Homeಸಿನಿಮಾಕ್ರೀಡೆಟಿ20 ವಿಶ್ವಕಪ್‌ನ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಬಾಬರ್ ಅಜಂಗೆ ಕೊಡಬೇಕಿತ್ತು: ಶೋಯಬ್ ಅಖ್ತರ್ ಅಸಮಾಧಾನ

ಟಿ20 ವಿಶ್ವಕಪ್‌ನ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಬಾಬರ್ ಅಜಂಗೆ ಕೊಡಬೇಕಿತ್ತು: ಶೋಯಬ್ ಅಖ್ತರ್ ಅಸಮಾಧಾನ

ಪಾಕ್ ಆಟಗಾರ ಬಾಬರ್ ಒಟ್ಟು ಅಜಂ 6 ಪಂದ್ಯಗಳಲ್ಲಿ 60.60 ಸರಾಸರಿಯಲ್ಲಿ 303 ರನ್ ಗಳಿಸಿದರೆ ಒಟ್ಟು ರನ್ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಬಹುನಿರೀಕ್ಷಿತ ಟಿ20 ವಿಶ್ವಕಪ್‌ ಅಭಿಯಾನ ಮುಕ್ತಾಯಗೊಂಡಿದೆ. ನ್ಯೂಜಿಲೆಂಡ್ ಎದುರು ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಕ್ರಿಕೆಟ್ ದಿಗ್ಗಜ ಆಸ್ಟ್ರೇಲಿಯಾ ಜಯಭೇರಿ ಭಾರಿಸಿ ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್‌ಗೆ ಮುತ್ತಿಟ್ಟಿತು. 2019 ರಲ್ಲಿ ಏಕದಿನ ಕ್ರಿಕೆಟ್ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಿದ್ದ ನ್ಯೂಜಿಲೆಂಡ್ ತಂಡ ಭಾನುವಾದ ಟಿ20 ವಿಶ್ವಕಪ್‌ ಫೈನಲ್‌ನಲ್ಲಿಯೂ ಆಸ್ಟ್ರೇಲಿಯಾ ಎದುರು ಮುಗ್ಗರಿಸಿ ನಿರಾಶೆ ಅನುಭವಿಸಿತು.

ಆಸ್ಟ್ರೇಲಿಯಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ ಗೆದ್ದರೆ ಅದೇ ತಂಡದ ಅನುಭವಿ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಮುಡಿಗೇರಿಸಿಕೊಂಡರು. ಈ ವಿಷಯವಾಗಿ ಪಾಕಿಸ್ತಾನದ ಮಾಜಿ ಆಟಗಾರ ಶೋಯಬ್ ಅಖ್ತರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡೇವಿಡ್ ವಾರ್ನರ್‌ಗಿಂತ ಹೆಚ್ಚು ರನ್ ಗಳಿಸಿದ್ದ, ಹೆಚ್ಚು ಬ್ಯಾಟಿಂಗ್ ಸರಾಸರಿ ಹೊಂದಿದ್ದ ಪಾಕಿಸ್ತಾನದ ನಾಯಕ ಮತ್ತು ಬ್ಯಾಟ್ಸ್‌ಮನ್ ಬಾಬರ್ ಅಜಂರವರಿಗೆ ಆ ಶ್ರೇಯ ಸಲ್ಲಬೇಕಿತ್ತು ಎಂದು ಅಖ್ತರ್ ಅಭಿಪ್ರಾಯಪಟ್ಟಿದ್ದು, ಇದು ಐಸಿಸಿಯ ‘ಅನ್ಯಾಯದ ನಿರ್ಧಾರ’ ಎಂದು ಕರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಬಾಬರ್ ಅಜಂ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಆಗುತ್ತಾರೆ ಎಂದು ನಿರೀಕ್ಷಿಸಿದ್ದೆ. ನಿಜಕ್ಕೂ ಅನ್ಯಾಯದ ನಿರ್ಧಾರ” ಎಂದಿದ್ದಾರೆ.

ಪಾಕ್ ಆಟಗಾರ ಬಾಬರ್ ಒಟ್ಟು ಅಜಂ 6 ಪಂದ್ಯಗಳಲ್ಲಿ 60.60 ಸರಾಸರಿಯಲ್ಲಿ 303 ರನ್ ಗಳಿಸಿದರೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಒಟ್ಟು 7 ಪಂದ್ಯಗಳಲ್ಲಿ 48.16 ಸರಾಸರಿಯಲ್ಲಿ 289 ರನ್ ಗಳಿಸಿದ್ದಾರೆ. ಪಾಕ್ ತಂಡದ ಮತ್ತೊಬ್ಬ ಆಟಗಾರ ಮೊಹಮ್ಮದ್ ರಿಜ್ವಾನ್ ಕೂಡ 6 ಪಂದ್ಯಗಳಲ್ಲಿ 70.25 ಸರಾಸರಿಯಲ್ಲಿ 281 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಂ ಡೇವಿಡ್ ವಾರ್ನರ್‌ಗಿಂತ ಒಂದು ಇನ್ನಿಂಗ್ಸ್ ಕಡಿಮೆ ಆಡಿದರೂ ಸಹ ಅವರಿಗಿಂತ 14 ರನ್ ಹೆಚ್ಚು ಗಳಿಸಿದ್ದಾರೆ. ಸರಾಸರಿ ಸಹ ಉತ್ತಮವಾಗಿದೆ. ಹಾಗಾಗಿ ಅವರಿಗೆ ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಪ್ರಶಸ್ತಿ ನೀಡಬೇಕಿತ್ತು ಎಂಬುದು ಅಖ್ತರ್‌ರವರ ವಾದವಾಗಿದೆ.

ಡೇವಿಡ್ ವಾರ್ನರ್ 3 ಅರ್ಧಶತಕಗಳನ್ನು ಭಾರಿಸಿ, 146.70 ಬ್ಯಾಟಿಂಗ್ ಸ್ಟ್ರೈಕ್‌ ರೇಟ್ ನಲ್ಲಿ ರನ್ ಗಳಿಸಿದ್ದಾರೆ. ಅಲ್ಲದೆ ಸೆಮಿಫೈನಲ್ ಪಂದ್ಯದಲ್ಲಿ ಪಾಕ್ ಎದುರು ಮತ್ತು ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಆಸ್ಟ್ರೇಲಿಯಾ ಜಯ ಸಾಧಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗಾಗಿ ಅವರನ್ನು ಮ್ಯಾನ್ ಆಫ್‌ ದಿ ಟೂರ್ನಿಮೆಂಟ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹಲವರು ಸಮರ್ಥಿಸಿಕೊಂಡಿದ್ದಾರೆ. ಬಾಬರ್ ಅಜಂ 4 ಅರ್ಧಶತಕಗಳನ್ನು ಗಳಿಸಿದ್ದರು ಮತ್ತು ಅವರ ಬ್ಯಾಟಿಂಗ್ ಸ್ಟ್ರೈಕ್‌ ರೇಟ್ 126.25 ಆಗಿದೆ.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 172 ರನ್ ಪೇರಿಸಿತ್ತು. ಅದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಆಟಗಾರರು ಲೀಲಾಜಾಲವಾಗಿ ಬ್ಯಾಟ್ ಬೀಸಿದರು. 18.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ನಿರಾಯಾಸವಾಗಿ ಗೆಲುವಿನ ಗುರಿ ಮುಟ್ಟಿದರು. 8 ವಿಕೆಟ್‌ಗಳ ಜಯ ಸಾಧಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡರು.


ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...