Homeಮುಖಪುಟದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? - ಸುಪ್ರೀಂ ಪ್ರಶ್ನೆ

ದೆಹಲಿಯಲ್ಲಿ ಹದಗೆಟ್ಟ ಗಾಳಿ ಪರಿಸ್ಥಿತಿ ಸುಧಾರಿಸಲು 2 ದಿನ ಲಾಕ್‌ಡೌನ್? – ಸುಪ್ರೀಂ ಪ್ರಶ್ನೆ

ರೈತರಿಂದಲೇ ಮಾಲಿನ್ಯವಾಗಿದೆ ಎಂದು ಏಕೆ ಬಿಂಬಿಸುತ್ತಿದ್ದೀರಿ? ರೈತರನ್ನು ದೂಷಿಸುವುದು ಎಲ್ಲರಿಗೂ ಫ್ಯಾಶನ್ ಆಗಿದೆ ಎಂದು ಕೋರ್ಟ್ ಕೇಂದ್ರದ ವಿರುದ್ಧ ಕಿಡಿಕಾರಿದೆ.

- Advertisement -
- Advertisement -

ಕಳೆದೊಂದು ವಾರದಿಂದ ದೆಹಲಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಹೊಗೆ ತುಂಬಿಕೊಂಡಿದ್ದು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಗಾಳಿಯ ಗುಣಮಟ್ಟ ಸೂಚ್ಯಂಕವು ತೀರಾ ಕೆಳಕ್ಕಿಳಿದಿರುವುದರಿಂದ ಇದನ್ನು ಸರಿಪಡಿಸಲು ಏನು ಕ್ರಮ ಕೈಗೊಂಡಿರುವಿರಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಯಾವ ತುರ್ತು ಯೋಜನೆಗಳನ್ನು – ಕ್ರಮಗಳನ್ನು ಕೈಗೊಂಡಿರುವಿರಿ ತಿಳಿಸಿ. 2 ದಿನ ಲಾಕ್‌ಡೌನ್ ಮಾಡುವಿರಾ? ಗಾಳಿಯ ಗುಣಮಟ್ಟವನ್ನು ಉತ್ತಮಗೊಳಿಸಲು ನಿಮ್ಮ ಯೋಜನೆಯೇನು ಎಂದು ಸಿಜೆಐ ರಮಣ ಪ್ರಶ್ನಿಸಿದ್ದಾರೆ.

ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂಬುದು ನಿಮಗೆ ತಿಳಿದಿದೆಯೇ? ನಾವು ಮನೆಯಲ್ಲಿಯೂ ಮಾಸ್ಕ್ ಧರಿಸಬೇಕಾಗ ಪರಿಸ್ಥಿತಿ ಬಂದಿದೆ. ಇದು ರಾಜ್ಯಗಳ ಜವಾಬ್ದಾರಿ, ಇಲ್ಲ ಕೇಂದ್ರ ಜವಾಬ್ದಾರಿ ಎಂದು ನುಣಚಿಕೊಳ್ಳುವ ಸಂದರ್ಭದ ಇದ್ಲ. ಕೂಡಲೇ ಪಂಜಾಬ್ ಹರಿಯಾಣ ರಾಜ್ಯಗಳೊಂದಿಗೆ ತುರ್ತು ಸಭೆ ನಡೆಸಿ. ಮುಂದಿನ ಎರಡು ಮೂರು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಿ ಎಂದು ನಮಗೆ ಅನ್ನಿಸುವ ರೀತಿ ಕ್ರಮ ಕೈಗೊಳ್ಳಿ ಎಂದು ರಮಣ ಸೂಚಿಸಿದ್ದಾರೆ.

ಶುಕ್ರವಾರದ ದೆಹಲಿಯ ಪರಿಸ್ಥಿತಿ ಈ ಅವಧಿಯಲ್ಲಿಯೇ ಅತಿ ಕೆಟ್ಟ ಪರಿಸ್ಥಿತಿ ತಲುಪಿತ್ತು. ಪರಿಸ್ಥಿತಿ ಗಂಭೀರತೆ ನಮಗೆ ಅರ್ಥವಾಗಿದೆ. ದೆಹಲಿಯ ಗಾಳಿಯನ್ನು ಉಸಿರಾಡುವುದು ದಿನಕ್ಕೆ 20 ಸಿಗರೇಟ್ ಸೇದುವಂತೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಕವು ಜನರು ಮನೆಯಲ್ಲಿಯೇ ಇರುವಂತೆ ಸೂಚಿಸಿದೆ.

ಕೃಷಿ ತ್ಯಾಜ್ಯವನ್ನು ಸುಡದಂತೆ ತಡೆಯುವುದು ಸದ್ಯದ ವಾಯುಮಾಲಿನ್ಯವನ್ನು ತಡೆಯುವ ಪ್ರಮುಖ ಹೆಜ್ಜೆಯಾಗಿದ್ದು ಇದರತ್ತ ಗಮನ ಹರಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನಾವು ಹುಲ್ಲು ಸುಡುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಆದರೆ ಕಳೆದ ಐದಾರು ದಿನಗಳಲ್ಲಿ ಪಂಜಾಬ್‌ನಲ್ಲಿ ಉರಿಯುತ್ತಿರುವ ಕೃಷಿ ತ್ಯಾಜ್ಯದ ಕಾರಣದಿಂದಾಗಿ ಮಾಲಿನ್ಯ ಹೆಚ್ಚಾಗಿದೆ, ಹಾಗಾಗಿ ಪಂಜಾಬ್ ರಾಜ್ಯವು ಅದನ್ನು ತಡೆಯಬೇಕೆಂದು ಕೇಂದ್ರವು ಪಂಜಾಬ್‌ ಮೇಲೆ ಹೊಣೆ ಹೊರಿಸಿದೆ.

ಇದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿಗಳು, “ರೈತರಿಂದಲೇ ಮಾಲಿನ್ಯವಾಗಿದೆ ಎಂದು ಏಕೆ ಬಿಂಬಿಸುತ್ತಿದ್ದೀರಿ? ಅವರಿಂದ ಒಂದಷ್ಟು ಮಾಲಿನ್ಯವಾಗಿದೆ. ಆದರೆ ಉಳಿದ ಮಾಲಿನ್ಯದ ಬಗ್ಗೆ ಏನು ಹೇಳುತ್ತೀರಿ? ದೆಹಲಿಯಲ್ಲಿ ಮಾಲಿನ್ಯವನ್ನು ನಿಯಂತ್ರಿಸಲು ನೀವು ಏನು ಮಾಡುತ್ತಿದ್ದೀರಿ? ನೀವೇ ಹೇಳಿ? ನಿಮ್ಮ ಸರಿಯಾದ ಯೋಜನೆ ಏನು? ಕೇವಲ 2-3 ದಿನಗಳು ವಿಚಾರ ಅಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಪ್ರೋತ್ಸಾಹಧನ ಸಿಗದಿದ್ದರೆ ಅವರು ಹೇಗೆ ತಾನೇ ಬದಲಾಗುತ್ತಾರೆ? ಅವರಿಗೆ ಸಿಗುವ ಒಂದಷ್ಟು ಸಬ್ಸಿಡಿಯ ಹೊರತಾಗಿಯೂ, ಅನೇಕ ರೈತರಿಗೆ ಹುಲ್ಲು ಸುಡುವ ಯಂತ್ರಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. “ರೈತರನ್ನು ದೂಷಿಸುವುದು ಎಲ್ಲರಿಗೂ ಫ್ಯಾಶನ್ ಆಗಿದೆ. ನೀವು ಪಟಾಕಿಯನ್ನು ನಿಷೇಧಿಸಿದ್ದೀರಿ ಆದರೆ ಕಳೆದ 5-6 ದಿನಗಳಿಂದ ಏನಾಗುತ್ತಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಶ್ನಿಸಿದ್ದಾರೆ.

ಕೇಂದ್ರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ನಾವು ರೈತರನ್ನು ಮಾತ್ರ ದೂಷಿಸುತ್ತಿಲ್ಲ, ನಾವು ಅದನ್ನು ಎಂದಿಗೂ ಹೇಳಲಿಲ್ಲ” ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿ: 25 ವರ್ಷಗಳ ಹಿಂದಿನ ಲಾಕಪ್‌ ಡೆತ್‌ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...