Homeಕರ್ನಾಟಕಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

- Advertisement -
- Advertisement -

ರಾಜ್ಯ ಪೊಲೀಸ್ ಇಲಾಖೆಯು ಬಿಟ್ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆಯನ್ನು ನೀಡಿದೆ. ನಾಲ್ಕು ಪುಟಗಳ ಪತ್ರಿಕಾ ಹೇಳಿಕೆಯನ್ನು ನೀಡಿರುವ ಪೊಲೀಸ್ ಇಲಾಖೆ, ಬಿಟ್‌ ಕಾಯಿನ್‌ ವರ್ಗಾವಣೆ ಆರೋಪವನ್ನು ಅಲ್ಲಗಳೆದಿದೆ. ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಯು ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕಿಂಗ್‌ ಮಾಡಿದ್ದಾನೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ವರದಿಗಳು ಅಪೂರ್ಣವಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಪ್ರತಿಕ್ರಿಯೆ ಹೀಗಿದೆ:

ಬಿಟ್‌ಕಾಯಿನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ತಿರುಚಿದ ವರದಿಗಳು ಪ್ರಕಟವಾಗುತ್ತಿವೆ. ಸಿಸಿಬಿ ತನಿಖೆಯು ನ್ಯಾಯಯುತ ಹಾಗೂ ವೃತ್ತಿಪರತೆಯಿಂದ ಕೂಡಿದೆ. ಅಪೂರ್ಣ ಅಥವಾ ತಿರುಚಿದ ಸಂಗತಿಗಳಿಂದ ತಪ್ಪುದಾರಿಗೆಳೆಯುವ ವರದಿಗಳನ್ನು ತೇಲಿಬಿಡಲಾಗುತ್ತಿದೆ. ಇಂತಹ ಎಲ್ಲಾ ವರದಿಗಳನ್ನು ನಿರಾಕರಿಸಬೇಕು.

ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುವನ್ನು ಖರೀದಿಸಿದ ಬಗ್ಗೆ ಬಂದ ಖಚಿತ ಮಾಹಿತಿ ಆಧಾರಿಸಿ ಸಿಸಿಬಿ ಪೊಲೀಸರು ಒಬ್ಬ ಆರೋಪಿಯನ್ನು 04.11.2020ರಂದು ಬಂಧಿಸಿ 500 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೆ.ಜಿ.ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ತನಿಖೆಯ ಸಮಯದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಸೇರಿದಂತೆ ಇತರ ಹತ್ತು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿ ಶ್ರೀಕೃಷ್ಣನ ವಿಚಾರಣೆಯ ಸಮಯದಲ್ಲಿ, ಆತ ಅನೇಕ ಕ್ರಿಪ್ಟೋ ಕರೆನ್ಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಭಾಗಿಯಾಗಿರುವ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೊಂಡನು. ಇದರ ಆಧಾರದಲ್ಲಿ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ 153/2020ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಹ್ಯಾಕರ್ ಶ್ರೀಕೃಷ್ಣನ ಖಾತೆಯಿಂದ ಯಾವುದೇ ಬಿಟ್‌ಕಾಯಿನ್‌ಗಳು ವರ್ಗಾವಣೆಯಾಗಿಲ್ಲ ಅಥವಾ ಯಾವುದೇ ಬಿಟ್‌ಕಾಯಿನ್ ಕಳೆದುಹೋಗಿಲ್ಲ.

ಇದನ್ನೂ ಓದಿರಿ: ಜನ್‌‌ ಧನ್‌ ಖಾತೆಯಿಂದ ಸಾವಿರಾರು ಕೋಟಿ ರೂ. ಕಳವು: ಎಚ್‌ಡಿಕೆ ಆರೋಪ

ಕ್ರಿಪ್ಟೋ ಕರೆನ್ಸಿಯ ತನಿಖೆಯ ಉದ್ದೇಶಕ್ಕಾಗಿ, ಬಿಟ್‌ಕಾಯಿನ್ ಖಾತೆಯನ್ನು ತೆರೆಯುವುದು ಅಗತ್ಯವೆಂದು ಭಾವಿಸಲಾಯಿತು. ಅದರಂತೆ ಬಿಟ್ ಕಾಯಿನ್ ಖಾತೆಯನ್ನು ತೆರೆಯಲು ಸರ್ಕಾರವು ಆದೇಶಿಸಿದೆ. ಬಿಟ್‌ಕಾಯಿನ್‌ಗಳನ್ನು ಗುರುತಿಸುವ ಮತ್ತು ವಶಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಆರೋಪಿ ಶ್ರೀಕಿ ಬಿಟಿಸಿ ವ್ಯಾಲೆಟ್ ತೋರಿಸಿದನು. ಅದರಲ್ಲಿ 31.8 ಬಿಟಿಸಿ ಇತ್ತು. ಸೈಬರ್ ತಜ್ಞರ ಸಮ್ಮುಖದಲ್ಲಿ ವ್ಯಾಲೆಟ್ ಪಾಸ್‌ವರ್ಡ್ ಬದಲಾಯಿಸಲಾಯಿತು. ಸಂಪೂರ್ಣ ಕಾರ್ಯವಿಧಾನವನ್ನು ಮಹಜರ್ ಮಾಡಲಾಗಿದೆ. ಎಲ್ಲವನ್ನೂ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತರುವಾಯ, ಈ ಬಿಟ್ ಕಾಯಿನ್‌ಗಳನ್ನು ಪೊಲೀಸ್ ವ್ಯಾಲೆಟ್ ಖಾತೆಗೆ ವರ್ಗಾಯಿಸಲು ಪಾಸ್‌ವರ್ಡ್ ಬಳಸಲು ನ್ಯಾಯಾಲಯ ಅನುಮತಿ ನೀಡಿತು. ಆರೋಪಿ ಶ್ರೀಕೃಷ್ಣನ ವಾಲೆಟ್ ತೆರೆದಾಗ ಅದರಲ್ಲಿ 186.811 ಬಿಟ್‌ಕಾಯಿನ್‌ಗಳು ಕಂಡುಬಂದಿವೆ. ಆರೋಪಿಯು ಇದು ತನ್ನ ವೈಯಕ್ತಿಕ ವಾಲೆಟ್‌ ಎಂದು ಹೇಳಿಕೊಂಡಿದ್ದಾನೆ. ಆರೋಪಿಯ ಬಳಿ ಖಾಸಗಿ ಕೀ ಇರಲಿಲ್ಲ ಎಂದು ಸೈಬರ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರ ಪರಿಣಾಮವಾಗಿ, ಪೊಲೀಸ್ ವ್ಯಾಲೆಟ್‌ಗೆ ಯಾವುದೇ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿಲ್ಲ. ಈ ಎಲ್ಲ ಸಂಬಂಧಿತ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ಚಾರ್ಜ್‌‌ಶೀಟ್‌ ಸಲ್ಲಿಸಲಾಗಿದೆ.

ಪೊಲೀಸರು ಹಾಗೂ ಹೊರಗಿನ ಡೊಮೇನ್ ತಜ್ಞರನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸೂಕ್ತವಾಗಿ ದಾಖಲಿಸಲಾಗಿದೆ. ಯಾವುದೇ ಹಂತದಲ್ಲೂ ನ್ಯಾಯಯುತ ತನಿಖೆ ಮತ್ತು ಕಾನೂನಿನ ಪ್ರಕ್ರಿಯೆಗೆ ಧಕ್ಕೆ ತರುವಂತಹ ಕೆಲಸವನ್ನು ಮಾಡಿಲ್ಲ. ಯಾವುದೇ ಬಾಹ್ಯ ಪ್ರಭಾವ ಅಥವಾ ಹಸ್ತಕ್ಷೇಪವಿಲ್ಲದೆ ವೃತ್ತಿಪರರು ತನಿಖೆ ನಡೆಸಿದ್ದಾರೆ.

14,682 ಬಿಟ್‌ಫೈನೆಕ್ಸ್ ಬಿಟ್‌ಕಾಯಿನ್‌ಗಳನ್ನು ವರ್ಗಾಯಿಸಲಾಗಿದೆ ಎಂದು ಪ್ರತಿಪಾದಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಆರೋಪಿಗಳ ಬಂಧನಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಸಿಕ್ಕಿದ್ದರೂ ಇಲ್ಲಿಯವರೆಗೆ ಯಾವುದೇ ವಿದೇಶಿ ಕಾನೂನು ಜಾರಿ ಸಂಸ್ಥೆಗಳು, ಯಾವುದೇ ವಿದೇಶಿ ಕಂಪನಿಗಳು ಯಾವುದೇ ಹ್ಯಾಕಿಂಗ್ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ ಎಂಬುದು ಸತ್ಯ. 

ಬಿಟ್‌ಫೈನೆಕ್ಸ್ ಕಂಪನಿಯ ಪ್ರತಿನಿಧಿಗಳು ಸಹ ಹ್ಯಾಕಿಂಗ್‌ ಸಂಬಂಧಿಸಿದಂತೆ ಯಾವುದೇ ವಿವರಗಳನ್ನು ಹಂಚಿಕೊಂಡಿಲ್ಲ. ಆಪಾದಿತ ನಡೆಸಿರುವ 15 ವಹಿವಾಟಿನ ನಂತರ ಸುಮಾರು ಒಂದು ವರ್ಷ ಕಳೆದಿದ್ದರೂ, ಬಿಟ್‌ಫೈನೆಕ್ಸ್/ ಕಾನೂನು ಜಾರಿ ಏಜೆನ್ಸಿಗಳ ಯಾವುದೇ ಪ್ರತಿನಿಧಿಗಳು ಪೊಲೀಸರು ಅಥವಾ ಯಾವುದೇ ಸಂಬಂಧಪಟ್ಟ ಏಜೆನ್ಸಿಯನ್ನು ಸಂಪರ್ಕಿಸಿಲ್ಲ.

ಆರೋಪಿಯು ತನ್ನ ಸ್ವಯಂಪ್ರೇರಿತ ಹೇಳಿಕೆಯ ಸಮಯದಲ್ಲಿ ಯಾವುದೇ ನಿರ್ದಿಷ್ಟ ವಿವರಗಳಿಲ್ಲದೆ ವೆಬ್‌ಸೈಟ್‌ಗಳ ಹ್ಯಾಕಿಂಗ್‌ ಸಂಬಂಧ ಹೇಳಿದ್ದಾನೆ. ಇದನ್ನು ಖಚಿತಪಡಿಸಿಕೊಳ್ಳಲು ಪ್ರಾಥಮಿಕ ತನಿಖೆಯನ್ನು ನಡೆಸಲಾಯಿತು. ಸೈಬರ್ ತಜ್ಞರು ಡಿಜಿಟಲ್ ಸಾಕ್ಷ್ಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಆರೋಪಿಯ ಹೆಚ್ಚಿನ ಪ್ರತಿಪಾದನೆಗಳು ಆಧಾರರಹಿತವಾಗಿವೆ ಎಂದು ತಿಳಿದುಬಂದಿದೆ.


ಇದನ್ನೂ ಓದಿರಿ: ಶ್ರೀಕೃಷ್ಣ ತಂದ ಬಿಟ್‌ಕಾಯಿನ್ ಬಿರುಗಾಳಿ! ಬ್ಲಾಕ್ ಚೈನ್ ಮತ್ತು ಬಿಟ್‌ಕಾಯಿನ್ ಬಗ್ಗೆ ಒಂದಿಷ್ಟು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...