ಯೆಯ ಜಾತಿ (ಕೊಂಕಣಿ ಬ್ರಾಹ್ಮಣ)ಯ ಸುನಿಲ್‌ಗಿಂತ ಬಹುಸಂಖ್ಯಾತ ಮರಾಠ ಸಮುದಾಯದ ಘೋಟನೇಕರ್ ಅಸೆಂಬ್ಲಿ ಚುನಾವಣಾ ದೃಷ್ಟಿಯಿಂದ ಅನುಕೂಲಕರವಾಗಿ ಕಾಣಿಸುತ್ತಿದ್ದಾರೆ. ಹಾಗಾಗಿ ಸುನಿಲ್ ಹೆಗಡೆಗೆ ಎಮ್ಮೆಲ್ಸಿ ಚುನಾಣೆಗೆ ಇಳಿಸುವ ಬಗ್ಗೆ ಯೋಚನೆ ನಡೆಯುತ್ತಿದೆಯೆಂದು ಬಿಜೆಪಿಯವರೆ ಮಾತಾಡಿಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆಯಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ್ -ತನಗೆ ವಿಧಾನಸಭೆಯಿಂದ ಪರಿಷತ್ತಿಗೆ ಕಳಿಸುವುದಾಗಿ ಹೇಳಿ ಮೋಸ ಮಾಡಲಾಗಿದೆ; ಈಗಲಾದರೂ ಟಿಕೆಟ್ ಕೊಡಿಯೆಂದು ಬಹಿರಂಗ ಬೇಡಿಕೆ ಇಟ್ಟಿದ್ದಾರೆ. ಆದರೆ ಸ್ಥಳಿಯ ಶಾಸಕ-ಸ್ಪೀಕರ್ ಕಾಗೇರಿ ಮತ್ತು ಕೆ.ಜಿ.ನಾಯ್ಕ್ ಸಂಬಂಧ ಅಷ್ಟಕ್ಕಷ್ಟೆ.

ಸೋಲುವ ಹೊತ್ತಲ್ಲಿ ತನ್ನನ್ನು ಎಮ್ಮೆಲ್ಸಿ ಚುನಾವಣೆಗೆ ಬಲವಂತದಿಂದ ನಿಲ್ಲಿಸಲಾಗಿತ್ತು. ಕಳೆದ ವಿಧಾನ ಸಭಾ ಚನಾವಣೆಯಲ್ಲೂ ವಂಚಿಲಾಯಿತು; ಈಗಲಾದರೂ ಅವಕಾಶ ಕೊಡಿಯೆಂದು ಕಾರವಾರದ ಮೀನುಗಾರ ಸಮಾಜದ ಗಣಪತಿ ದುಮ್ಮಾ ಉಳ್ವೇಕರ್ ಹಕ್ಕು ಮಂಡಿಸಿದ್ದಾರೆ. ಕಳೆದ ಬಾರಿಯ ಅಸೆಂಬ್ಲಿ ಎಲೆಕ್ಷನ್ ಸಂದರ್ಭದಲ್ಲಿ ನಿಗೂಢವಾಗಿ ಸಾವಿಗೀಡಾದ ಹೊನ್ನಾವರದ ಮೀನುಗಾರರ ಹುಡುಗ ಪರೇಶ್ ಮೇಸ್ತನ ಹೆಸರಲ್ಲಿ ಕರಾವಳಿಯ ಅಷ್ಟೂ ಬಿಜೆಪಿ ಅಭ್ಯರ್ಥಿಗಳು ಮಿನುಗಾರರ ಸಾರಾಸಗಟು ಮತ ಪಡೆದು ಗೆದಿದ್ದಾರೆಂಬುದನ್ನು ಬಿಜೆಪಿ ಹೈಕಮಾಂಡ್ ಮರೆಯಬಾರದೆಂದು ಗಣಪತಿ ಉಳ್ವೇಕರ್ ಪರವಿರುವವರ ವಾದ. ಬಿಜೆಪಿ ದೊಡ್ಡವರ ಗಮನ ಸೆಳೆಯಲು ಹಿಂದುತ್ವ ಉಗ್ರವಾಗಿ ಪ್ರತಿಪಾದಿಸುತ್ತಿರುವ ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ ನಾಯಕ ಸಂಘಪರಿವಾರದ ಬೆಂಬಲದ ಸುಬ್ರಾಯ ವಾಳ್ಕೆ ಟಿಕೆಟ್ ಲಾಬಿ ನಡೆಸಿದ್ದಾರೆನ್ನಲಾಗಿದೆ. ಅರಣ್ಯ ಅಧಿಕಾರಿಯಾಗಿದ್ದಾಗ ಅಕ್ಕಿ ಅವ್ಯವಹಾರದಲ್ಲಿ ಅಮಾನತ್ತಾಗಿದ್ದ ನಾಗರಾಜ ನಾಯಕ್ ತೊರ್ಕೆ ಸಹ ಬಿಜೆಪಿ ಟಿಕೆಟ್‌ ಪಡೆವ ಪ್ರಯತ್ನದಲ್ಲಿದ್ದಾರೆ.

ಕಾಂಗ್ರೆಸ್‌ನಲ್ಲಿ ಎಮ್ಮೆಲ್ಸಿ ಸ್ಥಾನಕ್ಕೆ ಅಂಥ ಪೈಪೋಟಿಯೇನಿಲ್ಲ. ಆದರೆ ಜಿಲ್ಲೆಯ ರಾಜಕಾಣದ ನಾಡಿ ಮಿಡಿತ ಗೊತ್ತಿರುವ ದೇಶಪಾಂಡೆ ಕಾಯಾ-ವಾಚಾ-ಮನಸಾ ಪ್ರಯತ್ನಿದರೆ ಕಾಂಗ್ರೆಸ್ ಗೆಲ್ಲಿಸುವುದು ಅವರಿಗೆ ಕಷ್ಟವೇನಲ್ಲವೆಂಬುದು ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷದವರಿಗೆ ಗೊತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಬಲಾಬಲದ ಅಂತರವು ತೀರಾ ಸಣ್ಣದಿರುವುದರಿಂದ ದೇಶಪಾಂಡೆ ಮನಸ್ಸು ಮಾಡಿದರೆ ಕಾಂಗ್ರೆಸ್ ಯೋಗ ಖುಲಾಯಿಸಬಹುದೆಂಬ ವಿಶ್ಲೇಷಣೆ ನಡೆದಿದೆ.

ಮಗನನ್ನು ಯಲ್ಲಾಪುರದಲ್ಲಿ ಚುನಾವಣೆಗೆ ನಿಲ್ಲಿಸುವ ಯೋಚನೆಯಲ್ಲಿರುವ ದೇಶಪಾಂಡೆ ಹಳೆ ಶತ್ರು ಮಾರ್ಗರೇಟ್ ಆಳ್ವರ ಜತೆ ರಾಜಿ ಮಾಡಿಕೊಂಡಿದ್ದಾರೆ. ಹೀಗಾಗಿ ತನ್ನನ್ನು ದೇಶಪಾಂಡೆ ಈ ಸಲ ಬೆಂಬಲಿಸಬಹುದೆಂದು ಭಾವಿಸಿದ್ದರು ಮ್ಯಾಗಿ ಮಗ ನಿವೇದಿತ್ ಆಳ್ವ.. ಆದರೆ ಆಶಿರ್ವಾದ ಪಡೆಯಲು ಹೋಗಿದ್ದ ನಿವೇದಿತ್ ಗೆ ನೀನು ಸ್ಪರ್ಧಿಸುವುದು ಬೇಡ…. ವಾತಾವರಣ ಸರಿಯಿಲ್ಲ… ಎಂದೇಳಿ ನಿರಾಶೆ ಮೂಡಿಸಿದ್ದಾರೆನ್ನಲಾಗಿದೆ. ದೇಶಪಾಂಡೆ ಅರಣ್ಯ ಭೂಮಿ ಅತಿಕ್ರಮಣದಾರರ ಸಂಘಟನೆಯ ಜಿಲ್ಲೆಯಾದ್ಯಂತ ಜನ ಸಂಪರ್ಕವಿರುವ ರವೀಂದ್ರ ನಾಯ್ಕ್‌ಗೆ ನಿಲ್ಲಿಸಿದರೆ ಗೆಲ್ಲಿಸಿಕೊಂಡು ಬರುವುದು ಕಷ್ಟವಾಗಲಿಕ್ಕಿಲ್ಲವೆಂಬ ಅಭಿಪ್ರಾಯ ಕಾಂಗ್ರೆಸ್‌ನಲ್ಲಿದೆ. ಅದರೆ ದೇಶಪಾಂಡೆ ತಲೆಯಲ್ಲಿರುವುದು ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ್ ಎಂದು ಕಾಂಗ್ರೆಸಿಗರು ಅಂದಾಜಿಸಿದ್ದಾರೆ.


ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...