Homeಕರ್ನಾಟಕ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದು, ಕೆನರಾ ಬ್ಯಾಂಕ್ ಒಪ್ಪಿಕೊಂಡಿದೆ

- Advertisement -
- Advertisement -

ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಪಟ್ಟಣದಲ್ಲಿ ಇತ್ತೀಚೆಗೆ ನಡೆದಿತ್ತು. ಈ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿದ್ದ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ಸಿಬ್ಬಂದಿಯನ್ನು ಪ್ರಶ್ನಿಸಿ, ರೈತನಿಗೆ ಬೆದರಿಸಿದ ಸಿಬ್ಬಂದಿಯ ಮೇಲೆ ಕ್ರಮಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದೀಗ ಕೆನರಾ ಬ್ಯಾಂಕ್ ಘಟನೆಗೆ ವಿಷಾದಿಸಿದ್ದು, ಮುಂದಕ್ಕೆ ಇಂತಹ ಘಟನೆ ಆಗದಂತೆ ನೋಡಿಕೊಳ್ಳುವುದಾಗಿ ಹಾಗೂ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಆದೇಶಿಸಿದ್ದೇವೆ ಎಂದು ಹೇಳಿದೆ.

ಇದನ್ನೂ ಓದಿ: ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಇತ್ತೀಚೆಗೆ ಶಿರಾದ ಬುಕ್ಕಪಟ್ಟಣದಲ್ಲಿ ಚಂದ್ರಶೇಖರ್‌ ಎಂಬ ರೈತರೊಬ್ಬರು ತಮ್ಮ ಖಾತೆಯಿರುವ ಕೆನರಾ ಬ್ಯಾಂಕಿಗೆ ತೆರಳಿದ್ದರು. ಈ ವೇಳೆ ಅವರು ಸಿಬ್ಬಂದಿಯೊಂದಿಗೆ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿಕೊಂಡಿದ್ದರು. ಆದರೆ, ಇಷ್ಟಕ್ಕೆ ಆಕ್ರೋಶಗೊಂಡ ಹಿಂದಿ ಭಾಷಿಕ ಸಿಬ್ಬಂದಿ ರೈತನನ್ನು ಹೊರಹೋಗುವಂತೆ ಕೂಗಾಡಿದ್ದಲ್ಲದೆ, ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಬೆದರಿಸಿದ್ದರು.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.

ಇದನ್ನೂ ಓದಿ: ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಇದರ ನಂತರ ಕನ್ನಡ ಪರ ಹೋರಾಟಗಾರ ರೂಪೇಶ್‌ ರಾಜಣ್ಣ ತಮ್ಮ ಕಾರ್ಯಕರ್ತರೊಂದಿಗೆ ತೆರಳಿ ಬ್ಯಾಂಕ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡ ಭಾಷಿಗರೆ ಹೆಚ್ಚಿರುವ ಬುಕ್ಕಾಪಟ್ಟಣ ಎಂಬ ಹಳ್ಳಿಯಲ್ಲಿ ಕಾರ್ಯಾಚರಿಸುತ್ತಿರುವ ಬ್ಯಾಂಕಿನಲ್ಲಿ ಕನ್ನಡ ಭಾಷೆ ತಿಳಿಯದ ನಾಲ್ಕು ಉದ್ಯೋಗಿಗಳು ಇದ್ದಾರೆ ಎಂಬ ವಿಷಯವನ್ನು ಅವರು ಗಮನಸೆಳೆದಿದ್ದರು. ನಂತರ ರೈತನಿಗೆ ಧಮಕಿ ಹಾಕಿದ್ದ ಸಿಬ್ಬಂದಿಯು ತಾನು ಎಸಗಿದ ಕೃತ್ಯಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲದೆ ಮುಂದಕ್ಕೆ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಕನ್ನಡದಲ್ಲೇ ಸೇವೆ ನೀಡಲು ಕೂಡಾ ಬ್ಯಾಂಕ್ ಒಪ್ಪಿಕೊಂಡಿದೆ.

ಇಷ್ಟೇ ಅಲ್ಲದೆ, ಘಟನೆಯ ನಂತರ ಕೆನರಾಬ್ಯಾಂಕ್‌ನ ಮುಖ್ಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೂಪೇಶ್‌ ರಾಜಣ್ಣ ಅವರೊಂದಿಗೆ ಘಟನೆ ಬಗ್ಗೆ ಚರ್ಚಿಸಿದ್ದಾರೆ. ಅಧಿಕಾರಿಗಳು ಅವರಿಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಇದೀಗ ಘಟನೆಯ ಬಗ್ಗೆ ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕೆನರಾ ಬ್ಯಾಂಕ್, “ನಿನ್ನೆ ಬುಕ್ಕಾಪಟ್ಟಣದ ನಮ್ಮ ಬ್ಯಾಂಕ್ ಶಾಖೆಯಲ್ಲಿ ನಡೆದ ಘಟನೆ ಬಗ್ಗೆ ವಿಷಾದಿಸುತ್ತೇವೆ. ಇನ್ನು ಮುಂದೆ ಇಂತಹ ಘಟನೆ ಆಗದಂತೆ ನೋಡಿಕೊಂಡು, ಈ ಘಟನೆ ಬಗ್ಗೆ , ಸಂಬಂಧ ಪಟ್ಟ ಉದ್ಯೋಗಿಯ ಮೇಲೆ ಕಾನೂನು ರೀತಿಯ ಸೂಕ್ತ ಕ್ರಮ ಜರುಗಿಸಲು ಕೂಡಲೇ ಆದೇಶಿಸಲಾಗಿದೆ. ಸದಾ ನಾವು ಕನ್ನಡಪರ ವಿಚಾರದಲ್ಲಿ ಕನ್ನಡಿಗರ ಜೊತೆ ಇದ್ದೇವೆ. ನಮ್ಮ ಬ್ಯಾಂಕ್ ಜೊತೆ ನಿಮ್ಮ ಸಹಕಾರ ಸದಾ ಮುಂದೆಯೂ ಇರಲಿ ಎಂದೂ ಕೇಳಿಕೊಳ್ಳುತ್ತಿದ್ದೇವೆ. ಕನ್ನಡವೇ ಸತ್ಯ.” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕ್ಲಬ್‌ಹೌಸ್‌ನಲ್ಲಿ ಕುವೆಂಪು ಮತ್ತು ಶ್ರೀರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಅವಹೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇದು, ತ್ರಿಬಾಶಾ ಸೂತ್ರವನ್ನು ಒಪ್ಪಿಕೊಂಡು ಏಳು ದಶಕಗಳ ಕಾಲ ಹಿಂದಿಯನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸಿದ ಪರಿಣಾಮ, ಕನ್ನಡಿಗರು ಈಗಲೂ ಎಚ್ಚೆತ್ತುಕೊಳ್ಳದಿದ್ದಲ್ಲಿ, ಇದಕ್ಕಿಂತಲೂ ಗೋರ ಪರಿಣಾಮಗಳು ನಮಗೆ ಕಾದಿವೆ. ಬಾಶೆಯ ವಿಷಯದಲ್ಲಿ ನಾವು ತಮಿಳರನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ “ಕನ್ನಡದಲ್ಲಿ ಮಾತನಾಡಿ” ಎಂದವರ ವಿರುದ್ಧ ಎಫ್.ಐ.ಆರ್. ದಾಕಲಾಗುವ ದಿನ ದೂರವಿಲ್ಲ.

  2. ನಮ್ಮ ರಾಜ್ಯದ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್, ರಾಜ್ಯದ ಪ್ರತಿಯೊಂದು ಶಾಖೆಗೂ ಕನ್ನಡ ಗೊತ್ತಿಲ್ಲದ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತಿದೆ. ಕೆನರಾ ಬ್ಯಾಂಕ್ ನಮ್ಮ ರಾಜ್ಯದಲ್ಲಿ ಕನ್ನಡಿಗರಿಗೆ ಮಾತ್ರ ಅವಕಾಶ ಕೊಡಲಿ.

  3. ನಮ್ಮ ಮಾತೃಭಾಷೆಗೆ ಪರಕಿಯರ ದಬ್ಬಾಳಿಕೆ ನಿರಂಥರವಾಗಿ
    ನಡೆಸಲಾಗುತಿದೆ. ಇದರ ಬಗ್ಗೆ ಸರಕಾರ ಮತ್ತು ಕನ್ನಡಿಗರು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಿದೆ
    .

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...