Homeಕರ್ನಾಟಕಪದ್ಮಶ್ರೀ ಪುರಸ್ಕೃತ ತುಳಸಜ್ಜಿ: ಮಾನವೀಯತೆ-ಸಾಮಾಜಿಕ ಬದ್ದತೆಯ ಪ್ರತೀಕ

ಪದ್ಮಶ್ರೀ ಪುರಸ್ಕೃತ ತುಳಸಜ್ಜಿ: ಮಾನವೀಯತೆ-ಸಾಮಾಜಿಕ ಬದ್ದತೆಯ ಪ್ರತೀಕ

ತುಳಸಜ್ಜಿಗೆ ದೆಹಲಿ ಖರ್ಚಿಗೆಂದು ಜನ ಕೊಟ್ಟ ಹಣವನ್ನು ಸುಕ್ರಜ್ಜಿಯ ಆರೋಗ್ಯಕ್ಕೆ ಮತ್ತು ಹರೇಕಳ ಹಾಜಬ್ಬರ ಶಾಲೆಗೆ ದೇಣಿಗೆ ನೀಡಿದ್ದಾರೆ.

- Advertisement -
- Advertisement -

ಗಿಡ-ಮರಗಳನ್ನು ತನ್ನ ಮಕ್ಕಳಂತೆ ಸಾಕಿ-ಸಲುಹಿದ ಅಂಕೋಲೆಯ ಹಾಲಕ್ಕಿ ಒಕ್ಕಲು ಬುಡಕಟ್ಟಿನ ತುಳಸಿ ಗೌಡರಿಗೆ ಪದ್ಮಶ್ರೀ ಪ್ರದಾನ ಮಾಡಲಾಗಿದೆ. ಇದರಿಂದ ಪ್ರಶಸ್ತಿಯ ತೂಕ ಹೆಚ್ಚಾಗಿದೆ. ಈ ವ್ಯವಸ್ಥೆಯಲ್ಲಿ ಅಪರೂಪಕ್ಕೊಮ್ಮೆ ಇಂತಹ ಪವಾಡವಾಗುತ್ತದೆ.. ನಿಜವಾದ ಅರ್ಹರಿಗೆ, ಪ್ರಾಮಾಣಿಕರಿಗೆ ಪ್ರಶಸ್ತಿ ಸಂದಿದಾಗ ಆ ಪುರಸ್ಕಾರಗಳಿಗೆ ಗೌರವ ಬರುತ್ತದೆ.

ಆರೇಳು ದಶಕದಿಂದ ಸುಮಾರು 30 ಸಾವಿರ ಸಸಿಗಳನ್ನು ನೆಟ್ಟು ಕಾಳಜಿಯಿಂದ ನೀರೆರೆಯುತ್ತ ನೂರಾರು ಗಿಡ-ಮರಗಳ ಹೆಸರು, ಪರಿಚಯ ಪಕ್ಕಾ ಮಾಡಿಕೊಂಡಿರುವ ತುಳಸಜ್ಜಿಗೆ ಪದ್ಮಶ್ರೀ ಪ್ರಶಸ್ತಿ ಬಂದಾಗ ‘ಇದೊಂದು ಯೋಗ್ಯ ಆಯ್ಕೆ’ ಎಂಬ ಉದ್ಗಾರ ಎಲ್ಲೆಡೆ ಹೊರಹೊಮ್ಮಿತ್ತು!

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್ ಸರ್ಕಾರ

ತುಳಸಜ್ಜಿ ಹೊಟ್ಟೆ ಪಾಡಿಗಾಗಿ ಅಂಕೋಲಾದ ಮಾಸ್ತಿಕಟ್ಟೆ ಅರಣ್ಯ ವಿಭಾಗದ ನರ್ಸರಿ (ಸಸ್ಯ ಪಾಲನಾ ಕೇಂದ್ರ)ಯಲ್ಲಿ ಚಾಕರಿ ಮಾಡಿಕೊಂಡಿದ್ದರು. ನಿಷ್ಟೆ, ಕಾಳಜಿ ಮತ್ತು ಪರಿಸರ ಪ್ರೀತಿಯಿಂದ ಕೆಲಸ ಮಾಡುತ್ತಿದ್ದ ತುಳಸಜ್ಜಿಯನ್ನು ಮೊದಲು ಗುರುತಿಸಿದ್ದು ಹಿರಿಯ ಅರಣ್ಯಾಧಿಕಾರಿಯಾಗಿದ್ದ ಯಲ್ಲಪ್ಪ ರೆಡ್ಡಿಯವರು. ಹಾಗಾಗಿ ತುಳಸಜ್ಜಿಗೆ ಒಕ್ಕೂಟ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ ಬಂತು.

ತುಳಸಜ್ಜಿಯ ಮೂಲಕ ಉತ್ತರ ಕನ್ನಡಕ್ಕೆ ಮೂರನೆ ಪದ್ಮಶ್ರೀ ಪ್ರಶಸ್ತಿ ಬಂದಂತಾಗಿದೆ. 2017 ರಲ್ಲಿ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿತ್ತು. 5000 ಹಾಡುಗಳು ನಾಲಿಗೆ ತುದಿಯಲ್ಲೆ ಇರುವ ಸುಕ್ರಜ್ಜಿ ಸಹ ವಿಶಿಷ್ಟ ಸಂಸ್ಕೃತಿ ಸೊಗಡಿನ ಹಾಲಕ್ಕಿ ಒಕ್ಕಲು ಬುಡಕಟ್ಟಿಗೆ ಸೇರಿದವರು. ಸಾರಾಯಿ ವಿರೋಧಿ ಆಂದೋಲನ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರೀಯರಾಗಿದ್ದ ಸುಕ್ರಜ್ಜಿ ಈಗ ವಯೋಸಹಜ ನಿಶಕ್ತಿಯಿಂದ ಆಸ್ಪತ್ರೆೆ-ಮನೆಯೆಂದು ಓಡಾಡುವಂತಾಗಿದೆ.

ನವೆಂಬರ್ 8 ರಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ಹೋಗಬೇಕಿದ್ದ ತುಳಸಜ್ಜಿಗೆ ದಾರಿ ಖರ್ಚಿಗೆಂದು ಅಂಕೋಲೆಯ ಮಂದಿ 1 ಲಕ್ಷ 16 ಸಾವಿರ ರೂ. ಒಟ್ಟುಗೂಡಿಸಿ ಕೊಟ್ಟಿದ್ದರು. ತುಳಸಜ್ಜಿ ಇದರಲ್ಲಿ ಒಂದಷ್ಟು ಹಣವನ್ನು ಸುಕ್ರಜ್ಜಿ ಔಷದೋಪಚಾರಕ್ಕೆಂದು ಅವರ ಮನೆಗೆ ಹೋಗಿ ಕೊಟ್ಟು ಬಂದಿದ್ದು ಎಲ್ಲರ ಹೃದಯ ಆರ್ದ್ರವಾಗಿಸಿತ್ತು!. ಪದ್ಮಶ್ರೀ ಪ್ರಶಸ್ತಿ ಪಡೆಯುವ ಮೊದಲೇ ಮಾನವೀಯ ಬದ್ದತೆಯಿಂದ ಗಮನ ಸೆಳೆದಿದ್ದ ತುಳಸಜ್ಜಿ ಪ್ರಶಸ್ತಿ ಪಡೆದು ಬರುವಾಗ ತನ್ನ ಸಾಮಾಜಿಕ ಬದ್ದತೆಯ ಸ್ವಭಾವದಿಂದ ಮೂಕ ವಿಸ್ಮಿತರನ್ನಾಗಿಸಿದ್ದಾರೆ.

ಇದನ್ನೂ ಓದಿ: ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

ಪದ್ಮಶ್ರೀ ಪುರಸ್ಕೃತರಾಗಿ ದಿಲ್ಲಿಯಿಂದ ಬೆಂಗಳೂರಿಗೆ ಬಂದಿದ್ದ ತುಳಸಜ್ಜಿ ನೇರ ಊರಿಗೆ [ಅಂಕೋಲ] ಬರಲಿಲ್ಲ. ಬದಲಿಗೆ ಮಂಗಳೂರಿಗೆ ತೆರಳಿ ಕಿತ್ತಳೆ ಹಣ್ಣು ಮಾರಿ ಶಾಲೆಗಳನ್ನು ತೆರೆದ ಹರೇಕಳ ಹಾಜಬ್ಬರ ಮನೆಗೆ ಹೋದರು. ಹರೇಕಳ ಹಾಜಬ್ಬ ದಿಲ್ಲಿಯಲ್ಲಿ ತುಳಸಜ್ಜಿ ಜತೆಯೆ ಪದ್ಮಶ್ರೀ ಪಡೆದಿದ್ದರು. ಅಲ್ಲಿ ಈ ಅಕ್ಷರ ಸಂತ ಮತ್ತು ವೃಕ್ಷ ದೇವತೆ ಪರಿಚಿತರಾಗಿದ್ದರು. ಹಾಜಬ್ಬರ ಶಾಲೆಗಳನ್ನೆಲ್ಲ ಕಣ್ತುಂಬಿಕೊಂಡ ತುಳಸಜ್ಜಿ ಧನ್ಯತಾಭಾವದಲ್ಲಿ ಹಾಜಬ್ಬರ ಶಾಲಾ ಅಭಿಯಾನಕ್ಕೆ ತನ್ನ ಕೈಲಾದ ದೇಣಿಗೆ ಕೊಟ್ಟಿದ್ದಾರೆ. ನನ್ನಿಂದಾದಷ್ಟು ಕೊಟ್ಟಿದ್ದೇನೆ; ಇನ್ನು ದಾನಿಗಳು ಮನಸ್ಸು ಮಾಡಬೇಕು ಎಂದಿದ್ದಾರೆ. ಇದೊಂದು ಅನಕರಣೀಯ ಆದರ್ಶವೆಂಬ ಮೆಚ್ಚುಗೆ ಮಾತು ಕರಾವಳಿಯಲ್ಲಿ ಕೇಳಿಬರುತ್ತಿದೆ.

ಇಂಥ ಮೇರು ವ್ಯಕ್ತಿತ್ವದ ತುಳಸಜ್ಜಿಯನ್ನು ಉತ್ತರ ಕನ್ನಡ ಜಿಲ್ಲಾಡಳಿತ ಸಮರ್ಪಕವಾಗಿ ಗೌರವಿಸುತ್ತಿಲ್ಲ. ಪದ್ಮಶ್ರೀ ಪ್ರಶಸ್ತಿಯೊಂದಿಗೆ ದಿಲ್ಲಿಯಿಂದ ಮಂಗಳೂರು ಮೂಲಕ ಊರಿಗೆ ಬರುತ್ತಿದ್ದ ತುಳಸಜ್ಜಿಯನ್ನು ಉಡುಪಿ-ಉತ್ತರ ಕನ್ನಡದ ಗಡಿಯಲ್ಲಿ ಭಟ್ಕಳದ ಎಸಿ ಮತ್ತು ತಹಶೀಲ್ದಾರ್ ಕಾಟಾಚಾರಕ್ಕೆಂಬಂತೆ ಹೂ ಗುಚ್ಚ ಕೊಟ್ಟು ಸ್ವಾಗತಿಸಿದ್ದಾರೆ. ಹಾಗೆ ನೋಡಿದರೆ ಪದ್ಮ ಪುರಸ್ಕೃತರಾಗಿ ಜಿಲ್ಲೆಗೆ ಕೀರ್ತಿ ತಂದಿದ್ದ ತುಳಸಜ್ಜಿಯನ್ನು ಸಡಗರದಿಂದ ಜಿಲ್ಲಾಡಳಿತ ಎದುರುಗೊಳ್ಳಬೇಕಿತ್ತು. ತುಳಸಜ್ಜಿಗೆ ಪದ್ಮಶ್ರೀ ಘೋಷಣೆಯಾದಾಗ, ಪ್ರಶಸ್ತಿ ತರಲು ದಿಲ್ಲಿಗೆ ಹೊರಡುವಾಗ ಮತ್ತು ತಿರುಗಿ ಬರುವಾಗ ಜಿಲ್ಲಾಡಳಿತ ಉದಾಸೀನದಿಂದ ಏಕೆ ಎಂಬ ಪ್ರಶ್ನೆ ಎದ್ದಿದೆ.

ಕನಿಷ್ಟ ಅಂಕೋಲೆಯಿಂದ ಅವರ ಮನೆ ತನಕವಾದರೂ ಮೂರ್ನಾಲ್ಕು ಮೈಲಿ ಮೆರವಣಿಗೆಯಲ್ಲಿ ಕರೆದೊಯ್ಯಬೇಕಿತ್ತು. ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಒಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತೆಂದು ಸಾಂಸ್ಕೃತಿಕ ಲೋಕದ ಅನುಭವಿಗಳು ಹೇಳುತ್ತಾರೆ.
ಕಾರವಾರದ ರಾಮಾ ರಾಘೋಬಾ ರಾಣೆಯವರು ಪರಮವೀರ ಚಕ್ರ ಪ್ರಶಸ್ತಿ ಪಡೆದು ಬಂದಾಗ ಕಾರವಾರದಿಂದ ಅವರ ಮನೆ ತನಕ ಭವ್ಯ ಮೆರವಣಿಗೆಯಲ್ಲಿ ಕರೆದೊಯ್ದಿದ್ದನ್ನು ನೆನಪಿಸಿ ತುಳಸಜ್ಜಿಗ್ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಕೇಳಲಾಗುತ್ತಿದೆ.

ಇಷ್ಟೆಲ್ಲಾ ಚರ್ಚೆಗಳು ನಡೆದ ನಂತರ ನವೆಂಬರ್ 15ರ ಸಂಜೆ ತುಳಸಜ್ಜಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆದಿದೆ. ಇದು ಸಮಾಧಾನ ಸಂಗತಿಯಾದರೂ ಜಿಲ್ಲಾಡಳಿತ ತನ್ನ ಜವಾಬ್ದಾರಿಯನ್ನು ಮರೆಯಬಾರದು ಎಂಬುದು ಜನರ ಅಭಿಮತ.

ಇದನ್ನೂ ಓದಿ:  ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...