Homeಮುಖಪುಟಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

ಬಿರ್ಸಾ ಮುಂಡಾ ಜನ್ಮದಿನ: ದಶಕಗಳ ಕಾಲ ಆಡಳಿತ ನಡೆಸಿದವರಿಂದ ಬುಡಕಟ್ಟು ಸಮುದಾಯದ ನಿರ್ಲಕ್ಷ್ಯ- ಪ್ರಧಾನಿ ಮೋದಿ

- Advertisement -
- Advertisement -

“ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಸಂಸ್ಕೃತಿ, ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಹೆಮ್ಮೆಯಿಂದ ಗೌರವಿಸಿ, ಸ್ಮರಿಸಲಾಗುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ದಶಕಗಳ ಕಾಲ ದೇಶವನ್ನು ಆಳಿದವರು ತಮ್ಮ ಸ್ವಾರ್ಥ ರಾಜಕಾರಣಕ್ಕೆ ಆದ್ಯತೆ ನೀಡಿದ್ದರಿಂದ ಬುಡಕಟ್ಟು ಸಮುದಾಯದ ಬಗ್ಗೆ ಬಹಳ ಕಡಿಮೆ ತಿಳಿದಿದೆ ಎಂದು ವಿಪಕ್ಷ ಕಾಂಗ್ರೆಸ್‌ ಅನ್ನು ಟೀಕಿಸಿದ್ದಾರೆ.

“ಭಾರತದ ಜನಸಂಖ್ಯೆಯ ಸುಮಾರು 10 ಪ್ರತಿಶತದಷ್ಟು ಜನಸಂಖ್ಯೆಯನ್ನು ಒಳಗೊಂಡಿದ್ದರೂ ಸಹ, ದಶಕಗಳಿಂದ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಾಮರ್ಥ್ಯವನ್ನು ಕಡೆಗಣಿಸಲಾಗಿದೆ. ಅವರ ಸಮಸ್ಯೆಗಳು, ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಯಾರು ಗಮನಹರಿಸಲಿಲ್ಲ” ಎಂದು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.

ಭೋಪಾಲ್‌ನ ಜಂಜಾಟಿಯಲ್ಲಿ ನಡೆದ ಗೌರವ್ ದಿವಸ್ ಮಹಾಸಮ್ಮೇಳನದಲ್ಲಿ ಬುಡಕಟ್ಟು ಸಮುದಾಯದ ಐತಿಹಾಸಿಕ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಇದನ್ನೂ ಓದಿ: ಬ್ರಿಟೀಷರ ಎದೆ ನಡುಗಿಸಿದ್ದ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ

“ರಾಷ್ಟ್ರ ನಿರ್ಮಾಣಕ್ಕೆ ಬುಡಕಟ್ಟು ಸಮುದಾಯದ ಕೊಡುಗೆಯ ಕುರಿತು ಚರ್ಚೆ ಬಂದಾಗ ಕೆಲವರು ಆಶ್ಚರ್ಯಚಕಿತರಾಗುತ್ತಾರೆ. ಏಕೆಂದರೆ ಅವರಿಗೆ ಅದರ ಬಗ್ಗೆ ಮಾಹಿತಿಯಿಲ್ಲ” ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಬುಡಕಟ್ಟು ಸಮುದಾಯದ ನಾಯಕ ಬಿರ್ಸಾ ಮುಂಡಾ ಅವರು ಬಿಹಾರ ಮತ್ತು ಜಾರ್ಖಂಡ್‌ ಸುತ್ತಮುತ್ತಲಿನ ಛೋಟಾನಾಗ್ಪುರ್ ಪ್ರಸ್ಥಭೂಮಿ ಪ್ರದೇಶದ ಮುಂಡಾ ಬುಡಕಟ್ಟು ಸಮುದಾಯದಲ್ಲಿ ನವೆಂಬರ್ 15, 1875 ರಲ್ಲಿ ಹುಟ್ಟಿದ್ದರು. ಇವರು ತಮ್ಮ ಬಾಲ್ಯದ ಬಹುಭಾಗವನ್ನು ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸ್ಥಳಾಂತರಗೊಳ್ಳುವುದರಲ್ಲಿಯೇ ಕಳೆದರು. ಅವರು ತಮ್ಮ ಶಿಕ್ಷಕ ಜೈಪಾಲ್ ನಾಗ್ ಅವರ ಮಾರ್ಗದರ್ಶನದಲ್ಲಿ ಸಲ್ಗಾದಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪಡೆದರು. ಜೈಪಾಲ್ ನಾಗ್ ಅವರ ಶಿಫಾರಸ್ಸಿನ ಮೇರೆಗೆ, ಜರ್ಮನ್ ಮಿಷನ್ ಶಾಲೆಗೆ ಸೇರಲು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು.

ಆರಂಭದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ನಂತರದ ದಿನಗಳಲ್ಲಿ ತಮ್ಮದೇ ಆದ ‘ಬಿರ್ಸೈಟ್‌’ ಎನ್ನುವ ಪಂಥವನ್ನು ಸ್ಥಾಪಿಸಿದರು. ಅತೀ ಶೀಘ್ರದಲ್ಲೇ ಮುಂಡಾ ಮತ್ತು ಒರಾನ್ ಸಮುದಾಯದವರು ಈ ಪಂಥಕ್ಕೆ ಸೇರಲು ಪ್ರಾರಂಭಿಸಿದರು. ಇದು ಬ್ರಿಟಿಷರ ಮತಾಂತರ ಚಟುವಟಿಕೆಗಳಿಗೆ ಸವಾಲಾಗಿ ಪರಿಣಮಿಸಿತು.

1886 ರಿಂದ 1890 ರ ಅವಧಿಯಲ್ಲಿ ಇವರು ಮಿಷನರಿ ವಿರೋಧಿ ಮತ್ತು ಸರ್ಕಾರ ವಿರೋಧಿ ಕಾರ್ಯಕ್ರಮಗಳ ಭಾಗವಾದರು. ಅವರು 1890 ರಲ್ಲಿ ಚೈಬಾಸಾವನ್ನು ತೊರೆಯುವ ಹೊತ್ತಿಗೆ, ಬಿರ್ಸಾ ಬುಡಕಟ್ಟು ಸಮುದಾಯಗಳ ಮೇಲಿನ ಬ್ರಿಟಿಷರ ದಬ್ಬಾಳಿಕೆಯ ವಿರುದ್ಧದ ಚಳವಳಿಯಲ್ಲಿ ಬಿರ್ಸಾ ಮುಂಡಾ ತೀವ್ರವಾಗಿ ತೊಡಗಿಸಿಕೊಂಡರು.

ಮಾರ್ಚ್ 3, 1900 ರಂದು, ಬಿರ್ಸಾ ಮುಂಡಾ ತನ್ನ ಬುಡಕಟ್ಟು ಗೆರಿಲ್ಲಾ ಸೈನ್ಯದೊಂದಿಗೆ ಚಕ್ರಧರಪುರದ ಜಮ್ಕೋಪೈ ಕಾಡಿನಲ್ಲಿ ವಿಶ್ರಾಂತಿಯಲ್ಲಿದ್ದಾಗ ಬ್ರಿಟಿಷ್ ಪೊಲೀಸರು ಅವರನ್ನು ಬಂಧಿಸಿದರು. ನಂತರ ಜೂನ್ 9, 1900 ರಂದು 25 ನೇ ವಯಸ್ಸಿನಲ್ಲಿ ರಾಂಚಿ ಜೈಲಿನಲ್ಲಿ ನಿಧನರಾದರು. ಹೀಗೆ ಈ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ದೈವವಾಗಿ, ಅಲ್ಲಿನ ಸಮುದಾಯಗಳಲ್ಲಿ ಇಂದಿಗೂ ಒಂದು ದಂತಕಥೆಯಾಗಿ ಉಳಿದಿದ್ದಾರೆ.


ಇದನ್ನೂ ಓದಿ: ಇಂದು ‘ಬುಡಕಟ್ಟು ನಾಯಕ ಬಿರ್ಸಾ ಮುಂಡಾ’ ಜನ್ಮದಿನ – #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...