Homeಕರ್ನಾಟಕಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

ಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

’ಏಕ್ ಲವ್ ಯಾ’ ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್ ಭಾವಚಿತ್ರದ ಮುಂದೆ ಶಾಂಪೇನ್ ಬಾಟಲ್ ಓಪನ್ ಮಾಡಿ ಸಂಭ್ರಮಿಸಲಾಗಿತ್ತು.

- Advertisement -
- Advertisement -

ಏಕ್‌ ಲವ್ ಯಾ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದ ವೇಳೆ ಇತ್ತಿಚೆಗೆ ನಮ್ಮನ್ನಗಲಿದ ನಟ ಪುನೀತ್ ರಾಜ್‌ಕುಮಾರ್‌ ಭಾವಚಿತ್ರದ ಎದುರು ಶಾಂಪೇನ್ ಓಪನ್ ಮಾಡಿ ಸಂಭ್ರಮಿಸಿ ಅವರನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಚಿತ್ರತಂಡ ಕ್ಷಮೆ ಕೇಳಬೇಕು ಎಂದು ಹಲವು ಮಂದಿ ಒತ್ತಾಯಿಸಿದ್ದರು.

ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಬೆಂಗಳೂರಿನ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಏಕ್ ಲವ್ ಯಾ ಚಿತ್ರದ “ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್ ಇಟ್ಟೆ” ಹಾಡು ಬಿಡುಗಡೆಯಾಗಿದೆ. ಈ ವೇಳೆ ಚಿತ್ರತಂಡ ಅಪ್ಪು ಅವರನ್ನು ಅವಮಾನಿಸಿದ್ದಾರೆ ಎಂದು ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಹಲವರು ಬೇಸರ ವ್ಯಕ್ತಪಡಿಸಿದ್ದರು.

ಕಾರ್ಯಕ್ರಮದಲ್ಲಿ ವೇದಿಎ ಮೇಳೆ ಮೊದಲಿಗೆ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರವನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗಿತ್ತು. ಬಳಿಕ ಅದೇ ಭಾವಚಿತ್ರದ ಮುಂದೆ ನಿರೂಪಕ ಅಕುಲ್ ಬಾಲಾಜಿ, ನಟಿಯರಾದ ರಚಿತಾ ರಾಮ್, ರಕ್ಷಿತಾ ಪ್ರೇಮ್, ನಿಶ್ವಿಕಾ ನಾಯ್ಡು, ಗಾಯಕಿ ಮಂಗ್ಲಿ ಶಾಂಪೇನ್ ಬಾಟಲ್ ಹಿಡಿದು ಸಮಭ್ರಮಿಸಿದ್ದರು. ಈ ವೇಳೆ ಹಿಂದಿನ ಸ್ಕ್ರೀನ್‌ನಲ್ಲಿ ನಟ ಪುನೀತ್ ಪೋಟೋ ಕೂಡ ಕಾಣಿಸಿಕೊಂಡಿತ್ತು. ಇದೆಲ್ಲಾ ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಕರ್ನಾಟಕ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ, ನಿರ್ಮಾಪಕ ಸಾ.ರಾ.ಗೋವಿಂದು ಕೂಡ ’ಏಕ್ ಲವ್ ಯಾ’ ಚಿತ್ರರಂಗದ  ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ’ನಮ್ಮ ಚಿತ್ರರಂಗದವರೇ ಇಂಥ ಕೆಲಸ ಮಾಡಿದರೆ ನಾವು ಯಾರ ಮೇಲೆ ಆಪಾದನೆ ಮಾಡೋದು? ದಯವಿಟ್ಟು ಇಂಥದ್ದನ್ನೆಲ್ಲ ಮಾಡಬೇಡಿ. ಪುನೀತ್​ ನಮ್ಮಿಂದ ದೂರವಾಗಿರಬಹುದು. ಅವರಿಗೆ ಅವಮಾನ ಆಗುವಂತಹ ಕೆಲಸವನ್ನು ಮಾಡಬೇಡಿ. ಪುನೀತ್​ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿರುವು ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದರು.

ವಿವಾದ ಹೆಚ್ಚಾದ ಬಳಿಕ ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ.

 

“ಅಪ್ಪು ಅವರ ಅಗಲಿಕೆಯ ನೋವು ಇನ್ನೂ ನಮ್ಮ ಮನಸ್ಸಿನಲ್ಲಿದೆ. ಆ ಕಾರಣಕ್ಕೆ ನ.4 ಕ್ಕೆ ಬಿಡುಗಡೆಯಾಗಬೇಕಿದ್ದ ಏಕ್ ಲವ್ ಯಾ ಸಿನಿಮಾದ ಹಾಡನ್ನು ನ.12 ಕ್ಕೆ ಬಿಡುಗಡೆ ಮಾಡಲಾಯಿತು. ಸಮಾರಂಭದ ಉದ್ಘಾಟನೆಯೇ ಅಪ್ಪು ಅವರನ್ನು ನೆನೆಯುತ್ತಾ, ಅವರ ವ್ಯಕ್ತಿತ್ವ, ಅವರ ಜೊತೆಗೆ ಕಳೆದ ಕ್ಷಣಗಳ ನೆನೆಯುತ್ತಾ ಶುರುವಾಯಿತು. ಈ ಹಾಡು ಶುರುವಾಗುವುದೇ ಅಪ್ಪು ಅಮರ ಎಂದು. ಅಪ್ಪು ಅವರ ಫೋಟೋ ಮುಂದೆ ಶಾಂಪೇನ್ ಓಪನ್ ಮಾಡಿದ ಉದ್ದೇಶ ಕೇವಲ ಹಾಡು ಬಿಡುಗಡೆಯ ಅಂಗವಾಗಿ. ಇದರಿಂದ ಅಪ್ಪು ಅವರ ಅಭಿಮಾನಿಗಳಿಗೆ ನೋವಾಗಿದ್ದಲ್ಲಿ ನನ್ನ ಹಾಗೂ ನನ್ನ ಇಡೀ ’ಏಕ್ ಲವ್ ಯಾ’ ಚಿತ್ರತಂಡದಿಂದ ಕ್ಷಮೆಯಾಚಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಟಿ ರಚಿತಾ ರಾಮ್ ಕೂಡ ಕ್ಷಮೆ ಕೇಳಿದ್ದಾರೆ.

“ನಿನ್ನೆಯ ಏಕ್​ ಲವ್​ ಯಾ ಸಿನಿಮಾದ ಸಾಂಗ್​ ಲಾಂಚ್​ ಕಾರ್ಯಕ್ರಮದಲ್ಲಿ ಶಾಂಪೇನ್​ ಬಾಟಲ್​ ಓಪನ್​ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನ ಆಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಆದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ” ಎಂದು ರಚಿತಾ ರಾಮ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಚಿತ್ರದ ನಿರ್ಮಾಪಕಿ ರಕ್ಷಿತಾ ಪ್ರೇಮ್ ಕೂಡ ’ಅಪ್ಪು ಅಗಲಿಕೆಯ ನೋವಿನಿಂದ ನಾನಿನ್ನೂ ಹೊರ ಬರಲು ಸಾಧ್ಯವಾಗುತ್ತಿಲ್ಲ. ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಶಾಂಪೇನ್ ಬಾಟಲಿ ಓಪನ್ ಮಾಡಿದ್ದು ಅಪ್ಪು ಅಭಿಮಾನಿಗಳಲ್ಲಿ ಅಸಮಾಧಾನ ಉಂಟಾಗಿದ್ದರೆ ನನ್ನ ಮತ್ತು ಚಿತ್ರತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇವೆ. ಅಪ್ಪು ಎಂದಿಗೂ ನಮ್ಮ ಮನಸ್ಸಿನಲ್ಲಿ ಇದ್ದಾರೆ’ ಎಂದು ಕ್ಷಮೆ ಕೇಳಿದ್ದಾರೆ.


ಇದ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...