Homeಮುಖಪುಟಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

ಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

- Advertisement -
- Advertisement -

ಕಳೆದ ತಿಂಗಳು ನಿರ್ದೇಶಕ, ನಿರ್ಮಾಪಕ ಪ್ರಕಾಶ್‌ ಝಾ ಅವರ ‘ಆಶ್ರಮ್‌-3′ ವೆಬ್‌ಸೀರೀಸ್‌ ಚಿತ್ರೀಕರಣದ ವೇಳೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ಪ್ರಮುಖ ಆರೋಪಿ ಕೊಲೆ ಅಪರಾಧಿಯೂ ಆಗಿದ್ದು, ಪೊಲೀಸರು ಬಂಧಿಸಿದ ಒಂದೇ ದಿನದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

ಸುಶೀಲ್‌‌ ಸುದೇಲೆ ಬಲಪಂಥೀಯ ಸಂಘಟನೆಯ ಭೋಪಾಲ್‌ ಘಟಕದ ಮುಖ್ಯಸ್ಥನಾಗಿದ್ದು, ಏಳು ಜನ ಆರೋಪಿಗಳಲ್ಲಿ ಒಬ್ಬಾತನಾಗಿದ್ದಾನೆ. ಈತನಿಗೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಪ್ರಕಾಶ್‌ ಝಾ ಅವರ ಆಶ್ರಮ್‌ ಸೆಟ್‌ ಮೇಲೆ ದಾಳಿ ಮಾಡಿದ ಆರೋಪಿಗಳೊಂದಿಗೆ ಸುಶೀಲ್‌ ಸುದೇಲೆಯನ್ನು ಪೊಲೀಸರು ಬಂಧಿಸಿದ್ದರು. ಒಂದೇ ದಿನದಲ್ಲಿ ಸುದೇಲೆಗೆ ಜಮೀನು ದೊರೆತಿದೆ.

ದಾಳಿ ಕೃತ್ಯದ ಪ್ರಮುಖ ಆರೋಪಿ ಸುದೇಲೆ ಕೊಲೆ ಪ್ರಕರಣದಲ್ಲಿ ಈಗಾಗಲೇ ಭಾಗಿಯಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಉನ್ನತ ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೂ ಸಂಪರ್ಕದಲ್ಲಿದ್ದಾನೆ ಎಂಬ ಸಂಗತಿ ಬಹಿರಂಗವಾಗಿತ್ತು.

ಬಲಪಂಥೀಯ ಸಂಘಟನೆಯಾದ ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು. 2011ರ ಕೊಲೆ ಪ್ರಕರಣದಲ್ಲಿ ಸುದೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಸೆಪ್ಟೆಂಬರ್ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾನೆ ಎಂದು ದಿ ವೈರ್‌ ವರದಿ ಮಾಡಿತ್ತು.

ಇದನ್ನೂ ಓದಿರಿ: ಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

ವೆಬ್ ಸರಣಿಯ ಸೆಟ್‌ ಮೇಲೆ ದಾಳಿ ನಡೆದ ಒಂದು ದಿನದ ನಂತರ (ಅಕ್ಟೋಬರ್ 25ರಂದು), ಭೋಪಾಲ್ ಪೊಲೀಸರು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದರು. ವಿಶ್ವ ಹಿಂದೂ ಪರಿಷತ್‌ ಹಾಗೂ ಆರ್‌‌ಎಸ್‌ಎಸ್‌ನ ಯುವ ಘಟಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಜರಂಗದಳದ ಹಿರಿಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 149, 323, 336 ಮತ್ತು 427ರ ಅಡಿಯಲ್ಲಿ ಪೊಲೀಸರು ಸುದೇಲೆ, ಜೀವನ್ ಶರ್ಮಾ, ಅಭಿಜಿತ್, ದೀಲಿಪ್, ಕರಣ್, ಶರ್ವಾನ್ ಬೋಥಮ್ ಮತ್ತು ಸುನೀಲ್ ಸೋನಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಎಲ್ಲಾ ಸೆಕ್ಷನ್‌ಗಳು ಜಮೀನು ಪಡೆಯಲು ಅವಕಾಶ ನೀಡುತ್ತವೆ ಎಂದು ‘ದಿ ವೈರ್‌’ ಹೇಳಿತ್ತು.

ಅಕ್ಟೋಬರ್ 24ರಂದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭೋಪಾಲ್ ಪೊಲೀಸರು ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿ, ಸಿಆರ್‌ಪಿಸಿಯ ಸೆಕ್ಷನ್ 151ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಅಪರಾಧಿ ಸುಶೀಲ್‌ ಸುದೇಲೆ ಹಿನ್ನೆಲೆ

2011ರ ಫೆಬ್ರವರಿ 5ರಂದು ಭೋಪಾಲ್ ಮೂಲದ ಗುರುಕಿರ್ಪಾ ಟ್ರಾವೆಲ್ಸ್‌ನ ಮಾಲೀಕ ಭಾಗ್‌ಚಂದ್ ಅಲಿಯಾಸ್ ಪಪ್ಪು ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ದಾಳಿಯ ಪ್ರಮುಖ ಆರೋಪಿ ಸುದೇಲೆ ಅವರನ್ನು ಭೋಪಾಲ್ ನ್ಯಾಯಾಲಯವು 2014ರಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಐಪಿಸಿಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿಯ ಶಿಕ್ಷೆ) ಅಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಲಾಯಿತು ಮತ್ತು 1,000 ರೂಪಾಯಿಗಳ ದಂಡದ ಜೊತೆಗೆ 14 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು.

ಇದನ್ನೂ ಓದಿರಿ: ಕೇರಳ: ದಲಿತ ಮಹಿಳೆಗೆ ಮನೆ ಕಟ್ಟುಲು ಸಾಮಾಗ್ರಿಯನ್ನು ಕೊಂಡೊಯ್ಯಲು ಬಿಡದ ಮೇಲ್ಜಾತಿ ಕುಟುಂಬ

“ಸುದೇಲೆ ಭಾಗ್‌ಚಂದ್‌ನಿಂದ ಹಣ ವಸೂಲಿ ಮಾಡುತ್ತಿದ್ದ. ಭಾಗ್‌ಚಂದ್ ಅವರು ಸುದೇಲೆ ವಿರುದ್ಧ ಹನುಮಾನ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸುದೇಲೆ ಹಣಕ್ಕಾಗಿ ಬೇಡಿಕೆಯಿಡುತ್ತಿರುವ ವಿಡಿಯೊ ಕ್ಲಿಪ್ಅನ್ನು ಭಾಗ್‌ಚಂದ್‌ ಸಲ್ಲಿಸಿದ್ದರು. ಈ ವಿಡಿಯೋವನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಲಾಗಿದೆ” ಎಂದು ಕೋರ್ಟ್ ಹೇಳಿದೆ.

ಭಾಗ್‌ಚಂದ್ ದೂರು ನೀಡಿದ ಬಳಿಕ ಕುಪಿತರಾದ ಸುದೇಲೆಯ ಐವರು ಸಹಚರರು 2011ರ ಫೆಬ್ರವರಿ 5ರಂದು ಭಾಗ್‌ಚಂದ್ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ, ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು. ಭಾಗ್‌ಚಂದ್‌ ತೀವ್ರ ಗಾಯಾಳುವಾಗಿಯೇ ತಪ್ಪಿಸಿಕೊಂಡು ಬಂದು ಹನುಮಂಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತಲೆಗೆ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳ ನಂತರ ಮೃತಪಟ್ಟರು.

ಭಾಗ್‌ಚಂದ್‌ನ ಸಾವಿನ ನಂತರ ಪೊಲೀಸರು, ಸುದೇಲೆ, ನೀಲೇಶ್ ಖಟಿಕೆ, ರಾಜ್‌ಕುಮಾರ್ ಚೌರಾಸಿಯಾ, ಅರವಿಂದ್ ನರ್ವಾರಿಯಾ, ವೀರೇಂದ್ರ ಯಾದವ್, ಗೋಪಾಲ್ ಯಾದವ್ ವಿರುದ್ಧ ಸೆಕ್ಷನ್ 294, 147, 148, 148, 506-ಬಿ, 427, 302, 120-ಬಿ ಪ್ರಕರಣ ದಾಖಲಿಸಿದರು.

ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಅಮಿತಾಭ್ ಮಿಶ್ರಾ ಅವರ ಏಕಸದಸ್ಯ ಪೀಠವು ಫೆಬ್ರವರಿ 5, 2014ರಂದು ನಡೆದ ಘಟನೆಯ ಸುಮಾರು ಮೂರು ವರ್ಷಗಳ ನಂತರ ಸುದೇಲೆ ಸೇರಿದಂತೆ ಎಲ್ಲಾ ಆರೋಪಿಗಳಿಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿತು. ಆದರೆ ಇಬ್ಬರು ಆರೋಪಿಗಳು (ಸುದೇಲೆ ಮತ್ತು ಬಜರಂಗದಳದ ರಾಜಕುಮಾರ ಚೌರಾಸಿಯಾ) ಸೆಪ್ಟೆಂಬರ್ 28, 2015ರಂದು ಜಾಮೀನು ಪಡೆದರು.

ರಾಜಕುಮಾರ್ ಅವರು ಪ್ರಸ್ತುತ ಭೋಪಾಲ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರೆ, ಬಜರಂಗದಳದ ಕಾರ್ಯಕರ್ತನಾಗಿದ್ದ ಸುದೇಲೆಯನ್ನು ಬಜರಂಗದಳ ಕೇಂದ್ರ ಘಟಕದ ಸಂಚಾಲಕ ಸ್ಥಾನದಲ್ಲಿ ಕೂರಿಸಲಾಗಿದೆ.


ಇದನ್ನೂ ಓದಿರಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...