Homeಕರ್ನಾಟಕ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

- Advertisement -
- Advertisement -

ಘನತೆ, ಮನ್ನಣೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿರುವ ಗೃಹ ಕಾರ್ಮಿಕರು ನವೆಂಬರ್‌ 20 ರಂದು ಮೂರು ಜಿಲ್ಲೆಗಳ ಕಾರ್ಮಿಕರ ಭವನದ ಬಳಿ ಮಹಿಳಾ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗೃಹ ಕಾರ್ಮಿಕ ಹಕ್ಕುಗಳ ಯೂನಿಯನ್ (DWRU) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

“ನಾವು ನಿಮ್ಮಂತೆಯೇ ಮನುಷ್ಯರು. ನಿಮ್ಮಂತೆಯೆ ದುಡಿದು ತಿನ್ನುವ ನೈತಿಕ ಜವಾಬ್ದಾರಿ ಹೊತ್ತಿರುವ ಕಾರ್ಮಿಕರು. ಬದುಕಿನುದ್ದಕ್ಕೂ ಅನೇಕ ಸವಾಲುಗಳನ್ನೆದುರಿಸಿ ಪ್ರತಿ ದಿನವನ್ನು ಹೋರಾಟದ ಬದುಕನ್ನಾಗಿಸಿಕೊಂಡು ಯಶಸ್ಸು ಕಾಣಬಯಸಿರುವ ಕನಸಿಗರು. ಕಟ್ಟಡ ನಿರ್ಮಾಣ ಕೆಲಸದಲ್ಲಿ, ಬೀದಿ ವ್ಯಾಪಾರದಲ್ಲಿ, ರಸ್ತೆ ನಿರ್ಮಾಣ, ಮನೆಗೆಲಸ, ಕಂಪನಿ, ಹೋಟೆಲ್‌ಗಳಲ್ಲಿ ಸ್ವಚ್ಛ ಮಾಡಿ ಗುಡಿಸಿ ಚೆಂದ ಮಾಡುವ ಇನ್ನೂ ಅನೇಕ ಅಸಂಘಟಿತ ವಲಯದ ಕೆಲಸಗಳಲ್ಲಿ ಭಾಗಿಯಾಗಿದ್ದೇವೆ. ಇಂತಹ ನಮ್ಮ ಬದುಕಿನ ಪ್ರಶ್ನೆಗಳಿಗೆ ಸರ್ಕಾರವೇ ಉತ್ತರ ಕೊಡಬೇಕು” ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ಬೆಂಗಳೂರು, ಮಂಗಳೂರು ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಮಿಕರ ಭವನದ ಬಳಿ Domestic Workers Rights Union (DWRU) ನೇತೃತ್ವದಲ್ಲಿ ಏಕಕಾಲಕ್ಕೆ ಕಾರ್ಮಿಕರು ಪ್ರತಿಭಟನೆ ನಡೆಸಿ, ತಮ್ಮ ಹಕ್ಕುಗಳಿಗೆ ಆಗ್ರಹಿಸಲಿದ್ದಾರೆ.

ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

“ದೇಶದಾದ್ಯಂತ ಸಾವಿರಾರು ಹುಡುಗಿಯರು ಜೀವನೋಪಾಯದ ಹುಡುಕಾಟದಲ್ಲಿ ಪ್ಲೇಸ್‌ ಮೆಂಟ್‌ ಎಜೆನ್ಸಿಗಳ ಜಾಲಕ್ಕೆ ಸಿಲುಕಿ ಕಳ್ಳಸಾಗಾಣಿಕೆಗೆ ಬಲಿಯಾಗುತ್ತಿದ್ದಾರೆ, ದುಡಿತಕ್ಕೆ ತಕ್ಕ ಸಂಬಳ ಸಿಗುವುದಿಲ್ಲ. ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಅಸ್ಪೃಶ್ಯತೆ ಮತ್ತು ಅನಾರೋಗ್ಯವನ್ನು ಎದುರಿಸುತ್ತಿದ್ದಾರೆ. ಎಲ್ಲಾ ಬೃಹತ್‌ ನಗರ ಮತ್ತು ನಗರ, ಮನೆಗಳಲ್ಲಿ ಕಂಡುಬರುವ ಸಾವಿರಾರು ಮನೆಕೆಲಸಗಾರರು ಅದೃಶ್ಯರಾಗಿದ್ದಾರೆ, ಆರ್ಥಿಕತೆ, ಸಮಾಜ ಮತ್ತು ಕುಟುಂಬಕ್ಕೆ ಕೊಡುಗೆ ನೀಡುತ್ತಾ ಬಂದಿದ್ದಾರೆ”.

“ಈ ಪಾರ್ಟ್‌ಟೈಮರ್‌ಗಳಲ್ಲಿ ಅನೇಕರು ಮುಂಜಾನೆ 5 ಗಂಟೆಗೆ ಮನೆ ಕೆಲಸಕ್ಕೆ ತೆರಳುತ್ತಾರೆ. ಅನೇಕ ಮನೆಗಳಲ್ಲಿ, ಜಾತಿ ತಾರತಮ್ಯವನ್ನು ಎದುರಿಸುತ್ತಾರೆ. ಅವರ ಘನತೆಯ ಮೇಲೆ ಹಲ್ಲೆ ನಡೆಸಲಾಗುತ್ತದೆ. ಇವರಿಗೆ ಸಾಮಾಜಿಕ ಭದ್ರತೆ ಇಲ್ಲ, ರಜೆ ಇಲ್ಲ, ರಕ್ಷಣೆ ಇಲ್ಲ, ಇತರ ಕಾರ್ಮಿಕರಂತೆ ಯಾವುದೇ ಹಕ್ಕುಗಳಿಲ್ಲ. ಆದ್ದರಿಂದ ಬಹುಪಾಲು ಮಹಿಳೆಯರು, ಬಾಲಕಿಯರು ಅದೃಶ್ಯರಾಗಿದ್ದಾರೆ. ಜೊತೆಗೆ ಗುಲಾಮಗಿರಿಯಂತಹ ಪರಿಸ್ಥಿತಿಗಳಲ್ಲಿ ಉಳಿದಿದ್ದಾರೆ” ಎಂದು ಗೃಹ ಕಾರ್ಮಿಕರ ಸಂಘಟನೆ ತಿಳಿಸಿದೆ.

 ಪ್ರಶ್ನೆಗಳು ಮತ್ತು ಹಕ್ಕೊತ್ತಾಯಗಳು: 
1. ಗೃಹ ಕಾರ್ಮಿಕರನ್ನು ಗುರುತಿಸುವ ಮತ್ತು ಅವರನ್ನು ಘನತೆಯಿಂದ ನಡೆಸಿಕೊಳ್ಳುವ ಉದ್ದೇಶದ ಬಗ್ಗೆ ಸರ್ಕಾರವು ಗಂಭೀರವಾಗಿದೆಯೇ..? ಅಸಂಘಟಿತ ಕಾರ್ಮಿಕ ವಲಕ್ಕೆ ಸರ್ಕಾರವು ನಿಗದಿ ಪಡಿಸಿದ ಹಣಕಾಸಿನ(ಬಜೆಟ್) ಹಂಚಿಕೆಯ ಬಗೆಗಿನ ವಿವರದ ಮಾಹಿತಿ ಜನರಿಗೆ ಯಾಕೆ ತಲುಪುವುದಿಲ್ಲ..?

2. ಯೋಜನೆಯಿಲ್ಲದ, ಯಾವುದೇ ಪ್ರಯೋಜನಗಳಿಲ್ಲದ, ಕೇವಲ ಪ್ಲಾಸ್ಟಿಕ್ ಪೇಪರ್ ಕಾರ್ಡ್ ಏನು ಸೇವೆ ನೀಡುತ್ತದೆ..?

3. 2016 ರಿಂದ 2021ರ ಈ ನಾಲ್ಕು ವರ್ಷಗಳು ಕಳೆದರು ಸರ್ಕಾರವು ತೀವ್ರ ಮಂದಗತಿಯಲ್ಲಿ ಗೃಹ ಕಾರ್ಮಿಕರನ್ನು ತಲುಪಿರುವುದಾದರು ಯಾಕೆ..? ಗೃಹ ಕಾರ್ಮಿಕರು ಬಹುತೇಕರು ದಲಿತರು ಮತ್ತು ಮುಸ್ಲಿಮರು ಎಂಬ ಕಾರಣಕ್ಕೆ ಸರ್ಕಾರದ ಕಣ್ಣಿಗೆ ಕಾಣಿಸುತ್ತಿಲ್ಲವೆ..?

4.2020-2021ರ ಈ ಎರಡು ವರ್ಷಗಳ ಭೀಕರ ಕೊರೊನಾ ಪರಿಸ್ಥಿತಿಯಲ್ಲಿ ಕೆಲಸಗಳಿಲ್ಲದೆ, ಯಾವುದೇ ಆದಾಯವಿಲ್ಲದೆ, ಸರ್ಕಾರದ ಯಾವ ಸೌಲಭ್ಯಗಳಿಲ್ಲದೆ, ಕಡಿಮೆ ವೈದ್ಯಕೀಯ ಸೌಲಭ್ಯಗಳ ಪರಿಸ್ಥಿತಿಯಲ್ಲಿ ಸ್ಮಾರ್ಟ್ ಕಾರ್ಡ್ ನೋಂದಾವಣಿಯನ್ನು ಏಕೆ ನಿಲ್ಲಿಸಲಾಯಿತು..?

5. ವಲಸೆ ಗೃಹ ಕಾರ್ಮಿಕರನ್ನು ಸ್ಮಾರ್ಟ್ ಕಾರ್ಡ್ ಯೋಜನೆಯಿಂದ ಏಕೆ ಹೊರಗಿಡಲಾಗಿದೆ..? ಮಾಲೀಕರ ಮನೆಯಲ್ಲೇ ಉಳಿದುಕೊಂಡು ಕೆಲಸ ಮಾಡುವ ಮಹಿಳಾ ಕಾರ್ಮಿಕರು ಒಂದು ರೀತಿಯ ಜೀತವನ್ನು ಪ್ರತಿ ದಿನವೂ ಅನುಭವಿಸುತ್ತಿದ್ದಾರೆ ಇವರ ಬಗೆಗೆ ನಿಮ್ಮ ನಿಲುವೇನು..?

6. ಮಾಲೀಕರ ವಿವರಗಳನ್ನು ಮಂಡಳಿಯಲ್ಲಿ ಏಕೆ ನೋಂದಾಯಿಸಲಾಗಿಲ್ಲ..?

7. ಸೆಪ್ಟೆಂಬರ್ 2021 ರಿಂದ ಸ್ಮಾರ್ಟ್ ಕಾರ್ಡ್ ನೋಂದಾವಣೆಯಲ್ಲಿ BPL/PPH ಕಾರ್ಡ್‌ಗಳನ್ನು ಏಕೆ ಹೊಸದಾಗಿ ಪರಿಚಯಿಸಬೇಕು.? ಸರ್ಕಾರ ಗೃಹ ಕಾರ್ಮಿಕರ ಕಲ್ಯಾಣವನ್ನು ಬಯಸುವುದಾದರೆ ಕಲ್ಯಾಣ ಯೋಜನೆಗಳಲ್ಲಿ ತಾರತಮ್ಯ ಏಕೆ..?

8. ಸಮತೆಯ ಹರಿಕಾರ ಡಾ. ಬಿ. ಆರ್ ಅಂಬೇಡ್ಕರ್ ಅವರ ಹೆಸರನ್ನು ಹೊಂದಿರುವ ಯೋಜನೆಯಡಿಯಲ್ಲಿ ಸಂವಿಧಾನದಲ್ಲಿನ ಎಲ್ಲಾ ತತ್ವಗಳನ್ನು ಉಲ್ಲಂಘಿಸಲಾಗಿದ್ದು ಇದು ನಿರ್ಲಜ್ಜವಾಗಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

9. ಕೋವಿಡ್ ತಂದೊಡ್ಡಿದ್ದ ಭೀಕರ ಪರಿಸ್ಥಿತಿಯಲ್ಲಿ ಕಾರ್ಮಿಕಾ ಕೋಡ್ ಅನ್ನು ಕಾರ್ಮಿಕರ ಹಿತಾಸಕ್ತಿ ಇಲ್ಲದೆ, ನ್ಯಾಯ ಸಮ್ಮತ ಇಲ್ಲದೆ ಅಂಗೀಕರಿಸಿರುವುದು ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ತೋರಿಸುವುದಿಲ್ಲವೇ..?

10. “ರೈತರು ಮತ್ತು ಕಾರ್ಮಿಕರನ್ನು” ದ್ರೋಹ ಬಗೆದವರು ಎಂಬ ರೀತಿಯಲ್ಲಿ ಕಾಣುವ ರಾಜ್ಯದಲ್ಲಿ ಯಾವುದೇ ಗೌರವ ಇಲ್ಲದೇ ಗೃಹ ಕಾರ್ಮಿಕರನ್ನು ಪ್ರತ್ಯೇಕವಾಗಿ ಕಾಣುತ್ತಿರುವುದಾದರೂ ಯಾಕೆ..? ಪ್ರತಿ ಸಲ ನಾವು “ರಾಷ್ಟ್ರ ವಿರೋಧಿಗಳು” ಎಂಬ ಪದವನ್ನು ಕೇಳಿಸಿಕೊಳ್ಳುತ್ತಿದ್ದೇವೆ. ಹಾಗಾದರೆ ಯಾರು ನಿಮ್ಮ ಪ್ರಕಾರ ರಾಷ್ಟ್ರ ವಿರೋಧಿಗಳು..?

ಎಂಬ 10 ಪ್ರಶ್ನೆಗಳನ್ನು ಇಟ್ಟುಕೊಂಡು, ಘನತೆ, ಮನ್ನಣೆ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಮಹಿಳಾ ಚಲೋ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ:ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...