Homeಮುಖಪುಟತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

- Advertisement -
- Advertisement -

ತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಪತ್ರಕರ್ತೆಯರ ವಿರುದ್ಧ ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸಿಲ್ಚಾರ್‌ಗೆ ತೆರಳುತ್ತಿದ್ದ ವೇಳೆ ಅಸ್ಸಾಂ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅಸ್ಸಾಂನಲ್ಲಿ ಇವರ ಮೇಲೆ ಯಾವುದೇ ದೂರು ದಾಖಲಾಗದಿದ್ದರೂ ಗೋಮತಿ ಜಿಲ್ಲಾ ಎಸ್‌ಪಿ ಆದೇಶದಂತೆ ಬಂಧಿಸಲಾಗಿದೆ.

“ನಮ್ಮನ್ನು ಅಸ್ಸಾಂನ ಕರೀಂಗಂಜ್‌ನ ನಿಲಂಬಜಾರ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಗೋಮತಿ ಜಿಲ್ಲಾ ಎಸ್‌ಪಿಯವರು ನಮ್ಮ ಬಂಧನಕ್ಕೆ ಆದೇಶ ನೀಡಿದ್ದಾರೆ ಎಂದು ನಿಲಂಬಜಾರ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಯಿಂದ ನಮಗೆ ತಿಳಿಯಿತು” ಎಂದು ಪತ್ರಕರ್ತೆ ಸಮೃದ್ಧಿ ಸಕುನಿಯಾ ಟ್ವೀಟ್ ಮಾಡಿದ್ದಾರೆ. ಜೊತೆಗೆ ತಮ್ಮ ಸುದ್ದಿ ಸಂಸ್ಥೆಯ ಅಧಿಕೃತ ಹೇಳಿಕೆಯನ್ನು ಲಗತ್ತಿಸಿದ್ದಾರೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಮೇಲೆ ದೂರು ದಾಖಲು

 ದೆಹಲಿ ಮೂಲದ ವರದಿಗಾರರಾದ 21 ವರ್ಷದ ಸಮೃದ್ಧಿ ಸಕುನಿಯಾ ಮತ್ತು 25 ವರ್ಷದ ಸ್ವರ್ಣ ಝಾ ವಿರುದ್ಧ ಭಾರತೀಯ ದಂಡ ಸಂಹಿತೆಯ 120B (ಕ್ರಿಮಿನಲ್ ಪಿತೂರಿ), 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 504 ಸೆಕ್ಷನ್ ಅಡಿಗಳಲ್ಲಿ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನವೆಂಬರ್ 13 ರಂದು ಫಾಟಿಕ್ರೋಯ್‌ನಲ್ಲಿರುವ ಮುಸ್ಲಿಂ ಮನೆಗಳಿಗೆ ಭೇಟಿ ನೀಡಿದಾಗ ಇಬ್ಬರು ಪತ್ರಕರ್ತರು “ಹಿಂದೂಗಳು ಮತ್ತು ತ್ರಿಪುರಾ ಸರ್ಕಾರದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ” ಎಂದು ಆರೋಪಿಸಿ ಕಾಂಚನ್ ದಾಸ್ ಎಂಬವರು ದೂರು ದಾಖಲಿಸಿದ್ದಾರೆ.

ಪತ್ರಕರ್ತೆ ಸಕುನಿಯಾ, ಅಕ್ಟೋಬರ್ 24 ರಂದು ಉನಕೋಟಿಯ ಪೌಲ್ ಬಜಾರ್‌ನಲ್ಲಿ ಮಸೀದಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಎಚ್‌ಪಿ ಮತ್ತು ಬಜರಂಗದಳ ಸಂಘಟನೆ ಹೆಸರನ್ನು ಸೇರಿಸಿದ್ದಾರೆ. ಇದು ತ್ರಿಪುರಾದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡುವ “ಅಪರಾಧದ ಪಿತೂರಿ”ಯ ಭಾಗವಾಗಿದೆ ಎಂದು ದಾಸ್ ಆರೋಪಿಸಿದ್ದಾರೆ.

ನವೆಂಬರ್ 12 ರಂದು, ಸಮೃದ್ಧಿ ಸಕುನಿಯಾ ಮತ್ತು ಸ್ವರ್ಣ ಝಾ ಅವರು ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಬೆಂಕಿಗೆ ಆಹುತಿಯಾಗಿರುವ ಮಸೀದಿಯ ಬಗ್ಗೆ ವರದಿ ಮಾಡಿದ್ದರು. ಶನಿವಾರ ಇಬ್ಬರು ವರದಿಗಾರರು ಇಲ್ಲಿ ಇನ್ನೊಂದು ಮಸೀದಿ ಮತ್ತು ಮುಸ್ಲಿಮರ ಮನೆಗಳಿಗೆ ಹಾನಿಯಾಗಿರುವದನ್ನು ವರದಿ ಮಾಡಲು ಧರ್ಮನಗರಕ್ಕೆ ಬಂದಿದ್ದರು. ತ್ರಿಪುರಾದಲ್ಲಿ ಅಕ್ಟೋಬರ್ 26 ರಂದು ನಡೆದ ವಿಎಚ್‌ಪಿ ರ್‍ಯಾಲಿ ಬಳಿಕ ಹಿಂಸಾಚಾರ ಆರಂಭವಾಗಿದೆ.

ಆದರೆ, ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲಿ ಮಸೀದಿಯನ್ನು ಧ್ವಂಸ ಮಾಡಿರುವ ವರದಿಗಳನ್ನು ಗೃಹ ಸಚಿವಾಲಯ ತಳ್ಳಿಹಾಕಿದೆ. “ತ್ರಿಪುರಾದ ಗೋಮತಿ ಜಿಲ್ಲೆಯ ಕಕ್ರಾಬನ್ ಪ್ರದೇಶದಲ್ಲಿ ಮಸೀದಿಯನ್ನು ಹಾನಿಗೊಳಿಸಲಾಗಿದೆ ಮತ್ತು ಧ್ವಂಸಗೊಳಿಸಲಾಗಿದೆ ಎಂದು ವರದಿ ಪ್ರಸಾರವಾಗಿವೆ. ಈ ಸುದ್ದಿಗಳು ನಕಲಿ ಮತ್ತು ಸಂಪೂರ್ಣ ಸುಳ್ಳು” ಎಂದಿದೆ.


ಇದನ್ನೂ ಓದಿ: ’ಯುಎಪಿಎಯಿಂದ ಸತ್ಯವನ್ನು ಮೌನವಾಗಿಸಲಾಗದು’: ತ್ರಿಪುರಾ ಹಿಂಸಾಚಾರಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಈ ಬಂದನ ಕಂಡನಾರ್ಹ. ಈ ಇಬ್ಬರು ಪತ್ರಕರ್ತೆಯರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...