Homeಮುಖಪುಟಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

ಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

ಕಾಂಗ್ರೆಸ್ ಎಷ್ಟು ಕಾಲ ಆಡಳಿತ ನಡೆಸಿತೋ ಅಷ್ಟು ಕಾಲ ಬಿಜೆಪಿ ಅಧಿಕಾರ ನಡೆಸಿದರೆ ಭಾರತ ಆರ್ಥಿಕ ಶಕ್ತಿ ಕೇಂದ್ರವಾಗಿ ಬದಲಾಗುತ್ತದೆ: ಅಮಿತ್‌ ಶಾ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿನ ದಿಗ್ವಿಜಯವು 2024ರ ಲೋಕಸಭಾ ಚುನಾವಣೆಗೆ ದಾರಿಯಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಭವಿಷ್ಯ ನುಡಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿನಿಧಿಸುವ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುವ ಮುನ್ನ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವೇದಿಕೆ ಹಂಚಿಕೊಂಡು ಅವರು ಮಾತನಾಡಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯ ತಳಮಟ್ಟದ ಚುನಾವಣಾ ತಂತ್ರಗಾರಿಕೆಯನ್ನು ರೂಪಿಸುವ ನಿಟ್ಟಿನಲ್ಲಿ ಅಮಿತ್‌ ಶಾ ಮಾತನಾಡಿದ್ದು, “ಕಾರ್ಯಕರ್ತರು ಪ್ರತಿ ಕುಟುಂಬದ ಕನಿಷ್ಠ ಮೂರು ಮತಗಳನ್ನು ಬಿಜೆಪಿಗೆ ಹಾಕಿಸಬೇಕು. ಏಕೆಂದರೆ ಉತ್ತರ ಪ್ರದೇಶದ ಗೆಲುವು ಮುಂಬರುವ ಲೋಕಸಭೆಗೆ ತೆರೆದ ಬಾಗಿಲಾಗಲಿದೆ” ಎಂದು ಕರೆ ನೀಡಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಮಾತನಾಡಿದ ಅವರು, ಬೂತ್ ಮಟ್ಟದ ಪ್ರಚಾರಗಳನ್ನು ಬಲಪಡಿಸುವಂತೆ ಪಕ್ಷದ ಕಾರ್ಯಕರ್ತರಲ್ಲಿ ಕೇಳಿಕೊಂಡರು. “ಇದಕ್ಕಾಗಿ ಬೂತ್ ಸಮಿತಿಗಳನ್ನು ಸ್ಥಾಪಿಸಬೇಕು” ಎಂದು ಸೂಚಿಸಿದರು.

ಇದನ್ನೂ ಓದಿರಿ: ಲಾಕಪ್ ಡೆತ್: ’ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?’- ರಾಹುಲ್ ಗಾಂಧಿ

“ಬಿಜೆಪಿಗೆ ಮತ ಹಾಕಲು ತಲಾ 60 ಜನರ ಮೇಲೆ ಪ್ರತಿಯೊಬ್ಬ ವ್ಯಕ್ತಿಯೂ ಪ್ರಭಾವ ಬೀರಬೇಕು. ಒಂದು ವಲಯದಿಂದ ಕನಿಷ್ಠ 20 ಮತಗಳನ್ನು ಗಳಿಸುವ ಗುರಿಯನ್ನು ಇಟ್ಟುಕೊಳ್ಳಬೇಕು. ಪಕ್ಷದ ಪ್ರತಿ ಕಾರ್ಯಕರ್ತ ಪ್ರತಿ ಕುಟುಂಬಗಳಿಂದ ತಲಾ ಮೂರು ಮತಗಳನ್ನು ಗಳಿಸಬೇಕು” ಎಂದು ಅವರು ಹೇಳಿದ್ದಾರೆ.

“ಇದು ಸಾಮಾನ್ಯ ಚುನಾವಣೆಯಲ್ಲ. ಇದು ದೇಶವನ್ನು ಮುಂದಕ್ಕೆ ಕೊಂಡೊಯ್ಯುವ ಮತ್ತು ರಾಷ್ಟ್ರದ ಘನತೆಯನ್ನು ಎತ್ತಿ ಹಿಡಿಯುವ ಚುನಾವಣೆಯಾಗಿದೆ. ರೈತರಿಗೆ ಉಚಿತ ಗ್ಯಾಸ್ ಸಿಲಿಂಡರ್‌ ಯೋಜನೆ, ಪ್ರಧಾನಿಯವರ ಕಾರ್ಯಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ತಿಳಿಸಬೇಕು” ಎಂದಿರುವ ಅವರು, ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ದೇಶದಾದ್ಯಂತ ರೈತರು ನಡೆಸುತ್ತಿರುವ ಹೋರಾಟದ ಕುರಿತು ಅವರು ಪ್ರಸ್ತಾಪಿಸಲಿಲ್ಲ.

“ಕಾಂಗ್ರೆಸ್ ಕಾರ್ಯಕರ್ತರು ಇಷ್ಟು ವರ್ಷಗಳಿಂದ ಭ್ರಷ್ಟಾಚಾರ, ಅವ್ಯವಸ್ಥೆ ಮತ್ತು ವಿಭಜಕ ರಾಜಕೀಯದಲ್ಲಿ ಮಾತ್ರ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಎಷ್ಟು ಕಾಲ ಆಡಳಿತ ನಡೆಸಿತೋ ಅಷ್ಟು ಕಾಲ ಬಿಜೆಪಿ ಅಧಿಕಾರ ನಡೆಸಿದರೆ ಭಾರತ ಆರ್ಥಿಕ ಶಕ್ತಿ ಕೇಂದ್ರವಾಗಿ ಬದಲಾಗುತ್ತದೆ” ಎಂದಿದ್ದಾರೆ.

“ಯೋಗಿ ಆದಿತ್ಯನಾಥ್ ಅವರ ಸರ್ಕಾರ ಗೂಂಡಾರಾಜ್ ಹಾಗೂ ಮಾಫಿಯಾವನ್ನು ನಿಯಂತ್ರಿಸಿದೆ. ನಾವು ಮುಂದಿನ ಐದು ವರ್ಷಗಳಲ್ಲಿ ಉತ್ತಮ ಉತ್ತರ ಪ್ರದೇಶವನ್ನು ರೂಪಿಸಬೇಕಾಗಿದೆ. ಯುಪಿ ಗೆಲುವು 2024ಕ್ಕೆ ಬಾಗಿಲು ತೆರೆಯುತ್ತದೆ” ಎಂದು ತಿಳಿಸಿದ್ದಾರೆ.

ಬಹುಜನ ಸಮಾಜ ಪಕ್ಷದ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಗೂಂಡಾ ರಾಜ್ ಬಗ್ಗೆ ಜನರಿಗೆ ತಿಳಿಸಲು ಮನೆಮನೆಗೆ ಕಾರ್ಯಕರ್ತರು ಭೇಟಿ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: 28 ವರ್ಷಗಳಿಂದಾದ ಪ್ರಯೋಗಗಳ ಫಲ- ಒಂದು ವರ್ಷದ ರೈತ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...