Homeಮುಖಪುಟಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

ಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ ತನ್ನ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ ಮತ್ತು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾನುವಾರ ಯುಪಿಯ ಬುಲಂದ್‌ಶಹರ್‌ನಲ್ಲಿ ನಡೆದ ‘ಪ್ರತಿಜ್ಞಾ ಸಮ್ಮೇಳನ-ಲಕ್ಷ್ಯ 2022’ ರ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಸಮಾಜವಾದಿ ಪಕ್ಷ ಅಥವಾ ಅಖಿಲೇಶ್ ಯಾದವ್ ಜೊತೆಗಿನ ಮೈತ್ರಿಯ ಬಗ್ಗೆಗಿನ ವದಂತಿಗಳನ್ನು ತಳ್ಳಿಹಾಕಿದ ಅವರು, ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

ಬಿಜೆಪಿಯ ಹಣದುಬ್ಬರ ಮತ್ತು ಲೂಟಿ ನೀತಿಗಳ ವಿರುದ್ಧ ಕಾಂಗ್ರೆಸ್ ತನ್ನ ಸಂಘಟನೆಯ ಬಲದ ಮೇಲೆ 5 ವರ್ಷಗಳ ಕಾಲ ಹೋರಾಡಿದೆ. ಪಕ್ಷವು ಸಂಘಟನೆಯ ಬಲದ ಮೇಲೆ ದೃಢವಾಗಿ ಚುನಾವಣೆ ಎದುರಿಸಲಿದೆ ಎಂದೂ ಅವರು ಟ್ವೀಟ್ ಮಾಡಿದ್ದಾರೆ.ಶಯ

ಯುಪಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರವು ಇಲ್ಲಿಯವರೆಗೆ ಮಹಿಳೆಯರ ಮೇಲೆ ಹೆಚ್ಚಾಗಿ ಕೇಂದ್ರೀಕರಿಸಿ ನಡೆಯುತ್ತಿದೆ. ಅವರ ಹಿತಾಸಕ್ತಿಗಳನ್ನು ಪ್ರತಿನಿಧಿಸಲು ಕಾಂಗ್ರೆಸ್‌ಗೆ ಮತ ನೀಡುವಂತೆ ಪಕ್ಷವು ಒತ್ತಾಯಿಸುತ್ತಿದೆ. ಜೊತಗೆ ಪಕ್ಷದಿಂದ 40% ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಕಾಂಗ್ರೆಸ್ ಈಗಾಗಲೆ ಭರವಸೆ ನೀಡಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಒಟ್ಟುಗೂಡಿಸಲು ಶ್ರಮಿಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 403 ಸ್ಥಾನಗಳಲ್ಲಿ ಕೇವಲ 7 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಈ ಬಾರಿ ಪ್ರಿಯಾಂಕ ಗಾಂಧಿ ಅವರ ಮೂಲಕ ಕಾಂಗ್ರೆಸ್‌ ಶತಾಯಗತ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಗುಜರಾತ್: ರೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ, ಅತ್ಯಾಚಾರದ ಸಂ 

ಕೊರೊನಾ ಸಾಂಕ್ರಾಮಿಕದ ಅಸಮರ್ಪಕ ನಿರ್ವಹಣೆಗಾಗಿ ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, “ಬಿಜೆಪಿ, ಎಸ್‌ಪಿ ಅಥವಾ ಬಿಎಸ್‌ಪಿ ಪಕ್ಷಗಳು ಹತ್ರಾಸ್, ಉನ್ನಾವೋ ಮತ್ತು ಸಾಂಕ್ರಾಮಿಕ ಬಿಕ್ಕಟ್ಟಿನ ಸಮಯದಲ್ಲಿ ಯುಪಿ ಜನರಿಗೆ ಸಹಾಯ ಮಾಡಲು ಬಂದಿಲ್ಲ. ಆದರೆ ಕಾಂಗ್ರೆಸ್ ಈ ಎಲ್ಲಾ ಸಂದರ್ಭದಲ್ಲಿ  ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ಭಾರತ ಸ್ವಾತಂತ್ರ್ಯ ಹೊಂದಲು ಕಾರಣಕರ್ತರಾದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ವಲ್ಲಭಾಯಿ ಪಟೇಲ್ ಅವರಂತಹವರನ್ನು ನಿರಂತರವಾಗಿ ಬಿಜೆಪಿ ಅವಮಾನಿಸುತ್ತಿದೆ. ಬಿಜೆಪಿಗೆ ಸ್ವಾತಂತ್ರ್ಯ ಚಳವಳಿಯ ಬಗ್ಗೆ ಯಾವುದೆ ಗೌರವ ಇಲ್ಲ” ಎಂದು ಪ್ರಿಯಾಂಕ ಹೇಳಿದ್ದಾರೆ.

ಕಾಂಗ್ರೆಸ್ ಅನ್ನು ಬಲಪಡಿಸಲು, ಬೂತ್ ಮಟ್ಟದ ಚಟುವಟಿಕೆಗಳು ಮತ್ತು ಕಾರ್ಯಕರ್ತರಿಗೆ ಹೆಚ್ಚಿನ ಪ್ರಚಾರ ನೀಡಬೇಕು. ಇದಕ್ಕಾಗಿ ಸಾಮಾಜಿಕ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಬೇಕು. ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚು ಸಕ್ರಿಯರಾಗಿರಬೇಕು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪಕ್ಷದ ಚಟುವಟಿಕೆಗಳನ್ನು ಹೆಚ್ಚು ಪೋಸ್ಟ್ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...