Homeಮುಖಪುಟಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು 'ಅಹಂಕಾರಿ' ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

ಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು ‘ಅಹಂಕಾರಿ’ ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಆದೇಶಗಳನ್ನು ಪಾಲಿಸದ ಉತ್ತರ ಪ್ರದೇಶದ ಹಿರಿಯ ಸರ್ಕಾರಿ ಅಧಿಕಾರಿಗಳನ್ನು ‘ಅತ್ಯಂತ ಅಹಂಕಾರಿ’ ಎಂದು ಕರೆದಿರುವ ಸುಪ್ರೀಂ ಕೋರ್ಟ್, ರಾಜ್ಯ ಹಣಕಾಸು ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಬಂಧನಕ್ಕೆ ಅನುಮತಿ ನೀಡಿದೆ.

ಅಲಹಾಬಾದ್ ಹೈಕೋರ್ಟ್ ತನ್ನ ಆದೇಶಗಳ ಜಾರಿಗೆ ವಿಳಂಬ ಮಾಡುತ್ತಿದ್ದ ಉತ್ತರ ಪ್ರದೇಶದ ರಾಜ್ಯ ಹಣಕಾಸು ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದ ಸುಪ್ರಿಂ ಅಧಿಕಾರಿಗಳನ್ನು “ಅತ್ಯಂತ ದುರಹಂಕಾರಿ” ಎಂದು ಬಣ್ಣಿಸಿದೆ.

ಸರ್ಕಾರಿ ಅಧಿಕಾರಿಗಳು 2017 ರಲ್ಲಿ “ಕಲೆಕ್ಷನ್ ಅಮೀನ್” ಗೆ ಸೇವೆಯನ್ನು ಕ್ರಮಬದ್ಧಗೊಳಿಸುವುದು ಮತ್ತು ಬಾಕಿ ಪಾವತಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿದ್ದರು. ನವೆಂಬರ್ 1 ರಂದು ಹೈಕೋರ್ಟ್ ಪ್ರಕರಣವನ್ನು ಆಲಿಸಿ ‘ಅಧಿಕಾರಿಗಳು ನ್ಯಾಯಾಲಯವನ್ನು “ಆಟದ ಮೈದಾನ” ಎಂದು ಪರಿಗಣಿಸುತ್ತಿದ್ದಾರೆ ಮತ್ತು ಈ ಹಿಂದೆ ಸೇವೆಯನ್ನು ಕಾಯಂಗೊಳಿಸುವ ಹಕ್ಕು ನಿರಾಕರಿಸಿದ ವ್ಯಕ್ತಿಗೆ ಬಾಕಿ ವೇತನ ನೀಡಲು ನಿರಾಕರಿಸಿದ್ದಾರೆ’ ಎಂದು ಕಿಡಿಕಾರಿತ್ತು.

“ಪ್ರತಿವಾದಿಗಳು (ಅಧಿಕಾರಿಗಳು) ಉದ್ದೇಶಪೂರ್ವಕವಾಗಿ ಉನ್ನತ ನ್ಯಾಯಾಲಯವನ್ನು ತಪ್ಪುದಾರಿಗೆಳೆದಿದ್ದಾರೆ ಮತ್ತು ಅರ್ಜಿದಾರರಿಗೆ ಬಾಕಿ ವೇತನವನ್ನು ನೀಡದೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ನೀಡಿದ ಭರವಸೆಯನ್ನು ಉಲ್ಲಂಘಿಸಿದ್ದಾರೆ. ಈ ನ್ಯಾಯಾಲಯವು ಪ್ರತಿವಾದಿಗಳ ಖಂಡನೀಯ ನಡವಳಿಕೆಯ ಬಗ್ಗೆ ದುಃಖ ಮತ್ತು ವೇದನೆಯನ್ನು ದಾಖಲಿಸುತ್ತದೆ. ಅದರಂತೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ಮತ್ತು ಪ್ರಸ್ತುತ ಯುಪಿ ಸರ್ಕಾರದ ಕಾರ್ಯದರ್ಶಿ (ಹಣಕಾಸು), ಲಕ್ನೋಗೆ ನಿಯೋಜಿಸಲಾದ ಅಂದಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸುವುದು ಸೂಕ್ತ ಪ್ರಕರಣ ಎಂದು ನಂಬುತ್ತದೆ. ನವೆಂಬರ್ 15 ರಂದು ಈ ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ಮಾಡಿಕೊಟ್ಟು ಅವರ ವಿರುದ್ಧ ಜಾಮೀನು ನೀಡಬಹುದಾದ ವಾರೆಂಟ್ ಹೊರಡಿಸುತ್ತದೆ’’ ಎಂದು ಹೈಕೋರ್ಟ್ ಆದೇಶಿಸಿತ್ತು.

ನಂತರ ಬಂಧನದಿಂದ ಪಾರಾಗಲು ಯುಪಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ಅರ್ಜಿ ವಜಾಗೊಳಿಸಿ ಛೀಮಾರಿ ಹಾಕಿದೆ. “ನಿಮಗೆ ಹೆಚ್ಚಿನ ಶಿಕ್ಷೆಯ ಅಗತ್ಯವಿದೆ. ನಿಮ್ಮ ನಡವಳಿಕೆಯನ್ನು ನೋಡಿ, ನೀವು ಆದೇಶಗಳನ್ನು ಪಾಲಿಸಲು ಏನನ್ನೂ ಮಾಡಿಲ್ಲ. ಹೈಕೋರ್ಟ್ ನಿಮ್ಮ ಬಗ್ಗೆ ತುಂಬಾ ಕರುಣೆ ತೋರಿದೆ… ಆದರೆ ನಿಮಗೆ ನ್ಯಾಯಾಲಯದ ಬಗ್ಗೆ ಗೌರವವಿಲ್ಲ. ಈ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಂಬಾ ದುರಹಂಕಾರಿ ಎಂದು ತೋರುತ್ತಿದೆ” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಕಿಡಿಕಾರಿದೆ.

ನೀವು ಏನೇ ವಾದ ಮಾಡುವುದಿದ್ದರೂ ಅವರನ್ನು ಬಂಧಿಸಿ ಇಲ್ಲಿಗೆ ಕರೆತನ್ನಿ ಎಂದು ಪೀಠವು ಉತ್ತರ ಪ್ರದೇಶ ಸರ್ಕಾರದ ಪರ ವಾದಿಸಿದ ಅಡಿಷನಲ್ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿರವರಿಗೆ ಸೂಚಿಸಿತು.


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...