Homeಕರ್ನಾಟಕನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

ನ.19 ರಿಂದ ’ಸಲಗ’ದಲ್ಲಿ ಸಿದ್ಧಿ ಬುಡಕಟ್ಟಿನ ಟಿಣಿಂಗ ಮಿಣಿಂಗ ಟಿಶ್ಯಾ ಹಾಡು ಸೇರ್ಪಡೆ

- Advertisement -
- Advertisement -

ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ ಸಲಗ ಸಿನಿಮಾಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ವೇಳೆ ಚಿತ್ರದ ಪ್ರಮೋಷನಲ್ ಸಾಂಗ್ ಎಂದು ಬಿಡುಗಡೆ ಮಾಡಿದ್ದ ‘ಟಿಣಿಂಗ ಮಿಣಿಂಗ ಟಿಶ್ಯಾ’ ಹಾಡು ಸಿನಿಮಾದಲಿಲ್ಲ ಎಂಬ ಬೇಸರದ ಮಾತುಗಳು ಕೇಳಿ ಬಂದಿದ್ದವು.

ಹಲವು ಮಂದಿ ಸಿನಿಮಾದಲ್ಲಿ ಮತ್ತೆ ಹಾಡನ್ನು ಸೇರಿಸಬೇಖು ಎಂದು ಹೇಳಿದ್ದರು. ಜನರ ಒತ್ತಾಯಕ್ಕೆ ಮಣಿದಿರುವ ಚಿತ್ರತಂಡ ಸಲಗಕ್ಕೆ ಹಾಡನ್ನು ಸೇರಿಸಲು ನಿರ್ಧರಿಸಿದೆ. ನ.19 ರಿಂದ ಸಲಗ ಚಿತ್ರದಲ್ಲಿ ಈ ಹಾಡನ್ನು ಬೆಳ್ಳಿ ಪರದೆಯ ಮೇಲೆ ಕಣ್ತುಂಬಿಕೊಳ್ಳಬಹುದು.

ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿತ್ತು. ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು. ಸ್ವತಃ ನಿರ್ದೇಶಕ-ನಟ ವಿಜಯ್ ಈ ಟಿಣಿಂಗ ಮಿಣಿಂಗ ಟಿಶ್ಯಾ ಎಂಬ ಹಾಡಿನ ಕುರಿತು, ಸಿದ್ದಿ ಹಾಡುಗಾರ್ತಿಯರ ಬಗ್ಗೆ ಹೆಮ್ಮೆ-ಖುಷಿಯಿಂದ ಮಾತಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಹಾಡಂತೂ ಯೂಟ್ಯೂಬ್ ಮತ್ತಿತರೆಡೆ ವೈರಲ್ ಆಗಿ ಹವಾ ಸೃಷ್ಟಿಸಿತ್ತು. ಆದರೆ ಸಿನಿಮಾದಲ್ಲಿ ಈ ಹಾಡು ಇರಲಿಲ್ಲ. ಇದಕ್ಕೆ ಸಿದ್ದಿ ಜನಾಂಗದವರು ಸಾಕಷ್ಟು ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ‘ಸಲಗ’ ಸಿನಿಮಾಕ್ಕೆ ಸಿದ್ದಿ ಜಾನಪದ ಹಾಡು!

ಯಲ್ಲಾಪುರದ ಮಂಚಿಕೇರಿ ಬಳಿಯ ಸಿದ್ದಿಗಳ ಕೇರಿಯ ಪ್ರತಿಭಾನ್ವಿತ ಗಾಯಕಿ ಗಿರಿಜಾ ಸಿದ್ದಿ ತಂಡ ಹಾಡು ಹಾಡಿ ನೃತ್ಯ ಮಾಡಿದೆ ಎಂಬುದು ಹೆಚ್ಚು ಪ್ರಚಾರಕ್ಕೆ ಕಾರಣವಾಗಿತ್ತು. ತಮ್ಮವರು ಹಾಡಿದ-ನಟಿಸಿದ ಚಿತ್ರವೆಂಬ ಆಕರ್ಷಣೆಯಿಂದ ಯಲ್ಲಾಪುರ ಸೀಮೆಯ ಸಿದ್ದಿಗಳು ಮತ್ತು ಉತ್ತರ ಕನ್ನಡದ ಸಿನಿಮಾಸಕ್ತರು ಶಿರಸಿಯ ನಟರಾಜ ಥೇಟರಿಗೆ ಹೋಗಿದ್ದರು. ಆದರೆ ಸಿನಿಮಾದಲ್ಲಿ ತಾವು ನಿರೀಕ್ಷಿಸಿದ ಹಾಡಿಲ್ಲದೆ ನಿರಾಸೆ ಮತ್ತು ಬೇಸರದಿಂದ ಹೊರಬಂದಿದ್ದರು. ಅಲ್ಲಲ್ಲಿ ಸಣ್ಣ ಸಣ್ಣ ಹಾಡಿನ ತುಣುಕು ಇದೆ ಹೊರತು ಪೂರ್ತಿ ಹಾಡು ಇಲ್ಲ ಎಂಬುದು ಅವರ ಬೇಸರಕ್ಕೆ ಕಾರಣವಾಗಿತ್ತು. ಈ ಬಗ್ಗೆ ನಾನುಗೌರಿ.ಕಾಂ ವರದಿ ಮಾಡಿತ್ತು.

ಈಗ ನಿರ್ದೇಶಕ, ನಟ ದುನಿಯಾ ವಿಜಯ್‌ ಸಿದ್ದಿ ಬುಡಕಟ್ಟು ಜನಾಂಗದ ಜೊತೆಗೆ ಹಾಡನ್ನು ಇಷ್ಟಪಟ್ಟಿದ್ದ ಜನರಿಗೂ ಗುಡ್‌ ನ್ಯೂಸ್ ನೀಡಿದ್ದಾರೆ. ಟಿಣಿಂಗ ಮಿಣಿಂಗ ಪ್ರಮೋಷನಲ್​ ಸಾಂಗ್​ ಬೆಳ್ಳಿ ಪರದೆ ಮೇಲೆ ಬರಲು ರೆಡಿಯಾಗಿದೆ. ಈ ಹಾಡನ್ನು ಸೇರ್ಪಡೆ ಮಾಡಿ ನವೆಂಬರ್​​ 19 ರಂದು ಮತ್ತೆ 100ಕ್ಕೂ ಹೆಚ್ಚು ಚಿತ್ರಮಂದಿರಗಳಿಗೆ ಸಲಗ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...