Homeಕರ್ನಾಟಕಪದ್ಮಶ್ರೀ ಪುರಸ್ಕೃತ ತುಳಸಜ್ಜಿ: ಮಾನವೀಯತೆ-ಸಾಮಾಜಿಕ ಬದ್ದತೆಯ ಪ್ರತೀಕ

ಪದ್ಮಶ್ರೀ ಪುರಸ್ಕೃತ ತುಳಸಜ್ಜಿ: ಮಾನವೀಯತೆ-ಸಾಮಾಜಿಕ ಬದ್ದತೆಯ ಪ್ರತೀಕ

ತುಳಸಜ್ಜಿಗೆ ದೆಹಲಿ ಖರ್ಚಿಗೆಂದು ಜನ ಕೊಟ್ಟ ಹಣವನ್ನು ಸುಕ್ರಜ್ಜಿಯ ಆರೋಗ್ಯಕ್ಕೆ ಮತ್ತು ಹರೇಕಳ ಹಾಜಬ್ಬರ ಶಾಲೆಗೆ ದೇಣಿಗೆ ನೀಡಿದ್ದಾರೆ.

- Advertisement -
- Advertisement -

ಗಿಡ-ಮರಗಳನ್ನು ತನ್ನ ಮಕ್ಕಳಂತೆ ಸಾಕಿ-ಸಲುಹಿದ ಅಂಕೋಲೆಯ ಹಾಲಕ್ಕಿ ಒಕ್ಕಲು ಬುಡಕಟ್ಟಿನ ತುಳಸಿ ಗೌಡರಿಗೆ ಪದ್ಮಶ್ರೀ ಪ್ರದಾನ ಮಾಡಲಾಗಿದೆ. ಇದರಿಂದ ಪ್ರಶಸ್ತಿಯ ತೂಕ ಹೆಚ್ಚಾಗಿದೆ. ಈ ವ್ಯವಸ್ಥೆಯಲ್ಲಿ ಅಪರೂಪಕ್ಕೊಮ್ಮೆ ಇಂತಹ ಪವಾಡವಾಗುತ್ತದೆ.. ನಿಜವಾದ ಅರ್ಹರಿಗೆ, ಪ್ರಾಮಾಣಿಕರಿಗೆ ಪ್ರಶಸ್ತಿ ಸಂದಿದಾಗ ಆ ಪುರಸ್ಕಾರಗಳಿಗೆ ಗೌರವ ಬರುತ್ತದೆ.

ಆರೇಳು ದಶಕದಿಂದ ಸುಮಾರು 30 ಸಾವಿರ ಸಸಿಗಳನ್ನು ನೆಟ್ಟು ಕಾಳಜಿಯಿಂದ ನೀರೆರೆಯುತ್ತ ನೂರಾರು ಗಿಡ-ಮರಗಳ ಹೆಸರು, ಪರಿಚಯ ಪಕ್ಕಾ ಮಾಡಿಕೊಂಡಿರುವ ತುಳಸಜ್ಜಿಗೆ ಪದ್ಮಶ್ರೀ ಪ್ರಶಸ್ತಿ ಬಂದಾಗ ‘ಇದೊಂದು ಯೋಗ್ಯ ಆಯ್ಕೆ’ ಎಂಬ ಉದ್ಗಾರ ಎಲ್ಲೆಡೆ ಹೊರಹೊಮ್ಮಿತ್ತು!

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ: ಪಂಜಾಬ್ ಸರ್ಕಾರ

ತುಳಸಜ್ಜಿ ಹೊಟ್ಟೆ ಪಾಡಿಗಾಗಿ ಅಂಕೋಲಾದ ಮಾಸ್ತಿಕಟ್ಟೆ ಅರಣ್ಯ ವಿಭಾಗದ ನರ್ಸರಿ (ಸಸ್ಯ ಪಾಲನಾ ಕೇಂದ್ರ)ಯಲ್ಲಿ ಚಾಕರಿ ಮಾಡಿಕೊಂಡಿದ್ದರು. ನಿಷ್ಟೆ, ಕಾಳಜಿ ಮತ್ತು ಪರಿಸರ ಪ್ರೀತಿಯಿಂದ ಕೆಲಸ ಮಾಡುತ್ತಿದ್ದ ತುಳಸಜ್ಜಿಯನ್ನು ಮೊದಲು ಗುರುತಿಸಿದ್ದು ಹಿರಿಯ ಅರಣ್ಯಾಧಿಕಾರಿಯಾಗಿದ್ದ ಯಲ್ಲಪ್ಪ ರೆಡ್ಡಿಯವರು. ಹಾಗಾಗಿ ತುಳಸಜ್ಜಿಗೆ ಒಕ್ಕೂಟ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ ಬಂತು.

ತುಳಸಜ್ಜಿಯ ಮೂಲಕ ಉತ್ತರ ಕನ್ನಡಕ್ಕೆ ಮೂರನೆ ಪದ್ಮಶ್ರೀ ಪ್ರಶಸ್ತಿ ಬಂದಂತಾಗಿದೆ. 2017 ರಲ್ಲಿ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿತ್ತು. 5000 ಹಾಡುಗಳು ನಾಲಿಗೆ ತುದಿಯಲ್ಲೆ ಇರುವ ಸುಕ್ರಜ್ಜಿ ಸಹ ವಿಶಿಷ್ಟ ಸಂಸ್ಕೃತಿ ಸೊಗಡಿನ ಹಾಲಕ್ಕಿ ಒಕ್ಕಲು ಬುಡಕಟ್ಟಿಗೆ ಸೇರಿದವರು. ಸಾರಾಯಿ ವಿರೋಧಿ ಆಂದೋಲನ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರೀಯರಾಗಿದ್ದ ಸುಕ್ರಜ್ಜಿ ಈಗ ವಯೋಸಹಜ ನಿಶಕ್ತಿಯಿಂದ ಆಸ್ಪತ್ರೆೆ-ಮನೆಯೆಂದು ಓಡಾಡುವಂತಾಗಿದೆ.

ನವೆಂಬರ್ 8 ರಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ಹೋಗಬೇಕಿದ್ದ ತುಳಸಜ್ಜಿಗೆ ದಾರಿ ಖರ್ಚಿಗೆಂದು ಅಂಕೋಲೆಯ ಮಂದಿ 1 ಲಕ್ಷ 16 ಸಾವಿರ ರೂ. ಒಟ್ಟುಗೂಡಿಸಿ ಕೊಟ್ಟಿದ್ದರು. ತುಳಸಜ್ಜಿ ಇದರಲ್ಲಿ ಒಂದಷ್ಟು ಹಣವನ್ನು ಸುಕ್ರಜ್ಜಿ ಔಷದೋಪಚಾರಕ್ಕೆಂದು ಅವರ ಮನೆಗೆ ಹೋಗಿ ಕೊಟ್ಟು ಬಂದಿದ್ದು ಎಲ್ಲರ ಹೃದಯ ಆರ್ದ್ರವಾಗಿಸಿತ್ತು!. ಪದ್ಮಶ್ರೀ ಪ್ರಶಸ್ತಿ ಪಡೆಯುವ ಮೊದಲೇ ಮಾನವೀಯ ಬದ್ದತೆಯಿಂದ ಗಮನ ಸೆಳೆದಿದ್ದ ತುಳಸಜ್ಜಿ ಪ್ರಶಸ್ತಿ ಪಡೆದು ಬರುವಾಗ ತನ್ನ ಸಾಮಾಜಿಕ ಬದ್ದತೆಯ ಸ್ವಭಾವದಿಂದ ಮೂಕ ವಿಸ್ಮಿತರನ್ನಾಗಿಸಿದ್ದಾರೆ.

ಇದನ್ನೂ ಓದಿ: ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

ಪದ್ಮಶ್ರೀ ಪುರಸ್ಕೃತರಾಗಿ ದಿಲ್ಲಿಯಿಂದ ಬೆಂಗಳೂರಿಗೆ ಬಂದಿದ್ದ ತುಳಸಜ್ಜಿ ನೇರ ಊರಿಗೆ [ಅಂಕೋಲ] ಬರಲಿಲ್ಲ. ಬದಲಿಗೆ ಮಂಗಳೂರಿಗೆ ತೆರಳಿ ಕಿತ್ತಳೆ ಹಣ್ಣು ಮಾರಿ ಶಾಲೆಗಳನ್ನು ತೆರೆದ ಹರೇಕಳ ಹಾಜಬ್ಬರ ಮನೆಗೆ ಹೋದರು. ಹರೇಕಳ ಹಾಜಬ್ಬ ದಿಲ್ಲಿಯಲ್ಲಿ ತುಳಸಜ್ಜಿ ಜತೆಯೆ ಪದ್ಮಶ್ರೀ ಪಡೆದಿದ್ದರು. ಅಲ್ಲಿ ಈ ಅಕ್ಷರ ಸಂತ ಮತ್ತು ವೃಕ್ಷ ದೇವತೆ ಪರಿಚಿತರಾಗಿದ್ದರು. ಹಾಜಬ್ಬರ ಶಾಲೆಗಳನ್ನೆಲ್ಲ ಕಣ್ತುಂಬಿಕೊಂಡ ತುಳಸಜ್ಜಿ ಧನ್ಯತಾಭಾವದಲ್ಲಿ ಹಾಜಬ್ಬರ ಶಾಲಾ ಅಭಿಯಾನಕ್ಕೆ ತನ್ನ ಕೈಲಾದ ದೇಣಿಗೆ ಕೊಟ್ಟಿದ್ದಾರೆ. ನನ್ನಿಂದಾದಷ್ಟು ಕೊಟ್ಟಿದ್ದೇನೆ; ಇನ್ನು ದಾನಿಗಳು ಮನಸ್ಸು ಮಾಡಬೇಕು ಎಂದಿದ್ದಾರೆ. ಇದೊಂದು ಅನಕರಣೀಯ ಆದರ್ಶವೆಂಬ ಮೆಚ್ಚುಗೆ ಮಾತು ಕರಾವಳಿಯಲ್ಲಿ ಕೇಳಿಬರುತ್ತಿದೆ.

ಇಂಥ ಮೇರು ವ್ಯಕ್ತಿತ್ವದ ತುಳಸಜ್ಜಿಯನ್ನು ಉತ್ತರ ಕನ್ನಡ ಜಿಲ್ಲಾಡಳಿತ ಸಮರ್ಪಕವಾಗಿ ಗೌರವಿಸುತ್ತಿಲ್ಲ. ಪದ್ಮಶ್ರೀ ಪ್ರಶಸ್ತಿಯೊಂದಿಗೆ ದಿಲ್ಲಿಯಿಂದ ಮಂಗಳೂರು ಮೂಲಕ ಊರಿಗೆ ಬರುತ್ತಿದ್ದ ತುಳಸಜ್ಜಿಯನ್ನು ಉಡುಪಿ-ಉತ್ತರ ಕನ್ನಡದ ಗಡಿಯಲ್ಲಿ ಭಟ್ಕಳದ ಎಸಿ ಮತ್ತು ತಹಶೀಲ್ದಾರ್ ಕಾಟಾಚಾರಕ್ಕೆಂಬಂತೆ ಹೂ ಗುಚ್ಚ ಕೊಟ್ಟು ಸ್ವಾಗತಿಸಿದ್ದಾರೆ. ಹಾಗೆ ನೋಡಿದರೆ ಪದ್ಮ ಪುರಸ್ಕೃತರಾಗಿ ಜಿಲ್ಲೆಗೆ ಕೀರ್ತಿ ತಂದಿದ್ದ ತುಳಸಜ್ಜಿಯನ್ನು ಸಡಗರದಿಂದ ಜಿಲ್ಲಾಡಳಿತ ಎದುರುಗೊಳ್ಳಬೇಕಿತ್ತು. ತುಳಸಜ್ಜಿಗೆ ಪದ್ಮಶ್ರೀ ಘೋಷಣೆಯಾದಾಗ, ಪ್ರಶಸ್ತಿ ತರಲು ದಿಲ್ಲಿಗೆ ಹೊರಡುವಾಗ ಮತ್ತು ತಿರುಗಿ ಬರುವಾಗ ಜಿಲ್ಲಾಡಳಿತ ಉದಾಸೀನದಿಂದ ಏಕೆ ಎಂಬ ಪ್ರಶ್ನೆ ಎದ್ದಿದೆ.

ಕನಿಷ್ಟ ಅಂಕೋಲೆಯಿಂದ ಅವರ ಮನೆ ತನಕವಾದರೂ ಮೂರ್ನಾಲ್ಕು ಮೈಲಿ ಮೆರವಣಿಗೆಯಲ್ಲಿ ಕರೆದೊಯ್ಯಬೇಕಿತ್ತು. ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಒಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತೆಂದು ಸಾಂಸ್ಕೃತಿಕ ಲೋಕದ ಅನುಭವಿಗಳು ಹೇಳುತ್ತಾರೆ.
ಕಾರವಾರದ ರಾಮಾ ರಾಘೋಬಾ ರಾಣೆಯವರು ಪರಮವೀರ ಚಕ್ರ ಪ್ರಶಸ್ತಿ ಪಡೆದು ಬಂದಾಗ ಕಾರವಾರದಿಂದ ಅವರ ಮನೆ ತನಕ ಭವ್ಯ ಮೆರವಣಿಗೆಯಲ್ಲಿ ಕರೆದೊಯ್ದಿದ್ದನ್ನು ನೆನಪಿಸಿ ತುಳಸಜ್ಜಿಗ್ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಕೇಳಲಾಗುತ್ತಿದೆ.

ಇಷ್ಟೆಲ್ಲಾ ಚರ್ಚೆಗಳು ನಡೆದ ನಂತರ ನವೆಂಬರ್ 15ರ ಸಂಜೆ ತುಳಸಜ್ಜಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆದಿದೆ. ಇದು ಸಮಾಧಾನ ಸಂಗತಿಯಾದರೂ ಜಿಲ್ಲಾಡಳಿತ ತನ್ನ ಜವಾಬ್ದಾರಿಯನ್ನು ಮರೆಯಬಾರದು ಎಂಬುದು ಜನರ ಅಭಿಮತ.

ಇದನ್ನೂ ಓದಿ:  ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...