Homeಚಳವಳಿಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್‌...

ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್‌ ಸರ್ಕಾರ

- Advertisement -
- Advertisement -

ಕಳೆದ ಗಣರಾಜ್ಯೋತ್ಸವದಂದು ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ಹಮ್ಮಿಕೊಂಡಿದ್ದರು. ಕೆಲವು ಕಿಡಿಗೇಡಿಗಳಿಂದಾಗಿ ಹಿಂಸಾಚಾರ ಸಂಭವಿಸಿದ ನಂತರ ದೆಹಲಿ ಪೊಲೀಸರು 83 ಮಂದಿಯನ್ನು ಬಂಧಿಸಿದ್ದರು. ಅಂದು ಬಂಧಿತರಾಗಿದ್ದವರಿಗೆ ಪಂಜಾಬ್ ಸರ್ಕಾರ ಆರ್ಥಿಕ ಸಹಾಯವನ್ನು ಘೋಷಿಸಿದೆ. ಈ ಮೂಲಕ ಕೇಂದ್ರದ ವಿರುದ್ಧ ಪಂಜಾಬ್‌ನಲ್ಲಿರುವ ಕಾಂಗ್ರೆಸ್ ಸರ್ಕಾರ ಹೊಸ ಹೋರಾಟಕ್ಕೆ ಮುನ್ನುಡಿ ಬರೆದಿದೆ.

ಖಾಸಗಿಯವರ ಹಿಡಿತಕ್ಕೆ ಕೃಷಿ ವಲಯವನ್ನು ದೂಡುವ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿ ಒಂದು ವರ್ಷದಿಂದ ದೆಹಲಿಯಲ್ಲಿ ಪಂಜಾಬ್‌ ಹಾಗೂ ಹರಿಯಾಣ ರೈತರು ಹೋರಾಟ ನಡೆಸುತ್ತಿದ್ದಾರೆ. ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಪಟ್ಟು ಹಿಡಿದಿದ್ದಾರೆ.

ದೆಹಲಿ ಪೊಲೀಸರು ಮತ್ತು ರೈತ ಮುಖಂಡರ ನಡುವಿನ ಮಾತುಕತೆಯ ನಂತರ ಕಳೆದ ಜನವರಿ 26ರಂದು ರೈತರಿಂದ ಟ್ರ್ಯಾಕ್ಟರ್ ರ್‍ಯಾಲಿ ನಡೆಯಲು ಅನುಮತಿ ದೊರೆಯಿತು. ಪ್ರಭುತ್ವದೊಂದಿಗೆ ಗುರುತಿಸಿಕೊಂಡಿದ್ದ ಕೆಲವು ಕಿಡಿಗೇಡಿಗಳು ರೈತ ಚಳವಳಿಗೆ ಕೆಟ್ಟ ಹೆಸರು ತರುವ ಪ್ರಯತ್ನವನ್ನು ಟ್ರ್ಯಾಕ್ಟರ್ ರ್‍ಯಾಲಿಯಂದು ಮಾಡಿದ್ದರು.

“ಪ್ರತಿಭಟನಾಕಾರರ ಗುಂಪುಗಳು ಪೂರ್ವ ನಿಯೋಜಿತ ಮಾರ್ಗವನ್ನು ಅನುಸರಿಸಲಿಲ್ಲ. ದೆಹಲಿ ಪ್ರವೇಶಿಸಲು ಬ್ಯಾರಿಕೇಡ್‌ಗಳನ್ನು ದ್ವಂಸ ಮಾಡಿದರು. ಕೆಂಪು ಕೋಟೆಯನ್ನು ಪ್ರವೇಶಿಸಿ, ಅನಪೇಕ್ಷಿತ ಬಾವುಟವನ್ನು ಹಾರಿಸಿದರು” ಎಂದು ಪೊಲೀಸರು ಆರೋಪಿಸಿದ್ದರು.

ಹೊಸ ಬೆಳವಣಿಗೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಟ್ವೀಟ್‌ ಮಾಡಿದ್ದು, “ದೆಹಲಿ ಪೊಲೀಸರಿಂದ ಬಂಧಿಸಲ್ಪಟ್ಟವರಿಗೆ ತಮ್ಮ ಸರ್ಕಾರ ಪರಿಹಾರವನ್ನು ನೀಡಲಿದೆ” ಎಂದು ಘೋಷಿಸಿದ್ದಾರೆ.

“ಮೂರು ಕರಾಳ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನನ್ನ ಸರ್ಕಾರದ ನಿಲುವನ್ನು ಪುನರುಚ್ಚರಿಸುತ್ತೇನೆ. ಜನವರಿ 26, 2021ರಂದು ರಾಷ್ಟ್ರದ ರಾಜಧಾನಿಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಸಿದಕ್ಕಾಗಿ ದೆಹಲಿ ಪೊಲೀಸರು ಬಂಧಿಸಿದ 83 ಜನರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲು ನಿರ್ಧರಿಸಿದ್ದೇವೆ” ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೈತರ ಮೃತದೇಹ ಪತ್ತೆ

ಅಷ್ಟೇ ಅಲ್ಲದೆ ಒಕ್ಕೂಟ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ವಿಧಾನಸಭೆ ಗುರುವಾರ ನಿರ್ಣಯ ಅಂಗೀಕರಿಸಿದೆ. ಕೇಂದ್ರ ಸರ್ಕಾರ ಕಾನೂನುಬಾಹಿರವಾಗಿ ರಾಜ್ಯ ಸರ್ಕಾರದ ವಿಷಯಗಳಲ್ಲಿ ಪ್ರವೇಶಿಸಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ವಿಧಾನಸಭೆ ನಿರ್ಣಯ ಅಂಗೀಕರಿಸಿತ್ತು. ಈಗ ಎರಡನೇ ಬಾರಿ  ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಎರಡು ದಿನಗಳ ವಿಧಾನಸಭೆ ಅಧಿವೇಶನದ ಮುಕ್ತಾಯದ ದಿನದಂದು ರಾಜ್ಯ ಕೃಷಿ ಸಚಿವ ರಣದೀಪ್ ಸಿಂಗ್ ನಾಭಾ ಅವರು ನಿರ್ಣಯ ಮಂಡಿಸಿದರು. ಸದನದಲ್ಲಿ ಚರ್ಚೆಯ ನಂತರ ಇಬ್ಬರು ಬಿಜೆಪಿ ಶಾಸಕರ ಅನುಪಸ್ಥಿತಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

“ನವೆಂಬರ್ 11, 2021ರಂದು ನಡೆದ ಈ ವಿಧಾನ ಸಭೆಯ ವಿಶೇಷ ಅಧಿವೇಶನದಲ್ಲಿ ಪಂಜಾಬ್ ಕೃಷಿ ಸಚಿವರು ಮಂಡಿಸಿದ ನಿರ್ಣಯ ಸದನದಲ್ಲಿ ಅಂಗೀಕರಿಸಲ್ಪಟ್ಟಿದೆ. ಕೇಂದ್ರ ಸರ್ಕಾರವು ಯಾವುದೇ ಅರ್ಹತೆ ಇಲ್ಲದೆ ರಾಜ್ಯಗಳ ಪಟ್ಟಿಯಲ್ಲಿನ ವಿಷಯದಲ್ಲಿ ಕಾನೂನುಬಾಹಿರವಾಗಿ ಜಾರಿಗೆ ತಂದ ಮೂರು ವಿವಾದಾತ್ಮಕ ಕಾನೂನುಗಳನ್ನು ಮತ್ತೊಮ್ಮೆ ತಿರಸ್ಕರಿಸುತ್ತದೆ” ಎಂದು ಹೇಳಿದೆ.

ಮೂರು ಕೃಷಿ ಕಾನೂನುಗಳನ್ನು “ಫೆಡರಲ್ ರಚನೆಯ ಮೇಲಿನ ದಾಳಿ” ಎಂದು ವಿವರಿಸಿರುವ ರಾಜ್ಯ ಕೃಷಿ ಸಚಿವ ರಣದೀಪ್ ಸಿಂಗ್ ನಾಭಾ, ಪಂಜಾಬ್ ಸರ್ಕಾರವು ಇವುಗಳನ್ನು ಜಾರಿಗೆ ತರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಿರ್ಣಯದ ಪ್ರಕಾರ, ವಿಧಾನ ಸಭೆಯು “ರೈತ ಸ್ನೇಹಿ ನಿಯಂತ್ರಿತ ಎಪಿಎಂಸಿ ಮಂಡಿಗಳನ್ನು ವ್ಯವಸ್ಥಿತವಾಗಿ ಕಿತ್ತುಹಾಕುವ ಮತ್ತು ಕಾರ್ಪೋರೇಟ್ ಸ್ನೇಹಿ ಮಂಡಿಗಳನ್ನು ಸ್ಥಾಪಿಸುವ” ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ಬಲವಾಗಿ ಖಂಡಿಸುತ್ತದೆ” ಎಂದಿದೆ.
ಇದನ್ನೂ ಓದಿರಿ: ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...