Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

ಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

2020ರ ಡಿಸೆಂಬರ್‌ 30 ರಂದು ಶ್ರೀ ಪರಮ್ ಹನ್ಸ್ ಮಹಾರಾಜ್ ದೇವಾಲಯವನ್ನು ಜಮೈತ್ ಉಲೆಮಾ ಎ ಇಸ್ಲಾಂ ಫಜ್ಲ್ ಮೂಲಭೂತವಾದಿ ಪಕ್ಷದ ಸದಸ್ಯರ ನೇತೃತ್ವದಲ್ಲಿ ಗುಂಪೊಂದು ಧ್ವಂಸಗೊಳಿಸಿ, ಬೆಂಕಿ ಹಚ್ಚಿತ್ತು.

- Advertisement -
- Advertisement -

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಪಾಕಿಸ್ತಾನದ ಖೈಬರ್ ಪಾಖ್ತುನ್‌‌‌ಖ್ವಾ ಪ್ರಾಂತ್ಯದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಶತಮಾನಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನರ್ ನಿರ್ಮಾಣ ಮಾಡಲಾಗಿದೆ. ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್‌ರವರು ನೂತನ ದೇವಾಲಯಗಳ ಉದ್ಘಾಟನೆ ನೆರವೇರಿಸಿದ್ದಾರೆ.

2020ರ ಡಿಸೆಂಬರ್‌ 30 ರಂದು ಶ್ರೀ ಪರಮ್ ಹನ್ಸ್ ಮಹಾರಾಜ್ ದೇವಾಲಯವನ್ನು ಜಮೈತ್ ಉಲೆಮಾ ಎ ಇಸ್ಲಾಂ ಫಜ್ಲ್ ಮೂಲಭೂತವಾದಿ ಪಕ್ಷದ ಸದಸ್ಯರ ನೇತೃತ್ವದಲ್ಲಿ ಗುಂಪೊಂದು ಧ್ವಂಸಗೊಳಿಸಿ, ಬೆಂಕಿ ಹಚ್ಚಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಪಾಕಿಸ್ತಾನ ಪೊಲೀಸರು 350 ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್‌ ದಾಖಲಿಸಿದ್ದು 55ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ದಾಳಿಯ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ, ಪ್ರಕರಣದ ವಿಚಾರಣೆ ನಡೆಸಿದ್ದರು. ದಾಳಿಯನ್ನು ತೀವ್ರವಾಗಿ ಖಂಡಿಸಿದ್ದ ಅವರು ಎರಡು ವಾರಗಳ ಅವಧಿಯಲ್ಲಿ ದೇವಾಲಯ ಪುನರ್‌ನಿರ್ಮಾಣಕ್ಕೆ ಮುಂದಾಗಬೇಕೆಂದು ಪ್ರಾಂತೀಯ ಸರ್ಕಾರಕ್ಕೆ ಆದೇಶಿಸಿದ್ದರು. ಈ ಘಟನೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಕೆಟ್ಟ ಹೆಸರು ತಂದಿದ್ದು ದಾಳಿಕೋರರಿಂದಲೇ ದೇವಾಲಯ ನಿರ್ಮಾಣದ ಹಣ ವಸೂಲಿ ಮಾಡಬೇಕೆಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದರು.

ಸೋಮವಾರ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್‌ ರವರು ಭಾಗವಹಿಸಿದ್ದರು. ದೀಪಾವಳಿ ಹಬ್ಬದೊಂದಿಗೆ ಅದ್ದೂರಿಯಾಗಿ ದೇವಾಲಯದಲ್ಲಿ ಪೂಜೆಗಳು ಜರುಗಿವೆ. ಪಾಕಿಸ್ತಾನದಲ್ಲಿರುವ ಹಿಂದೂ ಧರ್ಮೀಯರೊಂದಿಗೆ ಐಕ್ಯಮತ್ಯ ಘೋಷಿಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿರುವ ಅವರು, “ಪಾಕಿಸ್ತಾನದ ಸುಪ್ರೀಂ ಕೋರ್ಟ್ ಯಾವಾಗಲೂ ಅಲ್ಪಸಂಖ್ಯಾತರರ ಹಕ್ಕುಗಳನ್ನು ರಕ್ಷಿಸುವ ಕ್ರಮಗಳನ್ನು ಕೈಗೊಂಡಿದೆ. ಮುಂದೆಯೂ ಅದನ್ನು ಕಾಪಾಡಲಿದೆ. ನಮ್ಮ ಸಂವಿಧಾನದ ಪ್ರಕಾರ ಹಿಂದೂಗಳು ಇತರ ಧರ್ಮೀಯರು ಹೊಂದಿರುವ ಎಲ್ಲಾ ಧಾರ್ಮಿಕ ಹಕ್ಕುಗಳನ್ನು ಹೊಂದಿದ್ದಾರೆ” ಎಂದಿದ್ದಾರೆ ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಪಾಕಿಸ್ತಾನದಲ್ಲಿ ಮತ್ತೊಬ್ಬರ ಧಾರ್ಮಿಕ ಹಕ್ಕುಗಳ ಮೇಲೆ ದಾಳಿ ನಡೆಸುವ ಅಧಿಕಾರ ಯಾರಿಗೂ ಇಲ್ಲ. ಸುಪ್ರೀಂ ಕೋರ್ಟ್ ಎಲ್ಲಾ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಪಾಕಿಸ್ತಾನ್ ಹಿಂದೂ ಕೌನ್ಸಿಲ್ ಮತ್ತು ಹಿಂದೂ ಸಮುದಾಯದ ಭಕ್ತಾದಿಗಳು ಮುಖ್ಯ ನ್ಯಾಯಮೂರ್ತಿಗಳಿಗೆ ಪೇಟ ತೊಡಿಸಿ, ಡಿಜಿಟಲ್ ಕುರಾನ್ ಅನ್ನು ಉಡುಗೊರೆಯಾಗಿ ನೀಡಿ ಗೌರವಿಸಿದ್ದಾರೆ.

ಸರ್ಕಾರವು ಹಾನಿಗೊಳಗಾದ ದೇವಾಲಯ ಮತ್ತು ಸಮಾಧಿಯನ್ನು ಆದಷ್ಟು ಕಡಿಮೆ ಸಮಯದಲ್ಲಿ ಪುನರ್‌ ನಿರ್ಮಿಸುವುದಾಗಿ ಭರವಸೆ ನೀಡುತ್ತೇವೆ. ಪ್ರಾಂತ್ಯದಲ್ಲಿ ಧಾರ್ಮಿಕ ಸಹಿಷ್ಣುತೆಯನ್ನು ಕಾಪಾಡಲಾಗುವುದು ಎಂದು ಖೈಬರ್ ಪಾಖ್ತುನ್‌‌ಟ್ವಾ ಮುಖ್ಯಮಂತ್ರಿ ಮಹಮೂದ್ ಖಾನ್ ಈ ಹಿಂದೆ ಹೇಳಿದ್ದರು.


ಇದನ್ನೂ ಓದಿ: ಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...