Homeಚಳವಳಿಕಡೂರು: ಬಾರ್‌ ಬೇಡ ಎಂದು ಪ್ರತಿಭಟಿಸಿದ ಮಹಿಳೆಯರ ಬಂಧನ, ಪೊಲೀಸ್ ದೌರ್ಜನ್ಯ ಆರೋಪ

ಕಡೂರು: ಬಾರ್‌ ಬೇಡ ಎಂದು ಪ್ರತಿಭಟಿಸಿದ ಮಹಿಳೆಯರ ಬಂಧನ, ಪೊಲೀಸ್ ದೌರ್ಜನ್ಯ ಆರೋಪ

ಪೊಲೀಸರು ಮನೆ ಬಾಗಿಲು, ಹೆಂಚುಗಳನ್ನು ಮುರಿದು ಮೂವರು ಮಹಿಳೆಯರು, ಬಾಲಕ ಸೇರಿದಂತೆ ಏಳು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

- Advertisement -
- Advertisement -

ನಮ್ಮೂರಿಗೆ ಬಾರ್‌ ಬೇಡ ಎಂದು ಪ್ರತಿಭಟನೆ ನಡೆಸಿದ ಮಹಿಳೆಯರ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರು ಗೂಂಡಾಗಿರಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಮುಂಜಾನೆ ಏಕಾಏಕಿ ಮಹಿಳೆಯರ ಮನೆಗೆ ನುಗ್ಗಿದ ಪೊಲೀಸರು ಬಾಗಿಲು ಮುರಿದು, ಹೆಂಚು ಹೊಡೆದು ಹಾಕಿ ಮಕ್ಕಳು, ಮಹಿಳೆಯರು ಸೇರಿದಂತೆ 7 ಮಹಿಳೆಯರನ್ನು ಎಳೆದೊಯ್ದು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ಮುಸ್ಲಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾರ್ ಒಂದನ್ನು ತೆರೆಯಲು ಮುಂದಾಗಿದ್ದರು. ಕೂಲಿ ಕಾರ್ಮಿಕರು, ಬಡವರೇ ಹೆಚ್ಚಿದ್ದು ನಮ್ಮೂರಿನಲ್ಲಿ ಬಾರ್ ತೆರೆದರೆ ಜನರೆಲ್ಲಾ ಕುಡಿದು ಹಾಳಾಗುವುದಲ್ಲದೆ ಮತ್ತಷ್ಟು ತಮ್ಮನ್ನು ಮತ್ತಷ್ಟು ಬಡತನಕ್ಕೆ ನೂಕಲಾಗುತ್ತದೆ ಎಂಬ ಆತಂಕದಿಂದ ಮಹಿಳೆಯರು ತಿಂಗಳ ಹಿಂದೆಯೇ ಪ್ರತಿಭಟನೆ ನಡೆಸಿದ್ದರು. ಹತ್ತಾರು ಪ್ರತಿಭಟನೆಗಳು ನಡೆದು ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಲ್ಲಿಯೂ ಪ್ರತಿಭಟನೆ ದಾಖಲಾಗಿತ್ತು.

ಇತ್ತೀಚೆಗಷ್ಟೆ ಬಾರ್ ಓಪನ್ ಮಾಡಲು ಮಾಲೀಕ ಮುಂದಾದ ಹಿನ್ನೆಲೆ ಬಾರ್ ಓಪನ್ ಮಾಡದಂತೆ ಗ್ರಾಮ ಪಂಚಾಯತ್ ನೋಟಿಸ್ ನೀಡಿತ್ತು. ಪೊಲೀಸರು ಬಾರ್ ಓಪನ್ ಮಾಡುವಂತಿಲ್ಲ ಎಂದು ಸೂಚಿಸಿದ್ದರು. ಈ ಮಧ್ಯೆಯೂ ಕಳೆದ ನಾಲ್ಕೈದು ದಿನಗಳಿಂದ ಬಾರ್ ಓಪನ್ ಸಿದ್ಧತೆ ನಡೆದಿತ್ತು. ಬಾರ್ ಬಾಗಿಲು ತೆಗೆಯದೆ ಬಂದವರಿಂದ ಹಣ ಪಡೆದುಕೊಂಡು ಮದ್ಯ ನೀಡುತ್ತಿದ್ದರು ಎಂದು ಮಹಿಳೆಯರು ಆರೋಪಿಸಿದ್ದರು.

ಸ್ಥಳೀಯರ ತೀವ್ರ ವಿರೋಧದ ನಡುವೆಯೂ ಕೇವಲ ಸಿಎಲ್-7 ಪರವಾನಗಿ ಇದ್ದರೂ ಶುಕ್ರವಾರ ಬಾರ್ ತೆರೆಯಲಾಗಿತ್ತು ಎಂದು ಕ್ರೋಧಗೊಂಡ ಮಹಿಳೆಯರು ನವೆಂಬರ್ 12ರ ಶುಕ್ರವಾರದಂದು ಬಾರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಾತಿಗೆ ಮಾತು ಬೆಳೆದು ಮಹಿಳೆಯರು ಬಾರ್ ಒಳಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿದ್ದರು. ಈ ಚಕಮಕಿಯಲ್ಲಿ ಹಲವು ಮಹಿಳೆಯರು ಸಹ ಗಾಯಗೊಂಡು ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ದೂರು, ಪ್ರತಿದೂರು ದಾಖಲಾಗಿ ಪೊಲೀಸರು ಆಸ್ಪತ್ರೆಗೆ ತೆರಳಿ ಒಂದಷ್ಟು ಮಹಿಳೆಯರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಇದರಿಂದ ಕೋಪಗೊಂಡ ಹಲವು ಮಹಿಳೆಯರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಮದ್ಯದಂಗಡಿ ಮಾಲೀಕರ ಪರವಾಗಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು ಸಹ ಬಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು. ಮಾಜಿ ಶಾಸಕ, ಜೆಡಿಎಸ್ ಮುಖಂಡ ವೈಎಸ್‌ವಿ ದತ್ತಾ ಸಹ ಪೊಲೀಸ್ ಠಾಣೆಗ ಆಗಮಿಸಿ ಮಹಿಳೆಯರಿಗೆ ತೊಂದರೆ ಕೊಡಬೇಡಿ, ಮದ್ಯದಂಗಡಿ ಮುಚ್ಚಿಸಲು ಯತ್ನಿಸಿ ಎಂದು ಮನವಿ ಮಾಡಿದ್ದರು. ಈ ಕುರಿತು ಸಚಿವ ಗೋಪಾಲಯ್ಯರವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದರು. ಇದಾದ ನಂತರ ಮಹಿಳೆಯರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಿದ್ದರು

ಪೊಲೀಸ್ ದೌರ್ಜನ್ಯ ಆರೋಪ

ಇಂದು ಬೆಳಿಗ್ಗೆ ಏಕಾಏಕಿ ಪಿಎಸ್‌ಐ ರಮ್ಯಾ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನೆ ನಡೆಸಿದ್ದ ಮಹಿಳೆಯರ ಮನೆಗಳಿಗೆ ನುಗ್ಗಿ ಮನೆ ಬಾಗಿಲು, ಹೆಂಚುಗಳನ್ನು ಮುರಿದು ಮೂವರು ಮಹಿಳೆಯರು ಮತ್ತು ಅಪ್ರಾಪ್ತ ಬಾಲಕ ಸೇರಿದಂತೆ ಏಳು ಜನರನ್ನು ಪೊಲೀಸ್‌ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಬೆಳಗ್ಗೆ ಆರು ಗಂಟೆಗೆ ಮನೆಗೆ ಬಂದ ಪೊಲೀಸರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ಮುರಿದು ಹಾಕಿದ್ದಾರೆ. ಬೂಟುಗಾಲಿನಿಂದ ಒದ್ದು ಬಾಗಿಲು ಮುರಿದಿದ್ದು, ಅಶ್ಲೀಲ ಪದಗಳಿಂದ ನಿಂದಿಸಿ, ಮನೆಯಲ್ಲಿದ್ದವರನ್ನು ಕಾರಣವನ್ನೂ ಹೇಳದೇ ಕರೆದುಕೊಂಡು ಹೋಗಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ಘಟನೆಯನ್ನು ವಿವರಿಸಿದ್ದಾರೆ.

ಪೊಲೀಸರ ಕೃತ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ನಂತರ ಬಂಧಿತರನ್ನು ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ. ಇದೇ ಕಡೂರಿನಲ್ಲಿ ಅಕ್ರಮ ಮದ್ಯದಂಗಡಿಗಳ ವಿರುದ್ಧ ಸತತ ಹೋರಾಟ ಕಂಡುಬರುತ್ತಿದೆ. ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಅಂಚೆ ಸೋಮನಹಳ್ಳಿ ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ಮದ್ಯದಂಗಡಿ ತೆರವಿಗೆ ಮಹಿಳೆಯರು ನಡೆಸಿದ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಅರವತ್ತು ದಿವಸದ ಒಳಗೆ ಮದ್ಯದ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಅಬಕಾರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.


ಇದನ್ನು ಓದಿ: ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...