Homeಸಿನಿಮಾಕ್ರೀಡೆಟಿ20 ವಿಶ್ವಕಪ್‌ನ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಬಾಬರ್ ಅಜಂಗೆ ಕೊಡಬೇಕಿತ್ತು: ಶೋಯಬ್ ಅಖ್ತರ್ ಅಸಮಾಧಾನ

ಟಿ20 ವಿಶ್ವಕಪ್‌ನ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಬಾಬರ್ ಅಜಂಗೆ ಕೊಡಬೇಕಿತ್ತು: ಶೋಯಬ್ ಅಖ್ತರ್ ಅಸಮಾಧಾನ

ಪಾಕ್ ಆಟಗಾರ ಬಾಬರ್ ಒಟ್ಟು ಅಜಂ 6 ಪಂದ್ಯಗಳಲ್ಲಿ 60.60 ಸರಾಸರಿಯಲ್ಲಿ 303 ರನ್ ಗಳಿಸಿದರೆ ಒಟ್ಟು ರನ್ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಬಹುನಿರೀಕ್ಷಿತ ಟಿ20 ವಿಶ್ವಕಪ್‌ ಅಭಿಯಾನ ಮುಕ್ತಾಯಗೊಂಡಿದೆ. ನ್ಯೂಜಿಲೆಂಡ್ ಎದುರು ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಕ್ರಿಕೆಟ್ ದಿಗ್ಗಜ ಆಸ್ಟ್ರೇಲಿಯಾ ಜಯಭೇರಿ ಭಾರಿಸಿ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್‌ಗೆ ಮುತ್ತಿಟ್ಟಿತು. 2019 ರಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿದ್ದ ನ್ಯೂಜಿಲೆಂಡ್ ತಂಡ ಭಾನುವಾದ ಟಿ20 ವಿಶ್ವಕಪ್‌ ಫೈನಲ್‌ನಲ್ಲಿಯೂ ಆಸ್ಟ್ರೇಲಿಯಾ ಎದುರು ಮುಗ್ಗರಿಸಿ ನಿರಾಶೆ ಅನುಭವಿಸಿತು.

ಆಸ್ಟ್ರೇಲಿಯಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ ಗೆದ್ದರೆ ಅದೇ ತಂಡದ ಅನುಭವಿ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಮುಡಿಗೇರಿಸಿಕೊಂಡರು. ಈ ವಿಷಯವಾಗಿ ಪಾಕಿಸ್ತಾನದ ಮಾಜಿ ಆಟಗಾರ ಶೋಯಬ್ ಅಖ್ತರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡೇವಿಡ್ ವಾರ್ನರ್‌ಗಿಂತ ಹೆಚ್ಚು ರನ್ ಗಳಿಸಿದ್ದ, ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದಿದ್ದ ಪಾಕಿಸ್ತಾನದ ನಾಯಕ ಮತ್ತು ಬ್ಯಾಟ್ಸ್‌ಮನ್ ಬಾಬರ್ ಅಜಂರವರಿಗೆ ಆ ಶ್ರೇಯ ಸಲ್ಲಬೇಕಿತ್ತು ಎಂದು ಅಖ್ತರ್ ಅಭಿಪ್ರಾಯಪಟ್ಟಿದ್ದು, ಇದು ಐಸಿಸಿಯ ‘ಅನ್ಯಾಯದ ನಿರ್ಧಾರ’ ಎಂದು ಕರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಬಾಬರ್ ಅಜಂ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಆಗುತ್ತಾರೆ ಎಂದು ನಿರೀಕ್ಷಿಸಿದ್ದೆ. ನಿಜಕ್ಕೂ ಅನ್ಯಾಯದ ನಿರ್ಧಾರ” ಎಂದಿದ್ದಾರೆ.

ಪಾಕ್ ಆಟಗಾರ ಬಾಬರ್ ಒಟ್ಟು ಅಜಂ 6 ಪಂದ್ಯಗಳಲ್ಲಿ 60.60 ಸರಾಸರಿಯಲ್ಲಿ 303 ರನ್ ಗಳಿಸಿದರೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಒಟ್ಟು 7 ಪಂದ್ಯಗಳಲ್ಲಿ 48.16 ಸರಾಸರಿಯಲ್ಲಿ 289 ರನ್ ಗಳಿಸಿದ್ದಾರೆ. ಪಾಕ್ ತಂಡದ ಮತ್ತೊಬ್ಬ ಆಟಗಾರ ಮೊಹಮ್ಮದ್ ರಿಜ್ವಾನ್ ಕೂಡ 6 ಪಂದ್ಯಗಳಲ್ಲಿ 70.25 ಸರಾಸರಿಯಲ್ಲಿ 281 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಂ ಡೇವಿಡ್ ವಾರ್ನರ್‌ಗಿಂತ ಒಂದು ಇನ್ನಿಂಗ್ಸ್ ಕಡಿಮೆ ಆಡಿದರೂ ಸಹ ಅವರಿಗಿಂತ 14 ರನ್ ಹೆಚ್ಚು ಗಳಿಸಿದ್ದಾರೆ. ಸರಾಸರಿ ಸಹ ಉತ್ತಮವಾಗಿದೆ. ಹಾಗಾಗಿ ಅವರಿಗೆ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಪ್ರಶಸ್ತಿ ನೀಡಬೇಕಿತ್ತು ಎಂಬುದು ಅಖ್ತರ್‌ರವರ ವಾದವಾಗಿದೆ.

ಡೇವಿಡ್ ವಾರ್ನರ್ 3 ಅರ್ಧಶತಕಗಳನ್ನು ಭಾರಿಸಿ, 146.70 ಬ್ಯಾಟಿಂಗ್ ಸ್ಟ್ರೈಕ್‌ ರೇಟ್ ನಲ್ಲಿ ರನ್ ಗಳಿಸಿದ್ದಾರೆ. ಅಲ್ಲದೆ ಸೆಮಿಫೈನಲ್ ಪಂದ್ಯದಲ್ಲಿ ಪಾಕ್ ಎದುರು ಮತ್ತು ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಆಸ್ಟ್ರೇಲಿಯಾ ಜಯ ಸಾಧಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗಾಗಿ ಅವರನ್ನು ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹಲವರು ಸಮರ್ಥಿಸಿಕೊಂಡಿದ್ದಾರೆ. ಬಾಬರ್ ಅಜಂ 4 ಅರ್ಧಶತಕಗಳನ್ನು ಗಳಿಸಿದ್ದರು ಮತ್ತು ಅವರ ಬ್ಯಾಟಿಂಗ್ ಸ್ಟ್ರೈಕ್‌ ರೇಟ್ 126.25 ಆಗಿದೆ.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 172 ರನ್ ಪೇರಿಸಿತ್ತು. ಅದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಆಟಗಾರರು ಲೀಲಾಜಾಲವಾಗಿ ಬ್ಯಾಟ್ ಬೀಸಿದರು. 18.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ನಿರಾಯಾಸವಾಗಿ ಗೆಲುವಿನ ಗುರಿ ಮುಟ್ಟಿದರು. 8 ವಿಕೆಟ್‌ಗಳ ಜಯ ಸಾಧಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...