Homeಮುಖಪುಟಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

ಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

- Advertisement -
- Advertisement -

ಹೊಸ ರೈಲು ಸಂಖ್ಯೆ ಹಾಗೂ ಸಂಬಂಧಿತ ಇತರೆ ಮಾಹಿತಿಯ ಡೇಟಾವನ್ನು ನವೀಕರಣ ಮಾಡಲು ಭಾರತೀಯ ರೈಲ್ವೇಯು  ಮುಂದಾಗಿದೆ. ಹೀಗಾಗಿ, ಇಂದಿನಿಂದ (ಸೋಮವಾರ) ಏಳು ದಿನಗಳವರೆಗೆ ಪ್ರತಿದಿನ ಆರು ಗಂಟೆಗಳ ಕಾಲ ರೈಲ್ವೇ ಟಿಕೆಟ್‌ ಬುಕಿಂಗ್‌ ಮತ್ತು ರದ್ದತಿ ಸೇವೆ ಸ್ಥಗತಗೊಳ್ಳಲಿದೆ.

ಕೊರೊನಾ ಸೋಂಕು ಆಕ್ರಮಿಸಿದ್ದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೇವೆಗಳನ್ನು ಒದಗಿಸುವುದಕ್ಕಾಗಿ ರೈಲ್ವೇಯ ಹಲವು ರೀತಿಯ ಮಾರ್ಪಾಡುಗಳನ್ನು ಮಾಡಿತ್ತು. ಇದೀಗ ರೈಲ್ವೇ ಬುಕಿಂಗ್‌ ಮತ್ತು ರದ್ದತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಹಂತ ಹಂತವಾಗಿ ತರಲು ರೈಲ್ವೇ ಮುಂದಾಗಿದೆ. ಹೀಗಾಗಿ, ನವೆಂಬರ್‌ 1415 ಮಧ್ಯರಾತ್ರಿಯಿಂದ ನವೆಂಬರ್‌ 20-21 ರ ಮಧ್ಯರಾತ್ರಿಯವರೆಗೆ ಒಟ್ಟು ಏಳು ದಿನಗಳ ಕಾಲ ರಾತ್ರಿ 23:30 ಗಂಟೆಯಿಂದ ಮುಂಜಾನೆ 05:30 ಗಂಟೆವರೆಗೆ ಸೇವೆ ಸ್ಥಗಿತವಾಗಲಿದೆ.

ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ಈ ಸಂದರ್ಭದಲ್ಲಿ ಸಿಸ್ಟಮ್‌ ಡೇಟಾದ ನವೀಕರಣ ಮಾಡಲಾಗುತ್ತದೆ. ಹಾಗೆಯೇ ಹೊಸ ರೈಲು ಸಂಖ್ಯೆಗಳ ನವೀಕರಣ ಇತ್ಯಾದಿ ಅಪ್‌ಗ್ರೇಡ್‌ ಕಾರ್ಯವನ್ನು ಮಾಡಲಾಗುತ್ತದೆ. ಈ ವೇಳೆ, ಜನರು ರೈಲು ಟಿಕೆಟ್‌ಗಳನ್ನು ಬುಕ್‌ ಮಾಡಲು ಅಥವಾ ರದ್ದು ಮಾಡಲು ಸಾಧ್ಯವಾಗುವುದಿಲ್ಲ.

ಸಾಮಾನ್ಯವಾಗಿ ಜನರು ಯಾವ ಸಂದರ್ಭದಲ್ಲಿ ಹೆಚ್ಚಾಗಿ ರೈಲ್ವೇ ಬುಕಿಂಗ್ ಮತ್ತು ರದ್ದತಿಯ ಸೇವೆಯನ್ನು ಬಳಸುವುದಿಲ್ಲ ಎಂದು ಗಮನಿಸಿ, ಆ ಸಮಯದಲ್ಲಿ ಸೇವೆಯನ್ನು ಸ್ಥಗಿತ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಂಡು ಎಚ್ಚರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಜನರಿಗೆ ತೊಂದರೆ ಉಂಟಾಗದಂತೆ ರಾತ್ರಿ ಹೊತ್ತಿನಲ್ಲಿ ಸೇವೆ ಸ್ಥಗಿತ ಮಾಡಲಾಗಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದ್ದಾರೆ.

ರೈಲ್ವೆ ಸಿಬ್ಬಂದಿಗಳು ಈ ಅವಧಿಯಲ್ಲಿ ಹೊರಡುವ ರೈಲುಗಳ ಚಾರ್ಟ್‌ಅನ್ನು ಮೊದಲೇ ಸಿದ್ದಪಡಿಸುತ್ತಾರೆ. ಪಿಆರ್‌ಎಸ್‌ ಸೇವೆಗಳನ್ನು ಹೊರತುಪಡಿಸಿ, 139 ಸೇವೆಗಳು ಸೇರಿದಂತೆ ಎಲ್ಲಾ ಇತರ ವಿಚಾರಣೆ ಸೇವೆಗಳು ಅಡೆತಡೆಯಿಲ್ಲದೆ ಮುಂದುವರಿಯುತ್ತದೆ. ಪ್ರಯಾಣಿಕರ ಸೇವೆಗಳನ್ನು ಸಾಮಾನ್ಯಗೊಳಿಸಲು ಮತ್ತು ಮೇಲ್ದರ್ಜೆಗೇರಿಸುವ ಈ ಪ್ರಯತ್ನದಲ್ಲಿ ಸಚಿವಾಲಯಕ್ಕೆ ಜನರು ಬೆಂಬಲ ನೀಡಬೇಕು ಎಂದು ಸಚಿವಾಲಯ ವಿನಂತಿ ಮಾಡಿದೆ.

ಇದನ್ನೂ ಓದಿ: ವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡಿದ್ದರೆ ಓದಿ

ಕೊರೊನಾ ವೈರಸ್‌ ಸೋಂಕು ಸಂದರ್ಭದಲ್ಲಿ ಭಾರತೀಯ ರೈಲ್ವೆ ಆರಂಭಿಸಿದ್ದ ಕೆಲವು ವಿಶೇಷ ರೈಲುಗಳಲ್ಲಿ ಇನ್ನು ಮುಂದೆ ವಿಶೇಷ ಹಣೆಪಟ್ಟಿ ಇರುವುದಿಲ್ಲ. ರೈಲು ಪ್ರಯಾಣ ದರವು ಕೊರೊನಾ ವೈರಸ್‌ ಸೋಂಕಿಗೂ ಮುನ್ನವಿದ್ದಷ್ಟೇ ಇರಲಿದೆ ಎಂದು ಸಚಿವಾಲಯ ಹೇಳಿದೆ.

ವಿಶೇಷ ರೈಲಿನಲ್ಲಿ ಪ್ರಯಾಣಿಕರು ಸಾಮಾನ್ಯ ರೈಲುಗಳಿಗಿಂತ 30% ರಷ್ಟು ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತಿತ್ತು. ಈಗ ಈ ವಿಶೇಷ ಎಂಬ ಟ್ಯಾಗ್‌ ಅನ್ನು ತೆಗೆಯಲಾಗುತ್ತಿದ್ದು, ಪ್ರಯಾಣಿಕರ ಪ್ರಯಾಣ ದರವು ಕೊರೊನಾ ಸೋಂಕಿಗೂ ಮೊದಲಿದ್ದ ಸಾಮಾನ್ಯ ದರವೇ ಜಾರಿಗೆ ಬರಲಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...