Homeಮುಖಪುಟ25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕು ಎಂದು 25 ವರ್ಷಗಳಿಂದಲೂ ಹೋರಾಟ ನಡೆಸುತ್ತಿದ್ದಾರೆ ಜಮೀಲಾ ಬೇಗಂ

- Advertisement -
- Advertisement -

ಶ್ರೀನಗರ: 25 ವರ್ಷಗಳ ಹಿಂದೆ ಘಟಿಸಿದ ಲಾಕಪ್‌ ಡೆತ್‌ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರ್ಟ್ ಆದೇಶ ನೀಡಿದೆ. ಖಾನ್ಯಾರ್‌ನ ಮಿಸ್ಕಿನ್ ಬಾಗ್‌ನ ಜಮೀಲಾ ಬೇಗಂ ಅವರು ತನ್ನ ಪತಿಯನ್ನು ಕೊಂದವರಿಗೆ ಶಿಕ್ಷೆಯಾಗಲೇಬೇಕೆಂದು ಕಳೆದ 25 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ.

“ನನ್ನ ಪತಿಯ ದೇಹವನ್ನು ನಮಗೆ ಅಂತ್ಯಸಂಸ್ಕಾರಕ್ಕೆ ಹಸ್ತಾಂತರಿಸಿದ ಬಳಿಕ, ನನ್ನ ಚಿಕ್ಕ ಮಕ್ಕಳು ತಂದೆಯ ಶವವನ್ನು ನೋಡಿದರು. ಘುಸುಲ್ (ಅಂತ್ಯ ಸಂಸ್ಕಾರದ ಮೊದಲು ಶವವನ್ನು ತೊಳೆಯುವ ಇಸ್ಲಾಮಿಕ್ ಆಚರಣೆ) ನಡೆಸಿದಾಗ, ನನ್ನ ಪತಿಗೆ ನ್ಯಾಯ ಸಿಗುವವರೆಗೂ ನಾನು ವಿಶ್ರಾಂತಿ ಪಡೆಯುವುದಿಲ್ಲ ಎಂದು ಅವರ ದೇಹದ ಮುಂದೆ ಪ್ರತಿಜ್ಞೆ ಮಾಡಿದ್ದೇನೆ” ಎನ್ನುತ್ತಾರೆ ಜಮೀಲಾ.

1996ರ ಮೇ 31ರಿಂದ ಜೂನ್ 1ರ ಅವಧಿಯಲ್ಲಿ ಜಮೀಲಾ ಅವರ ಪತಿ ಮುಹಮ್ಮದ್ ರಂಜಾನ್ ಅವರನ್ನು ಪೊಲೀಸರು ಕೊಂದರು ಎಂದು ಆರೋಪಿಸಲಾಗಿದೆ. ರಂಜಾನ್‌‌ ಅವರನ್ನು ಉಗ್ರಗಾಮಿ ಎಂದು ಆರೋಪಿಸಲಾಗಿದೆ. ಮಿಸ್ಕಿನ್ ಬಾಗ್‌ನ ಅಡಗುತಾಣದಲ್ಲಿ ಅಡಗಿದ್ದ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ರಂಜಾನ್ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು.

ತಮ್ಮ ಪ್ರೀತಿಪಾತ್ರರು ಕೊಲ್ಲಲ್ಪಟ್ಟಾಗ ಹೆಚ್ಚಿನ ಕಾಶ್ಮೀರಿಗಳು ಪ್ರತೀಕಾರದ ಭಯದಿಂದ ಮೌನವಾಗಿರುತ್ತಾರೆ. ಆದರೆ ಜಮೀಲಾ ಮತ್ತೆ ಹೋರಾಡಲು ನಿರ್ಧರಿಸಿದರು ಎಂದು ದಿ ವೈರ್‌ ವರದಿ ಮಾಡಿದೆ.

“ನನ್ನ ಪತಿಗೆ ನ್ಯಾಯ ದೊರಕಿಸಿಕೊಡಲು ಎಲ್ಲ ಬಾಗಿಲುಗಳನ್ನು ತಟ್ಟಿದೆ. ಫಾರೂಕ್ ಅಬ್ದುಲ್ಲಾ, ಮುಫ್ತಿ ಮುಹಮ್ಮದ್ ಸಯೀದ್ ಮತ್ತು ಅಲಿ ಮುಹಮ್ಮದ್ ಸಾಗರ್ ಅವರಂತಹ ರಾಜಕಾರಣಿಗಳನ್ನು ನಾನು ಭೇಟಿ ಮಾಡಿದ್ದೇನೆ. ಪ್ರಕರಣದ ತನಿಖೆಗೆ, ನನ್ನ ಪತಿ ಹತ್ಯೆಯಲ್ಲಿ ಭಾಗಿಯಾದವರಿಗೆ ಶಿಕ್ಷೆ ವಿಧಿಸಬೇಕೆಂದು ಹಲವಾರು ಉನ್ನತ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದೇನೆ. ಆದರೆ ಅವರು ಯಾವುದೇ ಕ್ರಮ ಜರುಗಿಸಲಿಲ್ಲ” ಎನ್ನುತ್ತಾರೆ ಜಮೀಲಾ ಬೇಗಂ.

ಜಮೀಲಾ ಬೇಗಂ (PC: The Wire)

ಇದನ್ನೂ ಓದಿರಿ: ಯುಪಿ ವಿಧಾನಸಭೆ ಚುನಾವಣೆ ಗೆಲುವು 2024ರ ಲೋಕಸಭೆಗೆ ದಾರಿ: ಅಮಿತ್‌ ಶಾ

2006ರಲ್ಲಿ ಪ್ರಕರಣ ರೀ ಓಪನ್‌ ಆಯಿತು. ಆದರೆ ಪೊಲೀಸರು ರಚಿಸಿದ್ದ ವಿಶೇಷ ತನಿಖಾ ತಂಡ (SIT) ಪ್ರಕರಣವನ್ನು ತನಿಖೆ ಮಾಡಲು ಏನನ್ನೂ ಮಾಡಲಿಲ್ಲ. ಜಮೀಲಾ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗದ ಕದ ತಟ್ಟಿದರು. ಮಾನವ ಹಕ್ಕುಗಳ ಆಯೋಗದ ಶಿಫಾರಸುಗಳನ್ನು ಆಗಿನ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಜಾರಿಗೊಳಿಸಲಿಲ್ಲ.

ಆದರೆ ಜಮೀಲಾ ಛಲವನ್ನು ಬಿಟ್ಟುಕೊಡಲಿಲ್ಲ. ಈಗ ಅಕ್ಟೋಬರ್ 28, 2021ರಂದು, ಕಾಶ್ಮೀರ ಕಣಿವೆಯ ನ್ಯಾಯಾಲಯವು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಗೆ ಪೊಲೀಸ್ ಉಪ ಅಧೀಕ್ಷಕ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ಕೋರ್ಟ್‌ ಸೂಚಿಸಿದೆ.

“ಜವಾಬ್ದಾರಿಯುತ ದೃಷಿಯಲ್ಲಿ ಪ್ರಕರಣವನ್ನು ತನಿಖಾ ಏಜೆನ್ಸಿ ನೋಡದಿರುವುದು ದುರಾದೃಷ್ಟಕರ” ಎಂದು ಕೋರ್ಟ್ ವಿಷಾದಿಸಿದೆ.

ಸಿಐಡಿ ಮಾಡಿದ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಪರಿಶೀಲನೆ ವರದಿಗಳು ಪೊಲೀಸರ ಹೇಳಿಕೆಗಳಿಗೆ ತದ್ವಿರುದ್ಧವಾಗಿವೆ. ಮೃತದೇಹದಲ್ಲಿ ಚಿತ್ರಹಿಂಸೆಯ ಗುರುತುಗಳಿವೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳುತ್ತದೆ. ಸಿಐಡಿ ವರದಿಯು ವಿಧ್ವಂಸಕ ಚಟುವಟಿಕೆಗಳಲ್ಲಿ ವ್ಯಕ್ತಿಯು ಭಾಗಿಯಾಗಿಲ್ಲ ಎಂದು ಹೇಳುತ್ತದೆ.

ಶ್ರೀನಗರದ ಎರಡನೇ ಹೆಚ್ಚುವರಿ ಮುನ್ಸಿಫ್ ನ್ಯಾಯಾಲಯವು ತನ್ನ ಆದೇಶದಲ್ಲಿ, “ಪ್ರಕರಣದ ತನಿಖೆಗಾಗಿ ಪೊಲೀಸ್ ಉಪ ಅಧೀಕ್ಷಕ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಬೇಕು” ಎಂದು ಶ್ರೀನಗರದ ಹಿರಿಯ ಪೊಲೀಸ್ ಅಧೀಕ್ಷಕರಿಗೆ (ಎಸ್‌ಎಸ್‌ಪಿ) ನಿರ್ದೇಶಿಸಿದೆ.

ರಂಜಾನ್ ಸಾವಿನ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರೈನಾವರಿ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿ ಮತ್ತು ಠಾಣಾಧಿಕಾರಿ ಮತ್ತು ಇತರ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಎಸ್‌ಎಸ್‌ಪಿಗೆ ನಿರ್ದೇಶನ ನೀಡಿದೆ.

2006ರಲ್ಲಿ ಪ್ರಕರಣ ರೀ ಓಪನ್‌ ಆದ ನಂತರ ಪ್ರಕರಣದ ತನಿಖೆಗಾಗಿ ರಚಿಸಲಾದ ಎಸ್‌ಐಟಿಯ ಪಾತ್ರವನ್ನೂ ತನಿಖೆ ಮಾಡಲು ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಸಂತ್ರಸ್ತೆಯನ್ನು ಪ್ರತಿನಿಧಿಸುವ ವಕೀಲ ತಬ್ಬಸುಮ್ ರಸೂಲ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...