Homeಚಳವಳಿಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್‌...

ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್‌ ಸರ್ಕಾರ

- Advertisement -
- Advertisement -

ಕಳೆದ ಗಣರಾಜ್ಯೋತ್ಸವದಂದು ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ಹಮ್ಮಿಕೊಂಡಿದ್ದರು. ಕೆಲವು ಕಿಡಿಗೇಡಿಗಳಿಂದಾಗಿ ಹಿಂಸಾಚಾರ ಸಂಭವಿಸಿದ ನಂತರ ದೆಹಲಿ ಪೊಲೀಸರು 83 ಮಂದಿಯನ್ನು ಬಂಧಿಸಿದ್ದರು. ಅಂದು ಬಂಧಿತರಾಗಿದ್ದವರಿಗೆ ಪಂಜಾಬ್ ಸರ್ಕಾರ ಆರ್ಥಿಕ ಸಹಾಯವನ್ನು ಘೋಷಿಸಿದೆ. ಈ ಮೂಲಕ ಕೇಂದ್ರದ ವಿರುದ್ಧ ಪಂಜಾಬ್‌ನಲ್ಲಿರುವ ಕಾಂಗ್ರೆಸ್ ಸರ್ಕಾರ ಹೊಸ ಹೋರಾಟಕ್ಕೆ ಮುನ್ನುಡಿ ಬರೆದಿದೆ.

ಖಾಸಗಿಯವರ ಹಿಡಿತಕ್ಕೆ ಕೃಷಿ ವಲಯವನ್ನು ದೂಡುವ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿ ಒಂದು ವರ್ಷದಿಂದ ದೆಹಲಿಯಲ್ಲಿ ಪಂಜಾಬ್‌ ಹಾಗೂ ಹರಿಯಾಣ ರೈತರು ಹೋರಾಟ ನಡೆಸುತ್ತಿದ್ದಾರೆ. ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಪಟ್ಟು ಹಿಡಿದಿದ್ದಾರೆ.

ದೆಹಲಿ ಪೊಲೀಸರು ಮತ್ತು ರೈತ ಮುಖಂಡರ ನಡುವಿನ ಮಾತುಕತೆಯ ನಂತರ ಕಳೆದ ಜನವರಿ 26ರಂದು ರೈತರಿಂದ ಟ್ರ್ಯಾಕ್ಟರ್ ರ್‍ಯಾಲಿ ನಡೆಯಲು ಅನುಮತಿ ದೊರೆಯಿತು. ಪ್ರಭುತ್ವದೊಂದಿಗೆ ಗುರುತಿಸಿಕೊಂಡಿದ್ದ ಕೆಲವು ಕಿಡಿಗೇಡಿಗಳು ರೈತ ಚಳವಳಿಗೆ ಕೆಟ್ಟ ಹೆಸರು ತರುವ ಪ್ರಯತ್ನವನ್ನು ಟ್ರ್ಯಾಕ್ಟರ್ ರ್‍ಯಾಲಿಯಂದು ಮಾಡಿದ್ದರು.

“ಪ್ರತಿಭಟನಾಕಾರರ ಗುಂಪುಗಳು ಪೂರ್ವ ನಿಯೋಜಿತ ಮಾರ್ಗವನ್ನು ಅನುಸರಿಸಲಿಲ್ಲ. ದೆಹಲಿ ಪ್ರವೇಶಿಸಲು ಬ್ಯಾರಿಕೇಡ್‌ಗಳನ್ನು ದ್ವಂಸ ಮಾಡಿದರು. ಕೆಂಪು ಕೋಟೆಯನ್ನು ಪ್ರವೇಶಿಸಿ, ಅನಪೇಕ್ಷಿತ ಬಾವುಟವನ್ನು ಹಾರಿಸಿದರು” ಎಂದು ಪೊಲೀಸರು ಆರೋಪಿಸಿದ್ದರು.

ಹೊಸ ಬೆಳವಣಿಗೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಟ್ವೀಟ್‌ ಮಾಡಿದ್ದು, “ದೆಹಲಿ ಪೊಲೀಸರಿಂದ ಬಂಧಿಸಲ್ಪಟ್ಟವರಿಗೆ ತಮ್ಮ ಸರ್ಕಾರ ಪರಿಹಾರವನ್ನು ನೀಡಲಿದೆ” ಎಂದು ಘೋಷಿಸಿದ್ದಾರೆ.

“ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನನ್ನ ಸರ್ಕಾರದ ನಿಲುವನ್ನು ಪುನರುಚ್ಚರಿಸುತ್ತೇನೆ. ಜನವರಿ 26, 2021ರಂದು ರಾಷ್ಟ್ರದ ರಾಜಧಾನಿಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಸಿದಕ್ಕಾಗಿ ದೆಹಲಿ ಪೊಲೀಸರು ಬಂಧಿಸಿದ 83 ಜನರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲು ನಿರ್ಧರಿಸಿದ್ದೇವೆ” ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೈತರ ಮೃತದೇಹ ಪತ್ತೆ

ಅಷ್ಟೇ ಅಲ್ಲದೆ ಒಕ್ಕೂಟ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ವಿಧಾನಸಭೆ ಗುರುವಾರ ನಿರ್ಣಯ ಅಂಗೀಕರಿಸಿದೆ. ಕೇಂದ್ರ ಸರ್ಕಾರ ಕಾನೂನುಬಾಹಿರವಾಗಿ ರಾಜ್ಯ ಸರ್ಕಾರದ ವಿಷಯಗಳಲ್ಲಿ ಪ್ರವೇಶಿಸಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ವಿಧಾನಸಭೆ ನಿರ್ಣಯ ಅಂಗೀಕರಿಸಿತ್ತು. ಈಗ ಎರಡನೇ ಬಾರಿ  ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಎರಡು ದಿನಗಳ ವಿಧಾನಸಭೆ ಅಧಿವೇಶನದ ಮುಕ್ತಾಯದ ದಿನದಂದು ರಾಜ್ಯ ಕೃಷಿ ಸಚಿವ ರಣದೀಪ್ ಸಿಂಗ್ ನಾಭಾ ಅವರು ನಿರ್ಣಯ ಮಂಡಿಸಿದರು. ಸದನದಲ್ಲಿ ಚರ್ಚೆಯ ನಂತರ ಇಬ್ಬರು ಬಿಜೆಪಿ ಶಾಸಕರ ಅನುಪಸ್ಥಿತಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

“ನವೆಂಬರ್ 11, 2021ರಂದು ನಡೆದ ಈ ವಿಧಾನ ಸಭೆಯ ವಿಶೇಷ ಅಧಿವೇಶನದಲ್ಲಿ ಪಂಜಾಬ್ ಕೃಷಿ ಸಚಿವರು ಮಂಡಿಸಿದ ನಿರ್ಣಯ ಸದನದಲ್ಲಿ ಅಂಗೀಕರಿಸಲ್ಪಟ್ಟಿದೆ. ಕೇಂದ್ರ ಸರ್ಕಾರವು ಯಾವುದೇ ಅರ್ಹತೆ ಇಲ್ಲದೆ ರಾಜ್ಯಗಳ ಪಟ್ಟಿಯಲ್ಲಿನ ವಿಷಯದಲ್ಲಿ ಕಾನೂನುಬಾಹಿರವಾಗಿ ಜಾರಿಗೆ ತಂದ ಮೂರು ವಿವಾದಾತ್ಮಕ ಕಾನೂನುಗಳನ್ನು ಮತ್ತೊಮ್ಮೆ ತಿರಸ್ಕರಿಸುತ್ತದೆ” ಎಂದು ಹೇಳಿದೆ.

ಮೂರು ಕೃಷಿ ಕಾನೂನುಗಳನ್ನು “ಫೆಡರಲ್ ರಚನೆಯ ಮೇಲಿನ ದಾಳಿ” ಎಂದು ವಿವರಿಸಿರುವ ರಾಜ್ಯ ಕೃಷಿ ಸಚಿವ ರಣದೀಪ್ ಸಿಂಗ್ ನಾಭಾ, ಪಂಜಾಬ್ ಸರ್ಕಾರವು ಇವುಗಳನ್ನು ಜಾರಿಗೆ ತರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಿರ್ಣಯದ ಪ್ರಕಾರ, ವಿಧಾನ ಸಭೆಯು “ರೈತ ಸ್ನೇಹಿ ನಿಯಂತ್ರಿತ ಎಪಿಎಂಸಿ ಮಂಡಿಗಳನ್ನು ವ್ಯವಸ್ಥಿತವಾಗಿ ಕಿತ್ತುಹಾಕುವ ಮತ್ತು ಕಾರ್ಪೋರೇಟ್ ಸ್ನೇಹಿ ಮಂಡಿಗಳನ್ನು ಸ್ಥಾಪಿಸುವ” ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ಬಲವಾಗಿ ಖಂಡಿಸುತ್ತದೆ” ಎಂದಿದೆ.
ಇದನ್ನೂ ಓದಿರಿ: ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...