Homeಮುಖಪುಟಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

ಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

- Advertisement -
- Advertisement -

ಹೊಸ ರೈಲು ಸಂಖ್ಯೆ ಹಾಗೂ ಸಂಬಂಧಿತ ಇತರೆ ಮಾಹಿತಿಯ ಡೇಟಾವನ್ನು ನವೀಕರಣ ಮಾಡಲು ಭಾರತೀಯ ರೈಲ್ವೇಯು  ಮುಂದಾಗಿದೆ. ಹೀಗಾಗಿ, ಇಂದಿನಿಂದ (ಸೋಮವಾರ) ಏಳು ದಿನಗಳವರೆಗೆ ಪ್ರತಿದಿನ ಆರು ಗಂಟೆಗಳ ಕಾಲ ರೈಲ್ವೇ ಟಿಕೆಟ್‌ ಬುಕಿಂಗ್‌ ಮತ್ತು ರದ್ದತಿ ಸೇವೆ ಸ್ಥಗತಗೊಳ್ಳಲಿದೆ.

ಕೊರೊನಾ ಸೋಂಕು ಆಕ್ರಮಿಸಿದ್ದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೇವೆಗಳನ್ನು ಒದಗಿಸುವುದಕ್ಕಾಗಿ ರೈಲ್ವೇಯ ಹಲವು ರೀತಿಯ ಮಾರ್ಪಾಡುಗಳನ್ನು ಮಾಡಿತ್ತು. ಇದೀಗ ರೈಲ್ವೇ ಬುಕಿಂಗ್‌ ಮತ್ತು ರದ್ದತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಹಂತ ಹಂತವಾಗಿ ತರಲು ರೈಲ್ವೇ ಮುಂದಾಗಿದೆ. ಹೀಗಾಗಿ, ನವೆಂಬರ್‌ 1415 ಮಧ್ಯರಾತ್ರಿಯಿಂದ ನವೆಂಬರ್‌ 20-21 ರ ಮಧ್ಯರಾತ್ರಿಯವರೆಗೆ ಒಟ್ಟು ಏಳು ದಿನಗಳ ಕಾಲ ರಾತ್ರಿ 23:30 ಗಂಟೆಯಿಂದ ಮುಂಜಾನೆ 05:30 ಗಂಟೆವರೆಗೆ ಸೇವೆ ಸ್ಥಗಿತವಾಗಲಿದೆ.

ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ; ರಾಜ್ಯಗಳ ಮತ್ತು ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಯ ನಡುವೆ ಪರಿಸರವಾದಿಗಳ ಕಾಳಜಿ

ಈ ಸಂದರ್ಭದಲ್ಲಿ ಸಿಸ್ಟಮ್‌ ಡೇಟಾದ ನವೀಕರಣ ಮಾಡಲಾಗುತ್ತದೆ. ಹಾಗೆಯೇ ಹೊಸ ರೈಲು ಸಂಖ್ಯೆಗಳ ನವೀಕರಣ ಇತ್ಯಾದಿ ಅಪ್‌ಗ್ರೇಡ್‌ ಕಾರ್ಯವನ್ನು ಮಾಡಲಾಗುತ್ತದೆ. ಈ ವೇಳೆ, ಜನರು ರೈಲು ಟಿಕೆಟ್‌ಗಳನ್ನು ಬುಕ್‌ ಮಾಡಲು ಅಥವಾ ರದ್ದು ಮಾಡಲು ಸಾಧ್ಯವಾಗುವುದಿಲ್ಲ.

ಸಾಮಾನ್ಯವಾಗಿ ಜನರು ಯಾವ ಸಂದರ್ಭದಲ್ಲಿ ಹೆಚ್ಚಾಗಿ ರೈಲ್ವೇ ಬುಕಿಂಗ್ ಮತ್ತು ರದ್ದತಿಯ ಸೇವೆಯನ್ನು ಬಳಸುವುದಿಲ್ಲ ಎಂದು ಗಮನಿಸಿ, ಆ ಸಮಯದಲ್ಲಿ ಸೇವೆಯನ್ನು ಸ್ಥಗಿತ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜನರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಂಡು ಎಚ್ಚರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಜನರಿಗೆ ತೊಂದರೆ ಉಂಟಾಗದಂತೆ ರಾತ್ರಿ ಹೊತ್ತಿನಲ್ಲಿ ಸೇವೆ ಸ್ಥಗಿತ ಮಾಡಲಾಗಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದ್ದಾರೆ.

ರೈಲ್ವೆ ಸಿಬ್ಬಂದಿಗಳು ಈ ಅವಧಿಯಲ್ಲಿ ಹೊರಡುವ ರೈಲುಗಳ ಚಾರ್ಟ್‌ಅನ್ನು ಮೊದಲೇ ಸಿದ್ದಪಡಿಸುತ್ತಾರೆ. ಪಿಆರ್‌ಎಸ್‌ ಸೇವೆಗಳನ್ನು ಹೊರತುಪಡಿಸಿ, 139 ಸೇವೆಗಳು ಸೇರಿದಂತೆ ಎಲ್ಲಾ ಇತರ ವಿಚಾರಣೆ ಸೇವೆಗಳು ಅಡೆತಡೆಯಿಲ್ಲದೆ ಮುಂದುವರಿಯುತ್ತದೆ. ಪ್ರಯಾಣಿಕರ ಸೇವೆಗಳನ್ನು ಸಾಮಾನ್ಯಗೊಳಿಸಲು ಮತ್ತು ಮೇಲ್ದರ್ಜೆಗೇರಿಸುವ ಈ ಪ್ರಯತ್ನದಲ್ಲಿ ಸಚಿವಾಲಯಕ್ಕೆ ಜನರು ಬೆಂಬಲ ನೀಡಬೇಕು ಎಂದು ಸಚಿವಾಲಯ ವಿನಂತಿ ಮಾಡಿದೆ.

ಇದನ್ನೂ ಓದಿ: ವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡಿದ್ದರೆ ಓದಿ

ಕೊರೊನಾ ವೈರಸ್‌ ಸೋಂಕು ಸಂದರ್ಭದಲ್ಲಿ ಭಾರತೀಯ ರೈಲ್ವೆ ಆರಂಭಿಸಿದ್ದ ಕೆಲವು ವಿಶೇಷ ರೈಲುಗಳಲ್ಲಿ ಇನ್ನು ಮುಂದೆ ವಿಶೇಷ ಹಣೆಪಟ್ಟಿ ಇರುವುದಿಲ್ಲ. ರೈಲು ಪ್ರಯಾಣ ದರವು ಕೊರೊನಾ ವೈರಸ್‌ ಸೋಂಕಿಗೂ ಮುನ್ನವಿದ್ದಷ್ಟೇ ಇರಲಿದೆ ಎಂದು ಸಚಿವಾಲಯ ಹೇಳಿದೆ.

ವಿಶೇಷ ರೈಲಿನಲ್ಲಿ ಪ್ರಯಾಣಿಕರು ಸಾಮಾನ್ಯ ರೈಲುಗಳಿಗಿಂತ 30% ರಷ್ಟು ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತಿತ್ತು. ಈಗ ಈ ವಿಶೇಷ ಎಂಬ ಟ್ಯಾಗ್‌ ಅನ್ನು ತೆಗೆಯಲಾಗುತ್ತಿದ್ದು, ಪ್ರಯಾಣಿಕರ ಪ್ರಯಾಣ ದರವು ಕೊರೊನಾ ಸೋಂಕಿಗೂ ಮೊದಲಿದ್ದ ಸಾಮಾನ್ಯ ದರವೇ ಜಾರಿಗೆ ಬರಲಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...