Homeಮುಖಪುಟಪಂಜಾಬ್‌ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ ಸೋನು ಸೋದ್‌ ಸಹೋದರಿ

ಪಂಜಾಬ್‌ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ ಸೋನು ಸೋದ್‌ ಸಹೋದರಿ

ಇತ್ತೀಚೆಗಷ್ಟೆ ಸೋನು ಸೂದ್‌ ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ಅವರನ್ನು ಭೇಟಿ ಮಾಡಿದ್ದರು.

- Advertisement -
- Advertisement -

ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸಹೋದರಿ ಮಾಳವಿಕಾ ಸೂದ್‌ ಸ್ಪರ್ಧಿಸಲಿದ್ದಾರೆ ಎಂದು ನಟ ಸೋನು ಸೂದ್‌ ಭಾನುವಾರ ಘೋಷಿಸಿದ್ದಾರೆ.

ಪಂಜಾಬ್‌ನ ಮೊಗಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹಲವು ಪಕ್ಷಗಳು ಟಿಕೆಟ್ ನೀಡಲು ಮುಂದಾಗಿವೆ. ಆದರೆ ಇನ್ನೂ ಯಾವ ಪಕ್ಷದಿಂದ ಸ್ಪರ್ಧಿಸಬೇಕೆಂಬ ಬಗ್ಗೆ ನಿರ್ಧರಿಸಿಲ್ಲ ಎಂದು ತಿಳಿಸಿದ್ದಾರೆ.

ಕೋವಿಡ್‌ ಬಿಕ್ಕಟ್ಟಿನ ಸಮಯದಲ್ಲಿ ಸೋನು ಸೂದ್‌ ಅವರು ಮಾಡಿದ್ದ ಸೇವೆ, ಸಾಮಾಜಿಕ ಕಾರ್ಯಗಳಿಗೆ ದೇಶಾದ್ಯಂತದ ಜನಸಾಮಾನ್ಯರಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿತ್ತು.

ಸೋನು ಸೂದ್‌ ಅವರ ಕೆಲಸಗಳನ್ನು ರಾಜಕಾರಣಿಗಳು  ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಗೌರವಿಸಿದ್ದವು. ಈ ಕುರಿತು ಯಾವಾಗಲೂ ಮಾತನಾಡುತ್ತಿದ್ದ ಅವರು, ತಮ್ಮ ಸಾಮಾಜಿಕ ಕಾರ್ಯಗಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿದ್ದರು.

ಇತ್ತೀಚೆಗಷ್ಟೆ ಸೋನು ಸೂದ್‌ ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ಅವರನ್ನು ಭೇಟಿ ಮಾಡಿದ್ದರು.

ಈ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದ ನಟ ಸೋನು ಸೂದ್‌ ಅವರನ್ನು, ಶಾಲಾ ವಿದ್ಯಾರ್ಥಿಗಳ ‘ದೇಶ್ ಕಾ ಮೆಂಟರ್ಸ್’ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಎಂದು ಘೋಷಿಸಿದ್ದರು.

ಕೇಜ್ರಿವಾಲ್ ಅವರೊಂದಿಗಿನ ಭೇಟಿಯು ಬಹುಶಃ ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯಾಗಿ ರಾಜಕೀಯ ಪಾದಾರ್ಪಣೆಯ ವದಂತಿಗಳನ್ನು ಹುಟ್ಟುಹಾಕಿತ್ತು.

‘ರಾಜಕೀಯದ ಬಗ್ಗೆ ಚರ್ಚಿಸಲಾಗಿಲ್ಲ. ಸದ್ಯಕ್ಕೆ ನಾನು ಯಾವುದೇ ರಾಜಕೀಯವನ್ನು ಚರ್ಚಿಸಿಲ್ಲ’ ಎಂದು ಸೋನು ಸೂದ್ ಆ ಸಮಯದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು.

ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ 48 ವರ್ಷದ ನಟನ ಜನೋಪಕಾರವು ಅವರಿಗೆ ‘ವಲಸಿಗರ ಉದ್ದಾರಕ’ (ಮೆಸ್ಸಿಹ್‌ ಆಫ್‌ ಮೈಗ್ರೇಂಟ್ಸ್ಸ್) ಎಂಬ ಬಿರುದ್ದನ್ನು ಕೊಟ್ಟಿತ್ತು.

ಲಾಕ್‌ಡೌನ್‌ ಸಮಯದಲ್ಲಿ ಇಕ್ಕಟ್ಟಿಗೆ ಸಿಲುಕಿದ್ದ ಹಾಗೂ ಅಸಹಾಯಕರಾಗಿರುವ ನೂರಾರು ವಲಸಿಗರನ್ನು ಅವರ ಸ್ವಂತ ರಾಜ್ಯಕ್ಕೆ ಕರೆದೊಯ್ಯಲು ಸ್ವತಃ ಸೋನು ಸೂದ್ ಅವರೆ ಬಸ್‌, ರೈಲು ಮತ್ತು ವಿಮಾನಗಳ ವ್ಯವಸ್ಥೆ ಮಾಡಿದ್ದರು. ಈ ವರ್ಷದ ಆರಂಭದಲ್ಲಿ ಎರಡನೇ ಅಲೆಯ ಸಮಯದಲ್ಲಿ, ಅವರು ಕೋವಿಡ್ ರೋಗಿಗಳಿಗೆ ಆಕ್ಸಿಜೆನ್‌ ಸಿಲೆಂಡರ್‌ಗಳನ್ನು ಒದಗಿಸಿದ್ದರು. ಒಟ್ಟಾರೆಯಾಗಿ ಸರ್ಕಾರಗಳು ಮಾಡಬೇಕಾದ ಕೆಲಸವನ್ನು ಸೋನು ಸೂದ್ ಮಾಡಿ ಜನಮನ್ನಣೆ ಗಳಿಸಿದ್ದರು.

ಕಳೆದ ಸೆಪ್ಟಂಬರ್ ತಿಂಗಳನಲ್ಲಿ ಮುಂಬೈನಲ್ಲಿರುವ ಸೂನು ಸೂದ್‌ ಅವರ ನಿವಾಸ ಹಾಗೂ ಲಕ್ನೋದಲ್ಲಿನ ಸೋನು ಸೂದ್‌ ಅವರ ಹಲವು ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ ನಡೆದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೂನು ಸೂದ್‌, “ನೀವು ಯಾವಾಗಲೂ ನಿಮ್ಮ ಕಡೆಯ ಕತೆ ಹೇಳಬೇಕಾಗಿಲ್ಲ. ಅದಕ್ಕೊಂದು ಸಮಯ ಬರುತ್ತದೆ. ನನ್ನ ಫೌಂಡೇಷನ್‌‌‌ನ ಪ್ರತಿ ರೂಪಾಯಿಯು ಅಮೂಲ್ಯವಾದ ಜೀವವನ್ನು ಉಳಿಸಲು ಮತ್ತು ಅಗತ್ಯವಿರುವವರಿಗೆ ತಲುಪಲು ತನ್ನ ಸರದಿಗಾಗಿ ಕಾಯುತ್ತಿದೆ. ಕಾಲವೇ ಉತ್ತರಿಸುತ್ತದೆ” ಎಂದಿದ್ದರು.

‘ನಾನು 2 ಬಾರಿ ರಾಜ್ಯಸಭಾ ಸ್ಥಾನ ತಿರಸ್ಕರಿಸಿದ್ದೇನೆ, ರಾಜಕೀಯಕ್ಕೆ ಸೇರಲು ಮಾನಸಿಕವಾಗಿ ಸಿದ್ಧವಾಗಿಲ್ಲ ಎಂದು ಎನ್‌ಡಿಟಿವಿ ನಡೆಸಿದ ಸಂದರ್ಭದಲ್ಲಿ ಅವರು ತಿಳಿಸಿದ್ದರು.

ಈಗ ಅವರ ಸಹೋದರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದನ್ನು ರಾಜಕೀಯ ಪಕ್ಷಗಳು ಮತ್ತು ಜನಸಾಮಾನ್ಯರು ಯಾವ ರೀತಿ ಸ್ವೀಕರಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ನಾನು 2 ಬಾರಿ ರಾಜ್ಯಸಭಾ ಸ್ಥಾನ ತಿರಸ್ಕರಿಸಿದ್ದೇನೆ’- ನಟ ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...