Homeಸಿನಿಮಾಕ್ರೀಡೆಟಿ20 ವಿಶ್ವಕಪ್‌ನ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಬಾಬರ್ ಅಜಂಗೆ ಕೊಡಬೇಕಿತ್ತು: ಶೋಯಬ್ ಅಖ್ತರ್ ಅಸಮಾಧಾನ

ಟಿ20 ವಿಶ್ವಕಪ್‌ನ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಬಾಬರ್ ಅಜಂಗೆ ಕೊಡಬೇಕಿತ್ತು: ಶೋಯಬ್ ಅಖ್ತರ್ ಅಸಮಾಧಾನ

ಪಾಕ್ ಆಟಗಾರ ಬಾಬರ್ ಒಟ್ಟು ಅಜಂ 6 ಪಂದ್ಯಗಳಲ್ಲಿ 60.60 ಸರಾಸರಿಯಲ್ಲಿ 303 ರನ್ ಗಳಿಸಿದರೆ ಒಟ್ಟು ರನ್ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಬಹುನಿರೀಕ್ಷಿತ ಟಿ20 ವಿಶ್ವಕಪ್‌ ಅಭಿಯಾನ ಮುಕ್ತಾಯಗೊಂಡಿದೆ. ನ್ಯೂಜಿಲೆಂಡ್ ಎದುರು ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಕ್ರಿಕೆಟ್ ದಿಗ್ಗಜ ಆಸ್ಟ್ರೇಲಿಯಾ ಜಯಭೇರಿ ಭಾರಿಸಿ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್‌ಗೆ ಮುತ್ತಿಟ್ಟಿತು. 2019 ರಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿದ್ದ ನ್ಯೂಜಿಲೆಂಡ್ ತಂಡ ಭಾನುವಾದ ಟಿ20 ವಿಶ್ವಕಪ್‌ ಫೈನಲ್‌ನಲ್ಲಿಯೂ ಆಸ್ಟ್ರೇಲಿಯಾ ಎದುರು ಮುಗ್ಗರಿಸಿ ನಿರಾಶೆ ಅನುಭವಿಸಿತು.

ಆಸ್ಟ್ರೇಲಿಯಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ ಗೆದ್ದರೆ ಅದೇ ತಂಡದ ಅನುಭವಿ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಮುಡಿಗೇರಿಸಿಕೊಂಡರು. ಈ ವಿಷಯವಾಗಿ ಪಾಕಿಸ್ತಾನದ ಮಾಜಿ ಆಟಗಾರ ಶೋಯಬ್ ಅಖ್ತರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡೇವಿಡ್ ವಾರ್ನರ್‌ಗಿಂತ ಹೆಚ್ಚು ರನ್ ಗಳಿಸಿದ್ದ, ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದಿದ್ದ ಪಾಕಿಸ್ತಾನದ ನಾಯಕ ಮತ್ತು ಬ್ಯಾಟ್ಸ್‌ಮನ್ ಬಾಬರ್ ಅಜಂರವರಿಗೆ ಆ ಶ್ರೇಯ ಸಲ್ಲಬೇಕಿತ್ತು ಎಂದು ಅಖ್ತರ್ ಅಭಿಪ್ರಾಯಪಟ್ಟಿದ್ದು, ಇದು ಐಸಿಸಿಯ ‘ಅನ್ಯಾಯದ ನಿರ್ಧಾರ’ ಎಂದು ಕರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಬಾಬರ್ ಅಜಂ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಆಗುತ್ತಾರೆ ಎಂದು ನಿರೀಕ್ಷಿಸಿದ್ದೆ. ನಿಜಕ್ಕೂ ಅನ್ಯಾಯದ ನಿರ್ಧಾರ” ಎಂದಿದ್ದಾರೆ.

ಪಾಕ್ ಆಟಗಾರ ಬಾಬರ್ ಒಟ್ಟು ಅಜಂ 6 ಪಂದ್ಯಗಳಲ್ಲಿ 60.60 ಸರಾಸರಿಯಲ್ಲಿ 303 ರನ್ ಗಳಿಸಿದರೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಒಟ್ಟು 7 ಪಂದ್ಯಗಳಲ್ಲಿ 48.16 ಸರಾಸರಿಯಲ್ಲಿ 289 ರನ್ ಗಳಿಸಿದ್ದಾರೆ. ಪಾಕ್ ತಂಡದ ಮತ್ತೊಬ್ಬ ಆಟಗಾರ ಮೊಹಮ್ಮದ್ ರಿಜ್ವಾನ್ ಕೂಡ 6 ಪಂದ್ಯಗಳಲ್ಲಿ 70.25 ಸರಾಸರಿಯಲ್ಲಿ 281 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಂ ಡೇವಿಡ್ ವಾರ್ನರ್‌ಗಿಂತ ಒಂದು ಇನ್ನಿಂಗ್ಸ್ ಕಡಿಮೆ ಆಡಿದರೂ ಸಹ ಅವರಿಗಿಂತ 14 ರನ್ ಹೆಚ್ಚು ಗಳಿಸಿದ್ದಾರೆ. ಸರಾಸರಿ ಸಹ ಉತ್ತಮವಾಗಿದೆ. ಹಾಗಾಗಿ ಅವರಿಗೆ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಪ್ರಶಸ್ತಿ ನೀಡಬೇಕಿತ್ತು ಎಂಬುದು ಅಖ್ತರ್‌ರವರ ವಾದವಾಗಿದೆ.

ಡೇವಿಡ್ ವಾರ್ನರ್ 3 ಅರ್ಧಶತಕಗಳನ್ನು ಭಾರಿಸಿ, 146.70 ಬ್ಯಾಟಿಂಗ್ ಸ್ಟ್ರೈಕ್‌ ರೇಟ್ ನಲ್ಲಿ ರನ್ ಗಳಿಸಿದ್ದಾರೆ. ಅಲ್ಲದೆ ಸೆಮಿಫೈನಲ್ ಪಂದ್ಯದಲ್ಲಿ ಪಾಕ್ ಎದುರು ಮತ್ತು ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಆಸ್ಟ್ರೇಲಿಯಾ ಜಯ ಸಾಧಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗಾಗಿ ಅವರನ್ನು ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹಲವರು ಸಮರ್ಥಿಸಿಕೊಂಡಿದ್ದಾರೆ. ಬಾಬರ್ ಅಜಂ 4 ಅರ್ಧಶತಕಗಳನ್ನು ಗಳಿಸಿದ್ದರು ಮತ್ತು ಅವರ ಬ್ಯಾಟಿಂಗ್ ಸ್ಟ್ರೈಕ್‌ ರೇಟ್ 126.25 ಆಗಿದೆ.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 172 ರನ್ ಪೇರಿಸಿತ್ತು. ಅದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಆಟಗಾರರು ಲೀಲಾಜಾಲವಾಗಿ ಬ್ಯಾಟ್ ಬೀಸಿದರು. 18.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ನಿರಾಯಾಸವಾಗಿ ಗೆಲುವಿನ ಗುರಿ ಮುಟ್ಟಿದರು. 8 ವಿಕೆಟ್‌ಗಳ ಜಯ ಸಾಧಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...