Homeಮುಖಪುಟಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು 'ಅಹಂಕಾರಿ' ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

ಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು ‘ಅಹಂಕಾರಿ’ ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಆದೇಶಗಳನ್ನು ಪಾಲಿಸದ ಉತ್ತರ ಪ್ರದೇಶದ ಹಿರಿಯ ಸರ್ಕಾರಿ ಅಧಿಕಾರಿಗಳನ್ನು ‘ಅತ್ಯಂತ ಅಹಂಕಾರಿ’ ಎಂದು ಕರೆದಿರುವ ಸುಪ್ರೀಂ ಕೋರ್ಟ್, ರಾಜ್ಯ ಹಣಕಾಸು ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಬಂಧನಕ್ಕೆ ಅನುಮತಿ ನೀಡಿದೆ.

ಅಲಹಾಬಾದ್ ಹೈಕೋರ್ಟ್ ತನ್ನ ಆದೇಶಗಳ ಜಾರಿಗೆ ವಿಳಂಬ ಮಾಡುತ್ತಿದ್ದ ಉತ್ತರ ಪ್ರದೇಶದ ರಾಜ್ಯ ಹಣಕಾಸು ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದ ಸುಪ್ರಿಂ ಅಧಿಕಾರಿಗಳನ್ನು “ಅತ್ಯಂತ ದುರಹಂಕಾರಿ” ಎಂದು ಬಣ್ಣಿಸಿದೆ.

ಸರ್ಕಾರಿ ಅಧಿಕಾರಿಗಳು 2017 ರಲ್ಲಿ “ಕಲೆಕ್ಷನ್ ಅಮೀನ್” ಗೆ ಸೇವೆಯನ್ನು ಕ್ರಮಬದ್ಧಗೊಳಿಸುವುದು ಮತ್ತು ಬಾಕಿ ಪಾವತಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿದ್ದರು. ನವೆಂಬರ್ 1 ರಂದು ಹೈಕೋರ್ಟ್ ಪ್ರಕರಣವನ್ನು ಆಲಿಸಿ ‘ಅಧಿಕಾರಿಗಳು ನ್ಯಾಯಾಲಯವನ್ನು “ಆಟದ ಮೈದಾನ” ಎಂದು ಪರಿಗಣಿಸುತ್ತಿದ್ದಾರೆ ಮತ್ತು ಈ ಹಿಂದೆ ಸೇವೆಯನ್ನು ಕಾಯಂಗೊಳಿಸುವ ಹಕ್ಕು ನಿರಾಕರಿಸಿದ ವ್ಯಕ್ತಿಗೆ ಬಾಕಿ ವೇತನ ನೀಡಲು ನಿರಾಕರಿಸಿದ್ದಾರೆ’ ಎಂದು ಕಿಡಿಕಾರಿತ್ತು.

“ಪ್ರತಿವಾದಿಗಳು (ಅಧಿಕಾರಿಗಳು) ಉದ್ದೇಶಪೂರ್ವಕವಾಗಿ ಉನ್ನತ ನ್ಯಾಯಾಲಯವನ್ನು ತಪ್ಪುದಾರಿಗೆಳೆದಿದ್ದಾರೆ ಮತ್ತು ಅರ್ಜಿದಾರರಿಗೆ ಬಾಕಿ ವೇತನವನ್ನು ನೀಡದೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ನೀಡಿದ ಭರವಸೆಯನ್ನು ಉಲ್ಲಂಘಿಸಿದ್ದಾರೆ. ಈ ನ್ಯಾಯಾಲಯವು ಪ್ರತಿವಾದಿಗಳ ಖಂಡನೀಯ ನಡವಳಿಕೆಯ ಬಗ್ಗೆ ದುಃಖ ಮತ್ತು ವೇದನೆಯನ್ನು ದಾಖಲಿಸುತ್ತದೆ. ಅದರಂತೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ಮತ್ತು ಪ್ರಸ್ತುತ ಯುಪಿ ಸರ್ಕಾರದ ಕಾರ್ಯದರ್ಶಿ (ಹಣಕಾಸು), ಲಕ್ನೋಗೆ ನಿಯೋಜಿಸಲಾದ ಅಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸುವುದು ಸೂಕ್ತ ಪ್ರಕರಣ ಎಂದು ನಂಬುತ್ತದೆ. ನವೆಂಬರ್ 15 ರಂದು ಈ ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ಮಾಡಿಕೊಟ್ಟು ಅವರ ವಿರುದ್ಧ ಜಾಮೀನು ನೀಡಬಹುದಾದ ವಾರೆಂಟ್ ಹೊರಡಿಸುತ್ತದೆ’’ ಎಂದು ಹೈಕೋರ್ಟ್ ಆದೇಶಿಸಿತ್ತು.

ನಂತರ ಬಂಧನದಿಂದ ಪಾರಾಗಲು ಯುಪಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ಅರ್ಜಿ ವಜಾಗೊಳಿಸಿ ಛೀಮಾರಿ ಹಾಕಿದೆ. “ನಿಮಗೆ ಹೆಚ್ಚಿನ ಶಿಕ್ಷೆಯ ಅಗತ್ಯವಿದೆ. ನಿಮ್ಮ ನಡವಳಿಕೆಯನ್ನು ನೋಡಿ, ನೀವು ಆದೇಶಗಳನ್ನು ಪಾಲಿಸಲು ಏನನ್ನೂ ಮಾಡಿಲ್ಲ. ಹೈಕೋರ್ಟ್ ನಿಮ್ಮ ಬಗ್ಗೆ ತುಂಬಾ ಕರುಣೆ ತೋರಿದೆ… ಆದರೆ ನಿಮಗೆ ನ್ಯಾಯಾಲಯದ ಬಗ್ಗೆ ಗೌರವವಿಲ್ಲ. ಈ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಂಬಾ ದುರಹಂಕಾರಿ ಎಂದು ತೋರುತ್ತಿದೆ” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಕಿಡಿಕಾರಿದೆ.

ನೀವು ಏನೇ ವಾದ ಮಾಡುವುದಿದ್ದರೂ ಅವರನ್ನು ಬಂಧಿಸಿ ಇಲ್ಲಿಗೆ ಕರೆತನ್ನಿ ಎಂದು ಪೀಠವು ಉತ್ತರ ಪ್ರದೇಶ ಸರ್ಕಾರದ ಪರ ವಾದಿಸಿದ ಅಡಿಷನಲ್ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿರವರಿಗೆ ಸೂಚಿಸಿತು.


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...