Homeಕರ್ನಾಟಕಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯು ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ ಮಾಡಿದ್ದಾನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ವರದಿಗಳು ಅಪೂರ್ಣವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಪ್ರತಿಕ್ರಿಯೆ ಹೀಗಿದೆ:

ಬಿಟ್‌ಕಾಯಿನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ತಿರುಚಿದ ವರದಿಗಳು ಪ್ರಕಟವಾಗುತ್ತಿವೆ. ಸಿಸಿಬಿ ತನಿಖೆಯು ನ್ಯಾಯಯುತ ಹಾಗೂ ವೃತ್ತಿಪರತೆಯಿಂದ ಕೂಡಿದೆ. ಅಪೂರ್ಣ ಅಥವಾ ತಿರುಚಿದ ಸಂಗತಿಗಳಿಂದ ತಪ್ಪುದಾರಿಗೆಳೆಯುವ ವರದಿಗಳನ್ನು ತೇಲಿಬಿಡಲಾಗುತ್ತಿದೆ. ಇಂತಹ ಎಲ್ಲಾ ವರದಿಗಳನ್ನು ನಿರಾಕರಿಸಬೇಕು.

ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುವನ್ನು ಖರೀದಿಸಿದ ಬಗ್ಗೆ ಬಂದ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು 04.11.2020ರಂದು ಬಂಧಿಸಿ 500 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ತನಿಖೆಯ ಸಮಯದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ ಇತರ ಹತ್ತು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿ ಶ್ರೀಕೃಷ್ಣನ ವಿಚಾರಣೆಯ ಸಮಯದಲ್ಲಿ, ಆತ ಅನೇಕ ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡನು. ಇದರ ಆಧಾರದಲ್ಲಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ 153/2020ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಹ್ಯಾಕರ್ ಶ್ರೀಕೃಷ್ಣನ ಖಾತೆಯಿಂದ ಯಾವುದೇ ಬಿಟ್‌ಕಾಯಿನ್‌ಗಳು ವರ್ಗಾವಣೆಯಾಗಿಲ್ಲ ಅಥವಾ ಯಾವುದೇ ಬಿಟ್‌ಕಾಯಿನ್ ಕಳೆದುಹೋಗಿಲ್ಲ.

ಇದನ್ನೂ ಓದಿರಿ: ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಕ್ರಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ, ಬಿಟ್‌ಕಾಯಿನ್ ಖಾತೆಯನ್ನು ತೆರೆಯುವುದು ಅಗತ್ಯವೆಂದು ಭಾವಿಸಲಾಯಿತು. ಅದರಂತೆ ಬಿಟ್ ಕಾಯಿನ್ ಖಾತೆಯನ್ನು ತೆರೆಯಲು ಸರ್ಕಾರವು ಆದೇಶಿಸಿದೆ. ಬಿಟ್‌ಕಾಯಿನ್‌ಗಳನ್ನು ಗುರುತಿಸುವ ಮತ್ತು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಆರೋಪಿ ಶ್ರೀಕಿ ಬಿಟಿಸಿ ವ್ಯಾಲೆಟ್ ತೋರಿಸಿದನು. ಅದರಲ್ಲಿ 31.8 ಬಿಟಿಸಿ ಇತ್ತು. ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ಪಾಸ್‌ವರ್ಡ್ ಬದಲಾಯಿಸಲಾಯಿತು. ಸಂಪೂರ್ಣ ಕಾರ್ಯವಿಧಾನವನ್ನು ಮಹಜರ್ ಮಾಡಲಾಗಿದೆ. ಎಲ್ಲವನ್ನೂ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತರುವಾಯ, ಈ ಬಿಟ್ ಕಾಯಿನ್‌ಗಳನ್ನು ಪೊಲೀಸ್ ವ್ಯಾಲೆಟ್ ಖಾತೆಗೆ ವರ್ಗಾಯಿಸಲು ಪಾಸ್‌ವರ್ಡ್ ಬಳಸಲು ನ್ಯಾಯಾಲಯ ಅನುಮತಿ ನೀಡಿತು. ಆರೋಪಿ ಶ್ರೀಕೃಷ್ಣನ ವಾಲೆಟ್ ತೆರೆದಾಗ ಅದರಲ್ಲಿ 186.811 ಬಿಟ್‌ಕಾಯಿನ್‌ಗಳು ಕಂಡುಬಂದಿವೆ. ಆರೋಪಿಯು ಇದು ತನ್ನ ವೈಯಕ್ತಿಕ ವಾಲೆಟ್‌ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಬಳಿ ಖಾಸಗಿ ಕೀ ಇರಲಿಲ್ಲ ಎಂದು ಸೈಬರ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ, ಪೊಲೀಸ್ ವ್ಯಾಲೆಟ್‌ಗೆ ಯಾವುದೇ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿಲ್ಲ. ಈ ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಚಾರ್ಜ್‌‌ಶೀಟ್‌ ಸಲ್ಲಿಸಲಾಗಿದೆ.

ಪೊಲೀಸರು ಹಾಗೂ ಹೊರಗಿನ ಡೊಮೇನ್ ತಜ್ಞರನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸೂಕ್ತವಾಗಿ ದಾಖಲಿಸಲಾಗಿದೆ. ಯಾವುದೇ ಹಂತದಲ್ಲೂ ನ್ಯಾಯಯುತ ತನಿಖೆ ಮತ್ತು ಕಾನೂನಿನ ಪ್ರಕ್ರಿಯೆಗೆ ಧಕ್ಕೆ ತರುವಂತಹ ಕೆಲಸವನ್ನು ಮಾಡಿಲ್ಲ. ಯಾವುದೇ ಬಾಹ್ಯ ಪ್ರಭಾವ ಅಥವಾ ಹಸ್ತಕ್ಷೇಪವಿಲ್ಲದೆ ವೃತ್ತಿಪರರು ತನಿಖೆ ನಡೆಸಿದ್ದಾರೆ.

14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ. 

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ.

ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.


ಇದನ್ನೂ ಓದಿರಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...