Homeಮುಖಪುಟಬಿಹಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ

ಬಿಹಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ರಕರ್ತನ ಶವ ಪತ್ತೆ

- Advertisement -
- Advertisement -

ನಾಲ್ಕು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದ 22 ವರ್ಷದ ಪತ್ರಕರ್ತ ಮತ್ತು ಆರ್‌ಟಿಐ ಕಾರ್ಯಕರ್ತನ ಮೃತದೇಹವು ಸುಟ್ಟು ಕರುಕಲಾದ ಸ್ಥಿತಿಯಲ್ಲಿ, ಬಿಹಾರದ ಮಧುಬನಿ ಜಿಲ್ಲೆಯ ಹಳ್ಳಿಯೊಂದರ ರಸ್ತೆಯ ಪಕ್ಕದಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ.

ಸಾವನ್ನಪ್ಪಿರುವ ಬುದ್ದಿನಾಥ್ ಝಾ ಅಲಿಯಾಸ್ ಅವಿನಾಶ್ ಝಾ, ಸ್ಥಳೀಯ ಸುದ್ದಿ ವೆಬ್‌ಸೈಟ್‌ನಲ್ಲಿ ಪರ್ತಕರ್ತರಾಗಿದ್ದರು.

ಆರ್‌ಟಿಐ ಕಾರ್ಯಕರ್ತರು ಆಗಿದ್ದ ಬುದ್ದಿನಾಥ್‌, ನಕಲಿ ಕ್ಲಿನಿಕ್‌ಗಳ ಕುರಿತು ಸರಣಿ ವರದಿ ಮಾಡಿದ್ದರು. ಕ್ಲಿನಿಕ್‌ಗಳ ಬಗ್ಗೆ ಸುದ್ದಿ ಮಾಡದಂತೆ ಅವರಿಗೆ ಹಲವಾರು ಬಾರಿ ಬೆದರಿಕೆ ಕರೆಗಳು ಬಂದಿದ್ದವು ಹಾಗೂ ಲಂಚ ನೀಡುವುದಾಗಿ ಆಮಿಷ ಒಡ್ಡಿದ್ದರು. ಇವೆಲ್ಲವನ್ನು ತಿರಸ್ಕರಿಸಿದ್ದ ಅವರು ಕ್ಲಿನಿಕ್‌ಗಳ ಬಗ್ಗೆ ವಸ್ತುನಿಷ್ಠವಾದ ವರದಿಗಳನ್ನು ಮಾಡಿದ್ದರು. ಅವರು ಕಾಣೆಯಾಗುವ ಮೊದಲು ಕೂಡ ಫೇಸ್‌ಬುಕ್‌ನಲ್ಲಿ ಅಲ್ಲಿನ ಸ್ಥಳೀಯ ಎರಡು ಕ್ಲಿನಿಕ್‌ಗಳು ‘ನಕಲಿ’ ಎಂದು ಆರೋಪಿಸಿ ಪೋಸ್ಟ್‌ ಒಂದನ್ನು ಅಪ್‌ಲೋಡ್‌ ಮಾಡಿದ್ದರು. ಇದಾದ ಎರಡು ದಿನಗಳ ನಂತರ ಅವರು ಕಣ್ಮರೆಯಾಗಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುದ್ದಿನಾಥ್‌ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿರುವುದಾಗಿ ಅವರ ಮನೆಯ ಹತ್ತಿರದ ಸಿಸಿಟಿವಿ ಫೂಟೇಜ್‌ನಲ್ಲಿ ದಾಖಲಾಗಿದೆ. ರಾತ್ರಿ 9 ರಿಂದ ಹಲವಾರು ಬಾರಿ ಕಿರಿದಾದ ಓಣಿಯಲ್ಲಿರುವ ತನ್ನ ಮನೆಯಿಂದ ಹೊರಗೆ ಬರುವುದು ಮತ್ತು ಹತ್ತಿರದ ಮುಖ್ಯ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಕೊನೆಯ ಬಾರಿಗೆ ಅವರು ರಾತ್ರಿ 9.58 ಕ್ಕೆ ಕುತ್ತಿಗೆಗೆ ಹಳದಿ ಸ್ಕಾರ್ಫ್ ಧರಿಸಿ ಮನೆಯಿಂದ ಹೊರಟಿರುವುದಾಗಿ ಸಿಸಿಟಿವಿ ಫೂಟೇಜ್‌ನಲ್ಲಿದೆ.

‘ಅವರ ಬೈಕ್‌ ಇನ್ನೂ ಮನೆಯಲ್ಲಿಯೇ ಇತ್ತು. ಲ್ಯಾಪ್‌ಟಾಪ್ ಕೂಡ ಆನ್ ಆಗಿತ್ತು. ಬುದ್ದಿನಾಥ್ ಅವರು ಮಂಗಳವಾರ ತಡರಾತ್ರಿ ಅಥವಾ ಬುಧವಾರ ಬೆಳಗ್ಗೆ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು, ವಾಪಸ್ ಬರುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಅವನು ಹಿಂತಿರುಗಲಿಲ್ಲ ಎಂದಿರುವ ಅವರ ಕುಟುಂಬದವರು, ಒಂದು ದಿನವಾದರೂ ಅವರು ಮನೆಗೆ ಹಿಂದಿರುಗದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆನಿಪಟ್ಟಿಯಿಂದ ಪಶ್ಚಿಮಕ್ಕೆ ಸುಮಾರು 5 ಕಿ.ಮೀ ದೂರದಲ್ಲಿರುವ ಬೇಟೌನ್ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ 9 ಗಂಟೆಗೆ ಬುದ್ದಿನಾಥ್‌ ಅವರ ಫೋನ್‌ ಸ್ವಿಚ್ ಆನ್ ಮಾಡಿರುವುದು ಪತ್ತೆಯಾಗಿದೆ. ಮೊಬೈಲ್‌ ಟ್ಯ್ರಾಕ್‌ ಮಾಡುತ್ತಿದ್ದ ಪೊಲೀಸರು ಆ ಸ್ಥಳಕ್ಕೆ ಧಾವಿಸಿದ್ದರು. ಆದರೆ ಯಾವುದೇ ಸುಳಿವು ಸಿಗದೇ ಹಿಂದಿರುಗಿದ್ದರು.

ಶುಕ್ರವಾರ, ನವೆಂಬರ್ 12 ರಂದು, ಬುದ್ದಿನಾಥ್ ಅವರ ಸೋದರ ಸಂಬಂಧಿ ಬೆಟೌನ್ ಗ್ರಾಮದ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿ ಶವ ಪತ್ತೆಯಾಗಿದೆ ಎಂದು ಮಾಹಿತಿ ಪಡೆದರು. ಕೆಲ ಸಂಬಂಧಿಕರು ಮತ್ತು ಅಧಿಕಾರಿಗಳು ಅಲ್ಲಿಗೆ ಧಾವಿಸಿದ್ದು, ಬೆರಳಿನಲ್ಲಿದ್ದ ಉಂಗುರ, ಕಾಲಿನ ಗುರುತು ಹಾಗೂ ಕುತ್ತಿಗೆಯಲ್ಲಿದ್ದ ಸರದಿಂದಾಗಿ ಬುದ್ಧಿನಾಥನ ಶವ ಗುರುತಿಸಿದ್ದಾರೆ.

ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಶವವನ್ನು ತಕ್ಷಣ ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದು, ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ಇದನ್ನೂ ಓದಿ: ಹೈಕೋರ್ಟ್ ಆದೇಶ ಪಾಲಿಸದ ಯುಪಿ ಸರ್ಕಾರಿ ಅಧಿಕಾರಿಗಳನ್ನು ‘ಅಹಂಕಾರಿ’ ಎಂದ ಸುಪ್ರೀಂ: ಬಂಧನಕ್ಕೆ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...