Homeಕರ್ನಾಟಕಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಮಕ್ಕಳಿಗಾಗಿಯೇ ಪುಸ್ತಕಗಳನ್ನು ಹೊರತರಲು ಸ್ಥಾಪಿತವಾಗಿರುವ ‘ಎಲ್ಲರ ಪುಸ್ತಕ’ ಪ್ರಕಾಶನ| ಮಕ್ಕಳ ದಿನಾಚರಣೆಯ ವಿಶೇಷ ವರದಿ

- Advertisement -
- Advertisement -

“ನನ್ನ ಮಗಳು ಸುರಗಿಗಾಗಿ ಕನ್ನಡದಲ್ಲಿ ಚಿತ್ರಪುಸ್ತಕಗಳನ್ನು ಹುಡುಕಲಾರಂಭಿಸಿದೆ. ಇಂಗ್ಲಿಷ್‌ನಲ್ಲಿ ಮಕ್ಕಳಿಗಾಗಿ ಚಿತ್ರ ಪುಸ್ತಕಗಳು ಸಿಗುತ್ತಿದ್ದವು. ಆದರೆ ಕನ್ನಡದಲ್ಲಿ ಇಲ್ಲದಿರುವುದನ್ನು ಗಮನಿಸಿದೆ. ನನ್ನ ಮಗಳಿಗಾಗಿ ಚಿತ್ರ ಪುಸ್ತಕವನ್ನು ಬರೆದೆ. ಇದೇ ಪುಸ್ತಕವನ್ನು ನನ್ನಲ್ಲಿ ಕಲಿಯುತ್ತಿದ್ದ ಮಕ್ಕಳಿಗೂ ತೋರಿಸಿದಾಗ ಆ ಮಕ್ಕಳು ಬಹಳ ಖುಷಿಪಡುತ್ತಿದ್ದರು. ಹೀಗಾಗಿ ಇಂತಹ ಪುಸ್ತಕಗಳನ್ನು ಹೊರತರಬೇಕೆಂದು ನಿರ್ಧರಿಸಿ, ‘ಎಲ್ಲರ ಪುಸ್ತಕ’ ಎಂಬ ಪ್ರಕಾಶನ ಆರಂಭಿಸಲಾಯಿತು” ಎನ್ನುತ್ತಾರೆ ಚಿತ್ರ ಕಲಾವಿದೆ, ಶಿಕ್ಷಕಿ ವನಿತಾ ಅಣ್ಣಯ್ಯ ಯಾಜಿ.

ಮೂಲತಃ ಹೊನ್ನಾವರದವರಾದ ವನಿತಾ ಯಾಜಿಯವರು ನೀನಾಸಂ ವಿದ್ಯಾರ್ಥಿಯೂ ಹೌದು.  ನೀನಾಸಂ ಮತ್ತು ಶಾಂತಿನಿಕೇತನದಲ್ಲಿ ಕಲೆ ಮತ್ತು ನಟನೆಯನ್ನು ಅಭ್ಯಾಸ ಮಾಡಿರುವ ಅವರು ತಮ್ಮ ಪತಿ ಕೈಲಾಶ್‌ ತಿಪಟೂರು ಅವರೊಂದಿಗೆ ಸೇರಿ ‘ಎಲ್ಲರ ಪುಸ್ತಕ’ ಎಂಬ ಪ್ರಕಾಶನವನ್ನು ಆರಂಭಿಸಿ ಮಕ್ಕಳಿಗಾಗಿ ಚಿತ್ರಪುಸ್ತಕಗಳನ್ನು ಹೊರತರುತ್ತಿದ್ದಾರೆ.

‘ಟೊಮೊಟೋ ಫಿಶ್‌’, ‘ಮೊದಲ ಓದು’, ‘ರುಚಿ’, ‘ನವಿಲೂರ ಸಂತೆ’, ‘ಏಕೆ ಬೇಕು ಕನ್ನಡ’, ‘ಬೀಜ’, ‘ಚಿಟ್ಟೆ’ ಎಂಬ ಚಿತ್ರಪುಸ್ತಕಗಳನ್ನು ಹೊರತರಲಾಗಿದ್ದು, ಅದರಲ್ಲಿ ‘ಚಿಟ್ಟೆ’ ಚಿತ್ರಪುಸ್ತಕವು ಮೂರನೇ ತರಗತಿಯ ಪುಟಾಣಿ ಕಾವೇರಿ ಬರೆದದ್ದಾಗಿದೆ. ಕಳೆದ ಮಾರ್ಚ್‌‌ನಲ್ಲಿ ಪ್ರಕಾಶನ ಆರಂಭವಾಗಿದ್ದು, ಹೊಸ ಪ್ರಯೋಗಗಳ ಮೂಲಕ ಮಕ್ಕಳ ಮನೋವಿಕಾಸಕ್ಕೆ ಪ್ರೋತ್ಸಾಹಿಸುತ್ತಿದೆ. ಡಿಜಿಟಲ್‌ ಕಲೆಯನ್ನು ಬಳಸದೆ ಕೈಯಲ್ಲೇ ಚಿತ್ರಗಳನ್ನು ಬರೆದು ಪ್ರಕಟಿಸುತ್ತಿರುವುದು ಮತ್ತೊಂದು ವಿಶೇಷ. ಮಕ್ಕಳಿಗೆ ಚಿತ್ರಕಲೆಯ ಮೂಲ ಪರಿಚಯವೂ ಆಗಬೇಕೆಂಬುದು ವನಿತಾ ದಂಪತಿಯ ಆಶಯ.

“ಚಿಟ್ಟೆ ಪುಸ್ತಕದ ಕರ್ತೃ ಕಾವೇರಿ, ಪೂರ್ಣ ಶಾಲೆಯಲ್ಲಿ ನನ್ನ ವಿದ್ಯಾರ್ಥಿ ಆಗಿದ್ದಳು. ಪುಟ್ಟ ಮಕ್ಕಳಿಗೆ ಪೇಪರ್, ಪೇಂಟ್ ಕೊಟ್ಟು ಇಷ್ಟಪಟ್ಟದ್ದನ್ನು ಚಿತ್ರಿಸಲು ಬಿಡುತ್ತಿದ್ದೆವು. ಏಳು ವರ್ಷದ ಮಗು ಕಾವೇರಿ ಮೂವತ್ತು ನಿಮಿಷಗಳ ತರಗತಿಯಲ್ಲಿ 15ರಿಂದ 20 ಪೇಂಟಿಂಗ್ ಮಾಡಿರುತ್ತಿದ್ದಳು. ಕಾವೇರಿಗೆ 8 ವರ್ಷವಾಗುವ ಹೊತ್ತಿಗೆ ಹೆಚ್ಚು ನಿಖರವಾಗಿ ಪೇಂಟಿಂಗ್ ಮಾಡಿ, ವಸ್ತು ವಿಷಯವನ್ನು ಒಳಗೊಂಡು ಚಿತ್ರಿಸಲು ಶುರುಮಾಡಿದಳು. ಈ ಪುಸ್ತಕ ಆಕೆ ಮೂರನೇ ತರಗತಿಯಲ್ಲಿದ್ದಾಗ ಚಿತ್ರಿಸಿದ್ದು” ಎನ್ನುತ್ತಾರೆ ವನಿತಾ ಯಾಜಿ.

ಇದನ್ನೂ ಓದಿರಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಆನ್‌ಲೈನ್‌ ಮೂಲಕ ಮಕ್ಕಳಿಗೆ ತರಗತಿಗಳನ್ನು ವನಿತಾ ನಡೆಸಿಕೊಡುತ್ತಿದ್ದಾರೆ. ಕೇರಳಾ, ದೆಹಲಿಯ ಮಕ್ಕಳೂ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇವರ ಚಿತ್ರಪುಸ್ತಕ ಪ್ರಯೋಗಕ್ಕೆ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ. ಈವರೆಗೆ ನಾಲ್ಕು ಪುಸ್ತಕಗಳನ್ನು ಹೊರತಂದಿದ್ದು, ಮಕ್ಕಳ ದಿನಾಚರಣೆಯಂದು (ಭಾನುವಾರ, ನವೆಂಬರ್‌‌ 14, 2021) ಮತ್ತೆ ಮೂರು ಪುಸ್ತಕಗಳನ್ನು ಎಲ್ಲರ ಪುಸ್ತಕ ಪ್ರಕಾಶನ ಪ್ರಕಟಿಸಿದೆ.

‘ಏಕೆ ಬೇಕು ಕನ್ನಡ!?’ ಪುಸ್ತಕವು ಕನ್ನಡ ಭಾಷೆಯ ಬೆಡಗು, ಕರ್ನಾಟಕದ ವೈವಿಧ್ಯತೆಯನ್ನು ಸರಳವಾಗಿ ಮಕ್ಕಳಿಗೆ ಪರಿಚಯಿಸುವ ಪುಸ್ತಕವಾಗಿದೆ. ‘ಟೊಮಾಟೊ ಫಿಶ್’ ಪ್ರಕಾಶನದ ಮೊದಲ ಕತೆ-ಚಿತ್ರ ಪುಸ್ತಕ. ‘ಚಿಟ್ಟೆ’ ಮಕ್ಕಳಲ್ಲಿ ಕಥೆಕಟ್ಟುವ, ಚಿತ್ರ ಬರೆಯುವ ಕೌಶಲವನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರಕಟವಾದ ಪುಸ್ತಕ.

“ನಮ್ಮ ಮೊದಲ ಎರಡು ಪುಸ್ತಕಗಳಿಂದಲೂ ಈವರೆಗೆ ಹೊಸತನ, ಗುಣಮಟ್ಟವನ್ನು ಹೆಚ್ಚಿಸಲು ಪರಿಶ್ರಮ ಪಡುತ್ತಿದ್ದೇವೆ. ನಮ್ಮ ಪುಸ್ತಕಗಳ ಪುಟವಿನ್ಯಾಸ ಮಾಡುತ್ತಿರುವ ಮನೋಜ್ ಹಾಗೂ ಎಲ್ಲಾ ಮುದ್ರಕರ ಶ್ರಮವನ್ನು ನಾವು ಇಲ್ಲಿ ನೆನೆಯಬಯಸುತ್ತೇವೆ. ಪ್ರಕಾಶನ ಪ್ರಾರಂಭವಾದ ಮೇಲೆ ನಮ್ಮ ಕಪಾಟಿನಲ್ಲಿ ಪುಸ್ತಕಗಳು ದ್ವಿಗುಣಗೊಂಡಿವೆ. ಹಲವು ಪ್ರಕಾಶಕರ ಅದ್ಭುತ ಪುಸ್ತಕಗಳು ನಮ್ಮನ್ನು ಬೆರಗುಗೊಳಿಸಿವೆ. ಕನ್ನಡದಲ್ಲಿ ಇಂಥ ಹತ್ತಾರು ಪುಸ್ತಕಗಳನ್ನು ರೂಪಿಸಬೇಕು ಎಂಬ ಉತ್ಸಾಹಕ್ಕೆ ಸ್ಫೂರ್ತಿ ನೀಡಿವೆ. ಇದರ ಫಲವಾಗಿ ಈ ಸಲದ ನಮ್ಮ ಪುಸ್ತಕಗಳು ಸುಂದರವಾಗಿ ಮೂಡಿಬಂದಿವೆ” ಎಂಬುದು ವನಿತಾ ದಂಪತಿಯ ಸಂತೃಪ್ತಿ.

ಮಕ್ಕಳಿಗಾಗಿ ಚಿತ್ರಪುಸ್ತಕಗಳನ್ನು ಪ್ರಕಟಿಸುತ್ತಿರುವ ವನಿತಾ ಯಾಜಿ, ಕೈಲಾಶ್‌ ತಿಪಟೂರು ಅವರು ತಮ್ಮ ಮಗು ಸುರಗಿಯೊಂದಿಗೆ.

“ಭಾಷೆಗೆ ಮೊದಲು ಮನುಷ್ಯ ಸಂವಹನಕ್ಕಾಗಿ ಚಿತ್ರಗಳನ್ನು ಬಿಡಿಸುತ್ತಿದ್ದ. ಬೇಟೆಯ ಸೊಗಸನ್ನು, ರೋಚಕತೆಯನ್ನು ಅಭಿನಯಿಸಿ ತೋರಿಸುತ್ತಿದ್ದ, ಚಪ್ಪಾಳೆ ಗಿಟ್ಟಿಸುತ್ತಿದ್ದ. ಪುರಾತನ ನಾಗರಿಕತೆಗಳ ಪುರಾವೆಯಂತೆ ಭೂಮಿಯ ತುಂಬ ಹಲವು ಚಿತ್ರ, ನಕಾಶೆಗಳು ಉಳಿದು ಹೋಗಿವೆ. ಚಿತ್ರ ಬರೆಯುವುದು ಆಡುವುದಕ್ಕೆ ಮೊದಲು ಮನುಷ್ಯ ಕಂಡುಕೊಂಡ ಅಭಿವ್ಯಕ್ತಿ. ಇಂದಿಗೆ ಚಿತ್ರಕಲೆಯನ್ನು ಆಡಲಾಗದ ಭಾವಗಳ ಅಭಿವ್ಯಕ್ತಿಗೆ ಬಳಸಿ ಚಿಕಿತ್ಸೆ ನೀಡುವುದಿದೆ. ಸಂತೋಷಕ್ಕೆ, ಏಕಾಗ್ರತೆಗೆ, ಕಾಲ ಕಳೆಯಲು, ಮಕ್ಕಳ ಬೆರಳುಗಳ ಸರಾಗ ಚಲನೆಗೆ, ಏನೂ ಕಾರಣವೇ ಇಲ್ಲದೆ ಚಿತ್ರ ಬರೆಯುವುದು ಎಲ್ಲಾ ವಯಸ್ಸಿನವರಿಗೂ ಅಚ್ಚು ಮೆಚ್ಚು. ಪ್ರತಿಯೊಬ್ಬ ವ್ಯಕ್ತಿಯೂ ಕಲಾವಿದನೇ. ಸರಿಯಾದ ಮಾರ್ಗದರ್ಶನವಿಲ್ಲದೆ, ಮುಜುಗರಕ್ಕೆ ಒಳಗಾಗಿ, ಬರೀ ಕೌಶಲವನ್ನು ಕಲೆಯೆಂದು ತಪ್ಪು ಗ್ರಹಿಸಿ ಚಿತ್ರಿಸುವುದ ಬಿಟ್ಟಿರುವ ಬಹುತೇಕ ಮಂದಿ ತಮ್ಮಗನಿಸಿದ್ದನ್ನು, ತಮ್ಮತನವನ್ನು ಚಿತ್ರಿಸಿದರೆ ನಿರಾಳವಾಗಿ ಬಿಡುತ್ತಾರೆ” ಎಂದು ಚಿತ್ರಕಲೆಯ ಮಹತ್ವವನ್ನು ವಿವರಿಸುತ್ತಾರೆ ವನಿತಾ ಯಾಜಿ.

(‘ಎಲ್ಲರ ಪುಸ್ತಕ’ ಪ್ರಕಾಶನದ ಚಿತ್ರಪುಸ್ತಕಗಳಿಗಾಗಿ ಮೊ.ಸಂ. 9141184535, ಇಮೇಲ್‌- [email protected] ಸಂಪರ್ಕಿಸಬಹುದು)


ಇದನ್ನೂ ಓದಿರಿ: ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...