Homeಮುಖಪುಟತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

- Advertisement -
- Advertisement -

ತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕೃತ್ಯವನ್ನು ಮಾಧ್ಯಮ ಸಂಸ್ಥೆಗಳು ಮತ್ತು ವಿರೋಧ ಪಕ್ಷ ನಾಯಕರು ಖಂಡಿಸಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು Indian Women’s Press Corps ಪತ್ರಕರ್ತೆಯರ ಬಂಧನ ಖಂಡಿಸಿ, ಅವರನ್ನು ತಕ್ಷಣ ಬಿಡುಗಡೆ ಮಾಡಲು ಒತ್ತಾಯಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ’ಬಿಜೆಪಿ ವ್ಯವಸ್ಥೆಯು ಪತ್ರಿಕೋದ್ಯಮವನ್ನು ಕೊಲ್ಲುವುದರಲ್ಲಿ ನಿರತವಾಗಿದೆ. ಆದರೆ ಸುಳ್ಳಿನ ಮುಂದೆ ಸತ್ಯ ಯಾವಾಗ ಸುಮ್ಮನೆ ನಿಂತಿದೆ..?” ಎಂದು ಪ್ರಶ್ನಿಸುವ ಮೂಲಕ ಸತ್ಯ ಒಂದಲ್ಲ ಒಂದು ದಿನ ಹೊರ ಬರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ’ಯುಎಪಿಎಯಿಂದ ಸತ್ಯವನ್ನು ಮೌನವಾಗಿಸಲಾಗದು’: ತ್ರಿಪುರಾ ಹಿಂಸಾಚಾರಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

“ಎಡಿಟರ್ಸ್ ಗಿಲ್ಡ್ ಪೊಲೀಸರ ಕ್ರಮವನ್ನು ಖಂಡಿಸಿದೆ. ತಕ್ಷಣ ಬಂಧಿತ ಪತ್ರಕರ್ತರನ್ನು ಬಿಡುಗಡೆ ಮಾಡಬೇಕು ಮತ್ತು ಅವರ ಪ್ರಯಾಣದ ಸ್ವಾತಂತ್ರ್ಯವನ್ನು ಮರಳಿ ನೀಡಲು ಒತ್ತಾಯಿಸುತ್ತದೆ” ಎಂದು ಎಡಿಟರ್ಸ್ ಗಿಲ್ಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Indian Women’s Press Corps ಕೂಡ ಇಬ್ಬರು ಪತ್ರಕರ್ತರ ವಿರುದ್ಧ ಪೊಲೀಸ್ ಕ್ರಮವನ್ನು ಖಂಡಿಸಿದೆ ಜೊತೆಗೆ ಯಾವುದೇ ಭಯವಿಲ್ಲದೆ ಅವರ ಕೆಲಸವನ್ನು ಮಾಡಲು ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದೆ.

ತ್ರಿಪುರಾದಲ್ಲಿ ನಡೆದ ಇತ್ತೀಚಿನ ಕೋಮು ಘಟನೆಗಳ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತ್ರಿಪುರಾಕ್ಕೆ ಬಂದಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಮಹಿಳಾ ಪತ್ರಕರ್ತರನ್ನು ಅಸ್ಸಾಂ ಪೊಲೀಸರು ಭಾನುವಾರ ಅಸ್ಸಾಂ-ತ್ರಿಪುರಾ ಗಡಿಗೆ ಸಮೀಪವಿರುವ ಕರೀಂಗಂಜ್‌ನ ನೀಲಂ ಬಜಾರ್‌ನಲ್ಲಿ ಬಂಧಿಸಿದ್ದಾರೆ ಎಂದು ಎರಡೂ ರಾಜ್ಯಗಳ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಇಬ್ಬರು ಪತ್ರಕರ್ತೆಯರ ವಿರುದ್ಧ ವಿಶ್ವ ಹಿಂದೂ ಪರಿಷತ್ತಿನ ದೂರಿನ ಮೇಲೆ ಶನಿವಾರ ಉನಕೋಟಿ ಜಿಲ್ಲೆಯ ಫಾಟಿಕ್ರೋಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಸಿಲ್ಚಾರ್‌ಗೆ ತೆರಳುತ್ತಿದ್ದ ವೇಳೆ ಅಸ್ಸಾಂ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅಸ್ಸಾಂನಲ್ಲಿ ಇವರ ಮೇಲೆ ಯಾವುದೇ ದೂರು ದಾಖಲಾಗದಿದ್ದರೂ ಗೋಮತಿ ಜಿಲ್ಲಾ ಎಸ್‌ಪಿ ಆದೇಶದಂತೆ ಬಂಧಿಸಲಾಗಿದೆ.

“ನಮ್ಮನ್ನು ಅಸ್ಸಾಂನ ಕರೀಂಗಂಜ್‌ನ ನಿಲಂಬಜಾರ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಗೋಮತಿ ಜಿಲ್ಲಾ ಎಸ್‌ಪಿಯವರು ನಮ್ಮ ಬಂಧನಕ್ಕೆ ಆದೇಶ ನೀಡಿದ್ದಾರೆ ಎಂದು ನಿಲಂಬಜಾರ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಯಿಂದ ನಮಗೆ ತಿಳಿಯಿತು” ಎಂದು ಪತ್ರಕರ್ತೆ ಸಮೃದ್ಧಿ ಸಕುನಿಯಾ ಟ್ವೀಟ್ ಮಾಡಿದ್ದಾರೆ. ಜೊತೆಗೆ ತಮ್ಮ ಸುದ್ದಿ ಸಂಸ್ಥೆಯ ಅಧಿಕೃತ ಹೇಳಿಕೆಯನ್ನು ಲಗತ್ತಿಸಿದ್ದಾರೆ. ಇಂದು ಅಸ್ಸಾಂ ಪೊಲೀಸರು ಇಬ್ಬರನ್ನು ತ್ರಿಪುರಾ ಪೊಲೀಸರಿಗೆ ಒಪ್ಪಿಸಲಿದ್ದಾರೆ.


ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....