HomeಮುಖಪುಟCBI ಮತ್ತು ED ನಿರ್ದೇಶಕರ ಅಧಿಕಾರಾವಧಿ 5 ವರ್ಷ ವಿಸ್ತರಣೆ: ಖಂಡನೆ

CBI ಮತ್ತು ED ನಿರ್ದೇಶಕರ ಅಧಿಕಾರಾವಧಿ 5 ವರ್ಷ ವಿಸ್ತರಣೆ: ಖಂಡನೆ

- Advertisement -
- Advertisement -

ಸಿಬಿಐ ನಿರ್ದೇಶಕ ಮತ್ತು ಇಡಿ ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷಗಳವರೆಗೆ ವಿಸ್ತರಿಸಬಹುದು ಎಂಬ ಎರಡು ಸುಗ್ರೀವಾಜ್ಞೆಗಳನ್ನು ಇಂದು ರಾಷ್ಟ್ರಪತಿಗಳ ಮೂಲಕ ಸರ್ಕಾರ ಹೊರಡಿಸಿದೆ.

ಇದುವರೆಗೂ ಈ ಎರಡೂ ತನಿಖಾ ಸಂಸ್ಥೆಗಳ ಮುಖ್ಯಸ್ಥರ ಅಧಿಕಾರವಧಿ ಎರಡು ವರ್ಷ ಇತ್ತು. 2018 ರಲ್ಲಿ ಅಧಿಕಾರ ವಹಿಸಿಕೊಂಡ ಜಾರಿ ನಿರ್ದೇಶನಾಲಯದ ಮುಖ್ಯಸ್ಥ ಎಸ್‌ಕೆ ಮಿಶ್ರಾ ಅವರ ವಿಸ್ತರಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿ ಎಲ್‌ಎನ್ ರಾವ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಅಧಿಕಾರಾವಧಿಯ ವಿಸ್ತರಣೆಯನ್ನು “ಅಪರೂಪದ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ಮಾಡಬೇಕು” ಎಂದು ಹೇಳಿತ್ತು. ಇದರ ಆಧಾರದಲ್ಲಿಯೇ ಕಳೆದ ವರ್ಷ ಅವರ ಅಧಿಕಾರವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿತ್ತು.

ಇದೇ ನವೆಂಬರ್ 17ಕ್ಕೆ ಇಡ ಮುಖ್ಯಸ್ಥರ ಅಧಿಕಾರವಧಿ ಮುಗಿಯುತ್ತಿರುವುದರ ಹಿನ್ನೆಲೆಯಲ್ಲಿ 5 ವರ್ಷಗಳವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದೆ.

ಜಾರಿ ನಿರ್ದೇಶನಾಲಯ ಕಂದಾಯ ಇಲಾಖೆ, ಹಣಕಾಸು ಸಚಿವಾಲಯದ ಅಡಿಯಲ್ಲಿನ ವಿಶೇಷ ಹಣಕಾಸು ತನಿಖಾ ಸಂಸ್ಥೆಯಾಗಿದ್ದು, ವಿದೇಶಿ ವಿನಿಮಯ ಕಾನೂನುಗಳು ಮತ್ತು ನಿಯಮಗಳು ಮತ್ತು ಮನಿ ಲಾಂಡರಿಂಗ್‌ಗೆ ಸಂಬಂಧಿಸಿದ ಪ್ರಕರಣಗಳನ್ನು ತನಿಖೆ ಮಾಡುತ್ತದೆ.

ಕೇಂದ್ರ ಸರ್ಕಾರದ ಈ ನಡೆಯನ್ನು ಹಲವಾರು ಜನರು ವಿರೋಧಿಸಿದ್ದಾರೆ. “ಆಘಾತಕಾರಿ ಮತ್ತು ಅಸಹ್ಯಕರ! ಸಿಬಿಐ ಮತ್ತು ಇಡಿ ಸ್ವಾತಂತ್ರ್ಯವನ್ನು ಮತ್ತಷ್ಟು ಹಾಳುಮಾಡುವ ಪ್ರಯತ್ನವಿದು” ಎಂದು ಸುಪ್ರೀಂ ಕೋರ್ಟ್ ವಕೀಲರಾದ ಪ್ರಶಾಂತ್ ಭೂಷಣ್ ಟೀಕಿಸಿದ್ದಾರೆ.

“ತಮ್ಮ ಅನುಕೂಲಕ್ಕಾಗಿ ಇಡಿ ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷಗಳಿಗೆ ವಿಸ್ತರಿಸಲು ಸುಗ್ರೀವಾಜ್ಞೆ ತರಲಾಗಿದೆ. ಮುಂದೆ ಪ್ರಧಾನಿ ಅಧಿಕಾರಾವಧಿಯನ್ನು 10 ವರ್ಷಕ್ಕೆ ವಿಸ್ತರಿಸಲು ಹೊಸ ಕಾನೂನು ತರುತ್ತಾರೆಯೇ? ಪ್ರಜಾಸತ್ತಾತ್ಮಕ ಭಾರತ ನಿರ್ಮಿಸಿದ ಪ್ರತಿಯೊಂದು ಸಂಸ್ಥೆಯನ್ನು ಮೋದಿ ನಿರ್ಲಜ್ಜವಾಗಿ ಮುಗಿಸುತ್ತಿದ್ದಾರೆ. ಬಿಜೆಪಿ + ಆರೆಸ್ಸೆಸ್ + EC + CBI + IT + ED ಯ ಮಹಾಘಟಬಂಧನ್ ಪ್ರಜಾಪ್ರಭುತ್ವವನ್ನು ಕೊನೆಗೊಳಿಸುತ್ತದೆ” ಎಂದು ಕಾಂಗ್ರೆಸ್ ವಕ್ತಾರ ಶ್ರೀವತ್ಸ ಆರೋಪಿಸಿದ್ದಾರೆ.


ಇದನ್ನೂ ಓದಿ; ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...