Homeಮುಖಪುಟ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ - ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

- Advertisement -
- Advertisement -

ಒಕ್ಕೂಟ ಸರ್ಕಾರವು ಚೀನಾದ ವಿರುದ್ದ ಯಾವುದೇ ತಂತ್ರವನ್ನು ಹೊಂದಿಲ್ಲದಿರುವುದರಿಂದ, ಭಾರತದ ರಾಷ್ಟ್ರೀಯ ಭದ್ರತೆಯು ‘ಕ್ಷಮಿಸಲಾಗದಷ್ಟು ರಾಜಿಯಾಗಿದೆ’ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

‘56 ಇಂಚಿನ ಎದೆ’ ಎಂಬ ಉಲ್ಲೇಖದೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ಮಿಸ್ಟರ್‌ 56 ಹೆದರುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ. ಸರ್ಕಾರ ಸುಳ್ಳುಗಳನ್ನೇ ಹೇಳುತ್ತಿರುವಾಗ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಸೈನಿಕರ ಪರವಾಗಿ ತಾನು ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆ: ಪಾಕಿಸ್ತಾನದ ಹಾದಿಯಲ್ಲಿ ಚೀನಾ!

ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರು ಚೀನಾ ಗಡಿ ಸಮಸ್ಯೆಯ ಬಗ್ಗೆ ವಿಭಿನ್ನ ಅಭಿಪ್ರಾಯವನ್ನು ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ್ದಾರೆ.

ಗುರುವಾರದಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಅವರು ಚೀನೀಯರು ಭಾರತೀಯ ಪ್ರದೇಶಕ್ಕೆ ಬಂದು ಹೊಸ ಗ್ರಾಮವನ್ನು ನಿರ್ಮಿಸಿದ್ದಾರೆ ಎಂಬ ಹೇಳಿಕೆಗಳು ನಿಜವಲ್ಲ ಮತ್ತು ಹಳ್ಳಿಗಳು ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಚೀನೀ ಬದಿಯಲ್ಲಿವೆ ಎಂದು ಹೇಳಿದ್ದಾರೆ. ಜೊತೆಗೆ, ಚೀನಾ LAC ಅನ್ನು ಉಲ್ಲಂಘಿಸಿಲ್ಲ ಎಂದು ಅವರು ಪ್ರತಿಪಾದಿಸಿದ್ದರು.

ಆದರೆ ಭಾರತದೊಳಗೆ ಚೀನಾ ಗ್ರಾಮ ನಿರ್ಮಿಸಿದೆ ಎಂಬ ಅಮೆರಿಕದ ವರದಿಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಾಲಯ, ಭಾರತವು ತನ್ನ ಭೂಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಅಥವಾ ಚೀನಾದ ಯಾವುದೇ ನ್ಯಾಯಸಮ್ಮತವಲ್ಲದ ಹಕ್ಕುಗಳನ್ನು ಭಾರತ ಒಪ್ಪಿಕೊಂಡಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಚೀನಾವು ಅರುಣಾಚಲ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿರುವುದನ್ನು ಉಲ್ಲೇಖಿಸಿದ US ರಕ್ಷಣಾ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪಪ್ಪು ವರ್ಷದ ಹಿಂದೆ ರಹಸ್ಯ ವಾಗಿ ಚೀನಾ ಗೆ ಹೋಗಿದ್ದನಲ್ಟ ಆಗ ಏನು ಕಡೆದು ಕಟ್ಟೆ ಹಾಕಿ ಬಂದನೋ,ಇವರ ತಾತ ನೆಹರು ಹಿಂದೆ ಮಾಡಿದ ಅಲಕ ಕೆಲಸಕ್ಕೆ ಈಗಲೂ ಭಾರತೀಯರು ಅದರ ಬೆಲೆ ತತ್ತಬೇಕಾಗಿ ಬಂದಿದೆ . ಇನ್ನ ಈ ಪಪ್ಪು ತಾಯಿ ಸೋನಿಯಾ ,ಮನಮೋಹನ್ ಸಿಂಗ್ ರ ಕಾಲದಲ್ಲಿ ಆದ ಕೆಲವು ಎಡವಟ್ಟು ಕೆಲಸ ಗಳ ಬಗ್ಗೆ ಹೇಳಿದರೆ
    ಮರ್ಯಾದೆಗೆ ಅಂಜಿ ಪಪ್ಪು ಇಟಲಿ ಪ್ರಯಾಣ ಮಾಡಿದರೂ ಆಶ್ಚರ್ಯ ಇಲ್ಲಾ .

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...