Homeಮುಖಪುಟಮಧ್ಯಪ್ರದೇಶ: ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ಖರ್ಚು - ವರದಿ

ಮಧ್ಯಪ್ರದೇಶ: ಮೋದಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ಖರ್ಚು – ವರದಿ

ಬುಡಕಟ್ಟು ಜನರ ಮೇಲಿನ ಅತಿ ಹೆಚ್ಚಿನ ದೌರ್ಜನ್ಯಗಳು ಮಧ್ಯಪ್ರದೇಶದಲ್ಲಿ ವರದಿಯಾಗಿವೆ. ಇಂತಹ ಸಮಯದಲ್ಲಿ ಆ ಜನರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಒಂದು ವಾರಗಳ ಕಾರ್ಯಕ್ರಮ ಆಯೋಜಿಸಿದೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ನವೆಂಬರ್ 15ರಂದು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ಮರಣಾರ್ಥವಾಗಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು 12 ಕೋಟಿ ರೂ. ಭರಿಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭೊಪಾಲ್‌ನಲ್ಲಿ ಜಂಜಾತಿಯ ಗೌರವ್ ದಿವಸ್‌ ಎಂಬ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಭೋಪಾಲ್‌ಗೆ ಆಗಮಿಸಲಿದ್ದಾರೆ. ಅವರು ಭೋಪಾಲ್‌ನಲ್ಲಿ ನಾಲ್ಕು ಗಂಟೆಗಳ ಕಾಲ ಇರಲಿದ್ದು, ವೇದಿಕೆಯಲ್ಲಿ 1 ಗಂಟೆ 15 ನಿಮಿಷಗಳ ಕಾಲ ಇರುತ್ತಾರೆ. ಮೋದಿ ಭಾಗವಹಿಸುವ ಈ ಕಾರ್ಯಕ್ರಮಕ್ಕಾಗಿ ಮಧ್ಯಪ್ರದೇಶ ಸರ್ಕಾರವು 23 ಕೋಟಿ ರೂ. ಖರ್ಚು ಮಾಡುತ್ತಿದೆ.

ಜಾಂಬೂರಿ ಮೈದಾನದಲ್ಲಿ ನಡೆಯುವ ಬಿರ್ಸಾ ಮುಂಡಾ ಅವರ ಸ್ಮರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಮತ್ತು ದೇಶದ ಮೊದಲ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾದ ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಜಂಜಾತಿಯ ಗೌರವ್ ದಿವಸ್‌ನ ಅಂಗವಾಗಿ, ಬಿರ್ಸಾ ಮುಂಡಾ ಮತ್ತು ಇತರ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಗಳನ್ನು ಸ್ಮರಿಸಲು ನವೆಂಬರ್ 15 ರಿಂದ 22 ರವರೆಗೆ ರಾ‍ಷ್ಟ್ರಮಟ್ಟದಲ್ಲಿ ಒಂದು ವಾರದ ಕಾರ್ಯಕ್ರಮಗಳನ್ನು ಆಯೋಜಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.

ಜಾಂಬೂರಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಎರಡು ಲಕ್ಷ ಬುಡಕಟ್ಟು ಜನರನ್ನು ಭಾಗಿಯಾಗುವ ನೀರಿಕ್ಷೆ ಇದೆ. ಮತ್ತು ಇಡೀ ಮೈದಾನವನ್ನು ಬುಡಕಟ್ಟು ಕಲೆ ಮತ್ತು ಬುಡಕಟ್ಟು ದಂತಕಥೆಗಳ ಚಿತ್ರಗಳಿಂದ ಅಲಂಕರಿಸಲಾಗಿದೆ. ಒಂದು ವಾರದಿಂದ 300ಕ್ಕೂ ಹೆಚ್ಚು ಕಾರ್ಮಿಕರು ಈ ಕೆಲಸದಲ್ಲಿ ತೊಡಗಿದ್ದಾರೆ. ಗಿರಿಜನರಿಗಾಗಿ ದೊಡ್ಡ ದೊಡ್ಡ ಪಂಗಡಗಳನ್ನೂ ನಿರ್ಮಿಸಲಾಗಿದೆ.

52 ಜಿಲ್ಲೆಗಳಿಂದ ಬರುವ ಜನರಿಗೆ ಸಾರಿಗೆ, ಆಹಾರ ಮತ್ತು ವಸತಿಗಾಗಿ 12 ಕೋಟಿ ರೂ. ಭರಿಸಲಾಗುತ್ತಿದೆ. ಐದು ಗುಮ್ಮಟಗಳು, ಟೆಂಟ್‌ಗಳು, ಅಲಂಕಾರ ಮತ್ತು ಪ್ರಚಾರಕ್ಕಾಗಿ 9 ಕೋಟಿ ರೂ.ಗೂ ಹೆಚ್ಚು ವೆಚ್ಚವಾಗಲಿದ್ದು, ಇತರೆ ಖರ್ಚುಗಳು 2 ಕೋಟಿಯೆಂದು ಅಂದಾಜಿಸಲಾಗಿದೆ.

ಚುನಾವಣಾ ಲೆಕ್ಕಾಚಾರ?

ಮಧ್ಯಪ್ರದೇಶವು ಭಾರತದಲ್ಲಿ ಅತಿ ಹೆಚ್ಚು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿರುವ ರಾಜ್ಯವಾಗಿದೆ. ರಾಜ್ಯದ ವಿಧಾನಸಭೆಯಲ್ಲಿ ಪರಿಶಿಷ್ಟ ಪಂಗಡಕ್ಕೆ 47 ಸ್ಥಾನಗಳನ್ನು ಮೀಸಲಿಡಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಬುಡಕಟ್ಟು ಜನರು ಹೆಚ್ಚಾಗಿ ಬಿಜೆಪಿಗೆ ಮತ ಹಾಕುತ್ತಾ ಬಂದಿರುವುದನ್ನು ನಾವು ಕಾಣಬಹುದು. 2008ರಲ್ಲಿ ಬಿಜೆಪಿ 29 ಸ್ಥಾನಗಳನ್ನು ಗೆದ್ದರೆ, 2013 ರಲ್ಲಿ ಈ ಸಂಖ್ಯೆ 31ಕ್ಕೆ ಏರಿತು.

ಆದರೆ 2018 ರಲ್ಲಿ ಬುಡಕಟ್ಟು ಜನರು ಬಿಜೆಪಿಯಿಂದ ಹಿಂದೆ ಸರಿದಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ ಕೇವಲ 16 ಸ್ಥಾನಗಳನ್ನು ಮಾತ್ರ ಗೆದ್ದಿತು. ಅಲ್ಲದೆ ರಾಜ್ಯದಲ್ಲಿ ಅಧಿಕಾರ ಸಹ ಕಳೆದುಕೊಂಡಿತ್ತು. ಸರಳ ಬಹುಮತ ಪಡೆದ ಕಾಂಗ್ರೆಸ್ ಅಧಿಕ್ಕಾರಕ್ಕೇರಿತ್ತು. ನಂತರ ನಡೆದ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್‌ನ 20 ಕ್ಕೂ ಹೆಚ್ಚು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದರು. ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ರಾಜೀನಾಮೆ ನೀಡಿದವರೆಲ್ಲರೂ ಬಿಜೆಪಿಯಿಂದ ಗೆದ್ದು ಶಾಸಕರಾಗಿ ಆಯ್ಕೆಯಾಗಿ ಸರ್ಕಾರದ ಮಂತ್ರಿಮಂಡಲ ಸೇರಿದ್ದಾರೆ.

2023ರಲ್ಲಿ ಮತ್ತೆ ಅಸೆಂಬ್ಲಿ ಚುನಾವಣೆ ಬರುತ್ತಿದೆ. ಹಾಗಾಗಿ ಬುಡಕಟ್ಟು ಜನರನ್ನು ಒಲಿಸಿಕೊಳ್ಳುವುದು ಬಿಜೆಪಿಗೆ ಅನಿವಾರ್ಯವಾಗಿದೆ. ಹಾಗಾಗಿ ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಹೆಸರಿನಲ್ಲಿ ಭರ್ಜರಿ ಕಾರ್ಯಕ್ರಮಕ್ಕೆ ಮುಂದಾಗಿದೆ. ಒಂದು ವಾರಗಳ ಕಾಲ ಆಚರಿಸಲು ನಿರ್ಧರಿಸಿದೆ. ಇದು ಬಿಜೆಪಿಗೆ ಮತಗಳನ್ನಾಗಿ ಪರಿವರ್ತನೆ ಮಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಬುಡಕಟ್ಟು ಜನರ ಮೇಲಿನ ದೌರ್ಜನ್ಯಗಳಲ್ಲಿ ಹೆಚ್ಚಳ

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (ಎನ್‌ಸಿಆರ್‌ಬಿ) ಮಾಹಿತಿಯ ಪ್ರಕಾರ, ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯಪ್ರದೇಶವು ದೇಶದಲ್ಲಿಯೇ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. 2020ರಲ್ಲಿ ರಾಜ್ಯದಲ್ಲಿ 2,401 ಪ್ರಕರಣಗಳು ವರದಿಯಾಗಿವೆ. 2019 ರಲ್ಲಿ ಈ ಸಂಖ್ಯೆ 1,922 ಇತ್ತು. 2018 ರಲ್ಲಿ ಇದು 1,868 ಆಗಿತ್ತು. ಎರಡು ವರ್ಷಗಳ ಅವಧಿಯಲ್ಲಿ, ಬುಡಕಟ್ಟು ಜನರ ಮೇಲಿನ ದೌರ್ಜನ್ಯಗಳಲ್ಲಿ ರಾಜ್ಯವು ಶೇ.28 ರಷ್ಟು ಏರಿಕೆಯನ್ನು ಕಂಡಿದೆ.

ರೈಲು ನಿಲ್ದಾಣ ಹೆಸರು ಬದಲಾವಣೆ?

ಹಬೀಬ್‌ಗಂಜ್ ರೈಲು ನಿಲ್ದಾಣವನ್ನು ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ಪಿಪಿಪಿ ಅಡಿಯಲ್ಲಿ ನಿರ್ಮಿಸಲಾಗಿದೆ. ಈ ನಿಲ್ದಾಣವು ಜರ್ಮನಿಯ ಹೈಡೆಲ್ಬರ್ಗ್ ರೈಲು ನಿಲ್ದಾಣದಂತೆಯೇ ಇದೆ ಎಂದು ಹೇಳಲಾಗಿದೆ. ಈ ರೈಲು ನಿಲ್ದಾಣವು ವಿಶ್ವ ಪರಂಪರೆಯ ತಾಣಗಳಾದ ಸಾಂಚಿ ಸ್ತೂಪ, ಭೋಜ್‌ಪುರ ದೇವಸ್ಥಾನ, ಭೀಮೇಟ್ಕಾ, ಬಿರ್ಲಾ ಮಂಡಿ, ತವಾ ಅಣೆಕಟ್ಟು ಮತ್ತು ಬುಡಕಟ್ಟು ವಸ್ತುಸಂಗ್ರಹಾಲಯಗಳ ನೋಟವನ್ನು ಸಹ ಒದಗಿಸುತ್ತದೆ.

ಈ ರೈಲು ನಿಲ್ದಾಣಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಮರುನಾಮಕರಣ ಮಾಡಬೇಕು ಎಂದು ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಬಿಜೆಪಿಯ ಹಲವು ನಾಯಕರು ಒತ್ತಾಯಿಸಿದ್ದಾರೆ. ಆದರೂ, ರಾಜ್ಯ ಸರ್ಕಾರವು ಗೋಂಡಾದ ರಾಣಿ ಕಮಲಾಪತಿ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...