Homeಮುಖಪುಟಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

- Advertisement -
- Advertisement -

ಗುಜರಾತ್ ರಾಜ್ಯದಲ್ಲಿನ ಕೆಲವು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರುವ ಸುದ್ದಿ ಹೊರಬಿದ್ದ ಬಳಿಕ, ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ.

ಗುಜರಾತ್‌ನಲ್ಲಿ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ ಹೇರಲು ಸ್ಥಳೀಯ ಜನಪ್ರತಿನಿಧಿಗಳು ಮುಂದಾಗಿದ್ದಾರೆಂಬ ಸುದ್ದಿಗಳು ಹೊರಬಿದ್ದಿದ್ದವು.

ಬಿಜೆಪಿಯ ರಾಜ್ಯ ಮುಖ್ಯಸ್ಥ ಸಿ.ಆರ್.ಪಾಟೀಲ್ ಅವರು, “ವೈಯಕ್ತಿಕ ನಂಬಿಕೆಗಳ” ಆಧಾರದ ಮೇಲೆ ಪ್ರಕಟಣೆಗಳನ್ನು ಬದಿಗಿರಿಸಬೇಕು ಎಂದು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಆದರೆ ವಡೋದರಾ, ರಾಜ್‌ಕೋಟ್ ಮತ್ತು ಭಾವನಗರ ಸ್ಥಳೀಯ ಸಂಸ್ಥೆಗಳು ಬೀದಿಬದಿ ತೆರೆದಿಟ್ಟು ಮಾಂಸಾಹಾರ ಮಾರುವಂತಿಲ್ಲ ಎಂದಿವೆ. ಇದೇ ರೀತಿಯ ನಿರ್ಧಾರವನ್ನು ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ರಾಜಕೀಯ ಕಾರ್ಯಕಾರಿಯೊಬ್ಬರು ಕೈಗೊಂಡಿದ್ದಾರೆ.

ವಡೋದರಾ ನಾಗರಿಕ ಸಂಸ್ಥೆಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿತೇಂದ್ರ ಪಟೇಲ್ ಗುರುವಾರ, ಮಾಂಸಾಹಾರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದನ್ನು ನಿಲ್ಲಿಸಲು ಆಹಾರ ಮಳಿಗೆಳಿಗೆ 15 ದಿನಗಳ ಗಡುವನ್ನು ನಿಗದಿಪಡಿಸಿದ್ದರು. ರಾಜ್‌ಕೋಟ್ ನಗರದ ಮೇಯರ್ ಇದೇ ರೀತಿಯ ಘೋಷಣೆ ಮಾಡಿದ ಒಂದು ದಿನದ ನಂತರ ಪಟೇಲ್‌ರ “ಮೌಖಿಕ ಸೂಚನೆ” ಹೊರಬಿದ್ದಿತ್ತು. “ಟ್ರಾಫಿಕ್ ದಟ್ಟಣೆ”, “ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಆಧಾರದಲ್ಲಿ ಈ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಜರುಗಿಸಲು ಮುಂದಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಆದರೆ ಸಿ.ಆರ್‌.ಪಾಟೀಲ್ ಅವರು ಸಂಡೇ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿ, “ನಾನು ವಡೋದರಾ ಮತ್ತು ರಾಜ್‌ಕೋಟ್ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಮಾಂಸಾಹಾರದ ಗಾಡಿಗಳನ್ನು ಬೀದಿಗಳಿಂದ ತೆಗೆಯದಂತೆ ಅವರಿಗೆ ಹೇಳಿದ್ದೇನೆ. ಇದು ಮುಖಂಡರೊಬ್ಬರ ವೈಯಕ್ತಿಕ ಅಭಿಪ್ರಾಯವಾಗಿದ್ದು, ರಾಜ್ಯ ಬಿಜೆಪಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಇದನ್ನು ರಾಜ್ಯಾದ್ಯಂತ ಜಾರಿಗೆ ತರುವುದಿಲ್ಲ” ಎಂದಿದ್ದಾರೆ. ರಾಜ್ಯದ ಎಲ್ಲಾ ಎಂಟು ಮುನ್ಸಿಪಲ್ ಕಾರ್ಪೊರೇಷನ್‌ಗಳು ಬಿಜೆಪಿಯ ಆಡಳಿತದಲ್ಲಿವೆ ಎಂಬುದು ಇಲ್ಲಿ ಉಲ್ಲೇಖನೀಯ.

ರಸ್ತೆಗಳಲ್ಲಿ ಮಾಂಸಾಹಾರ ಮಾರಾಟವನ್ನು ನಿಷೇಧಿಸುವಂತೆ ಎಎಂಸಿ ಕಂದಾಯ ಸಮಿತಿ ಅಧ್ಯಕ್ಷ ಜೈನಿಕ್ ವಕೀಲ್ ಅವರು ಶನಿವಾರ ಪಾಲಿಕೆ ಆಯುಕ್ತರು ಮತ್ತು ಸ್ಥಾಯಿ ಸಮಿತಿಗೆ ಪತ್ರ ಬರೆದಿದ್ದಾರೆ.

“ಗುಜರಾತ್‌ನ ಗುರುತು ಮತ್ತು ಕರ್ಣಾವತಿ (ಅಹಮದಾಬಾದ್) ನಗರದ ಸಾಂಸ್ಕೃತಿಕ ಸಂಪ್ರದಾಯವನ್ನು ಗಮನದಲ್ಲಿಟ್ಟುಕೊಂಡು, ಮಾಂಸಾಹಾರವನ್ನು ನಗರದ ಸಾರ್ವಜನಿಕ ರಸ್ತೆಗಳು, ಧಾರ್ಮಿಕ ಮತ್ತು ಶೈಕ್ಷಣಿಕ ಸ್ಥಳಗಳಲ್ಲಿ ಇಡದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ರಸ್ತೆಗಳಲ್ಲಿ ಸಂಚರಿಸದಂತಾಗಿದೆ. ಇದರ ಜತೆಗೆ ಇಲ್ಲಿನ ನಿವಾಸಿಗಳ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗಿದೆ. ಈ ನಿರ್ಬಂಧವು ಸ್ವಚ್ಛತೆ, ಜೀವನ ಮತ್ತು ನಮ್ಮ ಸಂಸ್ಕೃತಿಯ ಅನುಸರಣೆಯನ್ನು ಕಾಪಾಡಿಕೊಳ್ಳಲು ಮುಖ್ಯವಾಗಿದೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಪಕ್ಷದಲ್ಲಿ ಈ ವಿಚಾರಕ್ಕೆ ಒಮ್ಮತವಿಲ್ಲ. ಮಗುವನ್ನು ಜಿಗುಟುವ ಹಾಗೂ ತೊಟ್ಟಿಲನ್ನು ತೂಗುವ ಕೆಲಸವನ್ನು ಬಿಜೆಪಿ ನಾಯಕರೇ ಮಾಡುತ್ತಿದ್ದಾರೆಂದು ಭಾಸವಾಗುತ್ತದೆ. ಆಹಾರ ಸ್ವತಂತ್ರವನ್ನು ಕೆಲವು ಬಿಜೆಪಿಯ ಜನಪ್ರತಿನಿಧಿಗಳು ಕಿತ್ತುಕೊಳ್ಳಲು ಯತ್ನಿಸುತ್ತಿದ್ದಾರೆ. ಮತ್ತೆ ಕೆಲವರು ಆಹಾರ ಸ್ವತಂತ್ರದ ಪರ ಮಾತನಾಡುತ್ತಿದ್ದಾರೆ.

ಖೇಡಾ ಜಿಲ್ಲೆಯ ಬಿಜೆಪಿ ಐಟಿ ಸೆಲ್ ಮಾಜಿ ಅಧ್ಯಕ್ಷೆ ನಂದಿತಾ ಠಾಕೂರ್ ಅವರು ಟ್ವೀಟ್ ಮಾಡಿ, “ಮೀನು ಮಾರಾಟ ಮಾಡುವ ಅನೇಕರು ನಮ್ಮವರೇ ಎಂಬ ಅಂಶವನ್ನು ನಾವು ನಿರ್ಲಕ್ಷಿಸಲಾಗುವುದಿಲ್ಲ. ಕಟ್ಟುನಿಟ್ಟಾದ ಸಸ್ಯಾಹಾರಿಯಾಗಿರುವ ನರೇಂದ್ರ ಮೋದಿ ಸಾಹೇಬ್ ಅವರು ಮಾಂಸಾಹಾರಿ ಆಹಾರದ ವ್ಯಾಪಾರದಲ್ಲಿ ತೊಡಗಿರುವವರಿಗೆ ಎಂದಿಗೂ ನಿರ್ಬಂಧಗಳನ್ನು ವಿಧಿಸಲಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವಡೋದರಾದ ಬಿಜೆಪಿಯ ಹಿರಿಯ ಚುನಾಯಿತ ಪ್ರತಿನಿಧಿಯೊಬ್ಬರು, “ನಾನು ಸಸ್ಯಾಹಾರಿ ಆದರೆ ನಾನು ನಿರ್ಧಾರವನ್ನು ಒಪ್ಪುವುದಿಲ್ಲ. ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಮಳಿಗೆಗಳು ಕೆಲವು ಕುಟುಂಬಗಳಿಗೆ ಜೀವನಾಧಾರವಾಗಿದೆ. ನೈರ್ಮಲ್ಯ ಕಾಪಾಡದಿರುವುದನ್ನು ಯಾರೂ ಒಪ್ಪುವುದಿಲ್ಲ, ಆದರೆ ಅದು ಗ್ರಾಹಕ ಕೇಂದ್ರಿತವಾಗುತ್ತದೆ” ಎಂದು ತಿಳಿಸಿದ್ದಾರೆ.

ಪಾಟೀಲ್ ನೀಡಿದ ಸೂಚನೆಯನ್ನು ಬಿಜೆಪಿ ಆಡಳಿತದ ವಿಎಂಸಿ ಸ್ವೀಕರಿಸಿದೆ ಎಂದು ವಡೋದರಾ ಮೇಯರ್ ಕೆಯೂರ್ ರೊಕಾಡಿಯಾ ಹೇಳಿದ್ದಾರೆ. ಜೊತೆಗೆ ಮೇಯರ್‌‌, “ನಾವು ಬೀದಿಗಳಿಂದ ಯಾವುದೇ ಮಳಿಗೆಗಳನ್ನು ತೆಗೆದುಹಾಕಲು ಅಥವಾ ನಿರ್ದಿಷ್ಟ ರೀತಿಯ ಆಹಾರವನ್ನು ಮಾರಾಟ ಮಾಡುವುದನ್ನು ನಿರಂಕುಶವಾಗಿ ತಡೆಯಲು ಸಾಧ್ಯವಿಲ್ಲ. ಆದರೆ ಮಾಂಸಾಹಾರವನ್ನು ಮುಚ್ಚಿಡುವುದರಿಂದ ಖಂಡಿತವಾಗಿಯೂ ಯಾವುದೇ ಹಾನಿ ಇಲ್ಲ…” ಎಂದಿದ್ದಾರೆ. ಮಾಂಸಾಹಾರದ ಅನೇಕ ಪದಾರ್ಥಗಳನ್ನು ಪ್ರದರ್ಶಿಸಿಯೇ ಮಾರಾಟ ಮಾಡಬೇಕು. ಬಿಜೆಪಿ ಮುಖಂಡರ ಪ್ರತಿಪಾದನೆಯನ್ನು ಜಾರಿಗೊಳಿಸುವುದು ಹೇಗೆ ಎಂಬುದು ಬಡ ವ್ಯಾಪಾರಿಗಳ ಯಕ್ಷ ಪ್ರಶ್ನೆಯಾಗಿದೆ.


ಇದನ್ನು ಓದಿರಿ: ಸಗಣಿ ಮತ್ತು ಗೋಮೂತ್ರ ದೇಶದ ಆರ್ಥಿಕತೆಯನ್ನು ಸಬಲಗೊಳಿಸುತ್ತದೆ: ಮಧ್ಯ ಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...